AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರದಲ್ಲಿ ನಕಲಿ ತುಪ್ಪುದ ಜಾಲ ಬೇಧಿಸಿದ ಅಧಿಕಾರಿಗಳು, ಓರ್ವ ವಶಕ್ಕೆ

ವಿಜಯಪುರ ನಗರದಲ್ಲಿ ನಕಲಿ ತುಪ್ಪದ ಮಾರಾಟ ಮಾಡುತ್ತಿದ್ದ ಜಾಲವನ್ನು ಬೇಧಿಸಿದ ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಪ್ರಾಧಿಕಾರ ಆಧಿಕಾರಿಗಳು ಓರ್ವನ ಸಹಿತ 30 ಕೆ.ಜಿ.ಗೂ ಅಧಿಕ ನಕಲಿ ತುಪ್ಪವನ್ನು ವಶಕ್ಕೆ ಪಡೆದಿದ್ದಾರೆ.

ವಿಜಯಪುರದಲ್ಲಿ ನಕಲಿ ತುಪ್ಪುದ ಜಾಲ ಬೇಧಿಸಿದ ಅಧಿಕಾರಿಗಳು, ಓರ್ವ ವಶಕ್ಕೆ
ವಿಜಯಪುರದಲ್ಲಿ ನಕಲಿ ತುಪ್ಪುದ ಜಾಲ ಬೇಧಿಸಿದ ಅಧಿಕಾರಿಗಳು
TV9 Web
| Edited By: Rakesh Nayak Manchi|

Updated on:Oct 21, 2022 | 2:04 PM

Share

ವಿಜಯಪುರ: ನಗರದಲ್ಲಿ ನಕಲಿ ತುಪ್ಪದ ಮಾರಾಟ ಮಾಡುತ್ತಿದ್ದ ಜಾಲವನ್ನು ಬೇಧಿಸಿದ ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಪ್ರಾಧಿಕಾರ ಆಧಿಕಾರಿಗಳು ಓರ್ವನ ಸಹಿತ 30 ಕೆ.ಜಿ.ಗೂ ಅಧಿಕ ನಕಲಿ ತುಪ್ಪವನ್ನು ವಶಕ್ಕೆ ಪಡೆದಿದ್ದಾರೆ. ರವಿ ನಿಂಗನಗೌಡ ಬಿರಾದಾರ ಹಾಗೂ ಇನ್ನಿತರರು ಸೇರಿಕೊಂಡು ನಕಲಿ ತುಪ್ಪು ಮಾರಾಟ ಮಾಡುತ್ತಿದ್ದರು. ಬೆಂಗಳೂರಿನಿಂದ ಖಾಸಗಿ ಬಸ್ ಮೂಲಕ ನಗರಕ್ಕೆ ತಂದು ಮಾರಾಟ ಮಾಡುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ  ನಕಲಿ ತುಪ್ಪ ಬಾಟಲ್, ಸ್ಟಿಕರ್ ಸೇರಿದಂತೆ ಪ್ಯಾಕಿಂಗ್ ಮಟೀರಿಯಲ್ ಹಾಗೂ ಬಿಲ್ ಬುಕ್​ಗಳನ್ನು ವಶಕ್ಕೆ ಪಡೆದಿದ್ದಾರೆ. ದಾಳಿ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ ರವಿಯನ್ನು ಅಧಿಕಾರಿಗಳು ಹೆಡೆಮುರಿ ಕಟ್ಟಿದ್ದಾರೆ. ಸದ್ಯ ವಶಕ್ಕೆ ಪಡೆದ ನಕಲಿ ತುಪ್ಪವನ್ನು ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳಿಸಿದ ಅಧಿಕಾರಿಗಳು, ಪ್ರಯೋಗಾಲಯದ ವರದಿ ಬಂದ ಬಳಿಕ ಮುಂದಿನ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ.

ಬಿಜೆಪಿ ಮುಖಂಡನ ಕಾರು ಅಪಘಾತ

ವಿಜಯಪುರ: ಬಿಜೆಪಿ ಮುಖಂಡ ಅಪ್ಪುಗೌಡ ಪಾಟೀಲ್ ಅವರ ಕಾರು ಅಪಘಾತಗೊಂಡ ಘಟನೆ ಜಿಲ್ಲೆಯ ಕೊಲ್ಹಾರ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಅಪ್ಪು ಗೌಡ ಹಾಗೂ ಅವರ ಕುಟುಂಬ ಪ್ರಯಾಣಿಸುತ್ತಿದ್ದ ಕಾರಿಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಅಪ್ಪುಗೌಡ ಪಾಟೀಲ್ ಸೇರಿದಂತೆ ಇತರರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ವಿಜಯಪುರ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ರಸ್ತೆಯಲ್ಲಿನ ಗುಂಡಿ ತಪ್ಪಿಸಲು ಹೋಗಿ ಈ ಅಪಘಾತ ಸಂಭವಿಸಿದ್ದು, ಕೊಲ್ಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:25 pm, Fri, 21 October 22

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ