AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನ್ನ ಪಾರ್ಟಿಗಳಿಗೆ ರಾಗಿಣಿ ಬಂದಿದ್ದು ಕೇವಲ 2 ಬಾರಿ.. ಸಂಜನಾ ಬಂದಿದ್ದು ಹಲವು ಬಾರಿ’

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾರ್ಟಿಗಳ ಬಗ್ಗೆ ವಿರೇನ್ ಖನ್ನಾನಿಂದ ಮತ್ತಷ್ಟು ಮಾಹಿತಿ ಹೊರಬಿದ್ದಿದೆ. CCB ವಿಚಾರಣೆ ವೇಳೆ ಮಾಹಿತಿ ನೀಡಿರುವ ವಿರೇನ್ ಖನ್ನಾ ಆಯೋಜಿಸುತ್ತಿದ್ದ ಪಾರ್ಟಿಗಳಿಗೆ ಕೇವಲ ನಟ ನಟಿಯರು, ರಾಜಕಾರಣಿಗಳ ಪುತ್ರರು, ಉದ್ಯಮಿಗಳು ಮಾತ್ರ ಬರುತ್ತಿರಲಿಲ್ಲ. ರಾಷ್ಟ್ರೀಯ, ಅಂತಾರಾಷ್ಟ್ರೀಯ ಕ್ರಿಕೆಟಿಗರು ಕೂಡ ಬರ್ತಿದ್ದರು ಎಂಬ ಮಾಹಿತಿ ನೀಡಿದ್ದಾನಂತೆ. ನನ್ನ ಪಾರ್ಟಿಗಳಿಗೆ ರಾಗಿಣಿ ಬಂದಿದ್ದು ಕೇವಲ 2 ಬಾರಿ ಮಾತ್ರ. ಆದರೆ, ನಟಿ ಸಂಜನಾ ಗಲ್ರಾನಿ ಹಲವು ಬಾರಿ ಪಾರ್ಟಿಗೆ […]

‘ನನ್ನ ಪಾರ್ಟಿಗಳಿಗೆ ರಾಗಿಣಿ ಬಂದಿದ್ದು ಕೇವಲ 2 ಬಾರಿ.. ಸಂಜನಾ ಬಂದಿದ್ದು ಹಲವು ಬಾರಿ’
ನಟಿಯರಾದ ಸಂಜನಾ ಗಲ್ರಾನಿ ಮತ್ತು ರಾಗಿಣಿ ದ್ವಿವೇದಿ
KUSHAL V
|

Updated on: Sep 13, 2020 | 2:11 PM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾರ್ಟಿಗಳ ಬಗ್ಗೆ ವಿರೇನ್ ಖನ್ನಾನಿಂದ ಮತ್ತಷ್ಟು ಮಾಹಿತಿ ಹೊರಬಿದ್ದಿದೆ. CCB ವಿಚಾರಣೆ ವೇಳೆ ಮಾಹಿತಿ ನೀಡಿರುವ ವಿರೇನ್ ಖನ್ನಾ ಆಯೋಜಿಸುತ್ತಿದ್ದ ಪಾರ್ಟಿಗಳಿಗೆ ಕೇವಲ ನಟ ನಟಿಯರು, ರಾಜಕಾರಣಿಗಳ ಪುತ್ರರು, ಉದ್ಯಮಿಗಳು ಮಾತ್ರ ಬರುತ್ತಿರಲಿಲ್ಲ. ರಾಷ್ಟ್ರೀಯ, ಅಂತಾರಾಷ್ಟ್ರೀಯ ಕ್ರಿಕೆಟಿಗರು ಕೂಡ ಬರ್ತಿದ್ದರು ಎಂಬ ಮಾಹಿತಿ ನೀಡಿದ್ದಾನಂತೆ.

ನನ್ನ ಪಾರ್ಟಿಗಳಿಗೆ ರಾಗಿಣಿ ಬಂದಿದ್ದು ಕೇವಲ 2 ಬಾರಿ ಮಾತ್ರ. ಆದರೆ, ನಟಿ ಸಂಜನಾ ಗಲ್ರಾನಿ ಹಲವು ಬಾರಿ ಪಾರ್ಟಿಗೆ ಬಂದಿದ್ದಳು ಎಂದು CCB ವಿಚಾರಣೆ ವೇಳೆ ವಿರೇನ್ ಖನ್ನಾ ಮಾಹಿತಿ ನೀಡಿದ್ದಾನೆ ಎಂದು ಹೇಳಲಾಗಿದೆ. ಆದರೆ, ಉಳಿದಂತೆ ಬೇರೆಯವರ ಹೆಸರು ಹೇಳದ ವಿರೇನ್ ಖನ್ನಾ ಲೋಕಲ್ ಪಾರ್ಟಿಗೆ ಯಾರು ಬರುತ್ತಿದ್ದರೆಂಬ ಪ್ರಶ್ನೆಗೆ ಉತ್ತರ ನೀಡದೆ ಸೈಲೆಂಟ್ ಆಗಿದ್ದಾನೆ ಎಂದು ತಿಳಿದುಬಂದಿದೆ. ಜೊತೆಗೆ, ರಾಜಕಾರಣಿಗಳ ಬಗ್ಗೆ ಸಹ ಆರೋಪಿ ವಿರೇನ್ ಖನ್ನಾ ಬಾಯ್ಬಿಡುತ್ತಿಲ್ಲ ಎಂದು ತಿಳಿದುಬಂದಿದೆ.

ಸದ್ಯ ವಿರೇನ್‌ನ ಒಂದು ಮೊಬೈಲ್‌ನ ಮಾಹಿತಿ ರಿಟ್ರೀವ್ ಆಗಿಲ್ಲ. ರಿಟ್ರೀವ್ ಆದ ಬಳಿಕ ಮತ್ತಷ್ಟು ಮಾಹಿತಿ ಹೊರಬರುವ ಸಾಧ್ಯತೆಯಿದೆ. ಜೊತೆಗೆ, ನಾಳೆ ಕಸ್ಟಡಿ ಅಂತ್ಯವಾಗುತ್ತಿರುವ ಹಿನ್ನೆಲೆಯಲ್ಲಿ ಆತನನ್ನು ಸಿಸಿಬಿ ಅಧಿಕಾರಿಗಳು ‌ಮತ್ತೆ ಕಸ್ಟಡಿಗೆ ಕೇಳುವ ಸಾಧ್ಯತೆಯಿದೆ.

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!