AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: 2ನೇ ಕ್ಲಾಸ್ ಬಾಲಕಿಗೆ ಗುಪ್ತಾಂಗ ತೋರಿಸಿ, ಅತ್ಯಾಚಾರಕ್ಕೆ ಯತ್ನಿಸಿದ ಯುವಕ

ಉತ್ತರಾಖಂಡದಲ್ಲಿ 2ನೇ ತರಗತಿಯಲ್ಲಿ ಓದುತ್ತಿದ್ದ ಬಾಲಕಿಗೆ ತನ್ನ ಖಾಸಗಿ ಅಂಗ ತೋರಿಸಿರುವ ಮೊಹಮ್ಮದ್ ಹಸೀಬ್ ಎಂಬ ವ್ಯಕ್ತಿಯನ್ನು ಬಂಧಿಸಲಾಗಿದೆ. ಅವನ ಈ ಕೃತ್ಯ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದ್ದು, ಆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Crime News: 2ನೇ ಕ್ಲಾಸ್ ಬಾಲಕಿಗೆ ಗುಪ್ತಾಂಗ ತೋರಿಸಿ, ಅತ್ಯಾಚಾರಕ್ಕೆ ಯತ್ನಿಸಿದ ಯುವಕ
ಸಾಂದರ್ಭಿಕ ಚಿತ್ರ
ಸುಷ್ಮಾ ಚಕ್ರೆ
|

Updated on: Aug 29, 2024 | 9:25 PM

Share

ನವದೆಹಲಿ: ಉತ್ತರಾಖಂಡದಲ್ಲಿ ಯುವತಿಯೊಬ್ಬಳು ತನ್ನ ಮುಂದೆ ಪ್ಯಾಂಟ್ ಬಿಚ್ಚಿ ಅಸಭ್ಯವಾಗಿ ವರ್ತಿಸಿದ ವ್ಯಕ್ತಿಯನ್ನು ಬೆನ್ನಟ್ಟಿದ ನಂತರ ಆಕೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ನಡೆದ ಬೆನ್ನಲ್ಲೇ ಮತ್ತೊಂದು ಘಟನೆ ನಡೆದಿದೆ. 2ನೇ ತರಗತಿಯ ಬಾಲಕಿ ಮುಂದೆ ಪ್ಯಾಂಟ್ ಬಿಚ್ಚಿದ ಯುವಕ ತನ್ನ ಗುಪ್ತಾಂಗ ತೋರಿಸಿದ್ದಾನೆ. ನಂತರ ಆಕೆಯನ್ನು ಕಿಡ್ನಾಪ್ ಮಾಡಲು ಪ್ರಯತ್ನಿಸಿದ್ದಾನೆ.

ಈ ಘಟನೆ ಉತ್ತರಾಖಂಡದಲ್ಲಿ ನಡೆದಿದೆ. ಭಾನುವಾರ ರಾತ್ರಿ ಬಾಲಕಿ ಹಲ್ದ್ವಾನಿಯ ಕೊತ್ವಾಲಿ ಪ್ರದೇಶದಲ್ಲಿ ಆ ಬಾಲಕಿ ಮನೆಯಿಂದ ಹೊರಟಿದ್ದಾಗ ಈ ಘಟನೆ ನಡೆದಿದೆ. ಆರೋಪಿಯನ್ನು ಮೊಹಮ್ಮದ್ ಹಸೀಬ್ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: Shocking News: ನನ್ನ ಆರ್ಡರ್ ಇನ್ನೂ ರೆಡಿ ಆಗಿಲ್ಲವಾ? ಎಂದು ಕೇಳಿದ ಗ್ರಾಹಕನನ್ನು ಕೊಂದ ಹೋಟೆಲ್ ಮಾಲೀಕ!

ಬಂಭುಲ್‌ಪುರದ ಆಜಾದ್‌ನಗರ ನಿವಾಸಿ ಮತ್ತು ವೃತ್ತಿಯಲ್ಲಿ ಬಡಗಿಯಾಗಿರುವ ಮೊಹಮ್ಮದ್ ಹಸೀಬ್ ಎಂದು ಗುರುತಿಸಲಾದ ಆರೋಪಿ, ಪ್ಯಾಂಟ್ ತೆಗೆದು ಬಾಲಕಿಯನ್ನು ಹಿಂಬಾಲಿಸುತ್ತಿದ್ದ ಎನ್ನಲಾಗಿದೆ. ಭಯಭೀತಳಾದ ಹುಡುಗಿ ಹತ್ತಿರದ ಮನೆಗೆ ಓಡಿ ಹೋಗುವ ಮೂಲಕ ತನ್ನನ್ನು ತಾನು ರಕ್ಷಿಸಿಕೊಳ್ಳುವಲ್ಲಿ ಯಶಸ್ವಿಯಾದಳು. ಇದರಿಂದ ಅವಳು ಬಚಾವಾಗಿದ್ದಾಳೆ. ಆದರೂ ಆಕೆಯನ್ನು ಹಿಂಬಾಲಿಸಿಕೊಂಡು ಬಂದಿರುವ ಆ ಯುವಕನ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಇದನ್ನೂ ಓದಿ: Crime News: ಪ್ರಿಯಕರನನ್ನು ರಾತ್ರಿ ಕಬ್ಬಿನ ಗದ್ದೆಗೆ ಕರೆಸಿ ಕೊಂದ ಯುವತಿಯರು

ಈ ಪ್ರದೇಶದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸಂಪೂರ್ಣ ಘಟನೆ ಸೆರೆಯಾಗಿದ್ದು, ದಾಳಿಕೋರನಿಂದ ಪರಾರಿಯಾಗುತ್ತಿದ್ದಂತೆ ಆ ಬಾಲಕಿ ಅಲುಗಾಡುತ್ತಿರುವುದು ಗೋಚರಿಸುತ್ತದೆ. ಈ ದೃಶ್ಯಾವಳಿಗಳು ಮೊಹಮ್ಮದ್ ಹಸೀಬ್‌ನನ್ನು ಗುರುತಿಸಲು ಮತ್ತು ಬಂಧಿಸಲು ಪೊಲೀಸರಿಗೆ ಸಹಾಯ ಮಾಡಿತು. ಆತನನ್ನು ಸೋಮವಾರ ಎಫ್‌ಟಿಐ ರಸ್ತೆಯಿಂದ ಬಂಧಿಸಲಾಗಿದ್ದು, ವಿಚಾರಣೆ ನಡೆಸಿದ ಪೊಲೀಸರು ಆತ ಈ ಕೃತ್ಯದಲ್ಲಿ ಭಾಗಿಯಾಗಿರುವುದನ್ನು ಖಚಿತಪಡಿಸಿದ್ದಾರೆ.

ಮೊಹಮ್ಮದ್ ಹಸೀಬ್‌ನನ್ನು ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದೆ. ಆತನನ್ನು ಸೋಮವಾರ ತಡರಾತ್ರಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ