AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengal Crime: ಮಹಿಳೆ ಕಾಣೆಯಾಗಿ 3 ವರ್ಷಗಳ ಬಳಿಕ ಸೆಪ್ಟಿಕ್ ಟ್ಯಾಂಕ್​ನಲ್ಲಿ ಪತ್ತೆಯಾಯ್ತು ಅಸ್ಥಿಪಂಜರ

ಮಹಿಳೆಯೊಬ್ಬಳು ಕಾಣೆಯಾಗಿ 3 ವರ್ಷಗಳ ಬಳಿಕ ಸೆಪ್ಟಿಕ್ ಟ್ಯಾಂಕ್​ನಲ್ಲಿ ಆಕೆಯ ಅಸ್ಥಿಪಂಜರ ಪತ್ತೆಯಾಗಿದೆ. ಈ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆಸಿದೆ.

Bengal Crime: ಮಹಿಳೆ ಕಾಣೆಯಾಗಿ 3 ವರ್ಷಗಳ ಬಳಿಕ ಸೆಪ್ಟಿಕ್ ಟ್ಯಾಂಕ್​ನಲ್ಲಿ ಪತ್ತೆಯಾಯ್ತು ಅಸ್ಥಿಪಂಜರ
Crime Scene
Follow us
ನಯನಾ ರಾಜೀವ್
|

Updated on: Jun 25, 2023 | 10:59 AM

ಮಹಿಳೆಯೊಬ್ಬಳು ಕಾಣೆಯಾಗಿ 3 ವರ್ಷಗಳ ಬಳಿಕ ಸೆಪ್ಟಿಕ್ ಟ್ಯಾಂಕ್​ನಲ್ಲಿ ಆಕೆಯ ಅಸ್ಥಿಪಂಜರ ಪತ್ತೆಯಾಗಿದೆ. ಈ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆಸಿದೆ. ಸಿಐಡಿ ಸೆಪ್ಟಿಕ್ ಟ್ಯಾಂಕ್​ನಿಂದ ಆಕೆಯ ಅಸ್ಥಿಪಂಜರವನ್ನು ವಶಪಡಿಸಿಕೊಂಡಿದೆ. ಈ ಬೆಳವಣಿಗೆಯ ನಂತರ ಮೃತ ಮಹಿಳೆಯ ಪತಿಯನ್ನು ಬಂಧಿಸಿ ಆಕೆಯ ಕೊಲೆ ಆರೋಪ ಹೊರಿಸಲಾಗಿದೆ. ತುಂಪಾ ಮಂಡಲ್ ಎಂಬ ಮಹಿಳೆ ಮಾರ್ಚ್ 2020 ರಲ್ಲಿ ನಾಪತ್ತೆಯಾಗಿದ್ದರು, ನಂತರ ಆಕೆಯ ತಂದೆ ಲಕ್ಷ್ಮಣ್ ಹಲ್ದರ್ ಅವರು ಪೊಲೀಸರಿಗೆ ಕಾಣೆಯಾದ ದೂರು ದಾಖಲಿಸಿದ್ದರು.

ಏಪ್ರಿಲ್ 2020 ರಲ್ಲಿ, ಪ್ರಾಥಮಿಕ ತನಿಖೆಯ ನಂತರ ಪೊಲೀಸರು ಮಹಿಳೆಯ ಪತಿ ಬೊಂಬಲ್ ಮಂಡಲ್ ಅವರನ್ನು ಬಂಧಿಸಲಾಗಿತ್ತು. ಆದರೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಸಾಕ್ಷ್ಯಾಧಾರಗಳು ಪೊಲೀಸರಿಗೆ ಸಿಗದ ಹಿನ್ನೆಲೆಯಲ್ಲಿ ನ್ಯಾಯಾಲಯ ಅವರಿಗೆ ಜಾಮೀನು ಮಂಜೂರು ಮಾಡಿತ್ತು.

ಮಹಿಳೆಯ ತಂದೆ ನಂತರ ಪ್ರಕರಣದ ಉನ್ನತ ತನಿಖಾ ಸಂಸ್ಥೆಗಾಗಿ ಕೋಲ್ಕತ್ತಾ ಹೈಕೋರ್ಟ್ ಅನ್ನು ಸಂಪರ್ಕಿಸಿದರು. ಅವರ ಮನವಿಗೆ ಪ್ರತಿಕ್ರಿಯೆಯಾಗಿ ಕೋಲ್ಕತ್ತಾ ಹೈಕೋರ್ಟ್ ಈ ಪ್ರಕರಣವನ್ನು ಪಶ್ಚಿಮ ಬಂಗಾಳ ಸಿಐಡಿಗೆ ಹಸ್ತಾಂತರಿಸಿತ್ತು. ಜೂನ್ 13 ರಂದು, ಹೈಕೋರ್ಟ್ ಆದೇಶದ ಮೇರೆಗೆ ಸಿಐಡಿ ಘಟನೆಯ ತನಿಖೆಯನ್ನು ಕೈಗೆತ್ತಿಕೊಂಡರು.

ತನಿಖಾ ಸಂಸ್ಥೆಯು ಮಹಿಳೆಯ ಪತಿಯನ್ನು ಮತ್ತೆ ಪ್ರಶ್ನಿಸಿದ್ದು, 10 ದಿನಗಳಲ್ಲಿ ಪತಿ ತನ್ನ ಹೆಂಡತಿಯನ್ನು ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಆಕೆಯ ಶವವನ್ನು ಸೆಪ್ಟಿಕ್ ಟ್ಯಾಂಕ್‌ನಲ್ಲಿ ಶೇಖರಿಸಿಟ್ಟಿರುವುದಾಗಿಯೂ ಆತ ಹೇಳಿದ್ದಾನೆ, ಬೊಂಬಾಲ್ ಮಂಡಲ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302 ರ ಅಡಿಯಲ್ಲಿ ಕೊಲೆ ಪ್ರಕರಣವನ್ನು ದಾಖಲಿಸಲಾಗಿದೆ.

2020ರಲ್ಲಿ ಬೆಂಗಾಲ್‌ನ ಮಿಲನ್‌ಪಲ್ಲಿಯಲ್ಲಿ ದಂಪತಿ ಬಾಡಿಗೆ ಮನೆಯಲ್ಲಿದ್ದಾಗ ಪತ್ನಿಯನ್ನು ಕೊಂದು ಶವವನ್ನು ಸೆಪ್ಟಿಕ್ ಟ್ಯಾಂಕ್‌ಗೆ ಎಸೆದಿರುವುದಾಗಿ ಒಪ್ಪಿಕೊಂಡಿದ್ದಾನೆ.

ಆರೋಪಿಗಳು ಬಹಿರಂಗಪಡಿಸಿದ ಸ್ಥಳದಲ್ಲಿ ಸಿಐಡಿ ಸೆಪ್ಟಿಕ್ ಟ್ಯಾಂಕ್ ಅನ್ನು ಪರಿಶೀಲಿಸಿದಾಗ, ಮಹಿಳೆಯ ಅಸ್ಥಿಪಂಜರ ಮತ್ತು ಆಭರಣಗಳು ಪತ್ತೆಯಾಗಿವೆ.

ಸಿಐಡಿ ಮೂಲಗಳ ಪ್ರಕಾರ ಆರೋಪಿಯು ತುಂಪಾಳನ್ನು ತಲೆದಿಂಬಿನಿಂದ ಉಸಿರುಗಟ್ಟಿಸಿ ಕೊಂದಿದ್ದಾನೆ. ಪತ್ನಿಗೆ ವಿವಾಹೇತರ ಸಂಬಂಧವಿದೆ ಎಂಬ ಶಂಕೆಯಿಂದ ಆರೋಪಿ ಕೊಲೆ ಮಾಡಿದ್ದಾನೆ ಎಂದು ಅಧಿಕಾರಿಗಳು ಶಂಕಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್
ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಕಮಲ್ ಹಾಸನ್ ವಿಚಾರ: ಕಾನೂನು ಕೈಗೆ ತೆಗೆದುಕೊಳ್ಳದಂತೆ ಡಿಕೆಶಿ ಮನವಿ
ಕಮಲ್ ಹಾಸನ್ ವಿಚಾರ: ಕಾನೂನು ಕೈಗೆ ತೆಗೆದುಕೊಳ್ಳದಂತೆ ಡಿಕೆಶಿ ಮನವಿ