AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಮದುವೆಯಾದ ಮರುದಿನವೇ ಗರ್ಲ್​ಫ್ರೆಂಡ್ ಜೊತೆ ವಧು ಪರಾರಿ; ಶಾಕ್ ಆದ ಗಂಡನಿಗೆ ಹೃದಯಾಘಾತ!

Wedding Story: ವಿಚಿತ್ರವೆಂದರೆ ಇನ್ನೊಬ್ಬ ಮಹಿಳೆ ಕೂಡ ಕೆಲವೇ ದಿನಗಳ ಹಿಂದಷ್ಟೆ ಮದುವೆಯಾಗಿದ್ದಳು. ಇಬ್ಬರೂ ನವವಿವಾಹಿತೆಯರು ಮದುವೆಗೆ ತಮಗೆ ಹಾಕಿದ್ದ ಚಿನ್ನಾಭರಣಗಳೊಂದಿಗೆ ಮನೆಯಿಂದ ಪರಾರಿಯಾಗಿದ್ದರು.

Viral News: ಮದುವೆಯಾದ ಮರುದಿನವೇ ಗರ್ಲ್​ಫ್ರೆಂಡ್ ಜೊತೆ ವಧು ಪರಾರಿ; ಶಾಕ್ ಆದ ಗಂಡನಿಗೆ ಹೃದಯಾಘಾತ!
ಮದುವೆ (ಸಾಂದರ್ಭಿಕ ಚಿತ್ರ)
TV9 Web
| Edited By: |

Updated on: Nov 03, 2021 | 8:59 PM

Share

ತ್ರಿಶೂರ್: ಬೇರೆ ಯಾರನ್ನೋ ಮದುವೆಯಾಗಿ ಆತನೊಂದಿಗೆ ಬಾಳಲು ಇಷ್ಟವಿಲ್ಲದೆ ಮಹಿಳೆ ಮನೆ ಬಿಟ್ಟು ಓಡಿಹೋದ ಹಲವು ಉದಾಹರಣೆಗಳಿವೆ. ಮದುವೆ ಫಿಕ್ಸ್ ಆದಮೇಲೂ ಮಂಟಪದಿಂದಲೇ ಮದುಮಗಳು ಓಡಿಹೋದ ಘಟನೆಗಳೂ ನಡೆದಿವೆ. ಆದರೆ, ಮದುವೆಯಾದ ಮರುದಿನವೇ ಮಹಿಳೆಯೊಬ್ಬರು ತನ್ನ ಗರ್ಲ್​ಫ್ರೆಂಡ್ ಜೊತೆ ಪರಾರಿಯಾಗಿದ್ದನ್ನು ಎಲ್ಲಾದರೂ ಕೇಳಿದ್ದೀರಾ?

ಇಂತಹ ವಿಚಿತ್ರವಾದ ಘಟನೆಯೊಂದು ಕೇರಳದಲ್ಲಿ ನಡೆದಿದೆ. ಕೇರಳದ ತ್ರಿಶೂರ್​ನ ಮಹಿಳೆಯೊಬ್ಬರು ತಾನು ಮದುವೆಯಾದ ಮರುದಿನವೇ ಗಂಡನ ಮನೆಯಿಂದ ನಾಪತ್ತೆಯಾಗಿದ್ದಾರೆ. ಹೆಂಡತಿ ಕಾಣದ ಕಾರಣ ಆಕೆಯ ಗಂಡನಿಗೆ ಹೃದಯಾಘಾತ ಉಂಟಾಗಿ, ಆಸ್ಪತ್ರೆಗೆ ದಾಖಲಿಸಲಾಗಿದೆ. ತ್ರಿಶೂರ್​ನ ಪಝುವಿಲ್​ನ 23 ವರ್ಷದ ಮಹಿಳೆ ಹೀಗೆ ತನ್ನ ಗೆಳತಿಯೊಂದಿಗೆ ಪರಾರಿಯಾದಾಕೆ.

ಹೆಂಡತಿ ಪರಾರಿಯಾಗಿರುವ ಬಗ್ಗೆ ಆಕೆಯ ಗಂಡ ಪೊಲೀಸರಿಗೆ ದೂರು ನೀಡಿದ್ದಾರೆ. ಆರು ದಿನ ತನಿಖೆ ಮಾಡಿದ ಪೊಲೀಸರಿಗೆ ಆಕೆ ತನ್ನ ಗೆಳತಿಯೊಂದಿಗೆ ಓಡಿ ಹೋದ ಘಟನೆ ಬೆಳಕಿಗೆ ಬಂದಿದೆ. ಆ ಮಹಿಳೆಯನ್ನು ಹುಡುಕಿ ಗಂಡನ ಮನೆಗೆ ಸೇರಿಸಲಾಗಿದ್ದು, ಆಕೆ ತನ್ನ ಮದುವೆಗೆ ಮೊದಲೇ ತನ್ನ ಗೆಳತಿಯೊಂದಿಗೆ ಓಡಿಹೋಗಲು ಬಯಸಿದ್ದಳು. ಆದರೆ, ಮನೆಯಲ್ಲಿ ತನ್ನ ಮದುವೆಗೆಂದು ಇಟ್ಟಿದ್ದ ಚಿನ್ನಾಭರಣಗಳನ್ನು ತೆಗೆದುಕೊಂಡು ಓಡಿಹೋಗಲು ನಿರ್ಧರಿಸಿದ್ದ ಆಕೆ ಅದಕ್ಕಾಗಿಯೇ ಮದುವೆಯಾಗಿದ್ದಳು ಎನ್ನಲಾಗಿದೆ.

ಆಕೆಯ ಪತಿ ಚವಕ್ಕಾಡ್ ನ ಮೂಲದವರಾಗಿದ್ದು, ಪೊಲೀಸ್ ಠಾಣೆಯಲ್ಲಿ ಅ. 25ರಂದು ತನ್ನ ಹೆಂಡತಿ ನಾಪತ್ತೆಯಾಗಿರುವ ದೂರು ದಾಖಲಿಸಿದ್ದರು. ಮದುವೆಯಾದ ಮಾರನೇ ದಿನ ಬ್ಯಾಂಕ್​ಗೆ ಹೋಗಿದ್ದ ಆಕೆ ಗಂಡನ ಮೊಬೈಲ್ ತೆಗೆದುಕೊಂಡು ನನ್ನ ಗೆಳತಿಯನ್ನು ಭೇಟಿ ಮಾಡಿ ವಾಪಾಸ್ ಬರುತ್ತೇನೆ ಎಂದು ಹೇಳಿ ಹೋಗಿದ್ದಳು. ಆದರೆ, ಬೈಕ್​ನಲ್ಲಿ ಹೋದ ಆಕೆ ಮತ್ತೆ ವಾಪಾಸ್ ಬರಲೇ ಇಲ್ಲ ಎಂದು ಪತಿ ದೂರಿನಲ್ಲಿ ತಿಳಿಸಿದ್ದರು.

ತ್ರಿಶೂರ್​ನಿಂದ ತನ್ನ ಗೆಳತಿಯೊಂದಿಗೆ ಪರಾರಿಯಾಗುವುದಕ್ಕೆ ಆ ಮಹಿಳೆ ಚೆನ್ನೈಗೆ ರೈಲು ಟಿಕೆಟ್ ಬುಕ್ ಮಾಡಿದ್ದರು. ಆದರೆ, ಸಿಕ್ಕಿ ಬೀಳುತ್ತೇವೆಂಬ ಭಯದಿಂದ ಅವರಿಬ್ಬರೂ ಬಸ್ ಮೂಲಕ ಕೊಟ್ಟಾಯಂಗೆ ಹೋಗಿ ಅಲ್ಲಿಂದ ಚೆನ್ನೈಗೆ ರೈಲಿನಲ್ಲಿ ಹೋಗಿದ್ದರು. ಅಲ್ಲಿಂದ ಹೋಟೆಲ್​ನಲ್ಲಿ ರೂಂ ಬುಕ್ ಮಾಡಿಕೊಂಡು ಇದ್ದರು. ಅಂದಹಾಗೆ, ವಿಚಿತ್ರವೆಂದರೆ ಇನ್ನೊಬ್ಬ ಮಹಿಳೆ ಕೂಡ ಕೆಲವೇ ದಿನಗಳ ಹಿಂದಷ್ಟೆ ಮದುವೆಯಾಗಿದ್ದಳು. ಇಬ್ಬರೂ ನವವಿವಾಹಿತೆಯರು ಮದುವೆಗೆ ತಮಗೆ ಹಾಕಿದ್ದ ಚಿನ್ನಾಭರಣಗಳೊಂದಿಗೆ ಮನೆಯಿಂದ ಪರಾರಿಯಾಗಿದ್ದರು. ಅವರನ್ನು ಮಧುರೈನಲ್ಲಿ ಪತ್ತೆಹಚ್ಚಲಾಗಿದೆ.

ಇದನ್ನೂ ಓದಿ: Shocking Video: ಪಟಾಕಿಗೆ ಬೆಂಕಿ ಹೊತ್ತಿಸಿ ಪೆಟ್ರೋಲ್ ಬಂಕ್​ ಮೇಲೆ ಎಸೆದ ಯುವಕರು; ಆಮೇಲೇನಾಯ್ತು?

Viral Photo: ಡಿಐಜಿಯಾಗಿರುವ ಅಪ್ಪನಿಗೆ ಸಲ್ಯೂಟ್ ಮಾಡಿದ ಪೊಲೀಸ್ ಅಧಿಕಾರಿ ಮಗಳು; ಹೆಮ್ಮೆಯ ಕ್ಷಣದ ಫೋಟೋ ವೈರಲ್

Follow Us
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ