AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಣದ ವಿಚಾರಕ್ಕೆ ತಂದೆಯನ್ನೇ ಕೊಲೆ ಮಾಡಿ, ದೇಹವನ್ನು ಕತ್ತರಿಸಿ ಬಿಸಾಡಿದ ಮಗ

ಮಗ, ತಂದೆಯನ್ನೇ ಕೊಲೆ ಮಾಡಿ, ನಂತರ ತಂದೆಯ ದೇಹವನ್ನು ಕತ್ತರಿಸಿ ಬಿಸಾಡಿರುವ ಘಟನೆ ಪಶ್ಚಿಮ ಬಂಗಾಳದ ಬರುಯಿಪುರದಲ್ಲಿ ನಡೆದಿದೆ.

ಹಣದ ವಿಚಾರಕ್ಕೆ ತಂದೆಯನ್ನೇ ಕೊಲೆ ಮಾಡಿ, ದೇಹವನ್ನು ಕತ್ತರಿಸಿ ಬಿಸಾಡಿದ ಮಗ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Nov 21, 2022 | 12:24 AM

Share

ಪಶ್ಚಿಮ ಬಂಗಾಳ: ದೆಹಲಿಯ ಶ್ರದ್ಧಾ ಪ್ರಕರಣ ಮಾಸುವ ಮುನ್ನವೇ, ಪಶ್ಚಿಮ ಬಂಗಾಳದ (West Bengal) ಬರುಯಿಪುರದಲ್ಲಿ ಹೃದಯವಿದ್ರಾಹಕ ಘಟನೆಯೊಂದು ನಡೆದಿದೆ. ಮಗ, ತಂದೆಯನ್ನೇ ಕೊಲೆ ಮಾಡಿ, ನಂತರ ತಂದೆಯ ದೇಹವನ್ನು ಕತ್ತರಿಸಿ ಬಿಸಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮೃತ ವ್ಯಕ್ತಿ ಮಾಜಿ ನೌಕಾಪಡೆಯ ಉಜ್ವಲ್ ಚಕ್ರವರ್ತಿ (55) ಎಂದು ಗುರುತಿಸಲಾಗಿದೆ. ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ನಿ ಶ್ಯಾಮಲಿ (48) ಮತ್ತು ಮಗ ಜಾಯ್ (25) ನನ್ನು ಪೊಲೀಸರು ಬಂಧಿಸಿದ್ದಾರೆ.

ನವೆಂಬರ್ 13 ರಂದು ಮಗ ಜಾಯ್, ತಂದೆ ಉಜ್ವಲ್ ಚಕ್ರವರ್ತಿಯನ್ನು ಕೊಲೆ ಮಾಡಿದ್ದಾನೆ. ನಂತರ ಮಗ, ತಾಯಿ ಶ್ಯಾಮಲಿ ಸಹಾಯದಿಂದ ಉಜ್ವಲ್ ಚಕ್ರವರ್ತಿ ಅವರ ದೇಹವನ್ನು ಕತ್ತರಿಸಿ ಕೊಳಗಳು ಮತ್ತು ಪೊದೆಗಳಲ್ಲಿ ಎಸೆದಿದ್ದಾನೆ. ಬಳಿಕ ಇಬ್ಬರೂ ಉಜ್ವಲ್ ಚಕ್ರವರ್ತಿ ಕಾಣೆಯಾಗಿದ್ದಾರೆ ಎಂದು ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಕೆಲವು ದಿನಗಳ ಬಳಿಕ ಉಜ್ವಲ್ ಚಕ್ರವರ್ತಿ ಅವರ ತೆಲೆ ಹರಿಹರಪುರ ಕೊಳದಲ್ಲಿ ಪತ್ತೆಯಾಗಿದೆ. ಇದರಿಂದ ಪ್ರಕರಣ ಬೆಳಕಿಗೆ ಬಂದಿದೆ ಎಂದು ಖಾಸಗಿ ಸುದ್ದಿ ಸಂಸ್ಥೆ  ಟೈಮ್ಸ್​​ ​ ನೌ ವರದಿ ಮಾಡಿದೆ. ಇನ್ನೂ ಉಜ್ವಲ್ ಚಕ್ರವರ್ತಿ ದೇಹವನ್ನು ಪ್ಲಾಸ್ಟಿಕ್‌ನಲ್ಲಿ ಸುತ್ತಿ ಎಸೆದಿದ್ದಾನೆ. ದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಇದರಿಂದ ಅನುಮಾನಗೊಂಡ ಪೊಲೀಸ್​ರು ತಾಯಿ-ಮಗನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಸತ್ಯ ಬಾಯಿ ಬಿಟ್ಟಿದ್ದಾರೆ. ಜಾಯ್​ ಪಾಲಿಟೆಕ್ನಿಕ್‌ (carpentry polytechnic) ಓದುತ್ತಿದ್ದಾನೆ. ಜಾಯ್​ ಪರೀಕ್ಷಾ ಶುಲ್ಕ ತುಂಬಲು 3,000 ರೂಪಾಯಿಯನ್ನು ತಂದೆ ಬಳಿ ಕೇಳಿದ್ದಾನೆ. ಇದಕ್ಕೆ ಉಜ್ವಲ್ ಚಕ್ರವರ್ತಿ ಹಣ ಕೊಡಲು ನಿರಾಕರಿಸಿದ್ದಾರೆ. ಅಲ್ಲದೇ ಜಾಯ್​ಗೆ ಹೊಡೆದಿದ್ದಾರೆ. ಇದರಿಂದ ಕೋಪಗೊಂಡ ಜಾಯ್​​, ತಂದೆಯನ್ನು ತಳ್ಳಿದ್ದಾನೆ.  ನಂತರ ಕೆಳಗೆ ಬಿದ್ದ ತಂದೆಯ ಕತ್ತು ಹಿಸುಕಿ ಕೊಂದಿದ್ದಾನೆ ಎಂದು ವಿಚಾರಣೆ ವೇಳೆ ಬಾಯಿ ಬಿಟ್ಟಿದ್ದಾನೆ.

ಪ್ರಾಥಮಿಕ ಮರಣೋತ್ತರ ಪರೀಕ್ಷೆಯ ವರದಿಗಳ ಪ್ರಕಾರ ದೇಹದ ಮೇಲೆ ಹಲವಾರು ಗಾಯದ ಗುರುತುಗಳಿವೆ. ಉಜ್ವಲ್ ಚಕ್ರವರ್ತಿಯನ್ನು ಕತ್ತು ಹಿಸುಕಿ ಕೊಲೆ ಮಾಡಲಾಗಿದೆ ಎಂದು ಬರುಯಿಪುರ ಎಸ್ಪಿ ಪುಷ್ಪಾ ತಿಳಿಸಿದ್ದಾರೆ.

Published On - 11:08 pm, Sun, 20 November 22

Follow Us
Web contact
Web contact

TV9 Kannada

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ