AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಯಿಯ ಸ್ನೇಹಿತನಿಂದಲೇ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ, ಅಪರಾಧ ಮರೆಮಾಚಲು ಚಿತ್ರಹಿಂಸೆ

ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ ಆಕೆಯ ತಾಯಿಯ ಸ್ನೇಹಿತನೇ ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್​ನಲ್ಲಿ ನಡೆದಿದೆ. ಆದರೆ ಈ ವಿಚಾರ ಹೊರಗೆ ಬರಬಾರದೆಂದು ತಾಯಿ ತನ್ನ 10 ವರ್ಷದ ಮಗಳಿಗೆ ಚಿತ್ರಹಿಂಸೆ ನೀಡಿ, ಮತ್ತೆ ಆತನ ಬಳಿಯೇ ಕಳುಹಿಸಿಕೊಡಲು ಯತ್ನಿಸಿದ್ದಾಳೆ ಮತ್ತು ಆಕೆಯನ್ನು ವೇಶ್ಯಾವಾಟಿಕೆ ದಂಧೆಗೆ ತಳ್ಳಲು ಪ್ರಯತ್ನಿಸಿದ್ದಾಳೆ ಎನ್ನುವ ಮಾಹಿತಿ ಲಭ್ಯವಾಗಿದೆ.

ತಾಯಿಯ ಸ್ನೇಹಿತನಿಂದಲೇ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ, ಅಪರಾಧ ಮರೆಮಾಚಲು ಚಿತ್ರಹಿಂಸೆ
ಅಪರಾಧImage Credit source: India Today
ನಯನಾ ರಾಜೀವ್
|

Updated on: Apr 12, 2024 | 10:22 AM

Share

ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ ಆಕೆಯ ತಾಯಿಯ ಸ್ನೇಹಿತನೇ ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್​ನಲ್ಲಿ ನಡೆದಿದೆ. ಆದರೆ ಈ ವಿಚಾರ ಹೊರಗೆ ಬರಬಾರದೆಂದು ತಾಯಿ ತನ್ನ 10 ವರ್ಷದ ಮಗಳಿಗೆ ಚಿತ್ರಹಿಂಸೆ ನೀಡಿ, ಮತ್ತೆ ಆತನ ಬಳಿಯೇ ಕಳುಹಿಸಿಕೊಡಲು ಯತ್ನಿಸಿದ್ದಾಳೆ ಮತ್ತು ಆಕೆಯನ್ನು ವೇಶ್ಯಾವಾಟಿಕೆ ದಂಧೆಗೆ ತಳ್ಳಲು ಪ್ರಯತ್ನಿಸಿದ್ದಾಳೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಈ ವಿಚಾರವು ಎಲ್ಲಿಯೂ ಹೊರಬರಬಾರದೆಂದು ತಾಯಿ ಆಕೆ ಹಾಗೂ ಆಕೆಯ ಸಹೋದರ ಇಬ್ಬರಿಗೂ ಥಳಿಸಿ ಚಿತ್ರಹಿಂಸೆ ನೀಡುತ್ತಿದ್ದರು. ಹಿಂಸೆಯನ್ನು ಸಹಿಸಲಾಗದೆ, ಮಗಳು ಜನವರಿ 20 ರಂದು ತನ್ನ ಗಾಜಿಯಾಬಾದ್ ನಿವಾಸದಿಂದ ಓಡಿಹೋಗಿದ್ದಾಳೆ ಮತ್ತು ನಂತರ ದೆಹಲಿಯ ಬೀದಿಗಳಲ್ಲಿ ಅಲೆದಾಡುತ್ತಿದ್ದಳು.

ಅದೃಷ್ಟವಶಾತ್ ಆಕೆಯನ್ನು ದೆಹಲಿ ಪೊಲೀಸರು ರಕ್ಷಿಸಿ ಮಕ್ಕಳ ಕಲ್ಯಾಣ ಸಮಿತಿಯ ಆಶ್ರಯದಲ್ಲಿ ಇರಿಸಿದ್ದಾರೆ. ವೈದ್ಯಕೀಯ ಪರೀಕ್ಷೆ ಬಳಿಕ ಬಾಲಕಿ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿರುವುದು ಸತ್ಯ ಎನ್ನುವುದು ಬಹಿರಂಗಗೊಂಡಿದೆ. ನಾಲ್ಕು ವರ್ಷಗಳ ಹಿಂದೆ ತನ್ನ ತಂದೆಯ ನಿಧನದ ನಂತರ, ತಾನು ಮತ್ತು ಸಹೋದರ ತಮ್ಮ ತಾಯಿಯ ಅಜ್ಜಿಯೊಂದಿಗೆ ವಾಸಿಸುತ್ತಿದ್ದುದಾಗಿ ಹೇಳಿದ್ದಾಳೆ.

ಮತ್ತಷ್ಟು ಓದಿ: ಕಾಲ್​​ ಗರ್ಲ್​ಗಾಗಿ ಕರೆ ಮಾಡಿ ಎಂದು ಫೇಸ್​​ಬುಕ್​ನಲ್ಲಿ ಪತ್ನಿಯ ಫೋಟೊ, ಮೊಬೈಲ್ ನಂಬರ್ ಪೋಸ್ಟ್ ಮಾಡಿದ ವ್ಯಕ್ತಿ!

ಕಳೆದ ವರ್ಷ, ತಾಯಿ ಅವರನ್ನು ಕರೆದುಕೊಂಡು ಬಂದಿದ್ದಳು, ಬಳಿಕ ದೌರ್ಜನ್ಯಕ್ಕೆ ಬಲಿಯಾಗಬೇಕಾಯಿತು, ಸಹೋದರನೂ ಕೂಡ ಓಡಿಹೋಗಿರುವುದಾಗಿ ತಿಳಿಸಿದ್ದಾಳೆ. ತಂದೆಯ ಮರಣದ ನಂತರ ತಾಯಿ ವೇಶ್ಯಾವಾಟಿಕೆಯಲ್ಲಿ ತೊಡಗಿರುವುದು ಗೊತ್ತಾದ ನಂತರ ಮನೆ ತೊರೆಯದಿದ್ದರೆ ದೊಡ್ಡವನಾದ ಮೇಲೆ ತನ್ನನ್ನೂ ಈ ದಂಧೆಗೆ ತಳ್ಳುತ್ತಿದ್ದಳು ಎಂದು ಹೇಳಿದ್ದಾಳೆ.

ಜನವರಿ 20ರಂದು ಮಗಳು ಕಾಣೆಯಾದ ಬಳಿಕ ತಾಯಿ ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಿಸಿರಲಿಲ್ಲ. ತನ್ನ ತಾಯಿ ಮತ್ತು ರಾಜು ಅಪರಾಧವನ್ನು ಮುಚ್ಚಿಡಲು ತನಗೆ ಚಿತ್ರಹಿಂಸೆ ನೀಡುತ್ತಿದ್ದರು ಮತ್ತು ಈ ಬಗ್ಗೆ ಯಾರಿಗೂ ಹೇಳದಂತೆ ನೋಡಿಕೊಳ್ಳಲು ಬೆದರಿಕೆ ಹಾಕುತ್ತಿದ್ದರು ಎಂದು ಬಾಲಕಿ ತಿಳಿಸಿದ್ದು, ಇಬ್ಬರನ್ನು ಬಂಧಿಸಲಾಗಿದೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ