Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಯಿಯ ಸ್ನೇಹಿತನಿಂದಲೇ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ, ಅಪರಾಧ ಮರೆಮಾಚಲು ಚಿತ್ರಹಿಂಸೆ

ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ ಆಕೆಯ ತಾಯಿಯ ಸ್ನೇಹಿತನೇ ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್​ನಲ್ಲಿ ನಡೆದಿದೆ. ಆದರೆ ಈ ವಿಚಾರ ಹೊರಗೆ ಬರಬಾರದೆಂದು ತಾಯಿ ತನ್ನ 10 ವರ್ಷದ ಮಗಳಿಗೆ ಚಿತ್ರಹಿಂಸೆ ನೀಡಿ, ಮತ್ತೆ ಆತನ ಬಳಿಯೇ ಕಳುಹಿಸಿಕೊಡಲು ಯತ್ನಿಸಿದ್ದಾಳೆ ಮತ್ತು ಆಕೆಯನ್ನು ವೇಶ್ಯಾವಾಟಿಕೆ ದಂಧೆಗೆ ತಳ್ಳಲು ಪ್ರಯತ್ನಿಸಿದ್ದಾಳೆ ಎನ್ನುವ ಮಾಹಿತಿ ಲಭ್ಯವಾಗಿದೆ.

ತಾಯಿಯ ಸ್ನೇಹಿತನಿಂದಲೇ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ, ಅಪರಾಧ ಮರೆಮಾಚಲು ಚಿತ್ರಹಿಂಸೆ
ಅಪರಾಧImage Credit source: India Today
Follow us
ನಯನಾ ರಾಜೀವ್
|

Updated on: Apr 12, 2024 | 10:22 AM

ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ ಆಕೆಯ ತಾಯಿಯ ಸ್ನೇಹಿತನೇ ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್​ನಲ್ಲಿ ನಡೆದಿದೆ. ಆದರೆ ಈ ವಿಚಾರ ಹೊರಗೆ ಬರಬಾರದೆಂದು ತಾಯಿ ತನ್ನ 10 ವರ್ಷದ ಮಗಳಿಗೆ ಚಿತ್ರಹಿಂಸೆ ನೀಡಿ, ಮತ್ತೆ ಆತನ ಬಳಿಯೇ ಕಳುಹಿಸಿಕೊಡಲು ಯತ್ನಿಸಿದ್ದಾಳೆ ಮತ್ತು ಆಕೆಯನ್ನು ವೇಶ್ಯಾವಾಟಿಕೆ ದಂಧೆಗೆ ತಳ್ಳಲು ಪ್ರಯತ್ನಿಸಿದ್ದಾಳೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಈ ವಿಚಾರವು ಎಲ್ಲಿಯೂ ಹೊರಬರಬಾರದೆಂದು ತಾಯಿ ಆಕೆ ಹಾಗೂ ಆಕೆಯ ಸಹೋದರ ಇಬ್ಬರಿಗೂ ಥಳಿಸಿ ಚಿತ್ರಹಿಂಸೆ ನೀಡುತ್ತಿದ್ದರು. ಹಿಂಸೆಯನ್ನು ಸಹಿಸಲಾಗದೆ, ಮಗಳು ಜನವರಿ 20 ರಂದು ತನ್ನ ಗಾಜಿಯಾಬಾದ್ ನಿವಾಸದಿಂದ ಓಡಿಹೋಗಿದ್ದಾಳೆ ಮತ್ತು ನಂತರ ದೆಹಲಿಯ ಬೀದಿಗಳಲ್ಲಿ ಅಲೆದಾಡುತ್ತಿದ್ದಳು.

ಅದೃಷ್ಟವಶಾತ್ ಆಕೆಯನ್ನು ದೆಹಲಿ ಪೊಲೀಸರು ರಕ್ಷಿಸಿ ಮಕ್ಕಳ ಕಲ್ಯಾಣ ಸಮಿತಿಯ ಆಶ್ರಯದಲ್ಲಿ ಇರಿಸಿದ್ದಾರೆ. ವೈದ್ಯಕೀಯ ಪರೀಕ್ಷೆ ಬಳಿಕ ಬಾಲಕಿ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿರುವುದು ಸತ್ಯ ಎನ್ನುವುದು ಬಹಿರಂಗಗೊಂಡಿದೆ. ನಾಲ್ಕು ವರ್ಷಗಳ ಹಿಂದೆ ತನ್ನ ತಂದೆಯ ನಿಧನದ ನಂತರ, ತಾನು ಮತ್ತು ಸಹೋದರ ತಮ್ಮ ತಾಯಿಯ ಅಜ್ಜಿಯೊಂದಿಗೆ ವಾಸಿಸುತ್ತಿದ್ದುದಾಗಿ ಹೇಳಿದ್ದಾಳೆ.

ಮತ್ತಷ್ಟು ಓದಿ: ಕಾಲ್​​ ಗರ್ಲ್​ಗಾಗಿ ಕರೆ ಮಾಡಿ ಎಂದು ಫೇಸ್​​ಬುಕ್​ನಲ್ಲಿ ಪತ್ನಿಯ ಫೋಟೊ, ಮೊಬೈಲ್ ನಂಬರ್ ಪೋಸ್ಟ್ ಮಾಡಿದ ವ್ಯಕ್ತಿ!

ಕಳೆದ ವರ್ಷ, ತಾಯಿ ಅವರನ್ನು ಕರೆದುಕೊಂಡು ಬಂದಿದ್ದಳು, ಬಳಿಕ ದೌರ್ಜನ್ಯಕ್ಕೆ ಬಲಿಯಾಗಬೇಕಾಯಿತು, ಸಹೋದರನೂ ಕೂಡ ಓಡಿಹೋಗಿರುವುದಾಗಿ ತಿಳಿಸಿದ್ದಾಳೆ. ತಂದೆಯ ಮರಣದ ನಂತರ ತಾಯಿ ವೇಶ್ಯಾವಾಟಿಕೆಯಲ್ಲಿ ತೊಡಗಿರುವುದು ಗೊತ್ತಾದ ನಂತರ ಮನೆ ತೊರೆಯದಿದ್ದರೆ ದೊಡ್ಡವನಾದ ಮೇಲೆ ತನ್ನನ್ನೂ ಈ ದಂಧೆಗೆ ತಳ್ಳುತ್ತಿದ್ದಳು ಎಂದು ಹೇಳಿದ್ದಾಳೆ.

ಜನವರಿ 20ರಂದು ಮಗಳು ಕಾಣೆಯಾದ ಬಳಿಕ ತಾಯಿ ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಿಸಿರಲಿಲ್ಲ. ತನ್ನ ತಾಯಿ ಮತ್ತು ರಾಜು ಅಪರಾಧವನ್ನು ಮುಚ್ಚಿಡಲು ತನಗೆ ಚಿತ್ರಹಿಂಸೆ ನೀಡುತ್ತಿದ್ದರು ಮತ್ತು ಈ ಬಗ್ಗೆ ಯಾರಿಗೂ ಹೇಳದಂತೆ ನೋಡಿಕೊಳ್ಳಲು ಬೆದರಿಕೆ ಹಾಕುತ್ತಿದ್ದರು ಎಂದು ಬಾಲಕಿ ತಿಳಿಸಿದ್ದು, ಇಬ್ಬರನ್ನು ಬಂಧಿಸಲಾಗಿದೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!