AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳಾ ಸಹೋದ್ಯೋಗಿಯನ್ನು ಕೊಂದಿದ್ದ ಪೊಲೀಸ್ ಕಾನ್​ಸ್ಟೆಬಲ್, 2 ವರ್ಷಗಳ ಬಳಿಕ ಸಿಕ್ಕಿಬಿದ್ದಿದ್ಹೇಗೆ?

ಮಹಿಳಾ ಸಹೋದ್ಯೋಗಿಯನ್ನು ಹತ್ಯೆ ಮಾಡಿದ್ದ ಪೊಲೀಸ್​ ಕಾನ್​​ಸ್ಟೆಬಲ್ 2 ವರ್ಷಗಳ ಬಳಿಕ ಸಿಕ್ಕಿಬಿದ್ದಿದ್ದಾರೆ. ಎರಡು ವರ್ಷಗಳ ಕಾಲ ಹತ್ಯೆಯನ್ನು ಮುಚ್ಚಿಡಲು ಪೊಲೀಸರು ಹಾಗೂ ಆಕೆಯ ಪೋಷಕರ ಸುತ್ತಿನ ಬೃಹತ್ ಸುಳ್ಳಿನ ಜಾಲವನ್ನೇ ಹೆಣೆದಿದ್ದ. ಎರಡು ವರ್ಷಗಳ ಕಾಲ ತಮ್ಮ ಮಗಳು ಜೀವಂತವಾಗಿದ್ದಾಳೆ ಎಂದೇ ಪೋಷಕರು ನಂಬಿದ್ದರು. ಇದೀಗ ದೆಹಲಿ ಪೊಲೀಸರು ಪ್ರಕರಣವನ್ನು ಭೇದಿಸಿದ್ದು ಕಾನ್​ಸ್ಟೆಬಲ್​ನನ್ನು ಬಂಧಿಸಲಾಗಿದೆ.

ಮಹಿಳಾ ಸಹೋದ್ಯೋಗಿಯನ್ನು ಕೊಂದಿದ್ದ ಪೊಲೀಸ್ ಕಾನ್​ಸ್ಟೆಬಲ್, 2 ವರ್ಷಗಳ ಬಳಿಕ ಸಿಕ್ಕಿಬಿದ್ದಿದ್ಹೇಗೆ?
ಮೋನಾImage Credit source: NDTV
ನಯನಾ ರಾಜೀವ್
|

Updated on: Oct 02, 2023 | 12:17 PM

Share

ಮಹಿಳಾ ಸಹೋದ್ಯೋಗಿಯನ್ನು ಹತ್ಯೆ ಮಾಡಿದ್ದ ಪೊಲೀಸ್​ ಕಾನ್​​ಸ್ಟೆಬಲ್ 2 ವರ್ಷಗಳ ಬಳಿಕ ಸಿಕ್ಕಿಬಿದ್ದಿದ್ದಾರೆ. ಎರಡು ವರ್ಷಗಳ ಕಾಲ ಹತ್ಯೆಯನ್ನು ಮುಚ್ಚಿಡಲು ಪೊಲೀಸರು ಹಾಗೂ ಆಕೆಯ ಪೋಷಕರ ಸುತ್ತಿನ ಬೃಹತ್ ಸುಳ್ಳಿನ ಜಾಲವನ್ನೇ ಹೆಣೆದಿದ್ದ. ಎರಡು ವರ್ಷಗಳ ಕಾಲ ತಮ್ಮ ಮಗಳು ಜೀವಂತವಾಗಿದ್ದಾಳೆ ಎಂದೇ ಪೋಷಕರು ನಂಬಿದ್ದರು. ಇದೀಗ ದೆಹಲಿ ಪೊಲೀಸರು ಪ್ರಕರಣವನ್ನು ಭೇದಿಸಿದ್ದು ಕಾನ್​ಸ್ಟೆಬಲ್​ನನ್ನು ಬಂಧಿಸಲಾಗಿದೆ.

ಘಟನೆ ಏನು? ಸುರೇಂದ್ರ ರಾಣಾ(42) ದೆಹಲಿ ಪೊಲೀಸ್​ ಕಾನ್​ಸ್ಟೆಬಲ್ ಆಗಿದ್ದು, ಆತ ವಿವಾಹಿತ ಕೂಡ. ಮಹಿಳಾ ಕಾನ್​ಸ್ಟೆಬಲ್ ಮೋನಾಳನ್ನು ಪ್ರೀತಿಸುತ್ತಿದ್ದರು. ಆದರೆ ಆಕೆ ನಿರಾಕರಿಸಿದಾಗ ಹತ್ಯೆ ಮಾಡಿದ್ದಾನೆ. ರಾಣಾ ಸೋದರಳಿಯ ರವಿನ್ ಹಾಗೂ ರಾಜ್​ಪಾಲ್ ಸಹಾಯದಿಂದ ಆಕೆಯ ದೇಹವನ್ನು ವಿಲೇವಾರಿ ಮಾಡಿದ್ದ.

ಮೃತ ಮೋನಾ 2014ರಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದರು, ಇಬ್ಬರನ್ನೂ ಕಂಟ್ರೋಲ್​ ರೂಂಗೆ ನಿಯೋಜಿಸಲಾಗಿತ್ತು. ಅಲ್ಲಿ ಪರಸ್ಪರ ಪರಿಚಯವಾಯಿತು. ಅದರ ನಡುವೆ ಮೋನಾ ಸಬ್​ ಇನ್​ಸ್ಟೆಕ್ಟರ್ ಆಗಿ ಉತ್ತರ ಪ್ರದೇಶದಲ್ಲಿ ಪೋಸ್ಟಿಂಗ್ ಆಗಿತ್ತು. ಇಲ್ಲಿ ಕೆಲಸವನ್ನು ಬಿಟ್ಟು ಯುಪಿಎಸ್​ಇಗೆ ತಯಾರಿ ಆರಂಭಿಸಿದ್ದರು. ಕಾನ್​ಸ್ಟೆಬಲ್ ಸುರೇಂದ್ರ ರಾಣಾ ಆಕೆ ಕೆಲಸ ಬಿಟ್ಟಿದ್ದರೂ ಅವರ ಮೇಲೆ ಕಣ್ಣಿಟ್ಟಿದ್ದ. ಈ ಕುರಿತು ಆಕೆ ಹಲವು ಬಾರಿ ಜಗಳ ಆಡಿದ್ದಳು, 2021ರ ಸೆಪ್ಟೆಂಬರ್ 8 ರಂದು ಕೂಡ ಜಗಳವಾಗಿತ್ತು. ಸುರೇಂದ್ರ ಮೋನಾಳನ್ನು ಪ್ರತ್ಯೇಕ ಸ್ಥಳಕ್ಕೆ ಕರೆದೊಯ್ದು ಕತ್ತು ಹಿಸುಕಿ ಕೊಲೆ ಮಾಡಿ ದೇಹವನ್ನು ಚರಡಂಡಿಗೆ ಎಸೆದಿದ್ದ, ದೇಹದ ಮೇಲೆ ಕಲ್ಲುಗಳನ್ನು ಹಾಕಿದ್ದ.

ಮತ್ತಷ್ಟು ಓದಿ: 854 ಕೋಟಿ ರೂ. ವಂಚನೆ ಪ್ರಕರಣ ಭೇದಿಸಿದ ಸಿಸಿಬಿ: ಆರೋಪಿಗಳು ಜನರಿಗೆ ವಂಚಿಸಿದ್ದು ಹೇಗೆ? ಇಲ್ಲಿದೆ ಸೈಬರ್​ ಕಹಾನಿ

ನಂತರ ಮೋನಾಳ ಮನೆಯವರಿಗೆ ಕರೆ ಮಾಡಿ ಮೋನಾ ಅರವಿಂದ್ ಎಂಬುವವನ ಜತೆ ಓಡಿ ಹೋಗಿದ್ದಾಳೆ ಎಂದು ನಂಬಿಸಿದ್ದ, ಆಕೆಯನ್ನು ಹುಡುಕುತ್ತಿದ್ದಂತೆ ನಟಿಸುತ್ತಿದ್ದ. ಮೋನಾ ಜೀವಂತವಾಗಿದ್ದಾಳೆ ಎಂದು ಬಿಂಬಿಸಲು ಕೊರೊನಾವೈರಸ್ ವಿರುದ್ಧದ ಲಸಿಕೆಯ ಸುಳ್ಳು ಪ್ರಮಾಣಪತ್ರವನ್ನು ಕೂಡ ಸೃಷ್ಟಿಸಿದ್ದ. ಬ್ಯಾಂಕ್ ಖಾತೆಯಿಂದ ವಹಿವಾಟು ನಡೆಸುತ್ತಿದ್ದ. ಅರವಿಂದ್ ಮೋನಾ ಇಬ್ಬರೂ ಗುರುಗ್ರಾಮದಲ್ಲಿದ್ದಾರೆ ಮದುವೆಯಾಗಿದ್ದಾರೆ ಎಂದು ನಂಬಿಸಿದ್ದ, ಆತನ ಸೋದರಳಿಯನೇ ಅರವಿಂದ್​ ಎಂದು ಪರಿಚಯ ಮಾಡಿಕೊಂಡಿದ್ದ. ಆಕೆಯ ಬಳಿ ಮಾತನಾಡಬೇಕು ಎಂದಾಗಲೆಲ್ಲಾ ಆಕೆ ಮಾತನಾಡುವ ಸ್ಥಿತಿಯಲ್ಲಿಲ್ಲ ಎನ್ನುತ್ತಿದ್ದ.

ಆರೋಪಿ ಮೋನಾಳ ಹಲವು ಧ್ವನಿ ಮುದ್ರಿತ ಎಡಿಟೆಡ್ ಆಡಿಯೋಗಳನ್ನು ಕುಟುಂಬಕ್ಕೆ ಕಳುಹಿಸುತ್ತಿದ್ದ, ಅದರಲ್ಲಿ ಒಂದು ವಿಡಿಯೋದಲ್ಲಿ ತನ್ನ ತಾಯಿ ತನ್ನ ಮೇಲೆ ಕೋಪಗೊಂಡಿದ್ದಾಳೆ ಎಂದು ತಿಳಿದು ಮನೆಗೆ ಹೋಗುತ್ತಿಲ್ಲ ಎಂದಿದ್ದಳು. ಆದರೆ ಆಕೆಗೆ ತಾಯಿಯೇ ಇಲ್ಲ. ಬಳಿಕ ಇದೇ ಸುಳಿವು ಇಟ್ಟುಕೊಂಡು ರಾಬಿನ್ ಮಾತನಾಡುತ್ತಿದ್ದ ಸಂಖ್ಯೆಯನ್ನು ಪತ್ತೆಹಚ್ಚಿದ್ದಾರೆ. ಬಳಿಕ ಆರೋಪಿ ಬಳಿಗೆ ತಲುಪಿದ್ದಾರೆ, ಪೊಲೀಸರು ಚರಂಡಿಯಿಂದ ಅಸ್ಥಿಪಂಜರಗಳನ್ನು ವಶಪಡಿಸಿಕೊಂಡಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!