AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿ ಎಂದು ವಂಚನೆ ಮಾಡ್ತಿದ್ದವನ ಬಂಧನ

ನಾನು ಮುಖ್ಯಮಂತ್ರಿಗಳ ಕಚೇರಿಯಲ್ಲಿ ಆಪ್ತ ಸಹಾಯಕನಾಗಿ ಕೆಲಸ‌ಮಾಡ್ತಿದ್ದೇನೆ ನಂತರ ನಿಮ್ಮ ಎಲ್ಲ ಕೆಲಸ ಮಾಡಿಸಿಕೊಡುತ್ತೇನೆ ಅಂತ ಹೇಳಿ ನಂಬಿಸಿ ವಂಚನೆ ಮಾಡುತ್ತಿದ್ದ ಆರೋಪಿಯನ್ನು ವಿಧಾನಸೌಧ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಆಪ್ತ ಕಾರ್ಯದರ್ಶಿ ಅಂತ ನಕಲಿ ಕಾರ್ಡ್​ ತಯಾರಿಸಿಕೊಂಡಿದ್ದನು.

ಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿ ಎಂದು ವಂಚನೆ ಮಾಡ್ತಿದ್ದವನ ಬಂಧನ
ಶ್ರೀಶೈಲ ಜಕ್ಕಣ್ಣನವರ್
ಪ್ರಜ್ವಲ್​ ಕುಮಾರ್ ಎನ್​ ವೈ
| Updated By: ವಿವೇಕ ಬಿರಾದಾರ|

Updated on: Aug 09, 2024 | 1:40 PM

Share

ಬೆಂಗಳೂರು, ಆಗಸ್ಟ್​ 09: ಮುಖ್ಯಮಂತ್ರಿಗಳ (CM) ಆಪ್ತ ಕಾರ್ಯದರ್ಶಿ ಅಂತ ಹೇಳಿ ವಂಚನೆ ಮಾಡುತ್ತಿದ್ದವನನ್ನು ವಿಧಾನಸೌಧ ಠಾಣೆ ಪೊಲೀಸರು (Police) ಬಂಧಿಸಿದ್ದಾರೆ. ಬೆಂಗಳೂರಿನ (Bengaluru) ಜಯನಗರ ನಿವಾಸಿ ಶ್ರೀಶೈಲ ಜಕ್ಕಣ್ಣನವರ್ ಬಂಧಿತ ಆರೋಪಿ. ಮುಖ್ಯಮಂತ್ರಿಗಳ ಕಚೇರಿಯಲ್ಲಿ ಆಪ್ತ ಸಹಾಯಕನಾಗಿ ಕೆಲಸ‌ಮಾಡ್ತಿದ್ದೇನೆ ಎಂದು ನಕಲಿ ಐಡಿ ಕಾರ್ಡ್ ತೋರಿಸಿದ್ದನು. ನಂತರ ನಿಮ್ಮ ಎಲ್ಲ ಕೆಲಸ ಮಾಡಿಸಿಕೊಡುತ್ತೇನೆ ಅಂತ ನಂಬಿಸುತ್ತಿದ್ದನು.

ಹೀಗೆ ಹಲವರನ್ನು ವಂಚಿಸಿದ್ದ ಆರೋಪಿ ವಿರುದ್ಧ ಮುಖ್ಯಮಂತ್ರಿ ಕಚೇರಿ ಅಧಿಕಾರಿ ಅರುಣ್ ಪುರಟಾಡು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದರು. ದೂರಿನ ಆಧಾರದ ಮೇಲೆ ಪೊಲೀಸರು ತನಿಖೆ ನಡೆಸಿ ಆರೋಪಿ ಶ್ರೀಶೈಲ್​ನನ್ನು ಬಂಧಿಸಿದ್ದಾರೆ. ಸದ್ಯ ಪೊಲೀಸರು ಆರೋಪಿಯನ್ನು ತೀವ್ರ ವಿಚಾರಣೆ ಮಾಡುತ್ತಿದ್ದಾರೆ.

ಹಗಲು ಡೆಲಿವರಿ ಬಾಯ್, ರಾತ್ರಿಯಾದರೆ ಕಳ್ಳ

ಡೆಲಿವರಿ ಕೆಲಸ ಮಾಡುತ್ತಾ ಮನೆಗಳ್ಳತನ ಮಾಡುತ್ತಿದ್ದ ಆರೋಪಿಯನ್ನು ವೈಟ್ ಫೀಲ್ಡ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅಸ್ಸಾಂ ಮೂಲದ ಅಭಿಜಿತ್ ದಾಸ್ (23) ಬಂಧಿತ ಅರೋಪಿ. ಅಭಿಜಿತ್ ದಾಸ್ ಅಪಾರ್ಟ್ಮೆಂಟ್​ಗಳನ್ನೇ ಟಾರ್ಗೆಟ್ ಮಾಡಿ ರಾತ್ರಿ ವೇಳೆ‌ ಕಳ್ಳತನ ಮಾಡುತ್ತಿದ್ದನು.

ಆರೋಪಿ ನಲ್ಲೂರು ಹಳ್ಳಿ ಭಾಗದ ಅಪಾರ್ಟ್ಮೆಂಟ್​ಗೆ ಖನ್ನ ಹಾಕಿದ್ದನು. ಅಪಾರ್ಟ್ಮೆಂಟ್ ಹಿಂಭಾಗದಿಂದ ಹತ್ತಿ, ಸ್ಲೈಡ್ ಡೋರ್ ಸರಿಸಿ ಮನೆಯೊಳಗೆ ನುಗ್ಗಿ ಕಳುವು ಮಾಡಿ ಪರಾರಿಯಾಗುತ್ತಿದ್ದನು. ಸಿಸಿಟಿವಿ ದೃಶ್ಯಾವಳಿ ಆಧಾರದ ಮೇಲೆ ಪೊಲೀಸರು ಆರೋಪಿಗಾಗಿ ಬಲೆ ಬೀಸಿ ಬಂಧಿಸಿದ್ದಾರೆ. ಆರೋಪಿಯಿಂದ 50 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: ಇಡಿ, ಆರ್​​ಬಿಐ ಹೆಸರು ಬಳಸಿಕೊಂಡು ಕೋಟ್ಯಾಂತರ ಹಣ ವಂಚನೆ!

ಪಾರ್ಟ್ ಟೈಂ ಕ್ಯಾಬ್ ಡ್ರೈವರ್, ಫುಲ್ ಟೈಂ‌‌‌ ಕಳ್ಳ

ಮನೆಗಳ್ಳತನ ಮಾಡುತ್ತಿದ್ದ ಕ್ಯಾಬ್​ ಚಾಲಕನನ್ನು ಬಾಣಸವಾಡಿ ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನ ಚೆನೈ ಮೂಲದ ಸತೀಶ್ ಬಂಧಿತ ಆರೋಪಿ. ಚೆನೈ ಮೂಲದ ಸತೀಶ್ ಬೆಂಗಳೂರಿನ‌ ಕಾವಲ್ ಬೈರಸಂದ್ರದಲ್ಲಿ ನೆಲಸಿದ್ದನು. ಈತ ಕ್ಯಾಬ್​ ಚಾಲಕನಾಗಿದ್ದಾನೆ. ಕ್ಯಾಬ್​ ಓಡಿಸುತ್ತ ಅಕ್ಕಪಕ್ಕದ ಮನೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದನು. ಮನೆಯಲ್ಲಿ ಯಾರು ಇಲ್ಲ ಅಂತ ಖಚೀತಪಡಿಸಿಕೊಂಡು ಕಳ್ಳತನ ಮಾಡುತ್ತಿದ್ದನು.

ಸತೀಶ್ ಇದೇ ವರ್ಷ​ ಏಪ್ರಿಲ್​ 4 ರಂದು ಕಲ್ಯಾಣ ನಗರದ ಹೆಚ್.ಆರ್.ಬಿ.ಆರ್ ಲೇಔಟ್​ಗೆ ಪಿಕಪ್​​ಗೆ ಹೋಗಿದ್ದನು. ಪಿಕಪ್​ ಮಾಡಿಕೊಂಡು ಹೊರಡುವಾಗ ಹೆಚ್​ಆರ್​ಬಿಆರ್​ ಲೇಔಟ್​ನ ಪ್ರಮೋದ್ ಭಟ್ ಎಂಬುವರ ಮನೆಯನ್ನು ಟಾರ್ಗೆಟ್​ ಮಾಡಿದ್ದಾನೆ. ಬಳಿಕ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಹೋಗಿ ಕಳ್ಳತನ ಮಾಡಿ ಪರಾರಿಯಾಗಿದ್ದಾನೆ. ಬಳಿಕ ಕಳ್ಳತನಕ್ಕೆ ಬಳಸಿದ್ದ ಬೈಕ್​ ಅನ್ನು ಸೆಕೆಂಡ್ ಹ್ಯಾಂಡ್ ಶೂರೂಂನಲ್ಲಿ ಮಾರಿದ್ದನು.

ಮನೆ ಮಾಲೀಕ ಪ್ರಮೋದ್ ಭಟ್ ಬಾಣಸವಾಡಿ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನ ಆಧಾರದ ಮೇಲೆ ಪರಿಶೀಲನೆ ನಡೆಸಿದಾಗ ಸತೀಶ್​ ಬ್ಲ್ಯಾಕ್​​ ಕಲರ್ ಪಲ್ಸರ್​ನಲ್ಲಿ ಬಂದು ಕಳ್ಳತನ ಮಾಡಿರುವುದು ಪತ್ತೆಯಾಗಿದೆ. ನಂತರ ಪೊಲೀಸರು, ಆರ್​ಟಿಒ ಸಹಾಯದೊಂದಿಗೆ ಬೈಕ್​ ಪತ್ತೆ ಹಚ್ಚಿದ್ದಾರೆ. ಆದರೆ, ಅಷ್ಟೊತ್ತಿಗಾಗಲೆ ಬೈಕ್​​ ಅನ್ನು ಬೇರೊಬ್ಬರು ಖರೀದಿಸಿ ತಮ್ಮ ಹೆಸರಿಗೆ ಮಾಡಿಕೊಂಡಿದ್ದರು. ಕೊನೆಗೆ ಪೊಲೀಸರು ಸತೀಶ್ ವಿವರ ಶೂರೂಮ್‌ನಲ್ಲಿ ಪಡೆದರು. ಆಗ ಸತೀಶ್​ ತಮಿಳುನಾಡನಲ್ಲಿರುವುದು ಪತ್ತೆಯಾಗಿದೆ. ತಮಿಳುನಾಡಿಗೆ ಹೋಗಿ ಆರೋಪಿ ಸತೀಶ್​ನನ್ನು ಬಂಧಿಸಿ‌ ಪೊಲೀಸರು‌ ಕರೆ ತಂದಿದ್ದಾರೆ. ಆರೋಪಿಯಿಂದ 90 ಗ್ರಾಂ ಚಿನ್ನ ಹಾಗೂ ಒಂದು ಲ್ಯಾಪ್ ಟಾಪ್ ಜಪ್ತಿ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ