AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರದಲ್ಲಿ ರಥೋತ್ಸವ ವೇಳೆ ಅವಘಡ: ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿಕೆ

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದ ಆರಾಧ್ಯ ದೈವ ಶ್ರೀ ಸಿದ್ದಲಿಂಗ ಮಹಾರಾಜರ ಕಮರಿಮಠದ ಜಾತ್ರಾ ಉತ್ಸವದ ವೇಳೆ ನಿನ್ನೆ ಸಂಜೆ ಗೋಧೋಳಿ ಮುಹೂರ್ತದಲ್ಲಿ ಸಾವಿರಾರು ಜನರ ಸಮ್ಮುಖದಲ್ಲಿ ನಡೆದಿದ್ದ ಮಹಾರಥೋತ್ಸವದಲ್ಲಿ ರಥ ಎಳೆಯುವ ವೇಳೆ ಆಯತಪ್ಪಿ ಚಕ್ರದಡಿ ಸಿಲುಕಿದ್ದ 7 ಜನರ ಪೈಕಿ ಮೂವರು ಸಾವನ್ನಪ್ಪಿದ್ದಾರೆ. ಇಂಡಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿ ಘಟನೆ ನಡೆದಿದೆ.

ವಿಜಯಪುರದಲ್ಲಿ ರಥೋತ್ಸವ ವೇಳೆ ಅವಘಡ: ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿಕೆ
ಮೃತರ ಸಂಖ್ಯೆ ಮೂರಕ್ಕೆ ಏರಿಕೆ
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on:Apr 29, 2024 | 4:57 PM

Share

ವಿಜಯಪುರ, ಏಪ್ರಿಲ್ 29: ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದ ಆರಾಧ್ಯ ದೈವ ಶ್ರೀ ಸಿದ್ದಲಿಂಗ ಮಹಾರಾಜರ ಕಮರಿಮಠದ ಜಾತ್ರಾ ಉತ್ಸವದ ವೇಳೆ ರಥದ (Rathotsava) ಚಕ್ರಕ್ಕೆ ಸಿಲುಕಿ ಇಬ್ಬರು ಭಕ್ತರು ಸ್ಥಳದಲ್ಲೇ ಮೃತಪಟ್ಟರೆ ಗಂಭೀರವಾಗಿ ಗಾಯಗೊಂಡಿದ್ದ ಮತ್ತೋರ್ವ ವ್ಯಕ್ತಿ ಕೂಡ ಚಿಕಿತ್ಸೆ ಫಲಿಸದೆ ಇಂದು ಆಸ್ಪತ್ರೆಯಲ್ಲಿ (death) ಸಾವನ್ನಪ್ಪಿದ್ದಾರೆ. ಆ ಮೂಲಕ ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿಕೆ ಆಗಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಸುರೇಶ್ ಕಟಕದೊಂಡ (36) ಮೃತ ವ್ಯಕ್ತಿ. ನೂಕುನುಗ್ಗಲಿನಲ್ಲಿ ರಥದ ಗಾಲಿಗೆ ಸಿಲುಕಿ ನಿನ್ನೆ ಅಭಿಷೇಕ್ ಮುಜಗೊಂಡ(17), ಸೋಬು ಶಿಂಧೆ(51) ಮೃತಪಟ್ಟಿದ್ದರು. ಇಂಡಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಲಚ್ಯಾಣ ಗ್ರಾಮದಲ್ಲಿ ನಿನ್ನೆ ಶ್ರೀ ಸಿದ್ದಲಿಂಗ ಮಹಾರಾಜರ ಕಮರಿಮಠದ ಜಾತ್ರೆ ಪ್ರತಿ ವರ್ಷದಂತೆ ಈ ವರ್ಷವೂ ನಡೆದಿತ್ತು. ರಥೋತ್ಸವಕ್ಕೆ ಸಾವಿರಾರು ಭಕ್ತರು ಜಮಾಯಿಸಿದ್ದರು. ಈ ವೇಳೆ ಜನರ ನೂಕು ನುಗ್ಗಲಿನಲ್ಲಿ ರಥದ ಚಕ್ರಕ್ಕೆ ಕೆಲವರು ಸಿಲುಕಿದರು. ಈ ವೇಳೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಬಳ್ಳಾರಿ: ಮದುವೆ ದಿಬ್ಬಣದ ಲಾರಿ ಪಲ್ಟಿ; ಇಬ್ಬರು ಸ್ಥಳದಲ್ಲೇ ಸಾವು, 50ಕ್ಕೂ ಹೆಚ್ಚು ಜನರಿಗೆ ಗಾಯ

ಇನ್ನು ಗಂಭೀರವಾಗಿ ಗಾಯಗೊಂಡ ಓರ್ವ ವ್ಯಕ್ತಿಯನ್ನು ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದ್ದು ಆತನ ಸ್ಥಿತಿಯೂ ಚಿಂತಾಜನಕವಾಗಿತ್ತು. ಇನ್ನು ರಥದ ಚಕ್ರಕ್ಕೆ ಸಿಲುಕಿ ಮೃತಪಟ್ಟವರನ್ನು ಬಂಡು ಕಟಕದೊಂಡ (35), ಸೋಬು ಶಿಂಧೆ (55) ಎಂದು ಗುರುತಿಸಲಾಗಿತ್ತು.

ಇದನ್ನೂ ಓದಿ: ವಿಜಯಪುರ: ರಂಜಾನ್ ಹಬ್ಬದಂದೇ ಯುವಕನ ಹತ್ಯೆ ಪ್ರಕರಣ; ಆರೋಪಿಗಳ ಬಂಧನ

ಮೃತರು ಇದೇ ಲಚ್ಯಾಣ ಗ್ರಾಮದವರು ಎಂದು ತಿಳಿದು ಬಂದಿದೆ. ಗಾಯಾಳು ನೆರೆಯ ಮಹಾರಾಷ್ಟ್ರದ ಮೂಲದ ವ್ಯಕ್ತಿ ಎನ್ನಲಾಗಿದೆ. ಸ್ಥಳದಲ್ಲಿ ಇಂಡಿ ಪಟ್ಟಣ ಹಾಗೂ ಇಂಡಿ ಗ್ರಾಮೀಣ ಪೊಲೀಸ್ ಠಾಣೆಯ ಪೊಲೀಸರು ಬೀಡು ಬಿಟ್ಟಿದ್ದರು. ಇಂಡಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿ ಘಟನೆ ನಡೆದಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:48 pm, Mon, 29 April 24

Follow Us
Ashok Yadalli
Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು