ವೇಣೂರು ದುರಂತ: ನಿಯಮ ಮೀರಿ ಗನ್ ಪೌಡರ್ ದಾಸ್ತಾನು ಮಾಡಿದ್ದೇ ಭೀಕರ ಸ್ಫೋಟಕ್ಕೆ ಕಾರಣವಾಯ್ತ?

ದಕ್ಷಿಣ ಕನ್ನಡ ಜಿಲ್ಲೆಯ ಮೇಣೂರಿನ (Venoor) ತೋಟದ ಮನೆಯಲ್ಲಿದ್ದ ಪಟಾಕಿ ಗೋಡಾನ್​ನಲ್ಲಿ ಸ್ಫೋಟ ಸಂಭವಿಸಿ ಮೂವರು ಸಾವನ್ನಪ್ಪಿದ್ದ ಪ್ರಕರಣ ನಡೆದಿತ್ತು. ಈ ಸ್ಫೋಟ ಪ್ರಕರಣದ ಹಿಂದೆ ಸ್ಥಳೀಯರು ಸಂಶಯ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ನಿಯಮ ಮೀರಿ 100 ಕೆ.ಜಿ ಗನ್ ಪೌಡರ್ ದಾಸ್ತಾನು ಮಾಡಿರುವ ಆರೋಪವೂ ಕೇಳಿಬಂದಿದ್ದು, ಇದುವೇ ಸ್ಫೋಟಕ್ಕೆ ಕಾರಣ ಎನ್ನಲಾಗುತ್ತಿದೆ.

ವೇಣೂರು ದುರಂತ: ನಿಯಮ ಮೀರಿ ಗನ್ ಪೌಡರ್ ದಾಸ್ತಾನು ಮಾಡಿದ್ದೇ ಭೀಕರ ಸ್ಫೋಟಕ್ಕೆ ಕಾರಣವಾಯ್ತ?
ವೇಣೂರು ಪಟಾಕಿ ದುರಂತ ಕೇಸ್: ನಿಯಮ ಮೀರಿ ಗನ್ ಪೌಡರ್ ದಾಸ್ತಾನು ಮಾಡಿದ್ದೇ ಸ್ಫೋಟಕ್ಕೆ ಕಾರಣ ಎಂದು ಶಂಕಿಸಲಾಗಿದೆ (ಸಾಂದರ್ಭಿಕ ಚಿತ್ರ)
Edited By: Rakesh Nayak Manchi

Updated on: Jan 30, 2024 | 12:13 PM

ಮಂಗಳೂರು, ಜ.30: ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರಿನಲ್ಲಿ (Venoor) ಪಟಾಕಿ ಘಟಕದಲ್ಲಿ ಸಂಭವಿಸಿದ ಸ್ಫೋಟದಿಂದ ಮೂವರ ಸಾವನ್ನಪ್ಪಿದ ಪ್ರಕರಣವು ಮತ್ತೊಂದು ತಿರುವು ಪಡೆದುಕೊಂಡಿದೆ. ನಿಯಮ ಮೀರಿ ಗನ್ ಪೌಡರ್ ದಾಸ್ತಾನು ಮಾಡಿದ್ದೇ ಸ್ಫೋಟಕ್ಕೆ ಕಾರಣ ಎಂಬ ಶಂಕೆ ವ್ಯಕ್ತವಾಗಿದೆ.

ಪಟಾಕಿಗಾಗಿ ಪೊಟ್ಯಾಸಿಯಂ ಕ್ಲೋರೈಟ್, ಪೊಟ್ಯಾಸಿಯಂ ನೈಟ್ರೇಟ್ ಬಳಕೆ ಮಾಡಲಾಗುತ್ತದೆ. ಅದರಂತೆ, ಪಟಾಕಿ ತಯಾರಿಕಾ ಘಟಕದ ಮಾಲೀಕ ಬಶೀರ್ 15 ಕೆಜಿ ಗನ್ ಪೌಡರ್ ದಾಸ್ತಾನಿಗೆ ಅನುಮತಿ ಕೇಳಿದ್ದನು. ಆದರೆ, ಈ ನಿಯಮ ಉಲ್ಲಂಘಿಸಿ 100 ಕೆಜಿ ಗನ್ ಪೌಡರ್ ದಾಸ್ತಾನು ಮಾಡಿದ್ದನು. ಪಟಾಕಿ ಲೋಡಿಂಗ್ ವೇಳೆ ಒತ್ತಡ ಉಂಟಾಗಿ ಸ್ಫೋಟವಾಗಿರುವ ಶಂಕೆ ವ್ಯಕ್ತವಾಗಿದೆ.

ಇದನ್ನೂ ಓದಿ: ವೇಣೂರು ದುರಂತ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಟಾಕಿ ತಯಾರಿಕ ಘಟಕಗಳಿಗೆ ತಾತ್ಕಾಲಿಕ ನಿರ್ಬಂಧ

ಅತಿಯಾದ ಸ್ಪೋಟಕ ದಾಸ್ತಾನು ಇಟ್ಟಿದ್ದು ಸ್ಫೋಟ ಹಾಗೂ ಅದರ ತೀವ್ರತೆ ಹೆಚ್ಚಾಗಲು ಕಾರಣ ಎನ್ನಲಾಗುತ್ತಿದೆ. ಸದ್ಯ ಎಫ್ಎಸ್ಎಲ್ ತಂಡ ಚಾರ್ಕೋಲ್, ಗಂಧಕ, ಅಲ್ಯೂಮಿನಿಯಂ ಪೌಡರ್ ಸಹಿತ 85ಕ್ಕೂ ಹೆಚ್ಚು ವಸ್ತುಗಳ ಸ್ಯಾಂಪಲ್ ವಶಕ್ಕೆ ಪಡೆದುಕೊಂಡಿದೆ.

ಸುತ್ತೂರು ಮಠದ ಜಾತ್ರೆಗೆ ಪಟಾಕಿ ಪೂರೈಕೆಗೆ ಸಿದ್ಧತೆ

ಮೈಸೂರು ಜಿಲ್ಲೆಯಲ್ಲಿರುವ ಸುತ್ತೂರು ಮಠದ ಜಾತ್ರೆಗೆ ಪಟಾಕಿ ಪೂರೈಕೆ ಮಾಡಲು ಭಾರೀ ಪ್ರಮಾಣದಲ್ಲಿ ಪಟಾಕಿ ತಯಾರಿ ಮಾಡಲಾಗುತ್ತಿತ್ತು. ಹೀಗಾಗಿ ನಿಯಮ ಉಲ್ಲಂಘಿಸಿ ರಾಸಾಯನಿಕ ದಾಸ್ತಾನು ಇಡಲಾಗಿತ್ತು. ಆದರೆ ಫೈರ್ ಸೇಫ್ಟಿ ಬಳಕೆ ಮಾಡದೇ ನಿಯಮ ಉಲ್ಲಂಘಿಸಿ ಪಟಾಕಿ ತಯಾರಿ ಮಾಡಲಾಗುತ್ತಿತ್ತು ಎನ್ನಲಾಗುತ್ತಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪೃಥ್ವಿರಾಜ್​ ಬಿ.ಯು. ಮಂಗಳೂರು

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
Follow Us