AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಕನ್ನಡ: ಹಣಕ್ಕಾಗಿ ಇಬ್ಬರ ಜಗಳ, ಮೂರನೇ ವ್ಯಕ್ತಿಯ ಕೊಲೆ; ಆರೋಪಿ ಪರಾರಿ

ನವೆಂಬರ್​ 28 ರಂದು ಹೊನ್ನಾವರ ತಾಲೂಕಿನ ಆರೊಳ್ಳಿಯ ಸೈಕಲ್ ಅಂಗಡಿ ಸಮೀಪ ಆರೋಪಿ ವಿನಾಯಕ ಭಟ್ಟ, ಹೊಸಾಕುಳಿಯ ವಸಂತ ಈಶ್ವರ್​ ನಾಯ್ಕ ಹಾಗೂ ಗೆಳೆಯನಾದ ಸಾಲ್ಕೋಡದ ಜನಾರ್ಧನ ಕೇಶವ ನಾಯ್ಕ್​​ ಜೊತೆಗೆ ಹಣದ ವ್ಯವಹಾರದ ವಿಷಯದಲ್ಲಿ ಜಗಳ ಮಾಡಿಕೊಂಡಿದ್ದ. ಇದೀಗ ಈ ಮೂವರ ಜಗಳದ ನಡುವೆ ಅಮಾಯಕನೊಬ್ಬ ಸಾವನ್ನಪ್ಪಿದ್ದಾನೆ.

ಉತ್ತರ ಕನ್ನಡ: ಹಣಕ್ಕಾಗಿ ಇಬ್ಬರ ಜಗಳ, ಮೂರನೇ ವ್ಯಕ್ತಿಯ ಕೊಲೆ; ಆರೋಪಿ ಪರಾರಿ
ಆರೋಪಿ, ಮೃತ ವ್ಯಕ್ತಿ
ಸೂರಜ್​, ಮಹಾವೀರ್​ ಉತ್ತರೆ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Nov 29, 2023 | 3:19 PM

Share

ಉತ್ತರ ಕನ್ನಡ, ನ.29: ಹಣದ ವಿಚಾರಕ್ಕೆ ವ್ಯಕ್ತಿಯೋರ್ವ, ಆಟೋ ಚಾಲಕನ ಮೇಲೆ ಲಾರಿ ಹರಿಸಿ ಕೊಲೆ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ (Honnavar) ತಾಲೂಕಿನ ಅರೇ ಅಂಗಡಿಯ ಜನತಾ ಕಾಲೋನಿ ಸಮೀಪ ಮಂಗಳವಾರ (ನ.28) ತಡರಾತ್ರಿ ನಡೆದಿದೆ. ಓಲ್ವಿನ್ ರವಿ ಲೋಬೋ (31) ಕೊಲೆಯಾದ ದುರ್ಧೈವಿ. ಇನ್ನು ಹೊನ್ನಾವರ ತಾಲೂಕಿನ ಹಡಿನಬಾಳ ಶೇಡಿಕುಳಿಯ ನಿವಾಸಿ ವಿನಾಯಕ ನಾರಾಯಣ ಭಟ್ಟ (40) ಎಂಬಾತ ಹತ್ಯೆ ಮಾಡಿ ಪರಾರಿಯಾಗಿದ್ದಾನೆ. ಈ ಕುರಿತು ಹೊನ್ನಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿ ಪತ್ತೆಗೆ ಬಲೆ ಬೀಸಿದ್ದಾರೆ.

ಘಟನೆ ವಿವರ

ನವೆಂಬರ್​ 28 ರಂದು ಹೊನ್ನಾವರ ತಾಲೂಕಿನ ಆರೊಳ್ಳಿಯ ಸೈಕಲ್ ಅಂಗಡಿ ಸಮೀಪ ಆರೋಪಿ ವಿನಾಯಕ ಭಟ್ಟ, ಹೊಸಾಕುಳಿಯ ವಸಂತ ಈಶ್ವರ್​ ನಾಯ್ಕ ಹಾಗೂ ಗೆಳೆಯನಾದ ಸಾಲ್ಕೋಡದ ಜನಾರ್ಧನ ಕೇಶವ ನಾಯ್ಕ್​​ ಜೊತೆಗೆ ಹಣದ ವ್ಯವಹಾರದ ವಿಷಯದಲ್ಲಿ ಜಗಳ ಮಾಡಿಕೊಂಡಿದ್ದ. ಅದೇ ವಿಷಯಕ್ಕೆ ಈ ಇಬ್ಬರನ್ನು ವಿನಾಯಕ ಭಟ್ಟ, ಕೊಲೆ ಮಾಡುವ ನಿರ್ಧಾರ ಮಾಡಿದ್ದಾನೆ.

ಇದನ್ನೂ ಓದಿ:ತರಕಾರಿ ಜೊತೆ ಹೃದಯ ಬೇಯಿಸಿ, ಅಡುಗೆ ಮಾಡಿ ಬಡಿಸಿದ ಕೊಲೆಗಾರ!

ಇಬ್ಬರ ಜಗಳ; ಸಂಬಂಧವಿಲ್ಲದ ವ್ಯಕ್ತಿಯ ಹತ್ಯೆ

ಅದರಂತೆ ಮಂಗಳವಾರ ತಡರಾತ್ರಿ ಅರೇಅಂಗಡಿಯ ಜನತಾ ಕಾಲೋನಿ ಸಮೀಪ ವಸಂತ ನಾಯ್ಕ, ಜನಾರ್ಧನ ನಾಯ್ಕ ಹಾಗೂ ಆಟೋ ಚಾಲಕ ಓಲ್ವಿನ್ ರವಿ ಲೋಬೋ  ಮಾತನಾಡುತ್ತಾ ನಿಂತುಕೊಂಡಿದ್ದರು. ಈ ವೇಳೆ  ಕೊಲೆ ಮಾಡುವ ಉದ್ದೇಶದಿಂದ ಅರೇಅಂಗಡಿ ಕಡೆಯಿಂದ ಕೆಂಪು ಬಣ್ಣದ ಟಿಪ್ಪರ್ ಲಾರಿ ಚಲಾಯಿಸಿಕೊಂಡು ಬಂದಿದ್ದ ಆರೋಪಿ ವಿನಾಯಕ ಭಟ್ಟ, ಮೂವರ ಮೇಲೂ ಟಿಪ್ಪರ್​ ಹಾಯಿಸಿದ್ದಾನೆ. ಈ ವೇಳೆ ಓಲ್ವಿನ್ ರವಿ ಲೋಬೋ ಅವರ ತಲೆಗೆ, ಬಲಗಾಲಿಗೆ ಗಂಭೀರ ಗಾಯವಾಗಿದ್ದು ಕೊನೆಯುಸಿರೆಳೆದಿದ್ದಾರೆ.

ಇನ್ನುಳಿದಂತೆ ವಸಂತ ನಾಯ್ಕ ಹಾಗೂ ಜನಾರ್ಧನ ನಾಯ್ಕ ಅವರಿಗೂ ಗಾಯಗಳಾಗಿದ್ದು, ಪರಾರಿ ಆಗುವ ಮುನ್ನ ಓಲ್ವಿನ್ ಅವರ ಆಟೋರಿಕ್ಷಾವನ್ನು ಸಹ ಜಖಂಗೊಳಿಸಿ, ವಸಂತ ನಾಯ್ಕ ಈತನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ನೀನು ಇಂದು ತಪ್ಪಿಸಿಕೊಂಡಿದ್ದೀಯಾ ಎಂದು ವಿನಾಯಕ ಭಟ್  ಜೀವಬೆದರಿಕೆ ಹಾಕಿದ್ದಾನೆ. ಈ ಬಗ್ಗೆ ವಸಂತ ನಾಯ್ಕ ಹೊನ್ನಾವರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಪೊಲೀಸರು ಆರೋಪಿ ಪತ್ತೆಗೆ ಬಲೆ ಬೀಸಿದ್ದಾರೆ.

ರಾಜ್ಯದ ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Suraj Mahaveer Utture
Suraj Mahaveer Utture

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನವಲಿಹಾಳ ಗ್ರಾಮದ ಸೂರಜ ಉತ್ತೂರೆ. ಕಸ್ತೂರಿ ವಾಹಿನಿಯಲ್ಲಿ ರಾಜಕೀಯ ವರದಿಗಾರನಾಗಿ ಪತ್ರಿಕೊದ್ಯಮ ಪ್ರವೇಶಿಸಿದ ಇವರು. ಡಿಸೆಂಬರ್ 2022 ರಂದು ಹಾವೇರಿ ಜಿಲ್ಲೆ tv9 ವರದಿಗಾರನಾಗಿ ಕೆಲಸ ಆರಂಭಿಸಿದ್ರು ನವೆಂಬರ್ 2023 ರಂದು ಉತ್ತರ ಕನ್ನಡ ಜಿಲ್ಲೆಗೆ ವರ್ಗಾವಣೆ ಆಗಿದ್ದೂ ಸದ್ಯ ಉತ್ತರ ಕನ್ನಡ ಜಿಲ್ಲೆಯ tv9 ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ.

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್