AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಬೈಲ್​ ಕಳ್ಳತನ: ಅಬ್ದುಲ್ ರಜಾಕ್ ಬಂಧನ

ಜೀವನ ನಡೆಸಲು ಬಾಲ್ಯದಿಂದ ಕಳ್ಳತನ ಮಾಡಿಕೊಂಡು ಬಂದಿದ್ದ ಆರೋಪಿ ಮುಂದೆ ಗಾಂಜಾ ನಶೆಗಾಗಿ ಬೆಂಗಳೂರಿನಲ್ಲಿ ಕಳೆದ ಎರಡು ವರ್ಷಗಳಿಂದ ಮೊಬೈಲ್​ ಕಳ್ಳತನ ಮಾಡಲು ಆರಂಭಿಸಿದನು. ಸದ್ಯ ಈ ಆರೋಪಿಯನ್ನು ವೈಟ್​ಫೀಲ್ಡ್ ಪೊಲೀಸರು ಬಂಧಿಸಿದ್ದಾರೆ.

ಮೊಬೈಲ್​ ಕಳ್ಳತನ: ಅಬ್ದುಲ್ ರಜಾಕ್ ಬಂಧನ
ಆರೋಪಿ ಅಬ್ದುಲ್ ರಜಾಕ್
Jagadisha B
| Edited By: |

Updated on: Jul 30, 2024 | 2:53 PM

Share

ಬೆಂಗಳೂರು, ಜುಲೈ 30: ಗಾಂಜಾ ಕೊಂಡುಕೊಳ್ಳಲು ಮೊಬೈಲ್​ (Mobile) ಕದಿಯುತ್ತಿದ್ದ ಆರೋಪಿಯನ್ನು ವೈಟ್​ಫೀಲ್ಡ್ ಪೊಲೀಸರು (Whitefield Police) ಬಂಧಿಸಿದ್ದಾರೆ. ಬಿಹಾರ ಮೂಲದ ಅಬ್ದುಲ್ ರಜಾಕ್ (22) ಬಂಧಿತ ಆರೋಪಿ. ಬಂಧಿತ ಆರೋಪಿ ಅಬ್ದುಲ್ ರಜಾಕ್​​ನಿಂದ 32 ಮೊಬೈಲ್​ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಅಬ್ದುಲ್ ರಜಾಕ್ ಬೆಂಗಳೂರಿನ ಕಾಡುಗೋಡಿಯಲ್ಲಿ ವಾಸವಾಗಿದ್ದನು. ಅಬ್ದುಲ್ ರಜಾಕ್ (Abdul Razak) ಚಿಕ್ಕವಯಸ್ಸಿನಿಂದಲೇ ಕಳ್ಳತನಕ್ಕೆ ಇಳಿದಿದ್ದನು.

ಕಳೆದ ಎರಡು ವರ್ಷಗಳಿಂದ ನಗರದ ಪಿಜಿ, ಕಾರು ಪಾರ್ಕಿಂಗ್​, ಕಟ್ಟಡ ನಿರ್ಮಾಣ ಸ್ಥಳಗಳಲ್ಲಿ ಮೊಬೈಲ್ ಕಳ್ಳತನ ಮಾಡುತ್ತಿದ್ದನು. ಕದ್ದ ಮೊಬೈಲ್​ಗಳನ್ನು ಬಡವರಿಗೆ 2 ರಿಂದ 3 ಸಾವಿರ ರೂ.ಗೆ ಮಾರುತ್ತಿದ್ದನು. ಬಂದ ಹಣದಲ್ಲಿ ಗಾಂಜಾ ಖರೀದಿ ಮಾಡುತ್ತಿದ್ದನು. ಈತನ ಕೃತ್ಯದ ಬಗ್ಗೆ ವೈಟ್​ಫೀಲ್ಡ್ ಪೊಲೀಸ ಖಚಿತ ಮಾಹಿತಿ ಪಡೆದುಕೊಂಡಿದ್ದರು. ಮಾಹಿತಿ ಮೇರೆಗೆ ಪೊಲೀಸರು ಆರೋಪಿ ಅಬ್ದುಲ್ ರಜಾಕ್ ನಿವಾಸದ ಮೇಲೆ ದಾಳಿ ಮಾಡಿ ಬಂಧಿಸಿದ್ದಾರೆ.

ಹಾಸನದಿಂದ ಬಂದು ಬೆಂಗಳೂರಿನಲ್ಲಿ ಮನೆಗಳ್ಳತನ ಮಾಡುತ್ತಿದ್ದ ಆರೋಪಿ

ಮತ್ತೊಂದು ಪ್ರಕರಣದಲ್ಲಿ ಮನೆ ದರೋಡೆ ಮಾಡುತ್ತಿದ್ದ ಆರೋಪಿಯನ್ನು ಸೋಲದೇವನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಶೋಯೆಬ್ ಪಾಷಾ ಅಲಿಯಾಸ್ ತುರುಕಾ ಬಾಬು‌ ಬಂಧಿತ ಆರೋಪಿ. ಆರೋಪಿ ಶೋಯೆಬ್ ಪಾಷಾ ಐದು ಮನೆಗಳಲ್ಲಿ ದರೋಡೆ ಮಾಡಿದ್ದಾನೆ. ಬಂಧಿತನಿಂದ 101 ಗ್ರಾಂ ತೂಕದ ಚಿನ್ನಾಭರಣ, ಒಂದು ಬೈಕ್, ಎರಡು ಲ್ಯಾಪ್ ಟಾಪ್​ ವಶಪಡಿಸಿಕೊಳ್ಳಲಾಗಿದೆ.

ಇದನ್ನೂ ಓದಿ: ಪ್ರೀತಿಸಿ ಮದುವೆಯಾಗಿದ್ದ ಪತಿಯನ್ನೇ ಕೊಲೆ ಮಾಡಿಸಿದ ಪತ್ನಿ ಅರೆಸ್ಟ್, ಸಹೋದರ, ಪ್ರಿಯತಮನಿಗಾಗಿ ಹುಡುಕಾಟ

ಆರೋಪಿ ಶೋಯೆಬ್ ಪಾಷಾ ಹಾಸನದಿಂದ ತುಮಕೂರುವರೆಗೆ ರೈಲಿನಲ್ಲಿ ಬರುತ್ತಿದ್ದನು. ತುಮಕೂರು ರೈಲು ನಿಲ್ದಾಣದಲ್ಲಿ ಟಿವಿಎಸ್ ಅಪಾಚೆ ಬೈಕ್ ಹತ್ತಿ ನೆಲಮಂಗಲಕ್ಕೆ ಬರುತ್ತಿದ್ದನು. ಲಾಡ್ಜ್​ವೊಂದರಲ್ಲಿ ರೂಮ್ ಮಾಡಿಕೊಂಡು ಇರುತ್ತಿದ್ದನು. ಬಳಿಕ ಎರಡು ದಿನ ಬೀಗ ಹಾಕಿದ ಮನೆಗಳಿಗಾಗಿ ಹುಡುಕಾಟ ನಡೆಸುತ್ತಿದ್ದನು. ತಾನು ಟಾರ್ಗೆಟ್​ ಮಾಡಿದ್ದ ಮನೆಗಳಿಗೆ ರಾತ್ರಿ ವೇಳೆ ತೆರಳಿ, ಬೀಗ ಒಡೆದು ಒಳ ನುಗ್ಗಿ ಚಿನ್ನಾಭರಣ ಕಳ್ಳತನ ಮಾಡುತ್ತಿದ್ದನು.

ನಂತರ ಲಾಡ್ಜ್​​ಗೆ ವಾಪಸ್​ ಆಗಿ, ಒಂದು ದಿನ ಅಲ್ಲೇ ಉಳಿದುಕೊಳ್ಳುತ್ತಿದ್ದನು. ಬಳಿಕ ಬೈಕ್​ನಲ್ಲಿ ತುಮಕೂರಿಗೆ ಹೋಗುತ್ತಿದ್ದನು. ತುಮಕೂರು ರೈಲು ನಿಲ್ದಾಣದಲ್ಲಿ ಬೈಕ್​ ಪಾರ್ಕ್​ ಮಾಡಿ ರೈಲು ಹತ್ತಿ ಹಾಸನಕ್ಕೆ ಹೋಗುತ್ತಿದ್ದನು. ಪ್ರತಿಬಾರಿ ಕಳ್ಳತನಕ್ಕೆ ಇಳಿದಾಗ ಇದೇ ರೀತಿ ಮಾಡುತ್ತಿದ್ದನು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?