AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಇಡೀ ಕುಟುಂಬ ಮೈಮರೆತು ನಿದ್ರೆ ಮಾಡಿದ್ದಾಗ ಮನೆಗೆ ಬೆಂಕಿ ಹಚ್ಚಿದ ಮುಸುಕುಧಾರಿ; ವಿಡಿಯೋ ವೈರಲ್

ನಫೀಸ್ ಮಲಿಕ್ ಮತ್ತು ಅವರ ಕುಟುಂಬದ ಸದಸ್ಯರು ರಾತ್ರಿ ತಮ್ಮ ಮನೆಯಲ್ಲಿ ಮಲಗಿದ್ದಾಗ ಮೂವರು ಅಪರಿಚಿತರು ಅವರ ಮನೆಗೆ ಬೆಂಕಿ ಹಚ್ಚಿದ್ದಾರೆ.

Crime News: ಇಡೀ ಕುಟುಂಬ ಮೈಮರೆತು ನಿದ್ರೆ ಮಾಡಿದ್ದಾಗ ಮನೆಗೆ ಬೆಂಕಿ ಹಚ್ಚಿದ ಮುಸುಕುಧಾರಿ; ವಿಡಿಯೋ ವೈರಲ್
ದೆಹಲಿಯಲ್ಲಿ ಮನೆಗೆ ಬೆಂಕಿ ಹಚ್ಚಿರುವ ದೃಶ್ಯImage Credit source: NDTV
TV9 Web
| Updated By: ಸುಷ್ಮಾ ಚಕ್ರೆ|

Updated on: Jan 13, 2023 | 3:22 PM

Share

ನವದೆಹಲಿ: ದೆಹಲಿಯಲ್ಲಿ (Delhi) ಇಡೀ ಕುಟುಂಬವೊಂದು ರಾತ್ರಿ ಮಲಗಿದ್ದಾಗ ಮೂವರು ಮುಸುಕುಧಾರಿಗಳು ಆ ಮನೆಗೆ ಬೆಂಕಿ ಹಚ್ಚಿ ಅಲ್ಲಿಂದ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕಳೆದ ವಾರ ಈ ಘಟನೆ ನಡೆದಿದೆ. ಮೂವರು ಮುಸುಕುಧಾರಿಗಳು ಆ ಮನೆಗೆ ಬೆಂಕಿ ಹಚ್ಚುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ (Social Media) ವೈರಲ್ ಆಗುತ್ತಿದೆ. ಮೂವರು ಪೆಟ್ರೋಲ್​ ಕ್ಯಾನ್​ಗಳೊಂದಿಗೆ ಆ ಮನೆಯ ಬಳಿ ಬಂದು ನಫೀಸ್ ಅವರ ಮನೆಗೆ ಬೆಂಕಿ ಹಚ್ಚುವುದನ್ನು ವಿಡಿಯೋದಲ್ಲಿ ನೋಡಬಹುದು.

ಜನವರಿ 8ರಂದು ದೆಹಲಿಯ ಭಜನಪುರದ ವಿನಯ್ ಪಾರ್ಕ್‌ನಲ್ಲಿ ಈ ಘಟನೆ ವರದಿಯಾಗಿದೆ. ನಫೀಸ್ ಮಲಿಕ್ ಮತ್ತು ಅವರ ಕುಟುಂಬದ ಸದಸ್ಯರು ರಾತ್ರಿ ತಮ್ಮ ಮನೆಯಲ್ಲಿ ಮಲಗಿದ್ದಾಗ ಮೂವರು ಅಪರಿಚಿತರು ಅವರ ಮನೆಗೆ ಬೆಂಕಿ ಹಚ್ಚಿದ್ದಾರೆ. ಬೆಂಕಿ ಹೊತ್ತಿಕೊಂಡ ತಕ್ಷಣ ಎಚ್ಚರಗೊಂಡ ಅವರು ಹಿಂದಿನ ಬಾಗಿಲಿನಿಂದ ಮನೆಯಿಂದ ಹೊರಗೆ ಓಡಿಹೋಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ವೇಳೆ ಅವರಿಗೆ ಸಣ್ಣಪುಟ್ಟ ಸುಟ್ಟ ಗಾಯಗಳಾಗಿವೆ.

ಇದನ್ನೂ ಓದಿ: Crime News: ಆಭರಣಕ್ಕಾಗಿ 7 ತಿಂಗಳ ಗರ್ಭಿಣಿ ಸೊಸೆಗೆ ಬೆಂಕಿ ಹಚ್ಚಿದ ಅತ್ತೆ-ಮಾವ

ಒಬ್ಬ ವ್ಯಕ್ತಿಯು ಬೆಂಕಿ ಹಚ್ಚಲು ಪೆಟ್ರೋಲ್ ಅನ್ನು ಮನೆಯ ಮೇಲೆ ಚೆಲ್ಲುತ್ತಾನೆ. ಅಷ್ಟರಲ್ಲಿ ಎರಡನೆಯ ವ್ಯಕ್ತಿಯು ಬೆಂಕಿಕಡ್ಡಿಗಳನ್ನು ಹೊತ್ತಿಸಿ ಆ ಮನೆಯ ಮೇಲೆ ಎಸೆದಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ತಕ್ಷಣ ಮನೆಗೆ ಬೆಂಕಿ ಹೊತ್ತಿಕೊಂಡಿದ್ದು, ತಕ್ಷಣ ಅವರು ಅಲ್ಲಿಂದ ಪರಾರಿಯಾಗಿದ್ದಾರೆ.

ಆ ಮನೆಯ ಹೊರಗೆ ನಿಲ್ಲಿಸಿದ್ದ ಸೈಕಲ್ ಹಾಗೂ ಮೋಟಾರ್ ಬೈಕ್ ಕೂಡ ಬೆಂಕಿಗೆ ಆಹುತಿಯಾಗಿದೆ. ಬೆಂಕಿ ಹಚ್ಚಿದ ಮೂವರು ನಾಪತ್ತೆಯಾಗಿದ್ದು, ಅವರ ಪತ್ತೆಗೆ ಶೋಧ ನಡೆಸಲಾಗುತ್ತಿದೆ. ಆರೋಪಿಗಳನ್ನು ಗುರುತಿಸಲು ಪೊಲೀಸರು ಸ್ಥಳದಲ್ಲಿ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ