AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೇಷ ಬದಲಿಸಿಕೊಂಡು ಬಂದು ಅತ್ತೆಯ ಕಣ್ಣಿಗೆ ಖಾರದಪುಡಿ ಎರಚಿ ಒಡವೆ ದೋಚಿದ ಅಳಿಯ

ಮನುಷ್ಯನ ಅತಿಯಾಸೆ ಮುಂದೆ ಯಾವ ಬಾಂಧವ್ಯ-ಸಂಬಂಧಗಳಿಗೆ ಬೆಲೆಯೇ ಇಲ್ಲವಾಗುತ್ತದೆ. ರಕ್ತ ಸಂಬಂಧಿಗಳಾಗಿದ್ದರೂ ಅವರಿಗೆ ಮೋಸ ಮಾಡುಲು ಹಿಂದೆ ಮುಂದೆ ನೋಡುತ್ತಿಲ್ಲ. ವಿಜಯಪುರ ಜಿಲ್ಲೆಯಲ್ಲಿ ನಡೆದ ಒಂದು ಘಟನೆ ಇದಕ್ಕೆ ಸಾಕ್ಷಿಯಾಗಿದೆ. ಸೋದರಳಿಯನೇ ಅತ್ತೆಗೆ ಮೋಸ ಮಾಡಿ, ಜೈಲು ಪಾಲಾಗಿದ್ದನು. ಏನಿದು ದರೋಡೆ ಪ್ರಕರಣ? ಇಲ್ಲಿದೆ ಓದಿ.

ವೇಷ ಬದಲಿಸಿಕೊಂಡು ಬಂದು ಅತ್ತೆಯ ಕಣ್ಣಿಗೆ ಖಾರದಪುಡಿ ಎರಚಿ ಒಡವೆ ದೋಚಿದ ಅಳಿಯ
ಆರೋಪಿಗಳಾದ ನಿಂಗಪ್ಪ ಪೂಜಾರಿ, ರಶುರಾಮ ಬಂದಪಟ್ಟಿ
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on:May 01, 2025 | 9:44 PM

Share

ವಿಜಯಪುರ, ಮೇ 01: ಸೋದರಳಿಯನೇ ಸ್ವಂತ ಅತ್ತೆಯ ಮೈಮೇಲಿದ್ದ ಚಿನ್ನಾಭರಣ ದರೋಡೆ ಮಾಡಿದ ಘಟನೆ ವಿಜಯಪುರ (Vijayapura) ಜಿಲ್ಲೆಯಲ್ಲಿ ನಡೆದಿದೆ. ಇಂಡಿ (Indi) ತಾಲೂಕಿನ ಅಂಜುಟಗಿ ಗ್ರಾಮದ ನಿಂಬೆವ್ವಾ ಪೂಜಾರಿ (70) ಎಂಬುವರು ಸೋದರಳಿಯ ನಿಂಗಪ್ಪ ಪೂಜಾರಿಯನ್ನು ಕರೆದುಕೊಂಡು ಬಾಗಲಕೋಟೆ ಜಿಲ್ಲೆಯ ಗುಳೆದಗುಡ್ಡದಲ್ಲಿನ ಸಂಬಂಧಿಕರ ಮನೆಗೆ ಹೋಗಿದ್ದರು.

ಸಾಯಂಕಾಲ ಗುಳೆದಗುಡ್ಡದಿಂದ ನಿಡಗುಂದಿಗೆ ಆಗಮಿಸಿ, ಅಲ್ಲಿಂದ ಝಳಕಿಗೆ ಬಸ್ ಮೂಲಕ ಬಂದಿದ್ದರು. ಝಳಕಿಯಿಂದ ಬೈಕ್​ನಲ್ಲಿ ಅಳಿಯನ ಜೊತೆಗೆ ಅಂಜುಟಗಿ ಗ್ರಾಮಕ್ಕೆ ನಿಂಬೆವ್ವಾ ತೆರಳುತ್ತಿದ್ದರು. ರಾತ್ರಿ 9 ಗಂಟೆ ಸುಮಾರಿಗೆ ಮಾರ್ಗ ಮದ್ಯೆ ಬೈಕ್​ನಲ್ಲಿ ಪೆಟ್ರೋಲ್ ಖಾಲಿಯಾಗಿದೆ ಪೆಟ್ರೋಲ್ ತರುತ್ತೇನೆಂದು ನಿಂಪ್ಪ ಹೋಗಿದ್ದನು.

ಕೆಲ ಸಮಯದ ನಂತರ ನಿಂಗಪ್ಪ ಬಟ್ಟೆಗಳನ್ನು ಬದಲಾಯಿಸಿಕೊಂಡು ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಮತ್ತೋರ್ವನೊಂದಿಗೆ ನಿಂಬೆವ್ವರ ಬಳಿಗೆ ಬಂದು, ಕಣ್ಣಿಗೆ ಖಾರದ ಪುಡಿ ಎರಚಿ, ಬಾಯಿಗೆ ಬಟ್ಟೆ ತುರಕಿ ಅವರ ಮೈ ಮೇಲಿದ್ದ 130 ಗ್ರಾಂಗೂ ಆಧಿಕ ಚಿನ್ನಾಭರಣ ಕಿತ್ತುಕೊಂಡು ಓಡಿ ಹೋಗಿದ್ದರು.

ಇದನ್ನೂ ಓದಿ
Image
ಅಪ್ರಾಪ್ತೆಯನ್ನ ಕರೆದೊಯ್ದು ಅತ್ಯಾಚಾರ ಎಸಗಿದ ಇಬ್ಬರು ಸ್ನೇಹಿತರು!
Image
ಬೇರೆ ಜಾತಿ ಹುಡುಗನ ಪ್ರೀತಿಸಿದ್ದಕ್ಕೆ ಮಗಳ ಕೊಲೆ ಮಾಡಿ ನದಿಗೆ ಎಸೆದ ತಂದೆ
Image
ವಾಲಿಬಾಲ್ ಆಟಗಾರನ ಕಾಮಕಾಂಡ ಬಯಲು, ಮೊಬೈಲ್​ನಲ್ಲಿತ್ತು ಸರಸ ಸಲ್ಲಾಪದ ವಿಡಿಯೋ
Image
ಒಡಿಶಾ: ಸಂಬಂಧಿಯಿಂದಲೇ 4 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಕೊಲೆ

ಬಳಿಕ, ಬಟ್ಟೆ ಬದಲಾಯಿಸಿಕೊಂಡ ಬಂದ ನಿಂಗಪ್ಪ ಅತ್ತೆಯ ಆಭರಣಗಳು ದರೋಡೆಯಾಗಿವೆ ಎಂದು ಝಳಕಿ ಪೊಲೋಸ್ ಠಾಣೆಯಲ್ಲಿ ದೂರು ನೀಡಿದನು.

ಆರಂಭದಲ್ಲಿ ಬೇರೆಯವರು ದರೋಡೆ ಮಾಡಿರಬಹುದು ಎಂದು ಪೊಲೀಸರು ಅಂದುಕೊಂಡಿದ್ದರು. ನಿಂಬೆವ್ವ ಅವರು ಅಳಿಯನ ಮೇಲೆ ಸಂಶಯವಿದೆ ಎಂದು ಪೊಲೀಸರಿಗೆ ಮಾಹಿತಿ ನೀಡಿದರು. ನಂತರ, ಪೊಲೀಸರು ಘಟನೆ ನಡೆದ ದಿನದ ಮೊಬೈಲ್ ಟವರ್ ಲೊಕೇಷನ್ ಆಧಾರದ ಮೇಲೆ ಅಳಿಯ ನಿಂಗಪ್ಪನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದಾಗ ದರೊಡೆ ನಾಟಕ ಬಯಲಾಗಿದೆ.

ಯಾವಾಗ ಪೊಲೀಸರ ತನಿಖೆಯಲ್ಲಿ ಘಟನೆ ನಡೆದ ಸಮಯದಲ್ಲಿ ಝಳಕಿಯಿಂದ ಅಂಜುಟಗಿ ಮಾರ್ಗದಲ್ಲಿ ಬೇರೆ ಯಾರೋಬ್ಬರೂ ಪ್ರಯಾಣ ಮಾಡಿರಲಿಲ್ಲ ಎಂಬುದು ಮೊಬೈಕ್ ಟವರ್ ಲೊಕೇಷನ್ ಮೇಲೆ ತಿಳಿದು ಬಂದಿತ್ತು. ಅಲ್ಲದೇ, ನಿಂಬೆವ್ವ ಸಹ ಇದು ಅಳಿಯನದ್ದೇ ಕಿತಾಪತಿ ಎಂಬ ಅನುಮಾನ ವ್ಯಕ್ತಪಡಿಸಿದ್ದು ಸಹ ಪೊಲೀಸರಿಗೆ ಸಹಾಯಕವಾಗಿತ್ತು. ಈ ಹಿನ್ನೆಲೆಯಲ್ಲಿ ನಿಂಗಪ್ಪನನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದಾಗ ನಕಲಿ ದರೋಡೆಯ ಕಹಾನಿ ಬಹಿರಂಗವಾಗಿದೆ.

ಘಟನೆ ನಡೆದ ದಿನ ನಿಂಗಪ್ಪ ಪೂರ್ವ ನಿಯೋಜನೆಯಂತೆ ನಿಂಬೆವ್ವ ಅವರನ್ನು ಬೈಕ್ ಮೇಲೆ ಹತ್ತಿಸಿಕೊಂಡು ಬಂದು ಬೈಕ್​ನಲ್ಲಿ ಪೆಟ್ರೋಲ್ ಖಾಲಿಯಾಗಿದೆ ಎಂದು ನಿಂಬೆವ್ವ ಪೂಜಾರಿಯನ್ನು ರಸ್ತೆಯಲ್ಲೇ ನಿಲ್ಲಿಸಿ ಹೋಗಿದ್ದನು.

ನಂತರ, ತನ್ನ ಸ್ನೇಹಿತ ಪರಶುರಾಮ ಬಂದಪಟ್ಟಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾನೆ. ನಿಂಗಪ್ಪ ಹಾಗೂ ಪರಶುರಾಮ ಬಂದು ನಿಂಬೆವ್ವ ಅವರ ಮೈಮೇಲಿದ್ದ ಚಿನ್ನದ ಬಳೆ ಸರ ಹಾಗೂ ಇತರೆ ಆಭರಣ ದರೋಡೆ ಮಾಡಿ ಹೋಗಿದ್ದಾಗಿ ಬಾಯಿ ಬಿಟ್ಟಿದ್ದಾರೆ. ಸದ್ಯ ಝಳಕಿ ಪೊಲೀಸರು ನಿಂಗಪ್ಪ ಪೂಜಾರಿ ಹಾಗೂ ಆತನಿಗೆ ಸಹಾಯ ಮಾಡಿದ ಪರಶುರಾಮ ಬಂದಪಟ್ಟಿ ಮೇಲೆ ಪ್ರಕರಣ ದಾಖಲಿಸಿ ಜೈಲಿಟ್ಟಿದ್ದರು. ಸದ್ಯ ಜಾಮೀನಿನ ಮೇಲೆ ಇಬ್ಬರು ಆರೋಪಿಗಳು ಜೈಲಿನಿಂದ ಹೊರ ಬಂದಿದ್ದಾರೆ.

ಇದನ್ನೂ ಓದಿ: ಅನ್ನಭಾಗ್ಯ ಅಕ್ಕಿ ಮಹಾರಾಷ್ಟ್ರಕ್ಕೆ ಅಕ್ರಮ ಸಾಗಾಟ: ವಿಜಯಪುರದಲ್ಲಿ 40 ಟನ್ ಅಕ್ಕಿ ಜಪ್ತಿ

ಇಲ್ಲಿ ಸೋದರಳಿಯನೇ ಅತ್ತೆಯ ಬಳಿಯಿದ್ದ ಚಿನ್ನಾಭರಣಕ್ಕಾಗಿ ದರೋಡೆಯ ಪ್ಲ್ಯಾನ್ ಮಾಡಿದ್ದ. ಈತನಿಗೆ ಪರಶುರಾಮ ಸಹಾಯ ಮಾಡಿ ದರೋಡೆಯಾಗಿದೆ ಎಂದು ಬಿಂಬಿಸಿ ಕಂಬಿ ಹಿಂದೆ ಹೋಗಿದ್ದು ಇವರಿಗೆ ಪಾಠವಾಗಿದೆ. ಸದ್ಯ ಜಾಮೀbನು ಪಡೆದು ಐತಾತಿ ಅಳಿಯ ನಿಂಗಪ್ಪ ಹಾಗೂ ಆತನ ಗೆಳೆಯ ಪರಶುರಾಮ ಹೊರ ಬಂದಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:41 pm, Thu, 1 May 25

Follow Us
Ashok Yadalli
Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?