Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಕನ್ನಡ: ಹಣಕ್ಕಾಗಿ ಇಬ್ಬರ ಜಗಳ, ಮೂರನೇ ವ್ಯಕ್ತಿಯ ಕೊಲೆ; ಆರೋಪಿ ಪರಾರಿ

ನವೆಂಬರ್​ 28 ರಂದು ಹೊನ್ನಾವರ ತಾಲೂಕಿನ ಆರೊಳ್ಳಿಯ ಸೈಕಲ್ ಅಂಗಡಿ ಸಮೀಪ ಆರೋಪಿ ವಿನಾಯಕ ಭಟ್ಟ, ಹೊಸಾಕುಳಿಯ ವಸಂತ ಈಶ್ವರ್​ ನಾಯ್ಕ ಹಾಗೂ ಗೆಳೆಯನಾದ ಸಾಲ್ಕೋಡದ ಜನಾರ್ಧನ ಕೇಶವ ನಾಯ್ಕ್​​ ಜೊತೆಗೆ ಹಣದ ವ್ಯವಹಾರದ ವಿಷಯದಲ್ಲಿ ಜಗಳ ಮಾಡಿಕೊಂಡಿದ್ದ. ಇದೀಗ ಈ ಮೂವರ ಜಗಳದ ನಡುವೆ ಅಮಾಯಕನೊಬ್ಬ ಸಾವನ್ನಪ್ಪಿದ್ದಾನೆ.

ಉತ್ತರ ಕನ್ನಡ: ಹಣಕ್ಕಾಗಿ ಇಬ್ಬರ ಜಗಳ, ಮೂರನೇ ವ್ಯಕ್ತಿಯ ಕೊಲೆ; ಆರೋಪಿ ಪರಾರಿ
ಆರೋಪಿ, ಮೃತ ವ್ಯಕ್ತಿ
Follow us
ಸೂರಜ್​, ಮಹಾವೀರ್​ ಉತ್ತರೆ
| Updated By: ಕಿರಣ್ ಹನುಮಂತ್​ ಮಾದಾರ್

Updated on: Nov 29, 2023 | 3:19 PM

ಉತ್ತರ ಕನ್ನಡ, ನ.29: ಹಣದ ವಿಚಾರಕ್ಕೆ ವ್ಯಕ್ತಿಯೋರ್ವ, ಆಟೋ ಚಾಲಕನ ಮೇಲೆ ಲಾರಿ ಹರಿಸಿ ಕೊಲೆ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ (Honnavar) ತಾಲೂಕಿನ ಅರೇ ಅಂಗಡಿಯ ಜನತಾ ಕಾಲೋನಿ ಸಮೀಪ ಮಂಗಳವಾರ (ನ.28) ತಡರಾತ್ರಿ ನಡೆದಿದೆ. ಓಲ್ವಿನ್ ರವಿ ಲೋಬೋ (31) ಕೊಲೆಯಾದ ದುರ್ಧೈವಿ. ಇನ್ನು ಹೊನ್ನಾವರ ತಾಲೂಕಿನ ಹಡಿನಬಾಳ ಶೇಡಿಕುಳಿಯ ನಿವಾಸಿ ವಿನಾಯಕ ನಾರಾಯಣ ಭಟ್ಟ (40) ಎಂಬಾತ ಹತ್ಯೆ ಮಾಡಿ ಪರಾರಿಯಾಗಿದ್ದಾನೆ. ಈ ಕುರಿತು ಹೊನ್ನಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿ ಪತ್ತೆಗೆ ಬಲೆ ಬೀಸಿದ್ದಾರೆ.

ಘಟನೆ ವಿವರ

ನವೆಂಬರ್​ 28 ರಂದು ಹೊನ್ನಾವರ ತಾಲೂಕಿನ ಆರೊಳ್ಳಿಯ ಸೈಕಲ್ ಅಂಗಡಿ ಸಮೀಪ ಆರೋಪಿ ವಿನಾಯಕ ಭಟ್ಟ, ಹೊಸಾಕುಳಿಯ ವಸಂತ ಈಶ್ವರ್​ ನಾಯ್ಕ ಹಾಗೂ ಗೆಳೆಯನಾದ ಸಾಲ್ಕೋಡದ ಜನಾರ್ಧನ ಕೇಶವ ನಾಯ್ಕ್​​ ಜೊತೆಗೆ ಹಣದ ವ್ಯವಹಾರದ ವಿಷಯದಲ್ಲಿ ಜಗಳ ಮಾಡಿಕೊಂಡಿದ್ದ. ಅದೇ ವಿಷಯಕ್ಕೆ ಈ ಇಬ್ಬರನ್ನು ವಿನಾಯಕ ಭಟ್ಟ, ಕೊಲೆ ಮಾಡುವ ನಿರ್ಧಾರ ಮಾಡಿದ್ದಾನೆ.

ಇದನ್ನೂ ಓದಿ:ತರಕಾರಿ ಜೊತೆ ಹೃದಯ ಬೇಯಿಸಿ, ಅಡುಗೆ ಮಾಡಿ ಬಡಿಸಿದ ಕೊಲೆಗಾರ!

ಇಬ್ಬರ ಜಗಳ; ಸಂಬಂಧವಿಲ್ಲದ ವ್ಯಕ್ತಿಯ ಹತ್ಯೆ

ಅದರಂತೆ ಮಂಗಳವಾರ ತಡರಾತ್ರಿ ಅರೇಅಂಗಡಿಯ ಜನತಾ ಕಾಲೋನಿ ಸಮೀಪ ವಸಂತ ನಾಯ್ಕ, ಜನಾರ್ಧನ ನಾಯ್ಕ ಹಾಗೂ ಆಟೋ ಚಾಲಕ ಓಲ್ವಿನ್ ರವಿ ಲೋಬೋ  ಮಾತನಾಡುತ್ತಾ ನಿಂತುಕೊಂಡಿದ್ದರು. ಈ ವೇಳೆ  ಕೊಲೆ ಮಾಡುವ ಉದ್ದೇಶದಿಂದ ಅರೇಅಂಗಡಿ ಕಡೆಯಿಂದ ಕೆಂಪು ಬಣ್ಣದ ಟಿಪ್ಪರ್ ಲಾರಿ ಚಲಾಯಿಸಿಕೊಂಡು ಬಂದಿದ್ದ ಆರೋಪಿ ವಿನಾಯಕ ಭಟ್ಟ, ಮೂವರ ಮೇಲೂ ಟಿಪ್ಪರ್​ ಹಾಯಿಸಿದ್ದಾನೆ. ಈ ವೇಳೆ ಓಲ್ವಿನ್ ರವಿ ಲೋಬೋ ಅವರ ತಲೆಗೆ, ಬಲಗಾಲಿಗೆ ಗಂಭೀರ ಗಾಯವಾಗಿದ್ದು ಕೊನೆಯುಸಿರೆಳೆದಿದ್ದಾರೆ.

ಇನ್ನುಳಿದಂತೆ ವಸಂತ ನಾಯ್ಕ ಹಾಗೂ ಜನಾರ್ಧನ ನಾಯ್ಕ ಅವರಿಗೂ ಗಾಯಗಳಾಗಿದ್ದು, ಪರಾರಿ ಆಗುವ ಮುನ್ನ ಓಲ್ವಿನ್ ಅವರ ಆಟೋರಿಕ್ಷಾವನ್ನು ಸಹ ಜಖಂಗೊಳಿಸಿ, ವಸಂತ ನಾಯ್ಕ ಈತನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ನೀನು ಇಂದು ತಪ್ಪಿಸಿಕೊಂಡಿದ್ದೀಯಾ ಎಂದು ವಿನಾಯಕ ಭಟ್  ಜೀವಬೆದರಿಕೆ ಹಾಕಿದ್ದಾನೆ. ಈ ಬಗ್ಗೆ ವಸಂತ ನಾಯ್ಕ ಹೊನ್ನಾವರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಪೊಲೀಸರು ಆರೋಪಿ ಪತ್ತೆಗೆ ಬಲೆ ಬೀಸಿದ್ದಾರೆ.

ರಾಜ್ಯದ ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹೋರಾಟಕ್ಕೆ ತಾರ್ಕಿಕ ಅಂತ್ಯ ಕಾಣಿಸದ ಹೊರತು ವಿಶ್ರಮಿಸುವುದಿಲ್ಲ: ಕರವೇ
ಹೋರಾಟಕ್ಕೆ ತಾರ್ಕಿಕ ಅಂತ್ಯ ಕಾಣಿಸದ ಹೊರತು ವಿಶ್ರಮಿಸುವುದಿಲ್ಲ: ಕರವೇ
ಮಾರಿಷಸ್ ತಲುಪಿದ ಪ್ರಧಾನಿ ಮೋದಿ: ಪ್ರಮುಖ ಒಪ್ಪಂದಗಳಿಗೆ ಸಹಿ ನಿರೀಕ್ಷೆ
ಮಾರಿಷಸ್ ತಲುಪಿದ ಪ್ರಧಾನಿ ಮೋದಿ: ಪ್ರಮುಖ ಒಪ್ಪಂದಗಳಿಗೆ ಸಹಿ ನಿರೀಕ್ಷೆ
‘ಅಪ್ಪು’ ಚಿತ್ರಕ್ಕೆ ರಮ್ಯಾ ನಾಯಕಿ ಆಗಬೇಕಿತ್ತು; ಅಚ್ಚರಿಯ ಮಾಹಿತಿ ರಿವೀಲ್
‘ಅಪ್ಪು’ ಚಿತ್ರಕ್ಕೆ ರಮ್ಯಾ ನಾಯಕಿ ಆಗಬೇಕಿತ್ತು; ಅಚ್ಚರಿಯ ಮಾಹಿತಿ ರಿವೀಲ್
ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿನ ನೀರಿನ ಸಮಸ್ಯೆಗೆ ಬಿತ್ತು ಬ್ರೇಕ್​
ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿನ ನೀರಿನ ಸಮಸ್ಯೆಗೆ ಬಿತ್ತು ಬ್ರೇಕ್​
15 ಭರ್ಜರಿ ಸಿಕ್ಸ್​: ವಿಶ್ವ ದಾಖಲೆಯ ಸೆಂಚುರಿ ಸಿಡಿಸಿದ ಎಬಿ ಡಿವಿಲಿಯರ್ಸ್
15 ಭರ್ಜರಿ ಸಿಕ್ಸ್​: ವಿಶ್ವ ದಾಖಲೆಯ ಸೆಂಚುರಿ ಸಿಡಿಸಿದ ಎಬಿ ಡಿವಿಲಿಯರ್ಸ್
ವಿದ್ಯಾರ್ಥಿಗಳು ತಾಂಬೂಲ ಚವಣ ಮಾಡುವುದ್ದು ನಿಷಿದ್ಧ ಯಾಕೆ ? ವಿಡಿಯೋ ನೋಡಿ
ವಿದ್ಯಾರ್ಥಿಗಳು ತಾಂಬೂಲ ಚವಣ ಮಾಡುವುದ್ದು ನಿಷಿದ್ಧ ಯಾಕೆ ? ವಿಡಿಯೋ ನೋಡಿ
Daily horoscope: ಮಂಗಳವಾರ, ಈ ದಿನ 12 ರಾಶಿಗಳ ಫಲಾಫಲಗಳನ್ನು ತಿಳಿಯಿರಿ
Daily horoscope: ಮಂಗಳವಾರ, ಈ ದಿನ 12 ರಾಶಿಗಳ ಫಲಾಫಲಗಳನ್ನು ತಿಳಿಯಿರಿ
ಡಿಆರ್​ಐ ಅಧಿಕಾರಿಗಳ ಕಸ್ಟಡಿ ಅಂತ್ಯ: ರನ್ಯಾ ರಾವ್ ಮತ್ತೆ ಜೈಲಿಗೆ
ಡಿಆರ್​ಐ ಅಧಿಕಾರಿಗಳ ಕಸ್ಟಡಿ ಅಂತ್ಯ: ರನ್ಯಾ ರಾವ್ ಮತ್ತೆ ಜೈಲಿಗೆ
ಹೆಂಡತಿಯ ಪೋಸ್ಟಿಂಗ್​ಗಾಗಿ ಪಟ್ಟ ಪಡಿಪಾಟಲು ಹೇಳಿಕೊಂಡ: ಶರಣು ಸಲಗರ
ಹೆಂಡತಿಯ ಪೋಸ್ಟಿಂಗ್​ಗಾಗಿ ಪಟ್ಟ ಪಡಿಪಾಟಲು ಹೇಳಿಕೊಂಡ: ಶರಣು ಸಲಗರ
ಶ್ರೇಯಸ್ ಡ್ಯಾನ್ಸ್, ರಾಹುಲ್ ಗಿಫ್ಟ್; ಭಾರತದ ಸಂಭ್ರಮಾಚರಣೆಯ ಝಲಕ್ ಇಲ್ಲಿದೆ
ಶ್ರೇಯಸ್ ಡ್ಯಾನ್ಸ್, ರಾಹುಲ್ ಗಿಫ್ಟ್; ಭಾರತದ ಸಂಭ್ರಮಾಚರಣೆಯ ಝಲಕ್ ಇಲ್ಲಿದೆ