AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ತವ್ಯಕ್ಕೆ ಹಾಜರಾಗಲು ತೆರಳುತ್ತಿದ್ದ ವೇಳೆ ವಿಜಯಪುರ ನೂತನ ಡಿಸಿ ಕಾರು ಪಲ್ಟಿ; ಡಿಸಿ ವಿಜಯ ಮಹಾಂತೇಶ ದಾನಮ್ಮ ಕುಟುಂಬಸ್ಥರಿಗೆ ಗಾಯ

ದಾವಣಗೆರೆ ಜಿಲ್ಲಾ ಪಂಚಾಯಿತಿ ಸಿಇಒ ಆಗಿದ್ದ ವಿಜಯ ಮಹಾಂತೇಶ ದಾನಮ್ಮನವರಿಗೆ ವಿಜಯಪುರ ಡಿಸಿಯಾಗಿ ವರ್ಗಾವಣೆಯಾಗಿತ್ತು. ಈ ಹಿನ್ನೆಲೆಯಲ್ಲಿ ಕುಟುಂಬ ಸಮೇತರಾಗಿ ವಿಜಯಪುರಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.

ಕರ್ತವ್ಯಕ್ಕೆ ಹಾಜರಾಗಲು ತೆರಳುತ್ತಿದ್ದ ವೇಳೆ ವಿಜಯಪುರ ನೂತನ ಡಿಸಿ ಕಾರು ಪಲ್ಟಿ; ಡಿಸಿ ವಿಜಯ ಮಹಾಂತೇಶ ದಾನಮ್ಮ ಕುಟುಂಬಸ್ಥರಿಗೆ ಗಾಯ
ಕರ್ತವ್ಯಕ್ಕೆ ಹಾಜರಾಗಲು ತೆರಳುತ್ತಿದ್ದ ವೇಳೆ ವಿಜಯಪುರ ನೂತನ ಡಿಸಿ ಕಾರು ಪಲ್ಟಿ; ಡಿಸಿ ವಿಜಯ ಮಹಾಂತೇಶ ದಾನಮ್ಮ ಕುಟುಂಬಸ್ಥರಿಗೆ ಗಾಯ
TV9 Web
| Edited By: |

Updated on: Apr 19, 2022 | 10:18 AM

Share

ಧಾರವಾಡ: ಕರ್ತವ್ಯಕ್ಕೆ ಹಾಜರಾಗಲು ತೆರಳುತ್ತಿದ್ದ ವೇಳೆ ಕಾರು ಪಲ್ಟಿಯಾಗಿ ವಿಜಯಪುರ ನೂತನ ಡಿಸಿಗೆ ಗಾಯಗಳಾಗಿರುವ ಘಟನೆ ಧಾರವಾಡ ಬಳಿಯ ಬೈಪಾಸ್‌ನಲ್ಲಿ ಸಂಭವಿಸಿದೆ. ವಿಜಯ ಮಹಾಂತೇಶ ದಾನಮ್ಮನವರ, ಪತ್ನಿ, ಮಕ್ಕಳಿಗೆ ಗಾಯಗಳಾಗಿದ್ದು ಗಾಯಾಳುಗಳಿಗೆ ಎಸ್‌ಡಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ದಾವಣಗೆರೆ ಜಿಲ್ಲಾ ಪಂಚಾಯಿತಿ ಸಿಇಒ ಆಗಿದ್ದ ವಿಜಯ ಮಹಾಂತೇಶ ದಾನಮ್ಮನವರಿಗೆ ವಿಜಯಪುರ ಡಿಸಿಯಾಗಿ ವರ್ಗಾವಣೆಯಾಗಿತ್ತು. ಈ ಹಿನ್ನೆಲೆಯಲ್ಲಿ ಕುಟುಂಬ ಸಮೇತರಾಗಿ ವಿಜಯಪುರಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.

ಬಸ್ ಡಿಕ್ಕಿ ವೃದ್ದೆ ಸಾವು ಮೈಸೂರು ಗ್ರಾಮಾಂತರ ಬಸ್ ನಿಲ್ದಾಣದಲ್ಲಿ ಬಸ್ ಡಿಕ್ಕಿಯಾಗಿ ವೃದ್ಧೆ ಮೃತಪಟ್ಟಿದ್ದಾರೆ. ಕೆ.ಆರ್.ನಗರ ತಾಲೂಕಿನ ಸತ್ತಿ ಗ್ರಾಮದ ನೀಲಮ್ಮ ಮೃತ ದುರ್ದೈವಿ. ಮತ್ತೊಂದು ಬಸ್ ಓವರ್‌ಟೇಕ್ ಮಾಡುವಾಗ ದುರ್ಘಟನೆ ಸಂಭವಿಸಿದೆ. ದೇವರಾಜ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಲಾರಿಗೆ ಬೈಕ್ ಡಿಕ್ಕಿ; ಬೈಕ್ ಸವಾರ ಸಾವು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಲೋಹಿತ್ ನಗರದಲ್ಲಿ ಬ್ರಿಡ್ಜ್ ಬಳಿ ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಳಗಾವಿ ಮೂಲದ ಸಚಿನ್ ಕುಮಾರ್ ದೇಸಾಯಿ(35) ಮೃತ ದುರ್ದೈವಿ. ರಸ್ತೆ ಬಳಿ ಲಾರಿ ನಿಲ್ಲಿಸಿ ಪರಾರಿಯಾದ ಚಾಲಕನ ವಿರುದ್ಧ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಬಿಟ್ಟಗೊಂಡನಹಳ್ಳಿಯಲ್ಲಿ ನೇಣು ಬಿಗಿದುಕೊಂಡು ರಂಭಾ(21) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಡಿಕೆ ತಟ್ಟೆ ತಯಾರಿಸುವ ಕಾರ್ಖಾನೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ನೇಪಾಳಿ ಮೂಲದ ಗಣೇಶ್ ಭಂಡಾರಿ ಎಂಬುವರ ಪತ್ನಿ ರಂಭಾ 21 ನೇಣಿಗೆ ಶರಣಾಗಿದ್ದಾರೆ. ರಂಭಾ ಮಾನಸಿಕ ಕಾಯಿಲೆಯಿಂದ ನರಳುತ್ತಿದ್ದರು ಎನ್ನಲಾಗಿದೆ. ಸಿಎಸ್ ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಅಪಘಾತದಲ್ಲಿ ವೈದ್ಯ ವಿದ್ಯಾರ್ಥಿ ಸಾವು ತುಮಕೂರು ತಾಲೂಕಿನ ನಂದಿಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಮೇಲ್ಸೇತುವೆ ಕಂಬಿಗಳಿಗೆ ಬೈಕ್ ಡಿಕ್ಕಿ ಹೊಡೆದು ವೈದ್ಯ ವಿದ್ಯಾರ್ಥಿ ಮೋಕ್ಷಿತ್ ಹೆಗಡೆ(21) ಮೃತಪಟ್ಟಿದ್ದಾರೆ. ತಿಪಟೂರು ತಾಲೂಕಿನ ರಾಮಚಂದ್ರಪುರ ನಿವಾಸಿಯಾಗಿದ್ದು ಬೆಂಗಳೂರಿನಲ್ಲಿ ಎಂಬಿಬಿಎಸ್ ವಿದ್ಯಾಭ್ಯಾಸ ಮಾಡುತ್ತಿದ್ದರು ಎನ್ನಲಾಗಿದೆ. ಬೆಂಗಳೂರಿಗೆ ತೆರಳುವಾಗ ನಡೆದ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಕ್ಯಾತ್ಸಂದ್ರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಅಮೆರಿಕ ಅಧ್ಯಕ್ಷ ಜೋ ಬೈಡನ್​ ಕೀವ್​​ಗೆ ತೆರಳಲಿದ್ದಾರಾ?- ಪ್ರಶ್ನೆಗೆ ಉತ್ತರ ನೀಡಿದ ಶ್ವೇತ ಭವನ

ಒಟಿಟಿಗೆ ಬರ್ತಿದೆ ‘ದಿ ಕಾಶ್ಮೀರ್​ ಫೈಲ್ಸ್​’ ಚಿತ್ರ; ಕನ್ನಡ ಪ್ರೇಕ್ಷಕರಿಗೂ ಇಲ್ಲಿದೆ ಒಂದು ಗುಡ್​ ನ್ಯೂಸ್​

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ