AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karwar Murder: ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ಪ್ರಕರಣ: ಇಬ್ಬರು ವಶಕ್ಕೆ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಹಾಡವಳ್ಳಿ ಬಳಿ ಫೆ.24 ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣ ಸಂಬಂಧ ಆರೋಪಿಗಳ ಬಂಧನಕ್ಕೆ ಭಟ್ಕಳ ಡಿವೈಎಸ್​​​ಪಿ, ಸಿಪಿಐ ನೇತೃತ್ವದಲ್ಲಿ 3 ತಂಡಗಳನ್ನು ರಚನೆ ಮಾಡಲಾಗಿತ್ತು. ಸದ್ಯ ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Karwar Murder: ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ಪ್ರಕರಣ: ಇಬ್ಬರು ವಶಕ್ಕೆ
ಸಾಂದರ್ಭಿಕ ಚಿತ್ರ
Follow us
Rakesh Nayak Manchi
|

Updated on:Feb 26, 2023 | 8:13 PM

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಹಾಡವಳ್ಳಿ ಬಳಿ ನಡೆದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ (Murder Case) ಸಂಬಂಧ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಘಟನೆ ನಂತರ ತಲೆಮರೆಸಿಕೊಂಡಿದ್ದ ವಿನಯ್ ಭಟ್, ಶ್ರೀಧರ್ ಭಟ್ ಎಂಬವರನ್ನು ಶಿವಮೊಗ್ಗದಲ್ಲಿ ಪತ್ತೆಹಚ್ಚಿದ ಪೊಲೀಸರು ಅವರನ್ನು ವಶಕ್ಕೆ ಪಡೆದು ವಿಚಾರಣೆ ಆರಂಭಿಸಿದ್ದಾರೆ. ನಾಲ್ವಾರನ್ನು ಬರ್ಬರವಾಗಿ ಕೊಲೆ ಮಾಡಿದ್ದ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ಭೇದಿಸಲು ಭಟ್ಕಳ ಡಿವೈಎಸ್​​​ಪಿ, ಸಿಪಿಐ ನೇತೃತ್ವದಲ್ಲಿ 3 ತಂಡಗಳನ್ನು ರಚನೆ ಮಾಡಲಾಗಿತ್ತು.

ಓಣಿಬಾಗಿಲು ಗ್ರಾಮದಲ್ಲಿ ಫೆ.24ರಂದು ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಕುಟುಂಬದ ಹಿರಿಯ ಶಂಭು ಭಟ್ (65) ಶಂಭು ಭಟ್​​ ಪತ್ನಿ ಮಾದೇವಿ ಭಟ್ (40) ಮಗ ರಾಜೀವ್ ಭಟ್ (34) ಸೊಸೆ ಕುಸುಮಾ ಭಟ್ (30) ಎಂಬವನ್ನು ಕೊಲೆ ಮಾಡಲಾಗಿತ್ತು. ಅದೃಷ್ಟವಶಾತ್ ಕುಸುಮಾ ದಂಪತಿಯ ಮಗು ಬಚಾವ್ ಆಗಿದೆ.

ಶಂಭು ಭಟ್ ಅವರ ಮೊದಲ ಮಗ ಶ್ರೀಧರ್ ಭಟ್ ಜೊತೆ ವಿದ್ಯಾ ಭಟ್ ವಿವಾಹವಾಗಿತ್ತು. ಆದರೆ ಕಿಡ್ನಿ ವೈಫಲ್ಯದಿಂದ ಜ್ವರ ಬಂದು ಶ್ರೀಧರ್ ಭಟ್ ಮೂರ್ನಾಲ್ಕು ತಿಂಗಳ ಹಿಂದೆ​ ಸಾವನ್ನಪ್ಪಿದ್ದರು. ಈ ಮಧ್ಯೆ ಜೀವನಾಂಶ ನೀಡುವಂತೆ ಸೊಸೆ ವಿದ್ಯಾ ಭಟ್ ಬೇಡಿಕೆ ಇಟ್ಟಿದ್ದರು. ಆಸ್ತಿ ವಿಚಾರವಾಗಿ ಗಂಡನ ಕುಟುಂಬದ ಜೊತೆ ವಿದ್ಯಾ ಭಟ್​ ಗಲಾಟೆ ಮಾಡಿದ್ದರು ಎನ್ನಲಾಗುತ್ತಿದೆ. ಗಂಡನ ಮನೆಯವರು 6 ಎಕರೆ ಜಮೀನು ಹೊಂದಿದ್ದರು. ಇದರಲ್ಲಿ 1 ಎಕರೆ 9 ಗುಂಟೆ ಭೂಮಿ ನೀಡಿದ್ದರು. ಆದರೆ ಸೊಸೆ ವಿದ್ಯಾ 3 ಎಕರೆ ಜಮೀನು ನೀಡುವಂತೆ ಬೇಡಿಕೆ ಇಟ್ಟಿದ್ದರು. ಇದರಿಂದ ಜಗಳ ನಡೆದಿತ್ತು. ಈ ಹಿನ್ನಲೆ ಸೊಸೆ ವಿದ್ಯಾ ಕುಮ್ಮಕ್ಕಿನಿಂದಲೇ ಕೊಲೆ ನಡೆದಿದೆ ಎಂಬ ಆರೋಪ ಕೇಳಿಬಂದಿದೆ.

ಇದನ್ನೂ ಓದಿ: Murders for property in Karwar: ಆಸ್ತಿಗಾಗಿ ನಾಲ್ವರನ್ನು ಭೀಕರವಾಗಿ ಹತ್ಯೆಗೈದ ರಾಕ್ಷಸರ ಕ್ರೌರ್ಯ ತಾಲಿಬಾನಿಗಳಿಗಿಂತ ಮಿಗಿಲಾದದ್ದು!

ಪ್ರಕರಣ ಸಂಭಂಧ ಆಡಿಯೋವೊಂದು ಟಿವಿ9ಗೆ ಲಭ್ಯವಾಗಿದೆ. ಆಡಿಯೋ ಪ್ರಕಾರ, ಮೃತ ಶ್ರೀಧರ ಭಟ್​ನ ಪತ್ನಿ ವಿದ್ಯಾಭಟ್​ಗೆ ಜೀವನಾಂಶ ಕೊಡುವ ವಿಚಾರವಾಗಿ ಗಲಾಟೆ ನಡೆದು ಕೊಲೆಯಲ್ಲಿ ಅಂತ್ಯವಾಗಿರುವ ಶಂಕೆ ವ್ಯಕ್ತವಾಗಿದೆ. ಜೀವನಾಂಶವಾಗಿ ವಿದ್ಯಾ ಭಟ್​​ಗೆ ಜಮೀನು ನೀಡಿ ಎಂದು ಗಂಡನ ಮನೆಯವರಿಗೆ, ವಿದ್ಯಾ ಪರ ವಕಾಲತ್ತು ವಹಸಿಕೊಂಡು ಇಬ್ಬರು ಅಪರಿಚಿತರು ಬಂದಿದ್ದಾರೆ. ವಕಾಲತ್ತು ವಹಿಸಿಕೊಂಡು ಬಂದವರು, ವಿದ್ಯಾ ಭಟ್ ಮತ್ತು ಆಕೆಯ ಎರಡು ಮಕ್ಕಳು, ಜೀವನ ನಡೆಸಲು ಜಮೀನು ನೀಡಿ ಎಂದು ಬೇಡಿಕೆ ಇಟ್ಟಿದ್ದಾರೆ.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:10 pm, Sun, 26 February 23

ಉಡುಪಿ ಜನ ಶಾಂತಿಪ್ರಿಯರು, ಅದನ್ನು ಕದಡುವ ಪ್ರಯತ್ನ ಬೇಡ: ಹೆಬ್ಬಾಳ್ಕರ್
ಉಡುಪಿ ಜನ ಶಾಂತಿಪ್ರಿಯರು, ಅದನ್ನು ಕದಡುವ ಪ್ರಯತ್ನ ಬೇಡ: ಹೆಬ್ಬಾಳ್ಕರ್
ಜಾತಿಗಣತಿಕ್ಕಿಂತ ಮೊದಲು ಸರ್ಕಾರ ಮರಗಣತಿ ಮಾಡಿಸುವುದೊಳಿತು!
ಜಾತಿಗಣತಿಕ್ಕಿಂತ ಮೊದಲು ಸರ್ಕಾರ ಮರಗಣತಿ ಮಾಡಿಸುವುದೊಳಿತು!
ಯಾವುದೇ ಕ್ಷಣದಲ್ಲಿ ಕೆಆರ್​ಎಸ್ ಡ್ಯಾಂನಿಂದ ಕಾವೇರಿ ನದಿಗೆ ನೀರು ಬಿಡುಗಡೆ
ಯಾವುದೇ ಕ್ಷಣದಲ್ಲಿ ಕೆಆರ್​ಎಸ್ ಡ್ಯಾಂನಿಂದ ಕಾವೇರಿ ನದಿಗೆ ನೀರು ಬಿಡುಗಡೆ
ಬಾಲ್ಯವಿವಾಹದಲ್ಲಿ ಭಾಗಿಯಾಗುವುದೂ ಶಿಕ್ಷಾರ್ಹ ಅಪರಾಧವಾಗಿದೆ!
ಬಾಲ್ಯವಿವಾಹದಲ್ಲಿ ಭಾಗಿಯಾಗುವುದೂ ಶಿಕ್ಷಾರ್ಹ ಅಪರಾಧವಾಗಿದೆ!
ಬ್ಯಾಚುಲರ್ಸ್ ವೇದಿಕೆ ಮೇಲೆ ಡ್ಯಾನ್ಸ್; ಎಲ್ಲರನ್ನೂ ಮೀರಿಸಿದ ರವಿಚಂದ್ರನ್
ಬ್ಯಾಚುಲರ್ಸ್ ವೇದಿಕೆ ಮೇಲೆ ಡ್ಯಾನ್ಸ್; ಎಲ್ಲರನ್ನೂ ಮೀರಿಸಿದ ರವಿಚಂದ್ರನ್
ಪೊಲೀಸ್ ವಾಹನದ ಬಾನೆಟ್​ ಮೇಲೆ ಕೇಕ್ ಕತ್ತರಿಸಿದ ಪೊಲೀಸ್ ಅಧಿಕಾರಿ ಪತ್ನಿ
ಪೊಲೀಸ್ ವಾಹನದ ಬಾನೆಟ್​ ಮೇಲೆ ಕೇಕ್ ಕತ್ತರಿಸಿದ ಪೊಲೀಸ್ ಅಧಿಕಾರಿ ಪತ್ನಿ
ಬೆಂಗಳೂರಿಗೆ ಬಂದ ಅಮಿತ್ ಶಾಗೆ ಬಿವೈವಿ, ಯಡಿಯೂರಪ್ಪ ಸ್ವಾಗತ
ಬೆಂಗಳೂರಿಗೆ ಬಂದ ಅಮಿತ್ ಶಾಗೆ ಬಿವೈವಿ, ಯಡಿಯೂರಪ್ಪ ಸ್ವಾಗತ
Daily Devotional: ಯಾವ ದಿನ, ಯಾವ ದಾನ ಮಾಡಿದರೆ ಶ್ರೇಷ್ಠ ತಿಳಿಯಿರಿ
Daily Devotional: ಯಾವ ದಿನ, ಯಾವ ದಾನ ಮಾಡಿದರೆ ಶ್ರೇಷ್ಠ ತಿಳಿಯಿರಿ
Daily horoscope: ಈ ರಾಶಿಯವರ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ
Daily horoscope: ಈ ರಾಶಿಯವರ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ
ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ
ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ