AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಮದುವೆಯಾದ ಮರುದಿನವೇ ಗರ್ಲ್​ಫ್ರೆಂಡ್ ಜೊತೆ ವಧು ಪರಾರಿ; ಶಾಕ್ ಆದ ಗಂಡನಿಗೆ ಹೃದಯಾಘಾತ!

Wedding Story: ವಿಚಿತ್ರವೆಂದರೆ ಇನ್ನೊಬ್ಬ ಮಹಿಳೆ ಕೂಡ ಕೆಲವೇ ದಿನಗಳ ಹಿಂದಷ್ಟೆ ಮದುವೆಯಾಗಿದ್ದಳು. ಇಬ್ಬರೂ ನವವಿವಾಹಿತೆಯರು ಮದುವೆಗೆ ತಮಗೆ ಹಾಕಿದ್ದ ಚಿನ್ನಾಭರಣಗಳೊಂದಿಗೆ ಮನೆಯಿಂದ ಪರಾರಿಯಾಗಿದ್ದರು.

Viral News: ಮದುವೆಯಾದ ಮರುದಿನವೇ ಗರ್ಲ್​ಫ್ರೆಂಡ್ ಜೊತೆ ವಧು ಪರಾರಿ; ಶಾಕ್ ಆದ ಗಂಡನಿಗೆ ಹೃದಯಾಘಾತ!
ಮದುವೆ (ಸಾಂದರ್ಭಿಕ ಚಿತ್ರ)
TV9 Web
| Edited By: |

Updated on: Nov 03, 2021 | 8:59 PM

Share

ತ್ರಿಶೂರ್: ಬೇರೆ ಯಾರನ್ನೋ ಮದುವೆಯಾಗಿ ಆತನೊಂದಿಗೆ ಬಾಳಲು ಇಷ್ಟವಿಲ್ಲದೆ ಮಹಿಳೆ ಮನೆ ಬಿಟ್ಟು ಓಡಿಹೋದ ಹಲವು ಉದಾಹರಣೆಗಳಿವೆ. ಮದುವೆ ಫಿಕ್ಸ್ ಆದಮೇಲೂ ಮಂಟಪದಿಂದಲೇ ಮದುಮಗಳು ಓಡಿಹೋದ ಘಟನೆಗಳೂ ನಡೆದಿವೆ. ಆದರೆ, ಮದುವೆಯಾದ ಮರುದಿನವೇ ಮಹಿಳೆಯೊಬ್ಬರು ತನ್ನ ಗರ್ಲ್​ಫ್ರೆಂಡ್ ಜೊತೆ ಪರಾರಿಯಾಗಿದ್ದನ್ನು ಎಲ್ಲಾದರೂ ಕೇಳಿದ್ದೀರಾ?

ಇಂತಹ ವಿಚಿತ್ರವಾದ ಘಟನೆಯೊಂದು ಕೇರಳದಲ್ಲಿ ನಡೆದಿದೆ. ಕೇರಳದ ತ್ರಿಶೂರ್​ನ ಮಹಿಳೆಯೊಬ್ಬರು ತಾನು ಮದುವೆಯಾದ ಮರುದಿನವೇ ಗಂಡನ ಮನೆಯಿಂದ ನಾಪತ್ತೆಯಾಗಿದ್ದಾರೆ. ಹೆಂಡತಿ ಕಾಣದ ಕಾರಣ ಆಕೆಯ ಗಂಡನಿಗೆ ಹೃದಯಾಘಾತ ಉಂಟಾಗಿ, ಆಸ್ಪತ್ರೆಗೆ ದಾಖಲಿಸಲಾಗಿದೆ. ತ್ರಿಶೂರ್​ನ ಪಝುವಿಲ್​ನ 23 ವರ್ಷದ ಮಹಿಳೆ ಹೀಗೆ ತನ್ನ ಗೆಳತಿಯೊಂದಿಗೆ ಪರಾರಿಯಾದಾಕೆ.

ಹೆಂಡತಿ ಪರಾರಿಯಾಗಿರುವ ಬಗ್ಗೆ ಆಕೆಯ ಗಂಡ ಪೊಲೀಸರಿಗೆ ದೂರು ನೀಡಿದ್ದಾರೆ. ಆರು ದಿನ ತನಿಖೆ ಮಾಡಿದ ಪೊಲೀಸರಿಗೆ ಆಕೆ ತನ್ನ ಗೆಳತಿಯೊಂದಿಗೆ ಓಡಿ ಹೋದ ಘಟನೆ ಬೆಳಕಿಗೆ ಬಂದಿದೆ. ಆ ಮಹಿಳೆಯನ್ನು ಹುಡುಕಿ ಗಂಡನ ಮನೆಗೆ ಸೇರಿಸಲಾಗಿದ್ದು, ಆಕೆ ತನ್ನ ಮದುವೆಗೆ ಮೊದಲೇ ತನ್ನ ಗೆಳತಿಯೊಂದಿಗೆ ಓಡಿಹೋಗಲು ಬಯಸಿದ್ದಳು. ಆದರೆ, ಮನೆಯಲ್ಲಿ ತನ್ನ ಮದುವೆಗೆಂದು ಇಟ್ಟಿದ್ದ ಚಿನ್ನಾಭರಣಗಳನ್ನು ತೆಗೆದುಕೊಂಡು ಓಡಿಹೋಗಲು ನಿರ್ಧರಿಸಿದ್ದ ಆಕೆ ಅದಕ್ಕಾಗಿಯೇ ಮದುವೆಯಾಗಿದ್ದಳು ಎನ್ನಲಾಗಿದೆ.

ಆಕೆಯ ಪತಿ ಚವಕ್ಕಾಡ್ ನ ಮೂಲದವರಾಗಿದ್ದು, ಪೊಲೀಸ್ ಠಾಣೆಯಲ್ಲಿ ಅ. 25ರಂದು ತನ್ನ ಹೆಂಡತಿ ನಾಪತ್ತೆಯಾಗಿರುವ ದೂರು ದಾಖಲಿಸಿದ್ದರು. ಮದುವೆಯಾದ ಮಾರನೇ ದಿನ ಬ್ಯಾಂಕ್​ಗೆ ಹೋಗಿದ್ದ ಆಕೆ ಗಂಡನ ಮೊಬೈಲ್ ತೆಗೆದುಕೊಂಡು ನನ್ನ ಗೆಳತಿಯನ್ನು ಭೇಟಿ ಮಾಡಿ ವಾಪಾಸ್ ಬರುತ್ತೇನೆ ಎಂದು ಹೇಳಿ ಹೋಗಿದ್ದಳು. ಆದರೆ, ಬೈಕ್​ನಲ್ಲಿ ಹೋದ ಆಕೆ ಮತ್ತೆ ವಾಪಾಸ್ ಬರಲೇ ಇಲ್ಲ ಎಂದು ಪತಿ ದೂರಿನಲ್ಲಿ ತಿಳಿಸಿದ್ದರು.

ತ್ರಿಶೂರ್​ನಿಂದ ತನ್ನ ಗೆಳತಿಯೊಂದಿಗೆ ಪರಾರಿಯಾಗುವುದಕ್ಕೆ ಆ ಮಹಿಳೆ ಚೆನ್ನೈಗೆ ರೈಲು ಟಿಕೆಟ್ ಬುಕ್ ಮಾಡಿದ್ದರು. ಆದರೆ, ಸಿಕ್ಕಿ ಬೀಳುತ್ತೇವೆಂಬ ಭಯದಿಂದ ಅವರಿಬ್ಬರೂ ಬಸ್ ಮೂಲಕ ಕೊಟ್ಟಾಯಂಗೆ ಹೋಗಿ ಅಲ್ಲಿಂದ ಚೆನ್ನೈಗೆ ರೈಲಿನಲ್ಲಿ ಹೋಗಿದ್ದರು. ಅಲ್ಲಿಂದ ಹೋಟೆಲ್​ನಲ್ಲಿ ರೂಂ ಬುಕ್ ಮಾಡಿಕೊಂಡು ಇದ್ದರು. ಅಂದಹಾಗೆ, ವಿಚಿತ್ರವೆಂದರೆ ಇನ್ನೊಬ್ಬ ಮಹಿಳೆ ಕೂಡ ಕೆಲವೇ ದಿನಗಳ ಹಿಂದಷ್ಟೆ ಮದುವೆಯಾಗಿದ್ದಳು. ಇಬ್ಬರೂ ನವವಿವಾಹಿತೆಯರು ಮದುವೆಗೆ ತಮಗೆ ಹಾಕಿದ್ದ ಚಿನ್ನಾಭರಣಗಳೊಂದಿಗೆ ಮನೆಯಿಂದ ಪರಾರಿಯಾಗಿದ್ದರು. ಅವರನ್ನು ಮಧುರೈನಲ್ಲಿ ಪತ್ತೆಹಚ್ಚಲಾಗಿದೆ.

ಇದನ್ನೂ ಓದಿ: Shocking Video: ಪಟಾಕಿಗೆ ಬೆಂಕಿ ಹೊತ್ತಿಸಿ ಪೆಟ್ರೋಲ್ ಬಂಕ್​ ಮೇಲೆ ಎಸೆದ ಯುವಕರು; ಆಮೇಲೇನಾಯ್ತು?

Viral Photo: ಡಿಐಜಿಯಾಗಿರುವ ಅಪ್ಪನಿಗೆ ಸಲ್ಯೂಟ್ ಮಾಡಿದ ಪೊಲೀಸ್ ಅಧಿಕಾರಿ ಮಗಳು; ಹೆಮ್ಮೆಯ ಕ್ಷಣದ ಫೋಟೋ ವೈರಲ್

Follow Us
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ