ತಾಯಿಯ ಸ್ನೇಹಿತನಿಂದಲೇ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ, ಅಪರಾಧ ಮರೆಮಾಚಲು ಚಿತ್ರಹಿಂಸೆ

ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ ಆಕೆಯ ತಾಯಿಯ ಸ್ನೇಹಿತನೇ ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್​ನಲ್ಲಿ ನಡೆದಿದೆ. ಆದರೆ ಈ ವಿಚಾರ ಹೊರಗೆ ಬರಬಾರದೆಂದು ತಾಯಿ ತನ್ನ 10 ವರ್ಷದ ಮಗಳಿಗೆ ಚಿತ್ರಹಿಂಸೆ ನೀಡಿ, ಮತ್ತೆ ಆತನ ಬಳಿಯೇ ಕಳುಹಿಸಿಕೊಡಲು ಯತ್ನಿಸಿದ್ದಾಳೆ ಮತ್ತು ಆಕೆಯನ್ನು ವೇಶ್ಯಾವಾಟಿಕೆ ದಂಧೆಗೆ ತಳ್ಳಲು ಪ್ರಯತ್ನಿಸಿದ್ದಾಳೆ ಎನ್ನುವ ಮಾಹಿತಿ ಲಭ್ಯವಾಗಿದೆ.

ತಾಯಿಯ ಸ್ನೇಹಿತನಿಂದಲೇ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ, ಅಪರಾಧ ಮರೆಮಾಚಲು ಚಿತ್ರಹಿಂಸೆ
ಅಪರಾಧImage Credit source: India Today
Follow us
|

Updated on: Apr 12, 2024 | 10:22 AM

ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ ಆಕೆಯ ತಾಯಿಯ ಸ್ನೇಹಿತನೇ ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್​ನಲ್ಲಿ ನಡೆದಿದೆ. ಆದರೆ ಈ ವಿಚಾರ ಹೊರಗೆ ಬರಬಾರದೆಂದು ತಾಯಿ ತನ್ನ 10 ವರ್ಷದ ಮಗಳಿಗೆ ಚಿತ್ರಹಿಂಸೆ ನೀಡಿ, ಮತ್ತೆ ಆತನ ಬಳಿಯೇ ಕಳುಹಿಸಿಕೊಡಲು ಯತ್ನಿಸಿದ್ದಾಳೆ ಮತ್ತು ಆಕೆಯನ್ನು ವೇಶ್ಯಾವಾಟಿಕೆ ದಂಧೆಗೆ ತಳ್ಳಲು ಪ್ರಯತ್ನಿಸಿದ್ದಾಳೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಈ ವಿಚಾರವು ಎಲ್ಲಿಯೂ ಹೊರಬರಬಾರದೆಂದು ತಾಯಿ ಆಕೆ ಹಾಗೂ ಆಕೆಯ ಸಹೋದರ ಇಬ್ಬರಿಗೂ ಥಳಿಸಿ ಚಿತ್ರಹಿಂಸೆ ನೀಡುತ್ತಿದ್ದರು. ಹಿಂಸೆಯನ್ನು ಸಹಿಸಲಾಗದೆ, ಮಗಳು ಜನವರಿ 20 ರಂದು ತನ್ನ ಗಾಜಿಯಾಬಾದ್ ನಿವಾಸದಿಂದ ಓಡಿಹೋಗಿದ್ದಾಳೆ ಮತ್ತು ನಂತರ ದೆಹಲಿಯ ಬೀದಿಗಳಲ್ಲಿ ಅಲೆದಾಡುತ್ತಿದ್ದಳು.

ಅದೃಷ್ಟವಶಾತ್ ಆಕೆಯನ್ನು ದೆಹಲಿ ಪೊಲೀಸರು ರಕ್ಷಿಸಿ ಮಕ್ಕಳ ಕಲ್ಯಾಣ ಸಮಿತಿಯ ಆಶ್ರಯದಲ್ಲಿ ಇರಿಸಿದ್ದಾರೆ. ವೈದ್ಯಕೀಯ ಪರೀಕ್ಷೆ ಬಳಿಕ ಬಾಲಕಿ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿರುವುದು ಸತ್ಯ ಎನ್ನುವುದು ಬಹಿರಂಗಗೊಂಡಿದೆ. ನಾಲ್ಕು ವರ್ಷಗಳ ಹಿಂದೆ ತನ್ನ ತಂದೆಯ ನಿಧನದ ನಂತರ, ತಾನು ಮತ್ತು ಸಹೋದರ ತಮ್ಮ ತಾಯಿಯ ಅಜ್ಜಿಯೊಂದಿಗೆ ವಾಸಿಸುತ್ತಿದ್ದುದಾಗಿ ಹೇಳಿದ್ದಾಳೆ.

ಮತ್ತಷ್ಟು ಓದಿ: ಕಾಲ್​​ ಗರ್ಲ್​ಗಾಗಿ ಕರೆ ಮಾಡಿ ಎಂದು ಫೇಸ್​​ಬುಕ್​ನಲ್ಲಿ ಪತ್ನಿಯ ಫೋಟೊ, ಮೊಬೈಲ್ ನಂಬರ್ ಪೋಸ್ಟ್ ಮಾಡಿದ ವ್ಯಕ್ತಿ!

ಕಳೆದ ವರ್ಷ, ತಾಯಿ ಅವರನ್ನು ಕರೆದುಕೊಂಡು ಬಂದಿದ್ದಳು, ಬಳಿಕ ದೌರ್ಜನ್ಯಕ್ಕೆ ಬಲಿಯಾಗಬೇಕಾಯಿತು, ಸಹೋದರನೂ ಕೂಡ ಓಡಿಹೋಗಿರುವುದಾಗಿ ತಿಳಿಸಿದ್ದಾಳೆ. ತಂದೆಯ ಮರಣದ ನಂತರ ತಾಯಿ ವೇಶ್ಯಾವಾಟಿಕೆಯಲ್ಲಿ ತೊಡಗಿರುವುದು ಗೊತ್ತಾದ ನಂತರ ಮನೆ ತೊರೆಯದಿದ್ದರೆ ದೊಡ್ಡವನಾದ ಮೇಲೆ ತನ್ನನ್ನೂ ಈ ದಂಧೆಗೆ ತಳ್ಳುತ್ತಿದ್ದಳು ಎಂದು ಹೇಳಿದ್ದಾಳೆ.

ಜನವರಿ 20ರಂದು ಮಗಳು ಕಾಣೆಯಾದ ಬಳಿಕ ತಾಯಿ ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಿಸಿರಲಿಲ್ಲ. ತನ್ನ ತಾಯಿ ಮತ್ತು ರಾಜು ಅಪರಾಧವನ್ನು ಮುಚ್ಚಿಡಲು ತನಗೆ ಚಿತ್ರಹಿಂಸೆ ನೀಡುತ್ತಿದ್ದರು ಮತ್ತು ಈ ಬಗ್ಗೆ ಯಾರಿಗೂ ಹೇಳದಂತೆ ನೋಡಿಕೊಳ್ಳಲು ಬೆದರಿಕೆ ಹಾಕುತ್ತಿದ್ದರು ಎಂದು ಬಾಲಕಿ ತಿಳಿಸಿದ್ದು, ಇಬ್ಬರನ್ನು ಬಂಧಿಸಲಾಗಿದೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ತಾಜಾ ಸುದ್ದಿ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ