AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಬೈಲ್​ ಕಳ್ಳತನ: ಅಬ್ದುಲ್ ರಜಾಕ್ ಬಂಧನ

ಜೀವನ ನಡೆಸಲು ಬಾಲ್ಯದಿಂದ ಕಳ್ಳತನ ಮಾಡಿಕೊಂಡು ಬಂದಿದ್ದ ಆರೋಪಿ ಮುಂದೆ ಗಾಂಜಾ ನಶೆಗಾಗಿ ಬೆಂಗಳೂರಿನಲ್ಲಿ ಕಳೆದ ಎರಡು ವರ್ಷಗಳಿಂದ ಮೊಬೈಲ್​ ಕಳ್ಳತನ ಮಾಡಲು ಆರಂಭಿಸಿದನು. ಸದ್ಯ ಈ ಆರೋಪಿಯನ್ನು ವೈಟ್​ಫೀಲ್ಡ್ ಪೊಲೀಸರು ಬಂಧಿಸಿದ್ದಾರೆ.

ಮೊಬೈಲ್​ ಕಳ್ಳತನ: ಅಬ್ದುಲ್ ರಜಾಕ್ ಬಂಧನ
ಆರೋಪಿ ಅಬ್ದುಲ್ ರಜಾಕ್
Jagadisha B
| Edited By: |

Updated on: Jul 30, 2024 | 2:53 PM

Share

ಬೆಂಗಳೂರು, ಜುಲೈ 30: ಗಾಂಜಾ ಕೊಂಡುಕೊಳ್ಳಲು ಮೊಬೈಲ್​ (Mobile) ಕದಿಯುತ್ತಿದ್ದ ಆರೋಪಿಯನ್ನು ವೈಟ್​ಫೀಲ್ಡ್ ಪೊಲೀಸರು (Whitefield Police) ಬಂಧಿಸಿದ್ದಾರೆ. ಬಿಹಾರ ಮೂಲದ ಅಬ್ದುಲ್ ರಜಾಕ್ (22) ಬಂಧಿತ ಆರೋಪಿ. ಬಂಧಿತ ಆರೋಪಿ ಅಬ್ದುಲ್ ರಜಾಕ್​​ನಿಂದ 32 ಮೊಬೈಲ್​ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಅಬ್ದುಲ್ ರಜಾಕ್ ಬೆಂಗಳೂರಿನ ಕಾಡುಗೋಡಿಯಲ್ಲಿ ವಾಸವಾಗಿದ್ದನು. ಅಬ್ದುಲ್ ರಜಾಕ್ (Abdul Razak) ಚಿಕ್ಕವಯಸ್ಸಿನಿಂದಲೇ ಕಳ್ಳತನಕ್ಕೆ ಇಳಿದಿದ್ದನು.

ಕಳೆದ ಎರಡು ವರ್ಷಗಳಿಂದ ನಗರದ ಪಿಜಿ, ಕಾರು ಪಾರ್ಕಿಂಗ್​, ಕಟ್ಟಡ ನಿರ್ಮಾಣ ಸ್ಥಳಗಳಲ್ಲಿ ಮೊಬೈಲ್ ಕಳ್ಳತನ ಮಾಡುತ್ತಿದ್ದನು. ಕದ್ದ ಮೊಬೈಲ್​ಗಳನ್ನು ಬಡವರಿಗೆ 2 ರಿಂದ 3 ಸಾವಿರ ರೂ.ಗೆ ಮಾರುತ್ತಿದ್ದನು. ಬಂದ ಹಣದಲ್ಲಿ ಗಾಂಜಾ ಖರೀದಿ ಮಾಡುತ್ತಿದ್ದನು. ಈತನ ಕೃತ್ಯದ ಬಗ್ಗೆ ವೈಟ್​ಫೀಲ್ಡ್ ಪೊಲೀಸ ಖಚಿತ ಮಾಹಿತಿ ಪಡೆದುಕೊಂಡಿದ್ದರು. ಮಾಹಿತಿ ಮೇರೆಗೆ ಪೊಲೀಸರು ಆರೋಪಿ ಅಬ್ದುಲ್ ರಜಾಕ್ ನಿವಾಸದ ಮೇಲೆ ದಾಳಿ ಮಾಡಿ ಬಂಧಿಸಿದ್ದಾರೆ.

ಹಾಸನದಿಂದ ಬಂದು ಬೆಂಗಳೂರಿನಲ್ಲಿ ಮನೆಗಳ್ಳತನ ಮಾಡುತ್ತಿದ್ದ ಆರೋಪಿ

ಮತ್ತೊಂದು ಪ್ರಕರಣದಲ್ಲಿ ಮನೆ ದರೋಡೆ ಮಾಡುತ್ತಿದ್ದ ಆರೋಪಿಯನ್ನು ಸೋಲದೇವನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಶೋಯೆಬ್ ಪಾಷಾ ಅಲಿಯಾಸ್ ತುರುಕಾ ಬಾಬು‌ ಬಂಧಿತ ಆರೋಪಿ. ಆರೋಪಿ ಶೋಯೆಬ್ ಪಾಷಾ ಐದು ಮನೆಗಳಲ್ಲಿ ದರೋಡೆ ಮಾಡಿದ್ದಾನೆ. ಬಂಧಿತನಿಂದ 101 ಗ್ರಾಂ ತೂಕದ ಚಿನ್ನಾಭರಣ, ಒಂದು ಬೈಕ್, ಎರಡು ಲ್ಯಾಪ್ ಟಾಪ್​ ವಶಪಡಿಸಿಕೊಳ್ಳಲಾಗಿದೆ.

ಇದನ್ನೂ ಓದಿ: ಪ್ರೀತಿಸಿ ಮದುವೆಯಾಗಿದ್ದ ಪತಿಯನ್ನೇ ಕೊಲೆ ಮಾಡಿಸಿದ ಪತ್ನಿ ಅರೆಸ್ಟ್, ಸಹೋದರ, ಪ್ರಿಯತಮನಿಗಾಗಿ ಹುಡುಕಾಟ

ಆರೋಪಿ ಶೋಯೆಬ್ ಪಾಷಾ ಹಾಸನದಿಂದ ತುಮಕೂರುವರೆಗೆ ರೈಲಿನಲ್ಲಿ ಬರುತ್ತಿದ್ದನು. ತುಮಕೂರು ರೈಲು ನಿಲ್ದಾಣದಲ್ಲಿ ಟಿವಿಎಸ್ ಅಪಾಚೆ ಬೈಕ್ ಹತ್ತಿ ನೆಲಮಂಗಲಕ್ಕೆ ಬರುತ್ತಿದ್ದನು. ಲಾಡ್ಜ್​ವೊಂದರಲ್ಲಿ ರೂಮ್ ಮಾಡಿಕೊಂಡು ಇರುತ್ತಿದ್ದನು. ಬಳಿಕ ಎರಡು ದಿನ ಬೀಗ ಹಾಕಿದ ಮನೆಗಳಿಗಾಗಿ ಹುಡುಕಾಟ ನಡೆಸುತ್ತಿದ್ದನು. ತಾನು ಟಾರ್ಗೆಟ್​ ಮಾಡಿದ್ದ ಮನೆಗಳಿಗೆ ರಾತ್ರಿ ವೇಳೆ ತೆರಳಿ, ಬೀಗ ಒಡೆದು ಒಳ ನುಗ್ಗಿ ಚಿನ್ನಾಭರಣ ಕಳ್ಳತನ ಮಾಡುತ್ತಿದ್ದನು.

ನಂತರ ಲಾಡ್ಜ್​​ಗೆ ವಾಪಸ್​ ಆಗಿ, ಒಂದು ದಿನ ಅಲ್ಲೇ ಉಳಿದುಕೊಳ್ಳುತ್ತಿದ್ದನು. ಬಳಿಕ ಬೈಕ್​ನಲ್ಲಿ ತುಮಕೂರಿಗೆ ಹೋಗುತ್ತಿದ್ದನು. ತುಮಕೂರು ರೈಲು ನಿಲ್ದಾಣದಲ್ಲಿ ಬೈಕ್​ ಪಾರ್ಕ್​ ಮಾಡಿ ರೈಲು ಹತ್ತಿ ಹಾಸನಕ್ಕೆ ಹೋಗುತ್ತಿದ್ದನು. ಪ್ರತಿಬಾರಿ ಕಳ್ಳತನಕ್ಕೆ ಇಳಿದಾಗ ಇದೇ ರೀತಿ ಮಾಡುತ್ತಿದ್ದನು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Jagadisha B
Jagadisha B

ಜಗದೀಶ್​ ಬಸವರಾಜು ಟಿವಿ9 ಕನ್ನಡದ ವರದಿಗಾರರಲ್ಲಿ ಒಬ್ಬರು. ಪ್ರಸ್ತುತ ಅವರು ತುಮಕುರು ಜಿಲ್ಲಾ ಸುದ್ದಿಗಳ ವರದಿ ಮಾಡುತ್ತಿದ್ದಾರೆ.

Read More
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಎಲೆಕ್ಟ್ರಿಕ್ ಕಾರಿನ ಭೀಕರ ಅಪಘಾತದ ವಿಡಿಯೋ ವೈರಲ್
ಎಲೆಕ್ಟ್ರಿಕ್ ಕಾರಿನ ಭೀಕರ ಅಪಘಾತದ ವಿಡಿಯೋ ವೈರಲ್
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ