AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಎಟಿಎಂ ದರೋಡೆ ಮಾಡಲು ಹೋಗಿ ಮಷಿನ್ ಹಿಂದೆ ಸಿಕ್ಕಿಕೊಂಡ ಕಳ್ಳ; ಆಮೇಲೇನಾಯ್ತು?

Crime News Today: ಕಂಠಪೂರ್ತಿ ಕುಡಿದಿದ್ದ ಉಪೇಂದ್ರ ರಾಯ್​ ಎಟಿಎಂ ಒಡೆದು ದರೋಡೆ ಮಾಡಲು ಹೋಗಿದ್ದ. ಎಟಿಎಂ ಮಷಿನ್ ಹಿಂದೆ ಹೋಗಿ ನಿಂತ ಕಳ್ಳ ಗೋಡೆಯ ಬಳಿ ಸಿಕ್ಕಿಹಾಕಿಕೊಂಡಿದ್ದಾನೆ.

Viral News: ಎಟಿಎಂ ದರೋಡೆ ಮಾಡಲು ಹೋಗಿ ಮಷಿನ್ ಹಿಂದೆ ಸಿಕ್ಕಿಕೊಂಡ ಕಳ್ಳ; ಆಮೇಲೇನಾಯ್ತು?
ಎಟಿಎಂ ದರೋಡೆ ವೇಳೆ ಸಿಕ್ಕಿಬಿದ್ದ ಕಳ್ಳ
TV9 Web
| Updated By: ಸುಷ್ಮಾ ಚಕ್ರೆ|

Updated on: Aug 08, 2021 | 10:13 PM

Share

ಚೆನ್ನೈ: ಕೊರೊನಾ ಅಟ್ಟಹಾಸ ಜೋರಾಗಿದ್ದರೂ ಕೊಲೆ, ದರೋಡೆ, ಅತ್ಯಾಚಾರದಂತಹ ಅಪರಾಧ ಪ್ರಕರಣಗಳೇನೂ ಕಡಿಮೆಯಾಗಿಲ್ಲ. ಆದರೆ, ಈ ಕ್ರೈಂ ಮಾಡಲು ಹೋದಾಗಲೂ ಕೆಲವೊಂದು ಫಜೀತಿ ನಡೆದು ಕಾಮಿಡಿ ಘಟನೆಗಳು ನಡೆದಿರುವ ಪ್ರಕರಣಗಳು ಸಾಕಷ್ಟಿವೆ. ಯಾರದೋ ಮನೆಯಲ್ಲಿ ಕದಿಯಲು ಹೋದಾಗ ಅಲ್ಲೇ ಬೆಡ್​ರೂಂನಲ್ಲಿ ಮಲಗಿ ಸಿಕ್ಕಿಹಾಕಿಕೊಂಡಿದ್ದು, ಮನೆ ದೋಚುವ ಬದಲು ಅಡುಗೆ ಮನೆಯಲ್ಲಿ ಅಡುಗೆ ಮಾಡಿಕೊಂಡು ಊಟ ಮಾಡುವಷ್ಟರಲ್ಲಿ ಮನೆ ಓನರ್ ಬಂದಿದ್ದು ಹೀಗೆ ಕಳ್ಳತನ ಮಾಡಲು ಹೋದ ಕಳ್ಳರೇ ಮನೆ ಮಾಲೀಕರ ಕೈಗೆ ಸಿಕ್ಕಿಹಾಕಿಕೊಂಡು ಜೈಲು ಸೇರಿದ ಘಟನೆಗಳು ಬೇಕಾದಷ್ಟಿವೆ. ಅದೇ ರೀತಿ ಘಟನೆಯೊಂದು ತಮಿಳುನಾಡಿನಲ್ಲಿ ನಡೆದಿದೆ.

ದರೋಡೆಗೆಂದು ಎಟಿಎಂಗೆ ನುಗ್ಗಿದ್ದ ಕಳ್ಳನೊಬ್ಬನಿಗೆ ಎಟಿಎಂ ಮಷಿನ್ ಒಡೆಯಲು ಸಾಧ್ಯವಾಗಿಲ್ಲ. ಆಗ ಗೋಡೆಯ ಬದಿಗೆ ಹೋಗಿ ಎಟಿಎಂ ಮಷಿನ್ ಒಡೆಯುತ್ತಿದ್ದಾಗ ಮಷಿನ್ ಹಾಗೂ ಗೋಡೆಯ ನಡುವೆ ಕಳ್ಳ ಸಿಕ್ಕಿಹಾಕಿಕೊಂಡಿದ್ದಾನೆ. ಚೆನ್ನೈನಲ್ಲಿ ಈ ಘಟನೆ ನಡೆದಿದ್ದು, ಸಿಸಿಟಿವಿ ಕ್ಯಾಮೆರಾದಲ್ಲಿ ಈ ವಿಡಿಯೋ ಸೆರೆಯಾಗಿದೆ. 28 ವರ್ಷದ ಉಪೇಂದ್ರ ರಾಯ್ ಎಂಬ ಬಿಹಾರ ಮೂಲದ ಕಳ್ಳ ಎಟಿಎಂ ದರೋಡೆ ಮಾಡಲು ಬಂದು ಸಿಕ್ಕಿಹಾಕಿಕೊಂಡಿದ್ದಾನೆ.

ಕಂಠಪೂರ್ತಿ ಕುಡಿದಿದ್ದ ಉಪೇಂದ್ರ ರಾಯ್​ ಎಟಿಎಂ ಒಡೆದು ದರೋಡೆ ಮಾಡಲು ಹೋಗಿದ್ದ. ಆದರೆ, ಅಲ್ಲಿ ತಾನೇನು ಮಾಡುತ್ತಿದ್ದೇನೆ ಎಂದು ಗೊತ್ತಾಗದಷ್ಟು ಆತ ಅಮಲಿನಲ್ಲಿದ್ದ. ಎಟಿಎಂ ಮಷಿನ್ ಹಿಂದೆ ಹೋಗಿ ನಿಂತ ಕಳ್ಳ ಗೋಡೆಯ ಬಳಿ ಸಿಕ್ಕಿಹಾಕಿಕೊಂಡಿದ್ದಾನೆ. ಕುಡಿದು ಕೆಳಗೆ ಬೀಳುವಂತಾಗಿದ್ದರಿಂದ ಆತನಿಗೆ ಅಲ್ಲಿಂದ ಹೊರಗೆ ಬರಲು ಸಾಧ್ಯವಾಗಿಲ್ಲ. ಅಲ್ಲಿಂದಲೇ ಎಟಿಎಂ ಒಡೆಯತೊಡಗಿದ ಆತ ಹಣ ದೋಚಲು ಮುಂದಾಗಿದ್ದ. ಆ ಶಬ್ದ ಕೇಳಿದ ಪಕ್ಕದ ಮನೆಯವರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.

ಸ್ಥಳಕ್ಕೆ ಬಂದ ಪೊಲೀಸರು ಎಟಿಎಂ ಸೆಂಟರ್​ನಲ್ಲಿ ಸಿಕ್ಕಿಬಿದ್ದಿದ್ದ ಕಳ್ಳನನ್ನು ಅಲ್ಲಿಂದ ಬಿಡಿಸಿ ವಶಕ್ಕೆ ಪಡೆದಿದ್ದಾರೆ. ಆತನನ್ನು ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿದೆ. ಕಳ್ಳತನ ಮಾಡಲು ಹೋದ ದರೋಡೆಕೋರ ತಾನೇ ತಾನಾಗಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.

ಇದನ್ನೂ ಓದಿ: Viral News: 2 ಲಕ್ಷ ರೂ.ಗೆ ಮಾರಾಟವಾಯ್ತು 90 ಪೈಸೆಯ ಚಮಚ! ಹರಾಜಿಗೆ ಹಾಕಿದ್ದ ಮಾಲೀಕನೇ ಶಾಕ್

Shocking News: ಪೊಲೀಸರಂತೆ ಬಸ್ ನಿಲ್ಲಿಸಿ 1.2 ಕೋಟಿ ರೂ. ಕದ್ದೊಯ್ದ ಕಳ್ಳರು; ಸಿನಿಮಾ ಸ್ಟೈಲ್​ನಲ್ಲಿ ದರೋಡೆ!

(Man Gets Stuck Between ATM Machine and Wall During Trying to Steal Robbery in Tamil Nadu)

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!