Viral News: ಎಟಿಎಂ ದರೋಡೆ ಮಾಡಲು ಹೋಗಿ ಮಷಿನ್ ಹಿಂದೆ ಸಿಕ್ಕಿಕೊಂಡ ಕಳ್ಳ; ಆಮೇಲೇನಾಯ್ತು?

Crime News Today: ಕಂಠಪೂರ್ತಿ ಕುಡಿದಿದ್ದ ಉಪೇಂದ್ರ ರಾಯ್​ ಎಟಿಎಂ ಒಡೆದು ದರೋಡೆ ಮಾಡಲು ಹೋಗಿದ್ದ. ಎಟಿಎಂ ಮಷಿನ್ ಹಿಂದೆ ಹೋಗಿ ನಿಂತ ಕಳ್ಳ ಗೋಡೆಯ ಬಳಿ ಸಿಕ್ಕಿಹಾಕಿಕೊಂಡಿದ್ದಾನೆ.

Viral News: ಎಟಿಎಂ ದರೋಡೆ ಮಾಡಲು ಹೋಗಿ ಮಷಿನ್ ಹಿಂದೆ ಸಿಕ್ಕಿಕೊಂಡ ಕಳ್ಳ; ಆಮೇಲೇನಾಯ್ತು?
ಎಟಿಎಂ ದರೋಡೆ ವೇಳೆ ಸಿಕ್ಕಿಬಿದ್ದ ಕಳ್ಳ
Follow us
| Updated By: ಸುಷ್ಮಾ ಚಕ್ರೆ

Updated on: Aug 08, 2021 | 10:13 PM

ಚೆನ್ನೈ: ಕೊರೊನಾ ಅಟ್ಟಹಾಸ ಜೋರಾಗಿದ್ದರೂ ಕೊಲೆ, ದರೋಡೆ, ಅತ್ಯಾಚಾರದಂತಹ ಅಪರಾಧ ಪ್ರಕರಣಗಳೇನೂ ಕಡಿಮೆಯಾಗಿಲ್ಲ. ಆದರೆ, ಈ ಕ್ರೈಂ ಮಾಡಲು ಹೋದಾಗಲೂ ಕೆಲವೊಂದು ಫಜೀತಿ ನಡೆದು ಕಾಮಿಡಿ ಘಟನೆಗಳು ನಡೆದಿರುವ ಪ್ರಕರಣಗಳು ಸಾಕಷ್ಟಿವೆ. ಯಾರದೋ ಮನೆಯಲ್ಲಿ ಕದಿಯಲು ಹೋದಾಗ ಅಲ್ಲೇ ಬೆಡ್​ರೂಂನಲ್ಲಿ ಮಲಗಿ ಸಿಕ್ಕಿಹಾಕಿಕೊಂಡಿದ್ದು, ಮನೆ ದೋಚುವ ಬದಲು ಅಡುಗೆ ಮನೆಯಲ್ಲಿ ಅಡುಗೆ ಮಾಡಿಕೊಂಡು ಊಟ ಮಾಡುವಷ್ಟರಲ್ಲಿ ಮನೆ ಓನರ್ ಬಂದಿದ್ದು ಹೀಗೆ ಕಳ್ಳತನ ಮಾಡಲು ಹೋದ ಕಳ್ಳರೇ ಮನೆ ಮಾಲೀಕರ ಕೈಗೆ ಸಿಕ್ಕಿಹಾಕಿಕೊಂಡು ಜೈಲು ಸೇರಿದ ಘಟನೆಗಳು ಬೇಕಾದಷ್ಟಿವೆ. ಅದೇ ರೀತಿ ಘಟನೆಯೊಂದು ತಮಿಳುನಾಡಿನಲ್ಲಿ ನಡೆದಿದೆ.

ದರೋಡೆಗೆಂದು ಎಟಿಎಂಗೆ ನುಗ್ಗಿದ್ದ ಕಳ್ಳನೊಬ್ಬನಿಗೆ ಎಟಿಎಂ ಮಷಿನ್ ಒಡೆಯಲು ಸಾಧ್ಯವಾಗಿಲ್ಲ. ಆಗ ಗೋಡೆಯ ಬದಿಗೆ ಹೋಗಿ ಎಟಿಎಂ ಮಷಿನ್ ಒಡೆಯುತ್ತಿದ್ದಾಗ ಮಷಿನ್ ಹಾಗೂ ಗೋಡೆಯ ನಡುವೆ ಕಳ್ಳ ಸಿಕ್ಕಿಹಾಕಿಕೊಂಡಿದ್ದಾನೆ. ಚೆನ್ನೈನಲ್ಲಿ ಈ ಘಟನೆ ನಡೆದಿದ್ದು, ಸಿಸಿಟಿವಿ ಕ್ಯಾಮೆರಾದಲ್ಲಿ ಈ ವಿಡಿಯೋ ಸೆರೆಯಾಗಿದೆ. 28 ವರ್ಷದ ಉಪೇಂದ್ರ ರಾಯ್ ಎಂಬ ಬಿಹಾರ ಮೂಲದ ಕಳ್ಳ ಎಟಿಎಂ ದರೋಡೆ ಮಾಡಲು ಬಂದು ಸಿಕ್ಕಿಹಾಕಿಕೊಂಡಿದ್ದಾನೆ.

ಕಂಠಪೂರ್ತಿ ಕುಡಿದಿದ್ದ ಉಪೇಂದ್ರ ರಾಯ್​ ಎಟಿಎಂ ಒಡೆದು ದರೋಡೆ ಮಾಡಲು ಹೋಗಿದ್ದ. ಆದರೆ, ಅಲ್ಲಿ ತಾನೇನು ಮಾಡುತ್ತಿದ್ದೇನೆ ಎಂದು ಗೊತ್ತಾಗದಷ್ಟು ಆತ ಅಮಲಿನಲ್ಲಿದ್ದ. ಎಟಿಎಂ ಮಷಿನ್ ಹಿಂದೆ ಹೋಗಿ ನಿಂತ ಕಳ್ಳ ಗೋಡೆಯ ಬಳಿ ಸಿಕ್ಕಿಹಾಕಿಕೊಂಡಿದ್ದಾನೆ. ಕುಡಿದು ಕೆಳಗೆ ಬೀಳುವಂತಾಗಿದ್ದರಿಂದ ಆತನಿಗೆ ಅಲ್ಲಿಂದ ಹೊರಗೆ ಬರಲು ಸಾಧ್ಯವಾಗಿಲ್ಲ. ಅಲ್ಲಿಂದಲೇ ಎಟಿಎಂ ಒಡೆಯತೊಡಗಿದ ಆತ ಹಣ ದೋಚಲು ಮುಂದಾಗಿದ್ದ. ಆ ಶಬ್ದ ಕೇಳಿದ ಪಕ್ಕದ ಮನೆಯವರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.

ಸ್ಥಳಕ್ಕೆ ಬಂದ ಪೊಲೀಸರು ಎಟಿಎಂ ಸೆಂಟರ್​ನಲ್ಲಿ ಸಿಕ್ಕಿಬಿದ್ದಿದ್ದ ಕಳ್ಳನನ್ನು ಅಲ್ಲಿಂದ ಬಿಡಿಸಿ ವಶಕ್ಕೆ ಪಡೆದಿದ್ದಾರೆ. ಆತನನ್ನು ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿದೆ. ಕಳ್ಳತನ ಮಾಡಲು ಹೋದ ದರೋಡೆಕೋರ ತಾನೇ ತಾನಾಗಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.

ಇದನ್ನೂ ಓದಿ: Viral News: 2 ಲಕ್ಷ ರೂ.ಗೆ ಮಾರಾಟವಾಯ್ತು 90 ಪೈಸೆಯ ಚಮಚ! ಹರಾಜಿಗೆ ಹಾಕಿದ್ದ ಮಾಲೀಕನೇ ಶಾಕ್

Shocking News: ಪೊಲೀಸರಂತೆ ಬಸ್ ನಿಲ್ಲಿಸಿ 1.2 ಕೋಟಿ ರೂ. ಕದ್ದೊಯ್ದ ಕಳ್ಳರು; ಸಿನಿಮಾ ಸ್ಟೈಲ್​ನಲ್ಲಿ ದರೋಡೆ!

(Man Gets Stuck Between ATM Machine and Wall During Trying to Steal Robbery in Tamil Nadu)

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ