AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸಂಕಷ್ಟ ಕಾಲದಲ್ಲೂ ಕೈಯೊಡ್ಡಿದ ಪೊಲೀಸಪ್ಪ ಸಸ್ಪೆಂಡ್

ವಿಜಯಪುರ: ಕೊರೊನಾ ಸಂಕಷ್ಟ ಕಾಲದಲ್ಲೂ ಲೆಕ್ಕಿಸದೆ ಕೈಯೊಡ್ಡಿದ ಪೊಲೀಸ್ ಅಧಿಕಾರಿಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಇಂದೂ ಒಬ್ಬ ಪೊಲೀಸಪ್ಪ ಸಸ್ಪೆಂಡ್ ಆಗಿ ಮನೆ ಸೇರಿದ್ದಾರೆ. ರಾಜ್ಯದಲ್ಲಿ ಇದುವರೆಗೂ ಸುಮಾರು 50ಕ್ಕೂ ಹೆಚ್ಚು ಮಂದಿ ಹೀಗೆ ಕೈಯೊಡ್ಡಿ, ಕರ್ತವ್ಯ ನಿರ್ಲಕ್ಷಿಸಿ ಮನೆ ಸೇರಿಕೊಂಡಿದ್ದಾರೆ. ಭೀಮಾತೀರದ ಚಡಚಣ ಪೊಲೀಸ್ ಠಾಣೆಯ ವಿವಾದಿತ PSI ಮಹಾದೇವ ಯಲಿಗಾರ ಅಮಾನತಾಗಿದ್ದಾರೆ. ಇವರು ಇತ್ತೀಚೆಗಷ್ಟೇ ಚಡಚಣದಿಂದ ವಿಜಯಪುರ ಎಸ್​ಪಿ ಕಚೇರಿಗೆ ಒಒಡಿ ಮೇಲೆ ವರ್ಗಾವಣೆಯಾಗಿದ್ದರು. ಆದರೆ, ಎಸ್​ಪಿ ಕಚೇರಿಗೆ ಮಹಾದೇವ ಹಾಜರಾಗಲಿಲ್ಲ. ಚಡಚಣ ತಾಲೂಕಿನ ಜಿಗಜೇವಣಗಿ, […]

ಕೊರೊನಾ ಸಂಕಷ್ಟ ಕಾಲದಲ್ಲೂ ಕೈಯೊಡ್ಡಿದ ಪೊಲೀಸಪ್ಪ ಸಸ್ಪೆಂಡ್
ಸಾಧು ಶ್ರೀನಾಥ್​
|

Updated on:May 13, 2020 | 5:42 PM

Share

ವಿಜಯಪುರ: ಕೊರೊನಾ ಸಂಕಷ್ಟ ಕಾಲದಲ್ಲೂ ಲೆಕ್ಕಿಸದೆ ಕೈಯೊಡ್ಡಿದ ಪೊಲೀಸ್ ಅಧಿಕಾರಿಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಇಂದೂ ಒಬ್ಬ ಪೊಲೀಸಪ್ಪ ಸಸ್ಪೆಂಡ್ ಆಗಿ ಮನೆ ಸೇರಿದ್ದಾರೆ. ರಾಜ್ಯದಲ್ಲಿ ಇದುವರೆಗೂ ಸುಮಾರು 50ಕ್ಕೂ ಹೆಚ್ಚು ಮಂದಿ ಹೀಗೆ ಕೈಯೊಡ್ಡಿ, ಕರ್ತವ್ಯ ನಿರ್ಲಕ್ಷಿಸಿ ಮನೆ ಸೇರಿಕೊಂಡಿದ್ದಾರೆ.

ಭೀಮಾತೀರದ ಚಡಚಣ ಪೊಲೀಸ್ ಠಾಣೆಯ ವಿವಾದಿತ PSI ಮಹಾದೇವ ಯಲಿಗಾರ ಅಮಾನತಾಗಿದ್ದಾರೆ. ಇವರು ಇತ್ತೀಚೆಗಷ್ಟೇ ಚಡಚಣದಿಂದ ವಿಜಯಪುರ ಎಸ್​ಪಿ ಕಚೇರಿಗೆ ಒಒಡಿ ಮೇಲೆ ವರ್ಗಾವಣೆಯಾಗಿದ್ದರು. ಆದರೆ, ಎಸ್​ಪಿ ಕಚೇರಿಗೆ ಮಹಾದೇವ ಹಾಜರಾಗಲಿಲ್ಲ.

ಚಡಚಣ ತಾಲೂಕಿನ ಜಿಗಜೇವಣಗಿ, ದೇವರನಿಂಬರಗಿಯಲ್ಲಿ ಕೊರೊನಾ ವಾರಿಯರ್ಸ್ ಕೃತಜ್ಞತೆ ಸಮಾರಂಭದಲ್ಲಿ PSI ಮಹಾದೇವ ಭಾಗಿಯಾಗಿದ್ದರು. ಅಂದು ಸಾಮಾಜಿಕ ಅಂತರ ಸೇರಿದಂತೆ ಯಾವುದೇ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿರಲಿಲ್ಲ. ಅಷ್ಟೇ ಅಲ್ಲದೆ ಚಡಚಣ ಎಪಿಎಂಸಿ ವರ್ತಕರಿಂದ, ವ್ಯಾಪಾರಸ್ಥರಿಂದ ಬಡವರಿಗೆ ಆಹಾರ ಹಂಚುವುದಾಗಿ 50 ಸಾವಿರ ರೂಪಾಯಿ ಬಲವಂತವಾಗಿ ಹಣ, ಆಹಾರ ಕಿಟ್ ಪಡೆದ ಆರೋಪವಿತ್ತು.

ಇದರಿಂದ ಪೊಲೀಸ್ ಇಲಾಖೆಯ ಘನತೆಗೆ ಪೆಟ್ಟು ಬಿದ್ದಿತ್ತು. ಹಾಗಾಗಿ ಏ.8ರಂದು ಎಸ್​ಪಿ ಕಚೇರಿಗೆ ಒಒಡಿ ಮೇಲೆ ವರ್ಗವಣೆ ಮಾಡಲಾಗಿತ್ತು. ಆದರೆ, ವಿಜಯಪುರ ಎಸ್​ಪಿ ಕಚೇರಿಗೆ ಮಹಾದೇವ ಹಾಜರಾಗಲಿಲ್ಲ. ಈ ಹಿನ್ನೆಲೆಯಲ್ಲಿ ಇಲಾಖೆ ವಿಚಾರಣೆ ಬಾಕಿ ಇರಿಸಿ ಸೇವೆಯಿಂದ ಅಮಾನತು ಮಾಡಿ ಎಸ್​ಪಿ ಅನುಪಮ ಅಗ್ರವಾಲ್ ಆದೇಶಿಸಿದ್ದಾರೆ.

Published On - 5:25 pm, Wed, 13 May 20

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ