AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರ: ಪ್ರಿಯಕರನ ಬ್ಲ್ಯಾಕ್‌ಮೇಲ್‌ಗೆ ಹೆದರಿ ಮಹಿಳೆ ಆತ್ಮಹತ್ಯೆ, ವಿವಾಹಿತೆಯ ಭಯಾನಕ ಲೈವ್ ಸೊಸೈಡ್ ವಿಡಿಯೋ ವೈರಲ್

ವಿವಾಹಿತೆ ಮಹಿಳೆಯೊಬ್ಬರು ನೇಣಿಗೆ ಶರಣಾಗುವ ಮುನ್ನ ಮೊಬೈಲ್ ವಿಡಿಯೋ ಆನ್ ಮಾಡಿ ಲೈವ್ ಸೊಸೈಡ್ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಬಬಲೇಶ್ವರ ತಾಲೂಕಿನ ಉಪ್ಪಲದಿನ್ನಿ ಗ್ರಾಮದಲ್ಲಿ ನಡೆದಿದೆ. ಸುಹಾನ್ ಸೋನಾರ್ (21) ಆತ್ಮಹತ್ಯೆಗೆ ಶರಣಾದ ವಿವಾಹಿತೆ ಮಹಿಳೆ.

ವಿಜಯಪುರ:  ಪ್ರಿಯಕರನ ಬ್ಲ್ಯಾಕ್‌ಮೇಲ್‌ಗೆ ಹೆದರಿ ಮಹಿಳೆ ಆತ್ಮಹತ್ಯೆ, ವಿವಾಹಿತೆಯ  ಭಯಾನಕ ಲೈವ್ ಸೊಸೈಡ್ ವಿಡಿಯೋ ವೈರಲ್
ಮೃತ ಮಹಿಳೆ
ಕಿರಣ್ ಹನುಮಂತ್​ ಮಾದಾರ್
|

Updated on:Apr 26, 2023 | 9:40 AM

Share

ವಿಜಯಪುರ: ವಿವಾಹಿತೆ ಮಹಿಳೆಯೊಬ್ಬರು ನೇಣಿಗೆ ಶರಣಾಗುವ ಮುನ್ನ ಮೊಬೈಲ್ ವಿಡಿಯೋ ಆನ್ ಮಾಡಿ ಲೈವ್ ಸೊಸೈಡ್ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಬಬಲೇಶ್ವರ ತಾಲೂಕಿನ ಉಪ್ಪಲದಿನ್ನಿ ಗ್ರಾಮದಲ್ಲಿ ನಡೆದಿದೆ. ಸುಹಾನ್ ಸೋನಾರ್ (21) ಆತ್ಮಹತ್ಯೆಗೆ ಶರಣಾದ ವಿವಾಹಿತೆ ಮಹಿಳೆ. ಈಕೆ ನೇಣಿಗೆ ಶರಣಾಗುವ ಮುನ್ನ ಪ್ರಿಯಕರನ ಬ್ಲ್ಯಾಕ್ಮೇಲ್​ಗೆ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಹೇಳಿದ್ದಾಳೆ. ಹೌದು ನನ್ನೊಂದಿಗಿರುವ ಫೋಟೋ ನಿನ್ನ ಗಂಡನಿಗೆ ತೋರಿಸುತ್ತೇನೆ ಎಂದು ಪ್ರಿಯಕರ ಅಲ್ತಾಫ್ ಸುಲೆಮಾನ್ ಬ್ಲ್ಯಾಕ್ಮೇಲ್ ಮಾಡಿದ್ದಾನೆ. ಮರ್ಯಾದೆಗೆ ಹೆದರಿ ಸುಹಾನಾ ಲೈವ್ ವಿಡಿಯೋ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಕಳೆದ ಏಪ್ರಿಲ್ 15ರಂದು ವಿವಾಹಿತೆ ಸುಹಾನಾ ಆತ್ಮಹತ್ಯೆಗೆ ಕಾರಣ ತಿಳಿಸಿ, ಮೊಬೈಲ್ ವಿಡಿಯೋ ಆನ್ ಮಾಡಿ ನೇಣಿಗೆ ಶರಣಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಉಪ್ಪಲದಿನ್ನಿ ಗ್ರಾಮದ ಅಲ್ತಾಫ್ ಸುಲೆಮಾನ್ 1 ವರ್ಷದ ಹಿಂದೆ ಸುಹಾನಾ ಜೊತೆ ಸಲುಗೆ ಬೆಳೆಸಿ ಪ್ರೀತಿಸುತ್ತಿದ್ದ. ಈ ವಿಷಯ ಸುಹಾನಾ ಪೋಷಕರಿಗೆ ಗೊತ್ತಾಗಿ ಹಿರಿಯರ ಸಮ್ಮುಖದಲ್ಲಿ ಅಲ್ತಾಫ್​ಗೆ ತಾಕೀತು ಮಾಡಿದ್ದರು. ಬಳಿಕ ಸುಹಾನಾ ಹೊಕ್ಕುಂಡಿ ಗ್ರಾಮದ ಷರೀಫ್ ಸೋನಾರ್ ಜೊತೆಗೆ ಇತ್ತೀಚೆಗೆ ಮದುವೆ ಮಾಡಿ ಕೊಟ್ಟಿದ್ದರು.

ಇದನ್ನೂ ಓದಿ:ಬೆಂಗಳೂರು: ಪತ್ನಿಯನ್ನ ಕೊಲೆ ಮಾಡಿದ್ದ ಪತಿಗೆ ಜೀವಾವಧಿ ಶಿಕ್ಷೆ, 2 ಸಾವಿರ ರೂ. ದಂಡ

ಮೂವರಿಂದ ಸುಹಾನಾಳಿಗೆ ಕಿರುಕುಳ

ಇನ್ನು ಗ್ರಾಮದ ಯುನೀಸ್ ಪಾರ್ಥನಳ್ಳಿ ಹಾಗೂ ದಸ್ತಗಿರಸಾಬ್ ಮುಳವಾಡ ಎಂಬುವವರ ಜೊತೆಗೆ ವಿವಾಹಿತೆ ತಂದೆ ಅಸ್ಲಂ ಮುಲ್ಲಾ ದ್ವೇಷ ಹೊಂದಿದ್ದ. ದಸ್ತಗಿರಸಾಬ್ ಮುಳವಾಡ ಮಗಳ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದಿದ್ದಕ್ಕೆ ಅಸ್ಲಂ ಮುಲ್ಲಾ ಕಾರಣವೆಂದು ಸಿಟ್ಟು ಮಾಡಿಕೊಂಡಿದ್ದರು. ಇದೇ ಕಾರಣಕ್ಕೆ ಮೂವರು ಸೇರಿ ಸುಹಾನಾ ಬೆನ್ನು ಹತ್ತಿ ಕಿರುಕುಳ ಕೊಡುತ್ತಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಗಂಡನನ್ನು ಬಿಟ್ಟು ಬಾ, ಇಲ್ಲವಾದರೆ ನನ್ನೊಂದಿಗಿರುವ ಫೋಟೋ ನಿನ್ನ ಗಂಡನಿಗೆ ತೋರಿಸುತ್ತೇನೆ ಎಂದು ಸುಹಾನಾಳಿಗೆ ಅಲ್ತಾಫ್ ಸುಲೆಮಾನ್ ಬ್ಲ್ಯಾಕ್ಮೇಲ್ ಮಾಡುತ್ತಿದ್ದ.

ಇದರಿಂದ ಬೆಸತ್ತಿದ್ದ ಸುಹಾನಾ, ಮೂವರ ಹೆಸರು ಹೇಳಿ ಆತ್ಮಹತ್ಯೆಗೆ ಶರಣಾಗಿದ್ದಳೆ. ಈ ಕುರಿತು ಸುಹಾನಾ ತಂದೆ ಅಸ್ಲಂ ಮುಲ್ಲಾ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಬಬಲೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಸಂಬಂಧ ಅಲ್ತಾಪ್ ಹಾಗೂ ಯುನೀಸ್​ನನ್ನ ಬಂಧಿಸಿ ತನಿಖೆ ಮುಂದುವರೆಸಿದ್ದಾರೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:34 am, Wed, 26 April 23

Follow Us
Kiran Hanumant Madar
Kiran Hanumant Madar

ಹುಟ್ಟೂರು- ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಿನಕಟ್ಟ, ಶಿರಸಿಯಲ್ಲಿ ಬಿ.ಎ ಪತ್ರಿಕೋಧ್ಯಮ ಮುಗಿಸಿ, ವಾರ್ತಾ ಇಲಾಖೆಯಲ್ಲಿ ಒಂದು ವರ್ಷದ ತರಭೇತಿ ಪಡೆದು, ಟಿವಿ9 ಡಿಜಿಟಲ್​ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ