AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಮದುವೆಯಾದ ಮರುದಿನವೇ ಗರ್ಲ್​ಫ್ರೆಂಡ್ ಜೊತೆ ವಧು ಪರಾರಿ; ಶಾಕ್ ಆದ ಗಂಡನಿಗೆ ಹೃದಯಾಘಾತ!

Wedding Story: ವಿಚಿತ್ರವೆಂದರೆ ಇನ್ನೊಬ್ಬ ಮಹಿಳೆ ಕೂಡ ಕೆಲವೇ ದಿನಗಳ ಹಿಂದಷ್ಟೆ ಮದುವೆಯಾಗಿದ್ದಳು. ಇಬ್ಬರೂ ನವವಿವಾಹಿತೆಯರು ಮದುವೆಗೆ ತಮಗೆ ಹಾಕಿದ್ದ ಚಿನ್ನಾಭರಣಗಳೊಂದಿಗೆ ಮನೆಯಿಂದ ಪರಾರಿಯಾಗಿದ್ದರು.

Viral News: ಮದುವೆಯಾದ ಮರುದಿನವೇ ಗರ್ಲ್​ಫ್ರೆಂಡ್ ಜೊತೆ ವಧು ಪರಾರಿ; ಶಾಕ್ ಆದ ಗಂಡನಿಗೆ ಹೃದಯಾಘಾತ!
ಮದುವೆ (ಸಾಂದರ್ಭಿಕ ಚಿತ್ರ)
TV9 Web
| Edited By: |

Updated on: Nov 03, 2021 | 8:59 PM

Share

ತ್ರಿಶೂರ್: ಬೇರೆ ಯಾರನ್ನೋ ಮದುವೆಯಾಗಿ ಆತನೊಂದಿಗೆ ಬಾಳಲು ಇಷ್ಟವಿಲ್ಲದೆ ಮಹಿಳೆ ಮನೆ ಬಿಟ್ಟು ಓಡಿಹೋದ ಹಲವು ಉದಾಹರಣೆಗಳಿವೆ. ಮದುವೆ ಫಿಕ್ಸ್ ಆದಮೇಲೂ ಮಂಟಪದಿಂದಲೇ ಮದುಮಗಳು ಓಡಿಹೋದ ಘಟನೆಗಳೂ ನಡೆದಿವೆ. ಆದರೆ, ಮದುವೆಯಾದ ಮರುದಿನವೇ ಮಹಿಳೆಯೊಬ್ಬರು ತನ್ನ ಗರ್ಲ್​ಫ್ರೆಂಡ್ ಜೊತೆ ಪರಾರಿಯಾಗಿದ್ದನ್ನು ಎಲ್ಲಾದರೂ ಕೇಳಿದ್ದೀರಾ?

ಇಂತಹ ವಿಚಿತ್ರವಾದ ಘಟನೆಯೊಂದು ಕೇರಳದಲ್ಲಿ ನಡೆದಿದೆ. ಕೇರಳದ ತ್ರಿಶೂರ್​ನ ಮಹಿಳೆಯೊಬ್ಬರು ತಾನು ಮದುವೆಯಾದ ಮರುದಿನವೇ ಗಂಡನ ಮನೆಯಿಂದ ನಾಪತ್ತೆಯಾಗಿದ್ದಾರೆ. ಹೆಂಡತಿ ಕಾಣದ ಕಾರಣ ಆಕೆಯ ಗಂಡನಿಗೆ ಹೃದಯಾಘಾತ ಉಂಟಾಗಿ, ಆಸ್ಪತ್ರೆಗೆ ದಾಖಲಿಸಲಾಗಿದೆ. ತ್ರಿಶೂರ್​ನ ಪಝುವಿಲ್​ನ 23 ವರ್ಷದ ಮಹಿಳೆ ಹೀಗೆ ತನ್ನ ಗೆಳತಿಯೊಂದಿಗೆ ಪರಾರಿಯಾದಾಕೆ.

ಹೆಂಡತಿ ಪರಾರಿಯಾಗಿರುವ ಬಗ್ಗೆ ಆಕೆಯ ಗಂಡ ಪೊಲೀಸರಿಗೆ ದೂರು ನೀಡಿದ್ದಾರೆ. ಆರು ದಿನ ತನಿಖೆ ಮಾಡಿದ ಪೊಲೀಸರಿಗೆ ಆಕೆ ತನ್ನ ಗೆಳತಿಯೊಂದಿಗೆ ಓಡಿ ಹೋದ ಘಟನೆ ಬೆಳಕಿಗೆ ಬಂದಿದೆ. ಆ ಮಹಿಳೆಯನ್ನು ಹುಡುಕಿ ಗಂಡನ ಮನೆಗೆ ಸೇರಿಸಲಾಗಿದ್ದು, ಆಕೆ ತನ್ನ ಮದುವೆಗೆ ಮೊದಲೇ ತನ್ನ ಗೆಳತಿಯೊಂದಿಗೆ ಓಡಿಹೋಗಲು ಬಯಸಿದ್ದಳು. ಆದರೆ, ಮನೆಯಲ್ಲಿ ತನ್ನ ಮದುವೆಗೆಂದು ಇಟ್ಟಿದ್ದ ಚಿನ್ನಾಭರಣಗಳನ್ನು ತೆಗೆದುಕೊಂಡು ಓಡಿಹೋಗಲು ನಿರ್ಧರಿಸಿದ್ದ ಆಕೆ ಅದಕ್ಕಾಗಿಯೇ ಮದುವೆಯಾಗಿದ್ದಳು ಎನ್ನಲಾಗಿದೆ.

ಆಕೆಯ ಪತಿ ಚವಕ್ಕಾಡ್ ನ ಮೂಲದವರಾಗಿದ್ದು, ಪೊಲೀಸ್ ಠಾಣೆಯಲ್ಲಿ ಅ. 25ರಂದು ತನ್ನ ಹೆಂಡತಿ ನಾಪತ್ತೆಯಾಗಿರುವ ದೂರು ದಾಖಲಿಸಿದ್ದರು. ಮದುವೆಯಾದ ಮಾರನೇ ದಿನ ಬ್ಯಾಂಕ್​ಗೆ ಹೋಗಿದ್ದ ಆಕೆ ಗಂಡನ ಮೊಬೈಲ್ ತೆಗೆದುಕೊಂಡು ನನ್ನ ಗೆಳತಿಯನ್ನು ಭೇಟಿ ಮಾಡಿ ವಾಪಾಸ್ ಬರುತ್ತೇನೆ ಎಂದು ಹೇಳಿ ಹೋಗಿದ್ದಳು. ಆದರೆ, ಬೈಕ್​ನಲ್ಲಿ ಹೋದ ಆಕೆ ಮತ್ತೆ ವಾಪಾಸ್ ಬರಲೇ ಇಲ್ಲ ಎಂದು ಪತಿ ದೂರಿನಲ್ಲಿ ತಿಳಿಸಿದ್ದರು.

ತ್ರಿಶೂರ್​ನಿಂದ ತನ್ನ ಗೆಳತಿಯೊಂದಿಗೆ ಪರಾರಿಯಾಗುವುದಕ್ಕೆ ಆ ಮಹಿಳೆ ಚೆನ್ನೈಗೆ ರೈಲು ಟಿಕೆಟ್ ಬುಕ್ ಮಾಡಿದ್ದರು. ಆದರೆ, ಸಿಕ್ಕಿ ಬೀಳುತ್ತೇವೆಂಬ ಭಯದಿಂದ ಅವರಿಬ್ಬರೂ ಬಸ್ ಮೂಲಕ ಕೊಟ್ಟಾಯಂಗೆ ಹೋಗಿ ಅಲ್ಲಿಂದ ಚೆನ್ನೈಗೆ ರೈಲಿನಲ್ಲಿ ಹೋಗಿದ್ದರು. ಅಲ್ಲಿಂದ ಹೋಟೆಲ್​ನಲ್ಲಿ ರೂಂ ಬುಕ್ ಮಾಡಿಕೊಂಡು ಇದ್ದರು. ಅಂದಹಾಗೆ, ವಿಚಿತ್ರವೆಂದರೆ ಇನ್ನೊಬ್ಬ ಮಹಿಳೆ ಕೂಡ ಕೆಲವೇ ದಿನಗಳ ಹಿಂದಷ್ಟೆ ಮದುವೆಯಾಗಿದ್ದಳು. ಇಬ್ಬರೂ ನವವಿವಾಹಿತೆಯರು ಮದುವೆಗೆ ತಮಗೆ ಹಾಕಿದ್ದ ಚಿನ್ನಾಭರಣಗಳೊಂದಿಗೆ ಮನೆಯಿಂದ ಪರಾರಿಯಾಗಿದ್ದರು. ಅವರನ್ನು ಮಧುರೈನಲ್ಲಿ ಪತ್ತೆಹಚ್ಚಲಾಗಿದೆ.

ಇದನ್ನೂ ಓದಿ: Shocking Video: ಪಟಾಕಿಗೆ ಬೆಂಕಿ ಹೊತ್ತಿಸಿ ಪೆಟ್ರೋಲ್ ಬಂಕ್​ ಮೇಲೆ ಎಸೆದ ಯುವಕರು; ಆಮೇಲೇನಾಯ್ತು?

Viral Photo: ಡಿಐಜಿಯಾಗಿರುವ ಅಪ್ಪನಿಗೆ ಸಲ್ಯೂಟ್ ಮಾಡಿದ ಪೊಲೀಸ್ ಅಧಿಕಾರಿ ಮಗಳು; ಹೆಮ್ಮೆಯ ಕ್ಷಣದ ಫೋಟೋ ವೈರಲ್

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ