AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ನಡುರಸ್ತೆಯಲ್ಲಿ ವೃದ್ಧನ ಅಡ್ಡಗಟ್ಟಿ ದರೋಡೆ; ಸಿಸಿಟಿವಿ ವಿಡಿಯೋ ವೈರಲ್

ದೆಹಲಿಯಲ್ಲಿ ಬೆಳಗಿನ ಜಾವ 3.30ಕ್ಕೆ ರಾಮ್ ನಿವಾಸ್ ಎಂಬ ವ್ಯಕ್ತಿ ತನ್ನ ಮನೆಗೆ ನಡೆದುಕೊಂಡು ಹೋಗುವಾಗ ಅಪರಿಚಿತರು ದಾಳಿ ನಡೆಸಿದ್ದಾರೆ. ಇದರ ಸಿಸಿಟಿವಿ ವಿಡಿಯೋ ವೈರಲ್ ಆಗಿದೆ.

Crime News: ನಡುರಸ್ತೆಯಲ್ಲಿ ವೃದ್ಧನ ಅಡ್ಡಗಟ್ಟಿ ದರೋಡೆ; ಸಿಸಿಟಿವಿ ವಿಡಿಯೋ ವೈರಲ್
ದರೋಡೆಯ ದೃಶ್ಯ
TV9 Web
| Edited By: |

Updated on: Aug 27, 2021 | 6:07 PM

Share

ದೆಹಲಿ: ರಸ್ತೆಯಲ್ಲಿ ಮನೆಗೆ ನಡೆದುಕೊಂಡು ಹೋಗುತ್ತಿದ್ದ 65 ವರ್ಷದ ವ್ಯಕ್ತಿಯ ಮೇಲೆ ಇದ್ದಕ್ಕಿದ್ದಂತೆ ದಾಳಿ ಮಾಡಿದ ದರೋಡೆಕೋರರು ಅವರ ಬಳಿಯಿದ್ದ ಹಣವನ್ನೆಲ್ಲ ದೋಚಿಕೊಂಡು ಓಡಿಹೋಗಿರುವ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆ ವ್ಯಕ್ತಿ ನಡೆದುಕೊಂಡು ಹೋಗುವಾಗ ಹಿಂದಿನಿಂದ ಬಹಳ ದೂರ ಹಿಂಬಾಲಿಸಿದ ಇಬ್ಬರು ಅಪರಿಚಿತರು ಆ ವ್ಯಕ್ತಿಯ ಕುತ್ತಿಗೆಯನ್ನು ಹಿಡಿದು, ಆತನ ಕೈಲಿದ್ದ ಬ್ಯಾಗ್​ನೊಂದಿಗೆ ಪರಾರಿಯಾಗಿದ್ದಾರೆ.

ಈ ಕುರಿತು ಕೇಸ್ ದಾಖಲಿಸಲಾಗಿದ್ದು, ಇನ್ನೂ ಯಾರನ್ನೂ ಬಂಧಿಸಿಲ್ಲ. ಬೆಳಗಿನ ಜಾವ 3.30ಕ್ಕೆ ರಾಮ್ ನಿವಾಸ್ ಎಂಬ ವ್ಯಕ್ತಿ ತನ್ನ ಮನೆಗೆ ನಡೆದುಕೊಂಡು ಹೋಗುವಾಗ ಅಪರಿಚಿತರು ದಾಳಿ ನಡೆಸಿದ್ದಾರೆ. ಅವರು ತಮ್ಮ ಮನೆ ತಲುಪುವ ಸ್ವಲ್ಪ ಹೊತ್ತಿನ ಮೊದಲು ಈ ಘಟನೆ ನಡೆದಿದೆ. ಹಿಂದಿನಿಂದ ಬಂದ ಇಬ್ಬರ ರಾಮ್ ಅವರ ಕುತ್ತಿಗೆಯನ್ನು ಹಿಡಿದು, ಅವರ ಕೈಲಿದ್ದ ಬ್ಯಾಗ್ ಕಸಿದುಕೊಂಡು ಓಡಿಹೋಗಿದ್ದಾರೆ.

ದರೋಡೆಕೋರರ ಕೈಯಿಂದ ಬಿಡಿಸಿಕೊಳ್ಳಲು ರಾಮ್ ಅವರು ಎಷ್ಟೇ ಪ್ರಯತ್ನಿಸಿದರೂ ಸಾಧ್ಯವಾಗಿಲ್ಲ. ಅವರನ್ನು ಕೆಳಗೆ ತಳ್ಳಿದ ದರೋಡೆಕೋರರು ಎಸ್ಕೇಪ್ ಆಗಿದ್ದಾರೆ. ಪೊಲೀಸ್ ಚೆಕ್​ಪೋಸ್ಟ್​ನಿಂದ ಕೇವಲ 200 ಮೀಟರ್ ದೂರದಲ್ಲಿ ಈ ಘಟನೆ ನಡೆದಿದೆ.

ಇದನ್ನೂ ಓದಿ: Crime News: ಯೂನಿಫಾರ್ಮ್ ಎಲ್ಲಿ ಎಂದ ಪ್ರಿನ್ಸಿಪಾಲ್ ತಲೆಗೆ ಗನ್ ಹಿಡಿದ ವಿದ್ಯಾರ್ಥಿ!

Crime News: ತ್ರಿಶೂಲದಿಂದ ಇರಿದು ಅರ್ಚಕನ ಬರ್ಬರ ಹತ್ಯೆ; ದೇವಸ್ಥಾನದಲ್ಲಿ ಅರೆ ಸುಟ್ಟ ಶವ ಪತ್ತೆ

(Viral Video Senior citizen robbed in Northwest Delhi CCTV Video Viral)

ಟಿವಿ9ನಿಂದ ಮಾಜಿ ಸಿಎಂ ಯಡಿಯೂರಪ್ಪನವರಿಗೆ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ
ಟಿವಿ9ನಿಂದ ಮಾಜಿ ಸಿಎಂ ಯಡಿಯೂರಪ್ಪನವರಿಗೆ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ
ಗಂಗಾ ನದಿಯ ಥೀಮ್​ನಲ್ಲಿ ಮಹಾಶಿವರಾತ್ರಿಗೆ ಸಜ್ಜಾಗಿದೆ ಇಶಾ ಫೌಂಡೇಷನ್
ಗಂಗಾ ನದಿಯ ಥೀಮ್​ನಲ್ಲಿ ಮಹಾಶಿವರಾತ್ರಿಗೆ ಸಜ್ಜಾಗಿದೆ ಇಶಾ ಫೌಂಡೇಷನ್
ಎತ್ತಿನ ಬಂಡಿಯಲ್ಲಿ ದುನಿಯಾ ವಿಜಯ್ ಪುತ್ರಿಯ ಮೆರವಣಿಗೆ: ವಿಡಿಯೋ
ಎತ್ತಿನ ಬಂಡಿಯಲ್ಲಿ ದುನಿಯಾ ವಿಜಯ್ ಪುತ್ರಿಯ ಮೆರವಣಿಗೆ: ವಿಡಿಯೋ
ಟಿವಿ9 ನವನಕ್ಷತ್ರ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ ಭಾವುಕ ಮಾತು
ಟಿವಿ9 ನವನಕ್ಷತ್ರ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ ಭಾವುಕ ಮಾತು
ರಿಯಲ್ ಎಸ್ಟೇಟ್ ಉದ್ಯಮಿ ರೋಹನ್ ಮೊಂಟೆರೋಗೆ ಟಿವಿ9 ನವ ನಕ್ಷತ್ರ ಪ್ರಶಸ್ತಿ
ರಿಯಲ್ ಎಸ್ಟೇಟ್ ಉದ್ಯಮಿ ರೋಹನ್ ಮೊಂಟೆರೋಗೆ ಟಿವಿ9 ನವ ನಕ್ಷತ್ರ ಪ್ರಶಸ್ತಿ
ಬೂಕರ್ ಪ್ರಶಸ್ತಿ ಲೇಖಕಿ ಬಾನು ಮುಷ್ತಾಕ್​ಗೆ ಟಿವಿ9 ನವ ನಕ್ಷತ್ರ ಅವಾರ್ಡ್​​
ಬೂಕರ್ ಪ್ರಶಸ್ತಿ ಲೇಖಕಿ ಬಾನು ಮುಷ್ತಾಕ್​ಗೆ ಟಿವಿ9 ನವ ನಕ್ಷತ್ರ ಅವಾರ್ಡ್​​
ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ; ಸ್ಫೋಟಕ ಮಾಹಿತಿ ನೀಡಿದ ಎಸ್​​ಪಿ
ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ; ಸ್ಫೋಟಕ ಮಾಹಿತಿ ನೀಡಿದ ಎಸ್​​ಪಿ
ಸರ್ಕಾರಿ ಮಕ್ಕಳಿಗೆ'ಸರ್ಪ್ರೈಸ್' ಕೊಟ್ಟ ಸಚಿವ ಜಮೀರ್
ಸರ್ಕಾರಿ ಮಕ್ಕಳಿಗೆ'ಸರ್ಪ್ರೈಸ್' ಕೊಟ್ಟ ಸಚಿವ ಜಮೀರ್
ಗುವಾಹಟಿಯಲ್ಲಿ 3,030 ಕೋಟಿ ರೂ. ವೆಚ್ಚದ ಸೇತುವೆ ಉದ್ಘಾಟಿಸಿದ ಪ್ರಧಾನಿ ಮೋದಿ
ಗುವಾಹಟಿಯಲ್ಲಿ 3,030 ಕೋಟಿ ರೂ. ವೆಚ್ಚದ ಸೇತುವೆ ಉದ್ಘಾಟಿಸಿದ ಪ್ರಧಾನಿ ಮೋದಿ
ಕತ್ತೆಗಳಿಗೆ ಮದುವೆ ಮಾಡಿಸಿದ ವಾಟಾಳ್ ನಾಗರಾಜ್
ಕತ್ತೆಗಳಿಗೆ ಮದುವೆ ಮಾಡಿಸಿದ ವಾಟಾಳ್ ನಾಗರಾಜ್