AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ವಧು-ವರರ ಜೊತೆ ಫೋಟೋ ತೆಗೆಸಿಕೊಳ್ಳಲು ಹೋಗಿ ಮದುವೆ ಮಂಟಪದಿಂದ ಹಣ, ಒಡವೆ ಕದ್ದ ಕಳ್ಳ!

Crime News: ಕ್ಯಾಮೆರಾದಲ್ಲಿ ಸೆರೆಯಾದ ಆಘಾತಕಾರಿ ಘಟನೆಯಲ್ಲಿ ನವವಿವಾಹಿತ ದಂಪತಿಯ ಜೊತೆ ಫೋಟೋ ಕ್ಲಿಕ್ಕಿಸಿಕೊಳ್ಳಲು ಹೋದ ಕಳ್ಳನೊಬ್ಬ ಬೆಲೆಬಾಳುವ ವಸ್ತುಗಳಿದ್ದ ಬ್ಯಾಗ್‌ನೊಂದಿಗೆ ಪರಾರಿಯಾಗಿದ್ದಾನೆ.

Viral News: ವಧು-ವರರ ಜೊತೆ ಫೋಟೋ ತೆಗೆಸಿಕೊಳ್ಳಲು ಹೋಗಿ ಮದುವೆ ಮಂಟಪದಿಂದ ಹಣ, ಒಡವೆ ಕದ್ದ ಕಳ್ಳ!
ಚಿನ್ನ ಕದ್ದೊಯ್ದ ಕಳ್ಳ
TV9 Web
| Edited By: |

Updated on: Feb 15, 2022 | 4:08 PM

Share

ಗ್ವಾಲಿಯರ್: ಮದುವೆ ಮನೆಯಲ್ಲಿ ವೇದಿಕೆಗೆ ಹೋಗಿ ಮದುಮಕ್ಕಳ ಜೊತೆ ಫೋಟೋ ಕ್ಲಿಕ್ಕಿಸಿಕೊಳ್ಳುವುದು ಸಾಮಾನ್ಯ. ಇದೇ ರೀತಿ ವಧು-ವರರ ಜೊತೆ ಫೋಟೋ ತೆಗೆಸಿಕೊಳ್ಳಲು ಹೋಗಿದ್ದ ಖತರ್ನಾಕ್ ಕಳ್ಳನೊಬ್ಬ ಮಂಟಪದಿಂದ ಬೆಲೆ ಬಾಳುವ ವಸ್ತುಗಳಿದ್ದ ಬ್ಯಾಗನ್ನು ಕದ್ದೊಯ್ದಿರುವ ವಿಡಿಯೋ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕ್ಯಾಮೆರಾದಲ್ಲಿ ಸೆರೆಯಾದ ಆಘಾತಕಾರಿ ಘಟನೆಯಲ್ಲಿ ನವವಿವಾಹಿತ ದಂಪತಿಯ ಜೊತೆ ಫೋಟೋ ಕ್ಲಿಕ್ಕಿಸಿಕೊಳ್ಳಲು ಹೋದ ಕಳ್ಳನೊಬ್ಬ ಬೆಲೆಬಾಳುವ ವಸ್ತುಗಳಿದ್ದ ಬ್ಯಾಗ್‌ನೊಂದಿಗೆ ಪರಾರಿಯಾಗಿದ್ದಾನೆ. ಸಾಮಾಜಿಕ ಜಾಲತಾಣಗಳಲ್ಲಿ ಕಳ್ಳನ ಈ ವಿಡಿಯೋ ವೈರಲ್ (Viral Video) ಆಗಿದೆ.

ಆ ಕಳ್ಳ ಕಪ್ಪು ಬಟ್ಟೆಯನ್ನು ಧರಿಸಿದ್ದು, ವಿಡಿಯೋ ಫೂಟೇಜ್‌ನಲ್ಲಿ ಅವರ ಮುಖ ಕಾಣುತ್ತಿಲ್ಲ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ, ಅವರು ಮದುವೆ ಮನೆಯಿಂದ ಸುಲಭವಾಗಿ ಹೊರಗೆ ಹೋಗುವುದನ್ನು ಕಾಣಬಹುದು. ಶನಿವಾರ ರಾತ್ರಿ ಗ್ವಾಲಿಯರ್‌ನ ಝಾನ್ಸಿ ರಸ್ತೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಸಂಗಮ್ ವಾಟಿಕಾ ಮದುವೆ ಉದ್ಯಾನದಲ್ಲಿ ಈ ಘಟನೆ ಸಂಭವಿಸಿದೆ.

ಹರ್ಷ್ ಬನ್ಸಾಲ್ ಅವರು ನವವಿವಾಹಿತ ದಂಪತಿಗಳೊಂದಿಗೆ ಫೋಟೋ ತೆಗೆದುಕೊಳ್ಳುವ ಸಲುವಾಗಿ ಮದುವೆಯ ವೇದಿಕೆಗೆ ತೆರಳಿದ್ದರು. ವಧುವಿನ ಕುರ್ಚಿಯ ಹಿಂದೆ ಬ್ಯಾಗ್ ಅನ್ನು ಇರಿಸಿದ್ದರು. ಆ ಬ್ಯಾಗ್​ನಲ್ಲಿ 1 ಲಕ್ಷ ರೂ. ನಗದು ಮತ್ತು 2 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳಿತ್ತು ಎಂದು ಬನ್ಸಾಲ್ ಹೇಳಿದ್ದಾರೆ. ಬನ್ಸಾಲ್ ಪ್ರಕಾರ, ಕದ್ದ ವಸ್ತುಗಳು ಇತ್ತೀಚೆಗೆ ವಿವಾಹವಾದ ದಂಪತಿಗೆ ಸೇರಿವೆ.

ಕ್ರೈಂ ಹೆಚ್ಚುವರಿ ಪೊಲೀಸ್ ಅಧೀಕ್ಷಕ (ಎಎಸ್‌ಪಿ) ರಾಜೇಶ್ ದಂಡೋಟಿಯಾ ಮಾತನಾಡಿ, ಮದುವೆ ಉದ್ಯಾನ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಸಿಸಿಟಿವಿ ಕ್ಯಾಮೆರಾಗಳಿಂದ ವೀಡಿಯೊವನ್ನು ಸಂಗ್ರಹಿಸಲಾಗಿದೆ. ಈ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದ್ದು, ಕಳ್ಳತನದಲ್ಲಿ ಭಾಗಿಯಾಗಿರುವ ಆರೋಪಿಗಳನ್ನು ಗುರುತಿಸಲು ಪ್ರಯತ್ನಿಸಲಾಗುವುದು ಎಂದು ರಾಜೇಶ್ ದಂಡೋಟಿಯ ಹೇಳಿದ್ದಾರೆ.

ಇದನ್ನೂ ಓದಿ: Viral News: ಮದುವೆಯಾದ ಕೂಡಲೆ ಗಂಡನ ಬಿಟ್ಟು ಪ್ರಿಯಕರನ ಜೊತೆ ವಧು ಪರಾರಿ; ಲವ್ ಸ್ಟೋರಿಗೆ ಹೊಸ ಟ್ವಿಸ್ಟ್​!

Viral News: 6 ವರ್ಷಗಳಿಂದ ಗಂಡನ ಊಟಕ್ಕೆ ಡ್ರಗ್ಸ್​ ಬೆರೆಸುತ್ತಿದ್ದ ಹೆಂಡತಿ; ಕಾರಣವೇನು ಗೊತ್ತಾ?

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ