AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ನಡುರಸ್ತೆಯಲ್ಲಿ ಮಹಿಳೆಗೆ ಥಳಿಸಿ, ಚಲಿಸುತ್ತಿದ್ದ ಕಾರಲ್ಲಿ ಎಳೆದೊಯ್ದ ಯುವಕರು; ಶಾಕಿಂಗ್ ವಿಡಿಯೋ ವೈರಲ್

Shocking Video: ದೆಹಲಿಯ ಅಮರ್ ಕಾಲೋನಿ ಪ್ರದೇಶದಲ್ಲಿ ಚಲಿಸುತ್ತಿದ್ದ ಕಾರಿನಿಂದ ಮಹಿಳೆಯೊಬ್ಬರನ್ನು ಎಳೆದೊಯ್ಯುವ ಶಾಕಿಂಗ್ ವೀಡಿಯೋ ಸಾಕಷ್ಟು ಕೋಲಾಹಲವನ್ನು ಸೃಷ್ಟಿಸಿದೆ.

Viral Video: ನಡುರಸ್ತೆಯಲ್ಲಿ ಮಹಿಳೆಗೆ ಥಳಿಸಿ, ಚಲಿಸುತ್ತಿದ್ದ ಕಾರಲ್ಲಿ ಎಳೆದೊಯ್ದ ಯುವಕರು; ಶಾಕಿಂಗ್ ವಿಡಿಯೋ ವೈರಲ್
ಕಾರಿನಲ್ಲಿ ಮಹಿಳೆಯನ್ನು ಎಳೆದೊಯ್ದ ವಿಡಿಯೋ ವೈರಲ್
TV9 Web
| Edited By: |

Updated on: May 05, 2022 | 2:25 PM

Share

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಅಮರ್ ಕಾಲೋನಿಯಲ್ಲಿ ಇಬ್ಬರು ವ್ಯಕ್ತಿಗಳು ಮಹಿಳೆಯ ಮೇಲೆ ಹಲ್ಲೆ ನಡೆಸಿ, ಚಲಿಸುತ್ತಿರುವ ಕಾರಿನಲ್ಲಿ ಆಕೆಯನ್ನು ಎಳೆದುಕೊಂಡು ಹೋದ ಪರಿಣಾಮ ಆಕೆ ರಸ್ತೆ ಮೇಲೆ ಬಿದ್ದು ಗಾಯಗೊಂಡಿರುವ ಆಘಾತಕಾರಿ ಘಟನೆ (Shocking News) ನಡೆದಿದೆ. ಖಾಸಗಿ ಕ್ಯಾಬ್‌ನಲ್ಲಿ ಕುಳಿತಿದ್ದ ಮಹಿಳೆ ರಸ್ತೆಯಲ್ಲಿ ಇಬ್ಬರು ಚಾಲಕರ ನಡುವೆ ಜಗಳ ನಡೆಯುತ್ತಿದ್ದಾಗ ಮಧ್ಯ ಪ್ರವೇಶಿಸಿದ್ದಾರೆ. ಈ ವೇಳೆ ಆಕೆಗೆ ಥಳಿಸಿ, ಕಾರಿಂದ ಡಿಕ್ಕಿ ಹೊಡೆದು, ರಸ್ತೆಯಲ್ಲಿ ಎಳೆದೊಯ್ಯಲಾಗಿದೆ.

ಆಗ್ನೇಯ ದೆಹಲಿಯ ಅಮರ್ ಕಾಲೋನಿ ಪ್ರದೇಶದಲ್ಲಿ ಚಲಿಸುತ್ತಿದ್ದ ಕಾರಿನಿಂದ ಮಹಿಳೆಯೊಬ್ಬರನ್ನು ಎಳೆದೊಯ್ಯುವ ಶಾಕಿಂಗ್ ವೀಡಿಯೋ ಸಾಕಷ್ಟು ಕೋಲಾಹಲವನ್ನು ಸೃಷ್ಟಿಸಿದೆ. ವರದಿಗಳ ಪ್ರಕಾರ, ಮಹಿಳೆಯು ತನ್ನ ಕ್ಯಾಬ್ ಹಾದುಹೋಗುತ್ತಿದ್ದಾಗ ಇಬ್ಬರು ಚಾಲಕರ ನಡುವೆ ಜಗಳವಾಗುತ್ತಿರುವುದನ್ನು ಕಂಡು ಮಧ್ಯ ಪ್ರವೇಶಿಸಲು ಪ್ರಯತ್ನಿಸಿದ್ದಾಳೆ. ಇದರಿಂದ ಆಕೆಯ ಮೇಲೆ ಹಲ್ಲೆ ನಡೆಸಲಾಗಿದೆ.

ಇದನ್ನೂ ಓದಿ
Image
Video: ಆಂಜನೇಯನ ವಿಗ್ರಹದಿಂದ ಹರಿದು ಬಂತು ಕೆಂಪು ಬಣ್ಣದ ನೀರು; ರಕ್ತವೆಂದ ಸ್ಥಳೀಯ ನಿವಾಸಿಗಳು
Image
ಯುರೋಪ್ ಪ್ರವಾಸದ ಮಧ್ಯೆ ಮೋದಿಯವರ 30 ವರ್ಷ ಹಳೇ ಫೋಟೊ ವೈರಲ್; ಗುರುತೇ ಸಿಕ್ತಿಲ್ಲ, ಪರೇಶ್ ರಾವಲ್ ಅಂತ ಭಾವಿಸಿದ್ದೆ ಎಂದ ನೆಟ್ಟಿಗರು
Image
Viral News: ಒಂದೇ ಮಂಟಪದಲ್ಲಿ ಮೂವರಿಗೆ ತಾಳಿ ಕಟ್ಟಿದ ವ್ಯಕ್ತಿ; ಅಪ್ಪ-ಅಮ್ಮಂದಿರ ಮದುವೆ ಕಣ್ತುಂಬಿಕೊಂಡ 6 ಮಕ್ಕಳು!
Image
Success Story: ಇಂಜಿನಿಯರಿಂಗ್ ಕೆಲಸ ಬಿಟ್ಟು ಚಹಾ ಅಂಗಡಿ ತೆರೆದ ಯುವಕ; ತಿಂಗಳ ಆದಾಯ ಕೇಳಿದ್ರೆ ಅಚ್ಚರಿ ಪಡ್ತೀರ!

ಆ ಕಾರಿನಲ್ಲಿದ್ದ ಇಬ್ಬರು ಯುವಕರು ಆಕೆಗೆ ಕಪಾಳಮೋಕ್ಷ ಮಾಡಿ ಎಳೆದೊಯ್ದಿದ್ದಾರೆ ಎನ್ನಲಾಗಿದೆ. ಎರಡು ದಿನಗಳ ಹಿಂದೆ ಈ ಘಟನೆ ನಡೆದಿದ್ದು, ಸ್ಥಳದ ಬಳಿ ಹಲವಾರು ಜನರು ಜಮಾಯಿಸಿದಾಗ ಚಲಿಸುತ್ತಿದ್ದ ಕಾರಿನಿಂದ ಮಹಿಳೆಯನ್ನು ತಳ್ಳಿ ಎಳೆದಾಡಿದ ವಿಡಿಯೋ ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿದೆ. ರಸ್ತೆ ಮೇಲೆ ಬಿದ್ದಿದ್ದರಿಂದ ತನ್ನ ಮೊಣಕೈಗೆ ಗಾಯವಾಗಿದೆ ಎಂದು ಮಹಿಳೆ ಹೇಳಿಕೊಂಡಿದ್ದಾಳೆ.

ಕಾರಿನ ಮಾಲೀಕರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದ್ದು, ಪೊಲೀಸರು ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳಲ್ಲಿ ಒಬ್ಬನನ್ನು ಫರಿದಾಬಾದ್ ನಿವಾಸಿ ಉದಯವೀರ್ ಸಿಂಗ್ (25) ಎಂದು ಗುರುತಿಸಲಾಗಿದ್ದು, ಮತ್ತೊಬ್ಬ ಯುವಕ ತಲೆಮರೆಸಿಕೊಂಡಿದ್ದಾನೆ. ಏಪ್ರಿಲ್ 29ರಿಂದ 30ರ ಮಧ್ಯರಾತ್ರಿ ತಾನು ಕ್ಯಾಬ್‌ನಲ್ಲಿ ಪ್ರಯಾಣಿಸುತ್ತಿದ್ದು, ಓಖ್ಲಾ ಮಂಡಿ ಚೌಕ್ ತಲುಪಿದಾಗ ಅದರಲ್ಲಿ ಇಬ್ಬರು ಯುವಕರಿದ್ದ ಬಲೆನೋ ಮತ್ತು ಸ್ಕಾರ್ಪಿಯೋವನ್ನು ಗಮನಿಸಿರುವುದಾಗಿ ಮಹಿಳೆ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಅವರ ಚಾಲಕರ ನಡುವಿನ ವಾಗ್ವಾದದಿಂದಾಗಿ ರಸ್ತೆಯನ್ನು ನಿರ್ಬಂಧಿಸಲಾಗಿತ್ತು. ಕ್ಯಾಬ್ ಡ್ರೈವರ್ ದಾರಿ ಮಾಡಿಕೊಡುವಂತೆ ಕೇಳಿದಾಗ, ಬಲೆನೋ ಕಾರಿನಲ್ಲಿದ್ದ ಉದಯ್​ವೀರ್ ಆತನನ್ನು ನಿಂದಿಸಲು ಪ್ರಾರಂಭಿಸಿದರು ಎಂದು ಮಹಿಳೆ ಹೇಳಿದ್ದಾರೆ. “ತನ್ನ ಕ್ಯಾಬ್​ನ ಚಾಲಕನನ್ನು ನಿಂದಿಸಬೇಡಿ ಎಂದು ನಾನು ಅವನಿಗೆ ಹೇಳಿದಾಗ ಈ ವಿಷಯಕ್ಕೆ ನಾನು ತಲೆಹಾಕಬಾರದು ಎಂದು ಹೇಳಿದನು” ಎಂದು ಅವರು ದೂರಿನಲ್ಲಿ ಹೇಳಿದ್ದಾರೆ. ನಂತರ ಆತ ನನಗೆ ಕಪಾಳಮೋಕ್ಷ ಮಾಡಿ, ನನ್ನ ಬೆನ್ನಿಗೆ ಹಲವು ಬಾರಿ ಚಪ್ಪಲಿಯಿಂದ ಹೊಡೆದು ಆ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಆಕೆ ತಿಳಿಸಿದ್ದಾರೆ.

ಅಷ್ಟರೊಳಗೆ ಆತನ ಸ್ನೇಹಿತ ಕೂಡ ನನ್ನ ಬಳಿ ಬಂದು ಮತ್ತೆ ಕಪಾಳಮೋಕ್ಷ ಮಾಡಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾರೆ. ವೇಗವಾಗಿ ಹೋಗುತ್ತಿದ್ದ ಅವರ ಕಾರನ್ನು ನಾನು ನಿಲ್ಲಿಸಲು ಪ್ರಯತ್ನಿಸಿದಾಗ, ಅವರು ಕಾರಿನ ವೇಗವನ್ನು ಹೆಚ್ಚಿಸಿದರು. ನನ್ನನ್ನು ಕೆಲವು ಮೀಟರ್​ಗಳಷ್ಟು ದೂರಕ್ಕೆ ಎಳೆದುಕೊಂಡು ಹೋದರು ಎಂದು ಆಕೆ ದೂರಿನಲ್ಲಿ ವಿವರಿಸಿದ್ದಾರೆ.

ಇನ್ನಷ್ಟು ಟ್ರೆಂಡಿಂಗ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು