AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಇತ್ತ ಹೆಂಡತಿಯನ್ನು ಕೊಂದಿದ್ದಕ್ಕೆ ಜೈಲು ಸೇರಿದ ಗಂಡ; ಅತ್ತ ಪ್ರೇಮಿಯೊಂದಿಗೆ ‘ಸತ್ತ ಮಹಿಳೆ’ಯ ರೊಮ್ಯಾನ್ಸ್!

ಬಿಹಾರದ ಮೋತಿಹಾರಿ ಜಿಲ್ಲೆಯಲ್ಲಿ ಸಾವನ್ನಪ್ಪಿದ ಮಹಿಳೆಯೊಬ್ಬಳು ಜಲಂಧರ್‌ನಲ್ಲಿ ತನ್ನ ಪ್ರೇಮಿಯೊಂದಿಗೆ ವಾಸಿಸುತ್ತಿರುವುದು ಬಯಲಾಗಿದೆ. ಅಷ್ಟಕ್ಕೂ ಆಗಿದ್ದೇನು? ಇಲ್ಲಿದೆ ಮಾಹಿತಿ.

Viral News: ಇತ್ತ ಹೆಂಡತಿಯನ್ನು ಕೊಂದಿದ್ದಕ್ಕೆ ಜೈಲು ಸೇರಿದ ಗಂಡ; ಅತ್ತ ಪ್ರೇಮಿಯೊಂದಿಗೆ 'ಸತ್ತ ಮಹಿಳೆ'ಯ ರೊಮ್ಯಾನ್ಸ್!
ಗಂಡನನ್ನು ಜೈಲಿಗೆ ಕಳಿಸಿ, ಪ್ರೇಮಿಯೊಂದಿಗೆ ವಾಸವಾಗಿದ್ದ ಮಹಿಳೆ
TV9 Web
| Edited By: |

Updated on: May 03, 2022 | 5:07 PM

Share

ಕೆಲವೊಮ್ಮೆ ತಪ್ಪು ಮಾಡದಿದ್ದರೂ ಶಿಕ್ಷೆ ಅನುಭವಿಸಬೇಕಾಗುತ್ತದೆ. ಇನ್ನು ಕೆಲವೊಮ್ಮೆ ತಪ್ಪು ಮಾಡಿದವರು ಆರಾಮಾಗಿ ರಾಜಾರೋಷವಾಗಿ ಓಡಾಡಿಕೊಂಡಿರುತ್ತಾರೆ. ಆತ ತನ್ನ ಹೆಂಡತಿಯನ್ನು ಕೊಲೆ (Murder) ಮಾಡಿದ ಆರೋಪದಲ್ಲಿ ಜೈಲು ಸೇರಿದ್ದ. ಆದರೆ, ಸಮಾಜದ ದೃಷ್ಟಿಯಲ್ಲಿ ಕೊಲೆಯಾಗಿದ್ದ ಆತನ ಹೆಂಡತಿ ತನ್ನ ಪ್ರೇಮಿಯ ಜೊತೆ ಆರಾಮಾಗಿ ದಿನಗಳನ್ನು ಕಳೆಯುತ್ತಿದ್ದಳು. ತಾನು ಮಾಡದ ತಪ್ಪಿಗೆ ಕಂಬಿ ಎಣಿಸುತ್ತಿದ್ದ ವ್ಯಕ್ತಿ ಅಮಾಯಕ ಎಂಬುದು ಬಯಲಾಗಿದ್ದು ಹೇಗೆ? ಸತ್ತುಹೋಗಿದ್ದಾಳೆ ಎಂದುಕೊಂಡಿದ್ದ ಮಹಿಳೆ ಬದುಕಿರುವ ಸತ್ಯ ಹೊರಬಿದ್ದಿದ್ದು ಹೇಗೆ? ಇಲ್ಲಿದೆ ಪೂರ್ತಿ ಮಾಹಿತಿ.

ಬಿಹಾರದ ಮೋತಿಹಾರಿ ಜಿಲ್ಲೆಯಲ್ಲಿ ಸಾವನ್ನಪ್ಪಿದ ಮಹಿಳೆಯೊಬ್ಬಳು ಜಲಂಧರ್‌ನಲ್ಲಿ ತನ್ನ ಪ್ರೇಮಿಯೊಂದಿಗೆ ವಾಸಿಸುತ್ತಿರುವುದು ಬಯಲಾಗಿದೆ. ಇನ್ನೂ ಆಘಾತಕಾರಿ ಸಂಗತಿಯೆಂದರೆ, ಆಕೆಯ ಪತಿ ತನ್ನ ಹೆಂಡತಿಯನ್ನು ‘ಕೊಲೆ’ ಮಾಡಿದ ಆರೋಪಕ್ಕಾಗಿ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದ. ಆದರೆ, ಆತನ ಹೆಂಡತಿ ಬದುಕಿಯೇ ಇದ್ದಾಳೆ ಎಂಬ ವಿಷಯ ತಡವಾಗಿ ಪೊಲೀಸರಿಗೆ ಗೊತ್ತಾಗಿದೆ. (Source)

ಶಾಂತಿ ದೇವಿ ಎಂಬ ಮಹಿಳೆ 2016ರ ಜೂನ್ 14ರಂದು ಲಕ್ಷ್ಮಿಪುರದ ನಿವಾಸಿ ದಿನೇಶ್ ರಾಮ್ ಅವರನ್ನು ವಿವಾಹವಾಗಿದ್ದಳು. ಮದುವೆಯಾದ 1 ವರ್ಷಗಳ ನಂತರ ಶಾಂತಿ ಏಪ್ರಿಲ್ 19ರಂದು ತನ್ನ ಗಂಡನ ಮನೆಯಿಂದ ಓಡಿಹೋಗಿ ಪಂಜಾಬ್‌ನಲ್ಲಿ ತನ್ನ ಪ್ರೇಮಿಯೊಂದಿಗೆ ವಾಸವಾಗಿದ್ದಳು. ಆ ಮಹಿಳೆ ನಾಪತ್ತೆಯಾದ ನಂತರ ಆಕೆಯ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದು, ತಮ್ಮ ಮಗಳ ಪತಿ ವರದಕ್ಷಿಣೆ ಕಿರುಕುಳ ನೀಡಿ, ಆಕೆಯನ್ನು ಕೊಲೆ ಮಾಡಿದ್ದಾನೆ ಎಂದು ಆರೋಪಿಸಿದ್ದರು. ಸಂತ್ರಸ್ತೆಯ ಸಂಬಂಧಿಕರ ದೂರಿನ ಮೇರೆಗೆ ಪೊಲೀಸರು ದಿನೇಶ್ ನನ್ನು ಬಂಧಿಸಿ ಕೊಲೆ ಆರೋಪದ ಮೇಲೆ ಜೈಲಿಗೆ ಕಳುಹಿಸಿದ್ದರು.

ಶಾಂತಿ ಅವರ ತಂದೆ ಯೋಗೇಂದ್ರ ಯಾದವ್ ಪೊಲೀಸರಿಗೆ ಹೇಳಿಕೆ ನೀಡಿದ್ದು, ನನ್ನ ಮಗಳು ದಿನೇಶ್ ರಾಮ್ ಅವರನ್ನು 2016ರಲ್ಲಿ ವಿವಾಹವಾದ್ದರು. ಆದರೆ, ಏಪ್ರಿಲ್ 19ರಂದು ಅವಳು ನಾಪತ್ತೆಯಾಗಿರುವ ಬಗ್ಗೆ ನನಗೆ ಮಾಹಿತಿ ಬಂದಿತು. ನಾನು ಅವಳ ಅತ್ತೆಯ ಮನೆಗೆ ಹೋಗಿ ಪರಿಶೀಲಿಸಿದರೂ ಪ್ರಯೋಜನವಾಗಲಿಲ್ಲ. ಒಂದು ವರ್ಷ ನನ್ನ ಮಗಳನ್ನು ವರದಕ್ಷಿಣೆಗಾಗಿ ಪೀಡಿಸುತ್ತಿದ್ದರು. ಆಕೆಯ ಅತ್ತೆ, ಗಂಡ ಮೋಟಾರ್ ಬೈಕ್ ಮತ್ತು 50,000 ರೂ. ಕೊಡಬೇಕೆಂದು ಬೇಡಿಕೆ ಇಟ್ಟಿದ್ದರು ಎಂದು ಮಹಿಳೆಯ ತಂದೆ ದೂರು ನೀಡಿದ್ದರು.

ಈ ದೂರಿನ ಆಧಾರದಲ್ಲಿ ದಿನೇಶ್ ವಿರುದ್ಧ ಎಫ್ಐಆರ್ ದಾಖಲಿಸಿ, ಅವರನ್ನು ಬಂಧಿಸಲಾಯಿತು. ಆದರೂ ಶಾಂತಿಯ ಮೃತದೇಹ ಪತ್ತೆಯಾಗದ ಹಿನ್ನೆಲೆಯಲ್ಲಿ ಪೊಲೀಸರು ಈ ಪ್ರಕರಣದ ತನಿಖೆ ಮುಂದುವರೆಸಿದ್ದರು. ಕೊನೆಗೆ ಶಾಂತಿಯ ಮೊಬೈಲ್ ಫೋನ್ ಸ್ಥಳವನ್ನು ಪತ್ತೆಹಚ್ಚಲು ತಾಂತ್ರಿಕ ತಂಡವನ್ನು ಕೇಳಿದಾಗ ಈ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿತು. ತಾಂತ್ರಿಕ ತಂಡದ ಸಹಾಯದಿಂದ ಸಾವನ್ನಪ್ಪಿದ್ದಾಳೆ ಎಂದು ಘೋಷಿಸಲಾಗಿದ್ದ ಮಹಿಳೆ ಪಂಜಾಬ್‌ನ ಜಲಂಧರ್ ಜಿಲ್ಲೆಯಲ್ಲಿ ತನ್ನ ಪ್ರೇಮಿಯೊಂದಿಗೆ ವಾಸಿಸುತ್ತಿದ್ದಳು ಎಂದು ಪೊಲೀಸರು ಪತ್ತೆಹಚ್ಚಿದರು.

ಇನ್ನಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್