AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯನಗರ: ಪತ್ನಿಯ ಮೇಲೆ ಅನುಮಾನ, ಮಲಗಿದ್ದ ವೇಳೆ ಹೊಡೆದು ಕೊಂದ ಪತಿ

ಅವರಿಬ್ಬರಿಗೂ ಮದುವೆಯಾಗಿ 16 ವರ್ಷವಾಗಿತ್ತು, ಜೊತೆಗೆ ಮೂರು ಮಕ್ಕಳೂ ಸಹ ಇದ್ದರು. ಅದರೆ ಅನುಮಾನ ಅನ್ನೋ ಭೂತ ಪತಿರಾಯನ ತಲೆಯಲ್ಲಿ ಸುಳಿತಾನೇ ಇತ್ತು. ಪತ್ನಿಯ ನಡತೆ ಮೇಲೆ ಸಂಶಯ ಪಡುತ್ತಿದ್ದ ಗಂಡ ಪತ್ನಿಯ ತಲೆಯನ್ನೆ ಸೀಳಿದ್ದಾನೆ.

ವಿಜಯನಗರ: ಪತ್ನಿಯ ಮೇಲೆ ಅನುಮಾನ, ಮಲಗಿದ್ದ ವೇಳೆ ಹೊಡೆದು ಕೊಂದ ಪತಿ
ವಿಜಯನಗರದಲ್ಲಿ ಮಲಗಿದ್ದ ಪತ್ನಿಯನ್ನ ಹೊಡೆದು ಕೊಂದ ಪತಿ
TV9 Web
| Edited By: |

Updated on:Feb 20, 2023 | 2:10 PM

Share

ವಿಜಯನಗರ: ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ವರದಾಪುರ ಗ್ರಾಮದ ಭಂಗಿ ಮಲ್ಲಪ್ಪ ಹಾಗೂ ಆತನ ಪತ್ನಿ ಲಕ್ಷ್ಮೀ ಮದುವೆಯಾಗಿ 16 ವರ್ಷ ಕಳೆದಿದೆ. ಮಲ್ಲಪ್ಪನ ಜೊತೆ ಸುಖವಾಗಿ ಸಂಸಾರ ಹೊಂದಿದ್ದ ಲಕ್ಷ್ಮೀಗೆ ಇಬ್ಬರು ಗಂಡು, ಓರ್ವ ಹೆಣ್ಣು ಮಗುವಿದೆ. ಆದ್ರೆ ಗಂಡ ಮಲ್ಲಪ್ಪನಿಗೆ ಪತ್ನಿಯ ನಡತೆಯ ಮೇಲೆ ಅನುಮಾನ ಶುರುವಾಗಿದೆ.‌ ಆಗಾಗ ಪತ್ನಿಯ ಜೊತೆ ಜಗಳ ಮಾಡುತ್ತಿದ್ದ ಮಲ್ಲಪ್ಪ ನಿನ್ನೆ(ಫೆ.18) ರಾತ್ರಿ ಪತ್ನಿ ತಲೆಯನ್ನೆ ಸೀಳಿ ಹಾಕಿದ್ದಾನೆ. ಮಲಗಿದ್ದ ಪತ್ನಿಯ ತಲೆಗೆ ಹೊಡೆದು ಹತ್ಯೆ ಮಾಡಿರುವ ಮಲ್ಲಪ್ಪ ಪತ್ನಿ ಸಾವನ್ನಪ್ಪುತ್ತಿದ್ದಂತೆ  ಪರಾರಿಯಾಗಿದ್ದ.

ಊರಲ್ಲಿ ವ್ಯವಸಾಯ ಮಾಡುತ್ತಾ. ರಾಜಿ ಪಂಚಾಯತಿ ಮಾಡುತ್ತಿದ್ದ ಮಲ್ಲಪ್ಪ ಪತ್ನಿಯ ವಿಚಾರದಲ್ಲಿ ಅನುಮಾನ ಹೊಂದಿದ್ದ. ಮಾವನ ಮಗಳನ್ನ ಮದುವೆಯಾಗಿದ್ದ ಮಲ್ಲಪ್ಪ ಮೂರು ಮಕ್ಕಳಾದ ಮೇಲೂ ಅನುಮಾನ ಪಡುತ್ತಿದ್ದ. ಇದೇ ವಿಚಾರವಾಗಿ ರಾತ್ರಿ ಪತ್ನಿ ಊಟ ಮಾಡಿ ಮನೆಯಲ್ಲಿ ಮಲಗಿದ್ದ ವೇಳೆ ಹಾರಿಕೋಲಿನಿಂದ ಹಲ್ಲೆ ನಡೆಸಿ ಹತ್ಯೆ ಮಾಡಿ ಪರಾರಿಯಾಗಿದ್ದ. ಇದೀಗ ಮಲ್ಲಪ್ಪನನ್ನ ಮರಿಯಮ್ಮನಹಳ್ಳಿ ಪೊಲೀಸರು ಬಂಧಿಸುವಲ್ಲಿ ಯಶ್ವಸಿಯಾಗಿದ್ದಾರೆ. ಘಟನೆಯ ನಂತರ ಸುದ್ದಿ ತಿಳಿಯುತ್ತಿದ್ದಂತೆ ಲಕ್ಷ್ಮೀ ಪೋಷಕರು ಮರಿಯಮ್ಮನಹಳ್ಳಿ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿ. ನ್ಯಾಯ ಕೊಡಿಸುವಂತೆ ಮನವಿ ಮಾಡುತ್ತಿದ್ದಾರೆ.

ಇದನ್ನೂ ಓದಿ:ವಿಜಯನಗರ: ಅನೈತಿಕ ಸಂಬಂಧದ ಶಂಕೆ, ಪ್ರಶ್ನಿಸಿದ ಪತ್ನಿಯನ್ನ ಕೊಂದು ತಾನು ನೇಣಿಗೆ ಶರಣಾದ ಪತಿ

ಕಳೆದ ಹತ್ತು ವರ್ಷದ ಹಿಂದೆ ಅಪಘಾತದಿಂದ ತಲೆಗೆ ಗಾಯವಾದ ನಂತರ ಆರೋಪಿ ಮಲ್ಲಪ್ಪ ಸೈಕೋ ರೀತಿ ವರ್ತನೆ ಮಾಡುತ್ತಿದ್ದನಂತೆ. ಇದರಿಂದಾಗಿ ಪತ್ನಿಯ ಮೇಲೆ ಅನುಮಾನ ಪಟ್ಟು ಇದೀಗ ಪತ್ನಿಯನ್ನೆ ಹತ್ಯೆ ಮಾಡಿ ಕಂಬಿ ಪಾಲಾಗಿದ್ದಾನೆ. ಇದೀಗ ಮೂರು ಮಕ್ಕಳು ಅನಾಥರಾಗಿದ್ದು ಗ್ರಾಮದಲ್ಲಿ ಸಶ್ಮಾನ ಮೌನ ಆವರಿಸಿದೆ‌.

ವರದಿ: ವಿರೇಶ್ ದಾನಿ ಟಿವಿ9 ವಿಜಯನಗರ

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:07 pm, Mon, 20 February 23

Follow Us
Web contact
Web contact

TV9 Kannada

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ