AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಯಿಯ ಸ್ನೇಹಿತನಿಂದಲೇ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ, ಅಪರಾಧ ಮರೆಮಾಚಲು ಚಿತ್ರಹಿಂಸೆ

ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ ಆಕೆಯ ತಾಯಿಯ ಸ್ನೇಹಿತನೇ ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್​ನಲ್ಲಿ ನಡೆದಿದೆ. ಆದರೆ ಈ ವಿಚಾರ ಹೊರಗೆ ಬರಬಾರದೆಂದು ತಾಯಿ ತನ್ನ 10 ವರ್ಷದ ಮಗಳಿಗೆ ಚಿತ್ರಹಿಂಸೆ ನೀಡಿ, ಮತ್ತೆ ಆತನ ಬಳಿಯೇ ಕಳುಹಿಸಿಕೊಡಲು ಯತ್ನಿಸಿದ್ದಾಳೆ ಮತ್ತು ಆಕೆಯನ್ನು ವೇಶ್ಯಾವಾಟಿಕೆ ದಂಧೆಗೆ ತಳ್ಳಲು ಪ್ರಯತ್ನಿಸಿದ್ದಾಳೆ ಎನ್ನುವ ಮಾಹಿತಿ ಲಭ್ಯವಾಗಿದೆ.

ತಾಯಿಯ ಸ್ನೇಹಿತನಿಂದಲೇ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ, ಅಪರಾಧ ಮರೆಮಾಚಲು ಚಿತ್ರಹಿಂಸೆ
ಅಪರಾಧImage Credit source: India Today
ನಯನಾ ರಾಜೀವ್
|

Updated on: Apr 12, 2024 | 10:22 AM

Share

ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ ಆಕೆಯ ತಾಯಿಯ ಸ್ನೇಹಿತನೇ ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್​ನಲ್ಲಿ ನಡೆದಿದೆ. ಆದರೆ ಈ ವಿಚಾರ ಹೊರಗೆ ಬರಬಾರದೆಂದು ತಾಯಿ ತನ್ನ 10 ವರ್ಷದ ಮಗಳಿಗೆ ಚಿತ್ರಹಿಂಸೆ ನೀಡಿ, ಮತ್ತೆ ಆತನ ಬಳಿಯೇ ಕಳುಹಿಸಿಕೊಡಲು ಯತ್ನಿಸಿದ್ದಾಳೆ ಮತ್ತು ಆಕೆಯನ್ನು ವೇಶ್ಯಾವಾಟಿಕೆ ದಂಧೆಗೆ ತಳ್ಳಲು ಪ್ರಯತ್ನಿಸಿದ್ದಾಳೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಈ ವಿಚಾರವು ಎಲ್ಲಿಯೂ ಹೊರಬರಬಾರದೆಂದು ತಾಯಿ ಆಕೆ ಹಾಗೂ ಆಕೆಯ ಸಹೋದರ ಇಬ್ಬರಿಗೂ ಥಳಿಸಿ ಚಿತ್ರಹಿಂಸೆ ನೀಡುತ್ತಿದ್ದರು. ಹಿಂಸೆಯನ್ನು ಸಹಿಸಲಾಗದೆ, ಮಗಳು ಜನವರಿ 20 ರಂದು ತನ್ನ ಗಾಜಿಯಾಬಾದ್ ನಿವಾಸದಿಂದ ಓಡಿಹೋಗಿದ್ದಾಳೆ ಮತ್ತು ನಂತರ ದೆಹಲಿಯ ಬೀದಿಗಳಲ್ಲಿ ಅಲೆದಾಡುತ್ತಿದ್ದಳು.

ಅದೃಷ್ಟವಶಾತ್ ಆಕೆಯನ್ನು ದೆಹಲಿ ಪೊಲೀಸರು ರಕ್ಷಿಸಿ ಮಕ್ಕಳ ಕಲ್ಯಾಣ ಸಮಿತಿಯ ಆಶ್ರಯದಲ್ಲಿ ಇರಿಸಿದ್ದಾರೆ. ವೈದ್ಯಕೀಯ ಪರೀಕ್ಷೆ ಬಳಿಕ ಬಾಲಕಿ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿರುವುದು ಸತ್ಯ ಎನ್ನುವುದು ಬಹಿರಂಗಗೊಂಡಿದೆ. ನಾಲ್ಕು ವರ್ಷಗಳ ಹಿಂದೆ ತನ್ನ ತಂದೆಯ ನಿಧನದ ನಂತರ, ತಾನು ಮತ್ತು ಸಹೋದರ ತಮ್ಮ ತಾಯಿಯ ಅಜ್ಜಿಯೊಂದಿಗೆ ವಾಸಿಸುತ್ತಿದ್ದುದಾಗಿ ಹೇಳಿದ್ದಾಳೆ.

ಮತ್ತಷ್ಟು ಓದಿ: ಕಾಲ್​​ ಗರ್ಲ್​ಗಾಗಿ ಕರೆ ಮಾಡಿ ಎಂದು ಫೇಸ್​​ಬುಕ್​ನಲ್ಲಿ ಪತ್ನಿಯ ಫೋಟೊ, ಮೊಬೈಲ್ ನಂಬರ್ ಪೋಸ್ಟ್ ಮಾಡಿದ ವ್ಯಕ್ತಿ!

ಕಳೆದ ವರ್ಷ, ತಾಯಿ ಅವರನ್ನು ಕರೆದುಕೊಂಡು ಬಂದಿದ್ದಳು, ಬಳಿಕ ದೌರ್ಜನ್ಯಕ್ಕೆ ಬಲಿಯಾಗಬೇಕಾಯಿತು, ಸಹೋದರನೂ ಕೂಡ ಓಡಿಹೋಗಿರುವುದಾಗಿ ತಿಳಿಸಿದ್ದಾಳೆ. ತಂದೆಯ ಮರಣದ ನಂತರ ತಾಯಿ ವೇಶ್ಯಾವಾಟಿಕೆಯಲ್ಲಿ ತೊಡಗಿರುವುದು ಗೊತ್ತಾದ ನಂತರ ಮನೆ ತೊರೆಯದಿದ್ದರೆ ದೊಡ್ಡವನಾದ ಮೇಲೆ ತನ್ನನ್ನೂ ಈ ದಂಧೆಗೆ ತಳ್ಳುತ್ತಿದ್ದಳು ಎಂದು ಹೇಳಿದ್ದಾಳೆ.

ಜನವರಿ 20ರಂದು ಮಗಳು ಕಾಣೆಯಾದ ಬಳಿಕ ತಾಯಿ ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಿಸಿರಲಿಲ್ಲ. ತನ್ನ ತಾಯಿ ಮತ್ತು ರಾಜು ಅಪರಾಧವನ್ನು ಮುಚ್ಚಿಡಲು ತನಗೆ ಚಿತ್ರಹಿಂಸೆ ನೀಡುತ್ತಿದ್ದರು ಮತ್ತು ಈ ಬಗ್ಗೆ ಯಾರಿಗೂ ಹೇಳದಂತೆ ನೋಡಿಕೊಳ್ಳಲು ಬೆದರಿಕೆ ಹಾಕುತ್ತಿದ್ದರು ಎಂದು ಬಾಲಕಿ ತಿಳಿಸಿದ್ದು, ಇಬ್ಬರನ್ನು ಬಂಧಿಸಲಾಗಿದೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ