AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಚ್ಚಿಗೆ ಮಾತಾಡಿದ್ರೆ ನಿನ್ನನ್ನೂ ತುಂಡು ತುಂಡಾಗಿ ಕತ್ತರಿಸಿ ಡ್ರಮ್​ನಲ್ಲಿ ಹಾಕ್ತೀನಿ, ಗಂಡನಿಗೆ ಪತ್ನಿಯ ಬೆದರಿಕೆ

ಉತ್ತರ ಪ್ರದೇಶದ ಮೀರತ್​ನಲ್ಲಿ ನಡೆದ ಘಟನೆಯಂತೆ ಅತಿಯಾಗಿ ಮಾತಾಡಿದ್ರೆ ನಿನ್ನನ್ನೂ ಕೂಡ ತುಂಡು ತುಂಡಾಗಿ ಕತ್ತರಿಸಿ ಡ್ರಮ್​ನಲ್ಲಿ ಹಾಕುತ್ತೀನಿ ಎಂದು ಮಹಿಳೆಯೊಬ್ಬಳು ತನ್ನ ಪತ್ನಿಗೆ ಬೆದರಿಕೆ ಹಾಕಿರುವ ಘಟನೆ ಗೊಂಡಾದಲ್ಲಿ ನಡೆದಿದೆ. ಇತ್ತೀಚೆಗೆ ಉತ್ತರ ಪ್ರದೇಶದ ಮೀರತ್​ನಲ್ಲಿ ಸೌರಭ್ ರಜಪೂತ್ ಎಂಬಾತನನ್ನು ಆತನ ಪತ್ನಿ ಮುಸ್ಕಾನ್ ಹಾಗೂ ಮತ್ತವಳ ಪ್ರೇಮಿ ಸಾಹಿಲ್ ಸೇರಿಕೊಂಡು ಹತ್ಯೆ ಮಾಡಿ, ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಸಿಮೆಂಟ್​ ಡ್ರಮ್​ನಲ್ಲಿ ಹಾಕಿ ಸೀಲ್ ಮಾಡಿದ್ದರು. ಬಳಿಕ ಹಿಮಾಚಲ ಪ್ರದೇಶಕ್ಕೆ ಟ್ರಿಪ್​ಗೆ ಹೋಗಿದ್ದರು. ಇದೇ ರೀತಿಯಲ್ಲಿ ನಿನ್ನನ್ನು ಕೂಡ ಕಲೆ ಮಾಡುತ್ತೀನಿ ಎಂದು ಗೊಂಡಾದ ಮಹಿಳೆಯೊಬ್ಬಳು ಬೆದರಿಕೆ ಹಾಕಿದ್ದು, ಇದೀಗ ಪ್ರಕರಣ ಪೊಲೀಸ್​ ಠಾಣೆ ಮೆಟ್ಟಿಲೇರಿದೆ.

ಹೆಚ್ಚಿಗೆ ಮಾತಾಡಿದ್ರೆ ನಿನ್ನನ್ನೂ ತುಂಡು ತುಂಡಾಗಿ ಕತ್ತರಿಸಿ ಡ್ರಮ್​ನಲ್ಲಿ ಹಾಕ್ತೀನಿ, ಗಂಡನಿಗೆ ಪತ್ನಿಯ ಬೆದರಿಕೆ
ಪೊಲೀಸ್ Image Credit source: Hindustan Times
ನಯನಾ ರಾಜೀವ್
|

Updated on: Mar 31, 2025 | 7:54 AM

Share

ಗೊಂಡಾ, ಮಾರ್ಚ್​ 31: ‘‘ಹೆಚ್ಚಿಗೆ ಮಾತಾಡಿದ್ರೆ ನಿನ್ನನ್ನು ತುಂಡು ತುಂಡಾಗಿ ಕತ್ತರಿಸಿ ಡ್ರಮ್​ನಲ್ಲಿ ಹಾಕ್ತೀನಿ’’ ಎಂದು ಮಹಿಳೆಯೊಬ್ಬಳು ಗಂಡನಿಗೆ ಬೆದರಿಕೆ(Threat) ಹಾಕಿರುವ ಘಟನೆ ಉತ್ತರ ಪ್ರದೇಶದ ಗೊಂಡಾದಲ್ಲಿ ನಡೆದಿದೆ. ಶನಿವಾರ ಎರಡೂ ಕಡೆಯಿಂದ ದೂರುಗಳು ಬಂದಿದ್ದು, ತನಿಖೆಯ ನಂತರ ನಿಯಮಗಳ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಇತ್ತೀಚೆಗೆ ಉತ್ತರ ಪ್ರದೇಶದ ಮೀರತ್​ನಲ್ಲಿ ಸೌರಭ್ ರಜಪೂತ್ ಎಂಬಾತನನ್ನು ಆತನ ಪತ್ನಿ ಮುಸ್ಕಾನ್ ಹಾಗೂ ಮತ್ತವಳ ಪ್ರೇಮಿ ಸಾಹಿಲ್ ಸೇರಿಕೊಂಡು ಹತ್ಯೆ ಮಾಡಿ, ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಸಿಮೆಂಟ್​ ಡ್ರಮ್​ನಲ್ಲಿ ಹಾಕಿ ಸೀಲ್ ಮಾಡಿದ್ದರು. ಬಳಿಕ ಹಿಮಾಚಲ ಪ್ರದೇಶಕ್ಕೆ ಟ್ರಿಪ್​ಗೆ ಹೋಗಿದ್ದರು. ಇದೇ ರೀತಿಯಲ್ಲಿ ನಿನ್ನನ್ನು ಕೂಡ ಕಲೆ ಮಾಡುತ್ತೀನಿ ಎಂದು ಗೊಂಡಾದ ಮಹಿಳೆಯೊಬ್ಬಳು ಬೆದರಿಕೆ ಹಾಕಿದ್ದು, ಇದೀಗ ಪ್ರಕರಣ ಪೊಲೀಸ್​ ಠಾಣೆ ಮೆಟ್ಟಿಲೇರಿದೆ.

ಮೂಲತಃ ಝಾನ್ಸಿ ನಿವಾಸಿ ಮತ್ತು ಪ್ರಸ್ತುತ ಗೊಂಡಾದಲ್ಲಿ ಜಲ ನಿಗಮ್‌ನಲ್ಲಿ ಉದ್ಯೋಗದಲ್ಲಿರುವ ಜೆಇ ಧರ್ಮೇಂದ್ರ ಕುಶ್ವಾಹ ಅವರು ಪೊಲೀಸರಿಗೆ ನೀಡಿದ ದೂರಿನಲ್ಲಿ ತಮ್ಮ ಪತ್ನಿ ಮಾಯಾ ಮೌರ್ಯ ಮತ್ತು ಆಕೆಯ ಪ್ರಿಯಕರ ನೀರಜ್ ಮೌರ್ಯ ಅವರ ಮೇಲೆ ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ ಎಂದು ಅವರು ಹೇಳಿದರು.

ಇದನ್ನೂ ಓದಿ
Image
ಗೌರಿ ಹತ್ಯೆ ಕೇಸ್​: ಹೆಂಡ್ತಿ ಕೊಂದು ಸೂಟ್​ಕೇಸ್​ಗೆ ತುಂಬಿದ್ದೇಕೆ ಪತಿ?
Image
ಪ್ರೇಯಸಿಯನ್ನು ಕೊಂದ ಹೈದರಾಬಾದ್ ಅರ್ಚಕನಿಗೆ ಜೀವಾವಧಿ ಶಿಕ್ಷೆ
Image
ಮೀರತ್​ ಕೊಲೆ ಪ್ರಕರಣ: ಮುಸ್ಕಾನ್​ ಸೌರಭ್​ನನ್ನು ತುಂಡು ತುಂಡಾಗಿ ಕತ್ತರಿಸಿದ
Image
ಗರ್ಭಿಣಿಯಾಗಿದ್ದಾಗ್ಲೇ ಬೇರೊಬ್ಬನ ಓಡಿಹೋಗಿದ್ದ ಮಹಿಳೆ, ಮಗುವಿನ ಕೊಂದ ಮಲತಂದೆ

ಮತ್ತಷ್ಟು ಓದಿ: 2ನೇ ಮದ್ವೆಯಾದ ಪತಿ: ಮೊದಲ ಹೆಂಡ್ತಿ ಜೀವನಾಂಶ ಕೇಳಿದ್ದಕ್ಕೆ ಗಂಡ ರಾಕ್ಷಸ ಅವತಾರ

ಧರ್ಮೇಂದ್ರ ಅವರ ಪ್ರಕಾರ, 2016 ರಲ್ಲಿ, ಅವರು ಬಸ್ತಿ ಜಿಲ್ಲೆಯ ನಿವಾಸಿ ಮಾಯಾ ಅವರನ್ನು ಪ್ರೇಮ ವಿವಾಹವಾಗಿದ್ದರು ಮತ್ತು 2022 ರಲ್ಲಿ, ಅವರು ಮಾಯಾ ಹೆಸರಿನಲ್ಲಿ ಭೂಮಿಯನ್ನು ಖರೀದಿಸಿ, ಮನೆ ನಿರ್ಮಾಣದ ಒಪ್ಪಂದವನ್ನು ಅವರ ಪತ್ನಿಯ ಸಂಬಂಧಿ ನೀರಜ್ ಮೌರ್ಯ ಅವರಿಗೆ ನೀಡಿದರು. ಈ ಸಮಯದಲ್ಲಿ, ಮಾಯಾ ಮತ್ತು ನೀರಜ್ ನಡುವಿನ ಆತ್ಮೀಯತೆ ಹೆಚ್ಚಾಯಿತು. ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ನೀರಜ್ ಅವರ ಪತ್ನಿಯ ಮರಣದ ನಂತರ ಇಬ್ಬರ ನಡುವಿನ ಸಂಬಂಧವು ಗಾಢವಾಯಿತು.

2024ರ ಜುಲೈ 7ರಂದು ಅವರಿಬ್ಬರು ರೆಡ್​ ಹ್ಯಾಂಡ್​ ಆಗಿ ಸಿಕ್ಕಿಬಿದ್ದಿದ್ದರು. ಅವಳನ್ನು ಥಳಿಸಿದೆ ಆಕೆ ಮನೆ ಬಿಟ್ಟು ಹೋಗಿದ್ದಳು. ಆಗಸ್ಟ್​ 25ರಂದು ಆಕೆ ನೀರಜ್​ ಜತೆ ಮನೆಗೆ ಬಂದು ಬಲವಂತವಾಗಿ ಪ್ರವೇಶಿಸಿದ್ದಾಳೆ. ನಂತರ ಆಕೆ 15 ಗ್ರಾಂ ತೂಕದ ಚಿನ್ನದ ಸರ ಮತ್ತು ನಗದನ್ನು ದೋಚಿ ಪರಾರಿಯಾಗಿದ್ದಾಳೆ. ಇದರ ಬಗ್ಗೆ ಧರ್ಮೇಂದ್ರ ಸೆಪ್ಟೆಂಬರ್ 1, 2024 ರಂದು ಲಿಖಿತ ದೂರು ನೀಡಿದ್ದರು.

ಮಾಯಾ ಧರ್ಮೇಂದ್ರನ ತಾಯಿಯನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಳು ಮತ್ತು ಅವಳು ಪ್ರತಿಭಟಿಸಿದಾಗ,  ತನ್ನ ಪ್ರಿಯಕರ ನೀರಜ್ ಜೊತೆಗೂಡಿ ಇಬ್ಬರನ್ನೂ (ತಾಯಿ-ಮಗ) ಥಳಿಸಿದ್ದಳು . ಈ ಸಮಯದಲ್ಲಿ ಮಾಯಾ ನೀನು ಹೆಚ್ಚು ಮಾತನಾಡಿದರೆ ಮೀರತ್ ಕೊಲೆ ಪ್ರಕರಣದಂತೆ ನಿನ್ನನ್ನು ತುಂಡುಗಳಾಗಿ ಕತ್ತರಿಸಿ ಡ್ರಮ್‌ನಲ್ಲಿ ತುಂಬಿಸುತ್ತೇನೆ ಎಂದು ಬೆದರಿಕೆ ಹಾಕಿದ್ದಾಳೆ. ವಾಸ್ತವವಾಗಿ ಧರ್ಮೇಂದ್ರ ಆಕೆಗೆ ಕಿರುಕುಳ ನೀಡುತ್ತಿದ್ದಾನೆ ಮತ್ತು ನಾಲ್ಕು ಬಾರಿ ಗರ್ಭಪಾತ ಮಾಡಿಸಿಕೊಳ್ಳುವಂತೆ ಒತ್ತಾಯಿಸಿದ್ದಾನೆ ಎಂದು ಆಕೆ ದೂರು ಕೊಟ್ಟಿದ್ದಾಳೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ