AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನ್ಯ ಯುವತಿಯೊಂದಿಗೆ ಪತಿಯ ಪಾರ್ಟಿ ಸೆಲೆಬ್ರೇಷನ್.. ಮನನೊಂದ ಪತ್ನಿ ಆತ್ಮಹತ್ಯೆಗೆ ಶರಣು

ಕೈ ಹಿಡಿದ ಪತ್ನಿಯಿದ್ದರೂ ಅನ್ಯ ಯುವತಿಯೊಂದಿಗೆ ನ್ಯೂ ಇಯರ್ ಪಾರ್ಟಿ ಮಾಡಿದ ಹಿನ್ನೆಲೆಯಲ್ಲಿ ಮನನೊಂದು ಪತ್ನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಶ್ರೀರಾಂಪುರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಅನ್ಯ ಯುವತಿಯೊಂದಿಗೆ ಪತಿಯ ಪಾರ್ಟಿ ಸೆಲೆಬ್ರೇಷನ್.. ಮನನೊಂದ ಪತ್ನಿ ಆತ್ಮಹತ್ಯೆಗೆ ಶರಣು
ಅಭಿಲಾಷ ತ್ರಿವೇಣಿ ಮತ್ತು ಶಶಿಕುಮಾರ್
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Jan 06, 2021 | 5:53 PM

Share

ಬೆಂಗಳೂರು: ಕೈ ಹಿಡಿದ ಪತ್ನಿಯಿದ್ದರೂ ಅನ್ಯ ಯುವತಿಯೊಂದಿಗೆ ನ್ಯೂ ಇಯರ್ ಪಾರ್ಟಿ ಮಾಡಿದ ಹಿನ್ನೆಲೆಯಲ್ಲಿ ಮನನೊಂದು ಪತ್ನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಶ್ರೀರಾಂಪುರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಭಿಲಾಷ ತ್ರಿವೇಣಿ (30) ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ.

ಅಭಿಲಾಷ ತ್ರಿವೇಣಿ ಮತ್ತು ಶಶಿಕುಮಾರ್ ಇಬ್ಬರದ್ದೂ ಇದು ಎರಡನೇ ಮದುವೆ. ಇಬ್ಬರಿಗೂ ಈ ಹಿಂದೆ ಪ್ರತ್ಯೇಕ ಮದುವೆಯಾಗಿ ಬಳಿಕ ವಿಚ್ಛೇದನ ಪಡೆದಿದ್ದರು. ಎರಡು ವರ್ಷದ ಹಿಂದೆ ಪರಸ್ಪರ ಪರಿಚಯವಾಗಿ ಪ್ರೀತಿಸಿ ವಿವಾಹವಾಗಿದ್ರು. ಆದರೆ ಇವರ ಜೀವನದಲ್ಲಿ ಅನುಮಾನ ಎಂಬ ಭೂತದ ಛಾಯೆ ಹೆಚ್ಚಿತ್ತು.

ಪತಿ ಶಶಿಕುಮಾರ್ ಖಾಸಗಿ ಕಂಪನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ. ಬಹುತೇಕ ಬಾರಿ ನೈಟ್ ಶಿಫ್ಟ್ ನೆಪ ಹೇಳಿ ಗೆಳತಿ ಮನೆಗೆ ಹೋಗುತ್ತಿದ್ದ. ಹಾಗೂ ಒಮ್ಮೆ ರಾತ್ರಿ 10 ಗಂಟೆಯ ಸಮಯದಲ್ಲಿ ಶಶಿಕುಮಾರ್, ಮಹಿಳೆಯ ಜೊತೆ ವಿಡಿಯೋ ಕಾಲ್​ನಲ್ಲಿದ್ದದನ್ನು ತ್ರಿವೇಣಿ ನೋಡಿ ಅಂದು ಮನೆಯಲ್ಲಿ ದೊಡ್ಡ ರಂಪವೇ ಆಗಿತ್ತು.

ಇದೇ ರೀತಿ ಹೊಸ ವರ್ಷದ ದಿನವೂ ರಾತ್ರಿ ಶಶಿಕುಮಾರ್​ಗೆ ಕರೆ ಬಂದಿರುತ್ತೆ. ಆಗ ಆತ ನನಗೆ ಕೆಲಸ ಇದೆ ಎಂದು ಮನೆಯಿಂದ ಎದ್ದು ಹೋಗಿದ್ದ. ಅನುಮಾನಗೊಂಡ ತ್ರಿವೇಣಿ ತನ್ನ ಪತಿಯನ್ನೇ ಹಿಂಬಾಲಿಸುತ್ತಾಳೆ. ಬಳಿಕ ಅನ್ಯ ಯುವತಿಯೊಂದಿಗೆ ನ್ಯೂ ಇಯರ್ ಪಾರ್ಟಿಯಲ್ಲಿ ಭಾಗಿಯಾಗಿರುವುದನ್ನು ನೋಡಿದ್ದಾಳೆ.

ಪತಿ ಶಶಿಕುಮಾರ್ ಅನೈತಿಕ ಸಂಬಂಧದಿಂದ ಬೇಸತ್ತು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ತ್ರಿವೇಣಿ ಕುಟುಂಬಸ್ಥರ ದೂರಿನ ಮೇರೆಗೆ ಕೇಸ್ ದಾಖಲಿಸಿಕೊಂಡಿರುವ ಶ್ರೀರಾಂಪುರ ಪೊಲೀಸರು ಪತಿ ಶಶಿಕುಮಾರ್​ನನ್ನು ಬಂಧಿಸಿದ್ದಾರೆ.

ಪ್ರೀತಿಸಿ ಮದುವೆಯಾದ ಪತ್ನಿಗೆ ವರದಕ್ಷಿಣೆ ಕಿರುಕುಳ.. 3ನೆ ಮಹಡಿಯಿಂದ ನೂಕಿ ಕೊಲೆಗೈದೇಬಿಟ್ಟ ಪಾಪಿ ಪತಿ

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!