AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಚ್ಚಿಗೆ ಮಾತಾಡಿದ್ರೆ ನಿನ್ನನ್ನೂ ತುಂಡು ತುಂಡಾಗಿ ಕತ್ತರಿಸಿ ಡ್ರಮ್​ನಲ್ಲಿ ಹಾಕ್ತೀನಿ, ಗಂಡನಿಗೆ ಪತ್ನಿಯ ಬೆದರಿಕೆ

ಉತ್ತರ ಪ್ರದೇಶದ ಮೀರತ್​ನಲ್ಲಿ ನಡೆದ ಘಟನೆಯಂತೆ ಅತಿಯಾಗಿ ಮಾತಾಡಿದ್ರೆ ನಿನ್ನನ್ನೂ ಕೂಡ ತುಂಡು ತುಂಡಾಗಿ ಕತ್ತರಿಸಿ ಡ್ರಮ್​ನಲ್ಲಿ ಹಾಕುತ್ತೀನಿ ಎಂದು ಮಹಿಳೆಯೊಬ್ಬಳು ತನ್ನ ಪತ್ನಿಗೆ ಬೆದರಿಕೆ ಹಾಕಿರುವ ಘಟನೆ ಗೊಂಡಾದಲ್ಲಿ ನಡೆದಿದೆ. ಇತ್ತೀಚೆಗೆ ಉತ್ತರ ಪ್ರದೇಶದ ಮೀರತ್​ನಲ್ಲಿ ಸೌರಭ್ ರಜಪೂತ್ ಎಂಬಾತನನ್ನು ಆತನ ಪತ್ನಿ ಮುಸ್ಕಾನ್ ಹಾಗೂ ಮತ್ತವಳ ಪ್ರೇಮಿ ಸಾಹಿಲ್ ಸೇರಿಕೊಂಡು ಹತ್ಯೆ ಮಾಡಿ, ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಸಿಮೆಂಟ್​ ಡ್ರಮ್​ನಲ್ಲಿ ಹಾಕಿ ಸೀಲ್ ಮಾಡಿದ್ದರು. ಬಳಿಕ ಹಿಮಾಚಲ ಪ್ರದೇಶಕ್ಕೆ ಟ್ರಿಪ್​ಗೆ ಹೋಗಿದ್ದರು. ಇದೇ ರೀತಿಯಲ್ಲಿ ನಿನ್ನನ್ನು ಕೂಡ ಕಲೆ ಮಾಡುತ್ತೀನಿ ಎಂದು ಗೊಂಡಾದ ಮಹಿಳೆಯೊಬ್ಬಳು ಬೆದರಿಕೆ ಹಾಕಿದ್ದು, ಇದೀಗ ಪ್ರಕರಣ ಪೊಲೀಸ್​ ಠಾಣೆ ಮೆಟ್ಟಿಲೇರಿದೆ.

ಹೆಚ್ಚಿಗೆ ಮಾತಾಡಿದ್ರೆ ನಿನ್ನನ್ನೂ ತುಂಡು ತುಂಡಾಗಿ ಕತ್ತರಿಸಿ ಡ್ರಮ್​ನಲ್ಲಿ ಹಾಕ್ತೀನಿ, ಗಂಡನಿಗೆ ಪತ್ನಿಯ ಬೆದರಿಕೆ
ಪೊಲೀಸ್ Image Credit source: Hindustan Times
ನಯನಾ ರಾಜೀವ್
|

Updated on: Mar 31, 2025 | 7:54 AM

Share

ಗೊಂಡಾ, ಮಾರ್ಚ್​ 31: ‘‘ಹೆಚ್ಚಿಗೆ ಮಾತಾಡಿದ್ರೆ ನಿನ್ನನ್ನು ತುಂಡು ತುಂಡಾಗಿ ಕತ್ತರಿಸಿ ಡ್ರಮ್​ನಲ್ಲಿ ಹಾಕ್ತೀನಿ’’ ಎಂದು ಮಹಿಳೆಯೊಬ್ಬಳು ಗಂಡನಿಗೆ ಬೆದರಿಕೆ(Threat) ಹಾಕಿರುವ ಘಟನೆ ಉತ್ತರ ಪ್ರದೇಶದ ಗೊಂಡಾದಲ್ಲಿ ನಡೆದಿದೆ. ಶನಿವಾರ ಎರಡೂ ಕಡೆಯಿಂದ ದೂರುಗಳು ಬಂದಿದ್ದು, ತನಿಖೆಯ ನಂತರ ನಿಯಮಗಳ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಇತ್ತೀಚೆಗೆ ಉತ್ತರ ಪ್ರದೇಶದ ಮೀರತ್​ನಲ್ಲಿ ಸೌರಭ್ ರಜಪೂತ್ ಎಂಬಾತನನ್ನು ಆತನ ಪತ್ನಿ ಮುಸ್ಕಾನ್ ಹಾಗೂ ಮತ್ತವಳ ಪ್ರೇಮಿ ಸಾಹಿಲ್ ಸೇರಿಕೊಂಡು ಹತ್ಯೆ ಮಾಡಿ, ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಸಿಮೆಂಟ್​ ಡ್ರಮ್​ನಲ್ಲಿ ಹಾಕಿ ಸೀಲ್ ಮಾಡಿದ್ದರು. ಬಳಿಕ ಹಿಮಾಚಲ ಪ್ರದೇಶಕ್ಕೆ ಟ್ರಿಪ್​ಗೆ ಹೋಗಿದ್ದರು. ಇದೇ ರೀತಿಯಲ್ಲಿ ನಿನ್ನನ್ನು ಕೂಡ ಕಲೆ ಮಾಡುತ್ತೀನಿ ಎಂದು ಗೊಂಡಾದ ಮಹಿಳೆಯೊಬ್ಬಳು ಬೆದರಿಕೆ ಹಾಕಿದ್ದು, ಇದೀಗ ಪ್ರಕರಣ ಪೊಲೀಸ್​ ಠಾಣೆ ಮೆಟ್ಟಿಲೇರಿದೆ.

ಮೂಲತಃ ಝಾನ್ಸಿ ನಿವಾಸಿ ಮತ್ತು ಪ್ರಸ್ತುತ ಗೊಂಡಾದಲ್ಲಿ ಜಲ ನಿಗಮ್‌ನಲ್ಲಿ ಉದ್ಯೋಗದಲ್ಲಿರುವ ಜೆಇ ಧರ್ಮೇಂದ್ರ ಕುಶ್ವಾಹ ಅವರು ಪೊಲೀಸರಿಗೆ ನೀಡಿದ ದೂರಿನಲ್ಲಿ ತಮ್ಮ ಪತ್ನಿ ಮಾಯಾ ಮೌರ್ಯ ಮತ್ತು ಆಕೆಯ ಪ್ರಿಯಕರ ನೀರಜ್ ಮೌರ್ಯ ಅವರ ಮೇಲೆ ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ ಎಂದು ಅವರು ಹೇಳಿದರು.

ಇದನ್ನೂ ಓದಿ
Image
ಗೌರಿ ಹತ್ಯೆ ಕೇಸ್​: ಹೆಂಡ್ತಿ ಕೊಂದು ಸೂಟ್​ಕೇಸ್​ಗೆ ತುಂಬಿದ್ದೇಕೆ ಪತಿ?
Image
ಪ್ರೇಯಸಿಯನ್ನು ಕೊಂದ ಹೈದರಾಬಾದ್ ಅರ್ಚಕನಿಗೆ ಜೀವಾವಧಿ ಶಿಕ್ಷೆ
Image
ಮೀರತ್​ ಕೊಲೆ ಪ್ರಕರಣ: ಮುಸ್ಕಾನ್​ ಸೌರಭ್​ನನ್ನು ತುಂಡು ತುಂಡಾಗಿ ಕತ್ತರಿಸಿದ
Image
ಗರ್ಭಿಣಿಯಾಗಿದ್ದಾಗ್ಲೇ ಬೇರೊಬ್ಬನ ಓಡಿಹೋಗಿದ್ದ ಮಹಿಳೆ, ಮಗುವಿನ ಕೊಂದ ಮಲತಂದೆ

ಮತ್ತಷ್ಟು ಓದಿ: 2ನೇ ಮದ್ವೆಯಾದ ಪತಿ: ಮೊದಲ ಹೆಂಡ್ತಿ ಜೀವನಾಂಶ ಕೇಳಿದ್ದಕ್ಕೆ ಗಂಡ ರಾಕ್ಷಸ ಅವತಾರ

ಧರ್ಮೇಂದ್ರ ಅವರ ಪ್ರಕಾರ, 2016 ರಲ್ಲಿ, ಅವರು ಬಸ್ತಿ ಜಿಲ್ಲೆಯ ನಿವಾಸಿ ಮಾಯಾ ಅವರನ್ನು ಪ್ರೇಮ ವಿವಾಹವಾಗಿದ್ದರು ಮತ್ತು 2022 ರಲ್ಲಿ, ಅವರು ಮಾಯಾ ಹೆಸರಿನಲ್ಲಿ ಭೂಮಿಯನ್ನು ಖರೀದಿಸಿ, ಮನೆ ನಿರ್ಮಾಣದ ಒಪ್ಪಂದವನ್ನು ಅವರ ಪತ್ನಿಯ ಸಂಬಂಧಿ ನೀರಜ್ ಮೌರ್ಯ ಅವರಿಗೆ ನೀಡಿದರು. ಈ ಸಮಯದಲ್ಲಿ, ಮಾಯಾ ಮತ್ತು ನೀರಜ್ ನಡುವಿನ ಆತ್ಮೀಯತೆ ಹೆಚ್ಚಾಯಿತು. ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ನೀರಜ್ ಅವರ ಪತ್ನಿಯ ಮರಣದ ನಂತರ ಇಬ್ಬರ ನಡುವಿನ ಸಂಬಂಧವು ಗಾಢವಾಯಿತು.

2024ರ ಜುಲೈ 7ರಂದು ಅವರಿಬ್ಬರು ರೆಡ್​ ಹ್ಯಾಂಡ್​ ಆಗಿ ಸಿಕ್ಕಿಬಿದ್ದಿದ್ದರು. ಅವಳನ್ನು ಥಳಿಸಿದೆ ಆಕೆ ಮನೆ ಬಿಟ್ಟು ಹೋಗಿದ್ದಳು. ಆಗಸ್ಟ್​ 25ರಂದು ಆಕೆ ನೀರಜ್​ ಜತೆ ಮನೆಗೆ ಬಂದು ಬಲವಂತವಾಗಿ ಪ್ರವೇಶಿಸಿದ್ದಾಳೆ. ನಂತರ ಆಕೆ 15 ಗ್ರಾಂ ತೂಕದ ಚಿನ್ನದ ಸರ ಮತ್ತು ನಗದನ್ನು ದೋಚಿ ಪರಾರಿಯಾಗಿದ್ದಾಳೆ. ಇದರ ಬಗ್ಗೆ ಧರ್ಮೇಂದ್ರ ಸೆಪ್ಟೆಂಬರ್ 1, 2024 ರಂದು ಲಿಖಿತ ದೂರು ನೀಡಿದ್ದರು.

ಮಾಯಾ ಧರ್ಮೇಂದ್ರನ ತಾಯಿಯನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಳು ಮತ್ತು ಅವಳು ಪ್ರತಿಭಟಿಸಿದಾಗ,  ತನ್ನ ಪ್ರಿಯಕರ ನೀರಜ್ ಜೊತೆಗೂಡಿ ಇಬ್ಬರನ್ನೂ (ತಾಯಿ-ಮಗ) ಥಳಿಸಿದ್ದಳು . ಈ ಸಮಯದಲ್ಲಿ ಮಾಯಾ ನೀನು ಹೆಚ್ಚು ಮಾತನಾಡಿದರೆ ಮೀರತ್ ಕೊಲೆ ಪ್ರಕರಣದಂತೆ ನಿನ್ನನ್ನು ತುಂಡುಗಳಾಗಿ ಕತ್ತರಿಸಿ ಡ್ರಮ್‌ನಲ್ಲಿ ತುಂಬಿಸುತ್ತೇನೆ ಎಂದು ಬೆದರಿಕೆ ಹಾಕಿದ್ದಾಳೆ. ವಾಸ್ತವವಾಗಿ ಧರ್ಮೇಂದ್ರ ಆಕೆಗೆ ಕಿರುಕುಳ ನೀಡುತ್ತಿದ್ದಾನೆ ಮತ್ತು ನಾಲ್ಕು ಬಾರಿ ಗರ್ಭಪಾತ ಮಾಡಿಸಿಕೊಳ್ಳುವಂತೆ ಒತ್ತಾಯಿಸಿದ್ದಾನೆ ಎಂದು ಆಕೆ ದೂರು ಕೊಟ್ಟಿದ್ದಾಳೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ