AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶ: 15 ಅಡಿ ಸುರಂಗ ಅಗೆದು ಚಿನ್ನದಂಗಡಿ ಕಳ್ಳತನಕ್ಕೆ ಯತ್ನಿಸಿದ ಕಳ್ಳರು; ದೇವರ ವಿಗ್ರಹ ನೋಡಿ ಕ್ಷಮಿಸಿ ಎಂದು ಚೀಟಿ ಬರೆದಿಟ್ಟು ಪರಾರಿ

ಗುರುವಾರ ಅಂಗಡಿ ತೆರೆದಾಗ ಶ್ರೀಕೃಷ್ಣನ ವಿಗ್ರಹ ಗೋಡೆಗೆ ಎದುರಾಗಿತ್ತು. ದೇವರು ನಮ್ಮನ್ನು ನೋಡುತ್ತಿದ್ದಾನೆ ಎಂದು ಅವರು ಕಳ್ಳತನ ಮಾಡಿಲ್ಲ, ಅವರು ದೇವರ ವಿಗ್ರಹವನ್ನು ತಿರುಗಿಸಿಟ್ಟು ಹೋಗಿದ್ದಾರೆ ಎಂದು ಕುಮಾರ್ ಹೇಳಿದ್ದಾರೆ.

ಉತ್ತರ ಪ್ರದೇಶ: 15 ಅಡಿ ಸುರಂಗ ಅಗೆದು ಚಿನ್ನದಂಗಡಿ ಕಳ್ಳತನಕ್ಕೆ ಯತ್ನಿಸಿದ ಕಳ್ಳರು; ದೇವರ ವಿಗ್ರಹ ನೋಡಿ ಕ್ಷಮಿಸಿ ಎಂದು ಚೀಟಿ ಬರೆದಿಟ್ಟು ಪರಾರಿ
ಪ್ರಾತಿನಿಧಿಕ ಚಿತ್ರ
Follow us
ರಶ್ಮಿ ಕಲ್ಲಕಟ್ಟ
|

Updated on: Feb 03, 2023 | 9:00 PM

ಮೀರತ್: ಉತ್ತರ ಪ್ರದೇಶದ (Uttar pradesh) ಮೀರತ್‌ನಲ್ಲಿ ಆಭರಣ ಅಂಗಡಿಯೊಂದಕ್ಕೆ ನುಗ್ಗಲು ಕಳ್ಳರ ಗುಂಪೊಂದು ಚರಂಡಿಯಿಂದ 15 ಅಡಿ ಉದ್ದದ ಸುರಂಗವನ್ನು ಅಗೆದಿದ್ದು ಒಳಗೆ, ವಾಲ್ಟ್ ಒಡೆಯಲು ವಿಫಲವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕಳ್ಳರು ಹೊರಡುವ ಮೊದಲು ಅಂಗಡಿ ಮಾಲೀಕರಿಗೆ ಕ್ಷಮೆಯಾಚನೆಯ ಟಿಪ್ಪಣಿಯನ್ನು ಬರೆದಿದ್ದಾರೆ. “ನಮ್ಮನ್ನು ಕ್ಷಮಿಸಿ,” ಎಂದು ಚುನ್ನು, ಮುನ್ನು ಎಂದು ಅದರಲ್ಲಿ ಬರೆದಿದ್ದಾರೆ. ಮೀರತ್‌ನ ರಿಥಾನಿ ಪ್ರದೇಶದಲ್ಲಿ ಆಭರಣ ಮಳಿಗೆಯ ಮಾಲೀಕ ದೀಪಕ್ ಕುಮಾರ್ ಗುರುವಾರ ಬೆಳಗ್ಗೆ ಅಂಗಡಿ ತೆರೆದಾಗ ಕಳ್ಳತನಕ್ಕೆ ಯತ್ನಿಸಿರುವುದು ಬೆಳಕಿಗೆ ಬಂದಿದೆ. ಕಳ್ಳರು ಗ್ಯಾಸ್ ಕಟ್ಟರ್ ತಂದಿದ್ದರೂ ಅದು ವಾಲ್ಟ್ ಒಡೆಯಲು ಸಾಕಾಗಲಿಲ್ಲ.

“ಅವರು ಬುಧವಾರ ರಾತ್ರಿ ಅಂಗಡಿಗೆ ನುಗ್ಗಿದ್ದರು. ಗ್ಯಾಸ್ ಕಟ್ಟರ್ ಬಳಸಿ ವಾಲ್ಟ್ ಅನ್ನು ಒಡೆಯಲು ಪ್ರಯತ್ನಿಸಿ ಆದರೆ ವಿಫಲರಾದರು” ಎಂದು ಕುಮಾರ್ ಹೇಳಿರುವುದಾಗಿ ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಗುರುವಾರ ಅಂಗಡಿ ತೆರೆದಾಗ ಶ್ರೀಕೃಷ್ಣನ ವಿಗ್ರಹ ಗೋಡೆಗೆ ಎದುರಾಗಿತ್ತು. ದೇವರು ನಮ್ಮನ್ನು ನೋಡುತ್ತಿದ್ದಾನೆ ಎಂದು ಅವರು ಕಳ್ಳತನ ಮಾಡಿಲ್ಲ, ಅವರು ದೇವರ ವಿಗ್ರಹವನ್ನು ತಿರುಗಿಸಿಟ್ಟು ಹೋಗಿದ್ದಾರೆ ಎಂದು ಕುಮಾರ್ ಹೇಳಿದ್ದಾರೆ. ಅವರು ಸಿಸಿಟಿವಿ ಕ್ಯಾಮೆರಾಗಳ ಬಗ್ಗೆ ಜಾಗರೂಕರಾಗಿದ್ದು  ವಿಡಿಯೊ ರೆಕಾರ್ಡಿಂಗ್ ಸಂಗ್ರಹಿಸಿದ ಹಾರ್ಡ್ ಡಿಸ್ಕ್ ಅನ್ನು ತೆಗೆದುಕೊಂಡು ಹೋಗಿದ್ದಾರೆ.

ಇದನ್ನೂ ಓದಿ: ಅಖಿಲೇಶ್ ಯಾದವ್ ಬೆಂಗಾವಲು ವಾಹನ ಅಪಘಾತ; ಹಲವರಿಗೆ ಗಾಯ

ಪೊಲೀಸ್ ತಂಡಗಳು ಪ್ರದೇಶದಲ್ಲಿ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿವೆ. “ಸುರಂಗವನ್ನು ಅಗೆದು ಹಲವು ದಿನಗಳು ಕಳೆದಿರಬೇಕು ಮತ್ತು ಸಿಸಿಟಿವಿ ದೃಶ್ಯಗಳಲ್ಲಿ ಕಂಡುಬರುವ ಪ್ರದೇಶದಲ್ಲಿನ ಜನರ ಚಲನವಲನವನ್ನು ಪತ್ತೆಹಚ್ಚುವ ಮೂಲಕ ನಾವು ಕಳ್ಳರನ್ನು ಗುರುತಿಸಲು ಪ್ರಯತ್ನಿಸುತ್ತಿದ್ದೇವೆ” ಎಂದು ಬ್ರಹ್ಮಪುರಿ ವಲಯದ ವೃತ್ತ ಅಧಿಕಾರಿ ಸುಚಿತಾ ಸಿಂಗ್ ಹೇಳಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಒಪ್ಪಿಕೊಳ್ಳೋದು ನಮ್ಮ ಧರ್ಮ: ಸಾ.ರಾ. ಗೋವಿಂದು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಒಪ್ಪಿಕೊಳ್ಳೋದು ನಮ್ಮ ಧರ್ಮ: ಸಾ.ರಾ. ಗೋವಿಂದು
ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಹವಣಿಕೆಯಲ್ಲಿದೆ: ಅಶೋಕ
ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಹವಣಿಕೆಯಲ್ಲಿದೆ: ಅಶೋಕ
ಲಿಸ್ಟ್​ನಲ್ಲಿ ಹೆಸರಿಲ್ಲ, ಒಳಗೆ ಬಿಡಲ್ಲ ಅಂತ ಪೊಲೀಸ್ ಹೇಳಿದ್ದಕ್ಕೆ ಸಿಟ್ಟು
ಲಿಸ್ಟ್​ನಲ್ಲಿ ಹೆಸರಿಲ್ಲ, ಒಳಗೆ ಬಿಡಲ್ಲ ಅಂತ ಪೊಲೀಸ್ ಹೇಳಿದ್ದಕ್ಕೆ ಸಿಟ್ಟು
ಕೇರಳ ಮಾದರಿ ಹತ್ಯೆ ಕರ್ನಾಟಕದ ಕರಾವಳಿ ಪ್ರಾಂತ್ಯದಲ್ಲಿ ನಡೆಯುತ್ತಿವೆ: ಸಿಂಹ
ಕೇರಳ ಮಾದರಿ ಹತ್ಯೆ ಕರ್ನಾಟಕದ ಕರಾವಳಿ ಪ್ರಾಂತ್ಯದಲ್ಲಿ ನಡೆಯುತ್ತಿವೆ: ಸಿಂಹ
ಶಾಲೆ ಜತೆ ಮಳೆಯ ಆರಂಭ, ಮಕ್ಕಳ ಆರೋಗ್ಯ ಮುಂಜಾಗೃತೆ ಹೇಗೆ?
ಶಾಲೆ ಜತೆ ಮಳೆಯ ಆರಂಭ, ಮಕ್ಕಳ ಆರೋಗ್ಯ ಮುಂಜಾಗೃತೆ ಹೇಗೆ?
ಇವತ್ತು ಚಾಮುಂಡಿತಾಯಿ ದರ್ಶನದ ನಂತರ ನಾಳೆ ಬೆಂಗಳೂರಲ್ಲಿ ಓಡಾಡಲಿದೆ ಕಾರು!
ಇವತ್ತು ಚಾಮುಂಡಿತಾಯಿ ದರ್ಶನದ ನಂತರ ನಾಳೆ ಬೆಂಗಳೂರಲ್ಲಿ ಓಡಾಡಲಿದೆ ಕಾರು!
ಅಸ್ಸಾಂನ ಸಿಲ್ಚಾರ್​​ನಲ್ಲಿ 132 ವರ್ಷಗಳ ದಾಖಲೆ ಮುರಿದ ಮಳೆ
ಅಸ್ಸಾಂನ ಸಿಲ್ಚಾರ್​​ನಲ್ಲಿ 132 ವರ್ಷಗಳ ದಾಖಲೆ ಮುರಿದ ಮಳೆ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ