AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಯಿಯ ಸ್ನೇಹಿತನಿಂದಲೇ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ, ಅಪರಾಧ ಮರೆಮಾಚಲು ಚಿತ್ರಹಿಂಸೆ

ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ ಆಕೆಯ ತಾಯಿಯ ಸ್ನೇಹಿತನೇ ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್​ನಲ್ಲಿ ನಡೆದಿದೆ. ಆದರೆ ಈ ವಿಚಾರ ಹೊರಗೆ ಬರಬಾರದೆಂದು ತಾಯಿ ತನ್ನ 10 ವರ್ಷದ ಮಗಳಿಗೆ ಚಿತ್ರಹಿಂಸೆ ನೀಡಿ, ಮತ್ತೆ ಆತನ ಬಳಿಯೇ ಕಳುಹಿಸಿಕೊಡಲು ಯತ್ನಿಸಿದ್ದಾಳೆ ಮತ್ತು ಆಕೆಯನ್ನು ವೇಶ್ಯಾವಾಟಿಕೆ ದಂಧೆಗೆ ತಳ್ಳಲು ಪ್ರಯತ್ನಿಸಿದ್ದಾಳೆ ಎನ್ನುವ ಮಾಹಿತಿ ಲಭ್ಯವಾಗಿದೆ.

ತಾಯಿಯ ಸ್ನೇಹಿತನಿಂದಲೇ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ, ಅಪರಾಧ ಮರೆಮಾಚಲು ಚಿತ್ರಹಿಂಸೆ
ಅಪರಾಧImage Credit source: India Today
ನಯನಾ ರಾಜೀವ್
|

Updated on: Apr 12, 2024 | 10:22 AM

Share

ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ ಆಕೆಯ ತಾಯಿಯ ಸ್ನೇಹಿತನೇ ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್​ನಲ್ಲಿ ನಡೆದಿದೆ. ಆದರೆ ಈ ವಿಚಾರ ಹೊರಗೆ ಬರಬಾರದೆಂದು ತಾಯಿ ತನ್ನ 10 ವರ್ಷದ ಮಗಳಿಗೆ ಚಿತ್ರಹಿಂಸೆ ನೀಡಿ, ಮತ್ತೆ ಆತನ ಬಳಿಯೇ ಕಳುಹಿಸಿಕೊಡಲು ಯತ್ನಿಸಿದ್ದಾಳೆ ಮತ್ತು ಆಕೆಯನ್ನು ವೇಶ್ಯಾವಾಟಿಕೆ ದಂಧೆಗೆ ತಳ್ಳಲು ಪ್ರಯತ್ನಿಸಿದ್ದಾಳೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಈ ವಿಚಾರವು ಎಲ್ಲಿಯೂ ಹೊರಬರಬಾರದೆಂದು ತಾಯಿ ಆಕೆ ಹಾಗೂ ಆಕೆಯ ಸಹೋದರ ಇಬ್ಬರಿಗೂ ಥಳಿಸಿ ಚಿತ್ರಹಿಂಸೆ ನೀಡುತ್ತಿದ್ದರು. ಹಿಂಸೆಯನ್ನು ಸಹಿಸಲಾಗದೆ, ಮಗಳು ಜನವರಿ 20 ರಂದು ತನ್ನ ಗಾಜಿಯಾಬಾದ್ ನಿವಾಸದಿಂದ ಓಡಿಹೋಗಿದ್ದಾಳೆ ಮತ್ತು ನಂತರ ದೆಹಲಿಯ ಬೀದಿಗಳಲ್ಲಿ ಅಲೆದಾಡುತ್ತಿದ್ದಳು.

ಅದೃಷ್ಟವಶಾತ್ ಆಕೆಯನ್ನು ದೆಹಲಿ ಪೊಲೀಸರು ರಕ್ಷಿಸಿ ಮಕ್ಕಳ ಕಲ್ಯಾಣ ಸಮಿತಿಯ ಆಶ್ರಯದಲ್ಲಿ ಇರಿಸಿದ್ದಾರೆ. ವೈದ್ಯಕೀಯ ಪರೀಕ್ಷೆ ಬಳಿಕ ಬಾಲಕಿ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿರುವುದು ಸತ್ಯ ಎನ್ನುವುದು ಬಹಿರಂಗಗೊಂಡಿದೆ. ನಾಲ್ಕು ವರ್ಷಗಳ ಹಿಂದೆ ತನ್ನ ತಂದೆಯ ನಿಧನದ ನಂತರ, ತಾನು ಮತ್ತು ಸಹೋದರ ತಮ್ಮ ತಾಯಿಯ ಅಜ್ಜಿಯೊಂದಿಗೆ ವಾಸಿಸುತ್ತಿದ್ದುದಾಗಿ ಹೇಳಿದ್ದಾಳೆ.

ಮತ್ತಷ್ಟು ಓದಿ: ಕಾಲ್​​ ಗರ್ಲ್​ಗಾಗಿ ಕರೆ ಮಾಡಿ ಎಂದು ಫೇಸ್​​ಬುಕ್​ನಲ್ಲಿ ಪತ್ನಿಯ ಫೋಟೊ, ಮೊಬೈಲ್ ನಂಬರ್ ಪೋಸ್ಟ್ ಮಾಡಿದ ವ್ಯಕ್ತಿ!

ಕಳೆದ ವರ್ಷ, ತಾಯಿ ಅವರನ್ನು ಕರೆದುಕೊಂಡು ಬಂದಿದ್ದಳು, ಬಳಿಕ ದೌರ್ಜನ್ಯಕ್ಕೆ ಬಲಿಯಾಗಬೇಕಾಯಿತು, ಸಹೋದರನೂ ಕೂಡ ಓಡಿಹೋಗಿರುವುದಾಗಿ ತಿಳಿಸಿದ್ದಾಳೆ. ತಂದೆಯ ಮರಣದ ನಂತರ ತಾಯಿ ವೇಶ್ಯಾವಾಟಿಕೆಯಲ್ಲಿ ತೊಡಗಿರುವುದು ಗೊತ್ತಾದ ನಂತರ ಮನೆ ತೊರೆಯದಿದ್ದರೆ ದೊಡ್ಡವನಾದ ಮೇಲೆ ತನ್ನನ್ನೂ ಈ ದಂಧೆಗೆ ತಳ್ಳುತ್ತಿದ್ದಳು ಎಂದು ಹೇಳಿದ್ದಾಳೆ.

ಜನವರಿ 20ರಂದು ಮಗಳು ಕಾಣೆಯಾದ ಬಳಿಕ ತಾಯಿ ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಿಸಿರಲಿಲ್ಲ. ತನ್ನ ತಾಯಿ ಮತ್ತು ರಾಜು ಅಪರಾಧವನ್ನು ಮುಚ್ಚಿಡಲು ತನಗೆ ಚಿತ್ರಹಿಂಸೆ ನೀಡುತ್ತಿದ್ದರು ಮತ್ತು ಈ ಬಗ್ಗೆ ಯಾರಿಗೂ ಹೇಳದಂತೆ ನೋಡಿಕೊಳ್ಳಲು ಬೆದರಿಕೆ ಹಾಕುತ್ತಿದ್ದರು ಎಂದು ಬಾಲಕಿ ತಿಳಿಸಿದ್ದು, ಇಬ್ಬರನ್ನು ಬಂಧಿಸಲಾಗಿದೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು