AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನ್ಯ ಯುವತಿಯೊಂದಿಗೆ ಪತಿಯ ಪಾರ್ಟಿ ಸೆಲೆಬ್ರೇಷನ್.. ಮನನೊಂದ ಪತ್ನಿ ಆತ್ಮಹತ್ಯೆಗೆ ಶರಣು

ಕೈ ಹಿಡಿದ ಪತ್ನಿಯಿದ್ದರೂ ಅನ್ಯ ಯುವತಿಯೊಂದಿಗೆ ನ್ಯೂ ಇಯರ್ ಪಾರ್ಟಿ ಮಾಡಿದ ಹಿನ್ನೆಲೆಯಲ್ಲಿ ಮನನೊಂದು ಪತ್ನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಶ್ರೀರಾಂಪುರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಅನ್ಯ ಯುವತಿಯೊಂದಿಗೆ ಪತಿಯ ಪಾರ್ಟಿ ಸೆಲೆಬ್ರೇಷನ್.. ಮನನೊಂದ ಪತ್ನಿ ಆತ್ಮಹತ್ಯೆಗೆ ಶರಣು
ಅಭಿಲಾಷ ತ್ರಿವೇಣಿ ಮತ್ತು ಶಶಿಕುಮಾರ್
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on: Jan 06, 2021 | 5:53 PM

ಬೆಂಗಳೂರು: ಕೈ ಹಿಡಿದ ಪತ್ನಿಯಿದ್ದರೂ ಅನ್ಯ ಯುವತಿಯೊಂದಿಗೆ ನ್ಯೂ ಇಯರ್ ಪಾರ್ಟಿ ಮಾಡಿದ ಹಿನ್ನೆಲೆಯಲ್ಲಿ ಮನನೊಂದು ಪತ್ನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಶ್ರೀರಾಂಪುರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಭಿಲಾಷ ತ್ರಿವೇಣಿ (30) ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ.

ಅಭಿಲಾಷ ತ್ರಿವೇಣಿ ಮತ್ತು ಶಶಿಕುಮಾರ್ ಇಬ್ಬರದ್ದೂ ಇದು ಎರಡನೇ ಮದುವೆ. ಇಬ್ಬರಿಗೂ ಈ ಹಿಂದೆ ಪ್ರತ್ಯೇಕ ಮದುವೆಯಾಗಿ ಬಳಿಕ ವಿಚ್ಛೇದನ ಪಡೆದಿದ್ದರು. ಎರಡು ವರ್ಷದ ಹಿಂದೆ ಪರಸ್ಪರ ಪರಿಚಯವಾಗಿ ಪ್ರೀತಿಸಿ ವಿವಾಹವಾಗಿದ್ರು. ಆದರೆ ಇವರ ಜೀವನದಲ್ಲಿ ಅನುಮಾನ ಎಂಬ ಭೂತದ ಛಾಯೆ ಹೆಚ್ಚಿತ್ತು.

ಪತಿ ಶಶಿಕುಮಾರ್ ಖಾಸಗಿ ಕಂಪನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ. ಬಹುತೇಕ ಬಾರಿ ನೈಟ್ ಶಿಫ್ಟ್ ನೆಪ ಹೇಳಿ ಗೆಳತಿ ಮನೆಗೆ ಹೋಗುತ್ತಿದ್ದ. ಹಾಗೂ ಒಮ್ಮೆ ರಾತ್ರಿ 10 ಗಂಟೆಯ ಸಮಯದಲ್ಲಿ ಶಶಿಕುಮಾರ್, ಮಹಿಳೆಯ ಜೊತೆ ವಿಡಿಯೋ ಕಾಲ್​ನಲ್ಲಿದ್ದದನ್ನು ತ್ರಿವೇಣಿ ನೋಡಿ ಅಂದು ಮನೆಯಲ್ಲಿ ದೊಡ್ಡ ರಂಪವೇ ಆಗಿತ್ತು.

ಇದೇ ರೀತಿ ಹೊಸ ವರ್ಷದ ದಿನವೂ ರಾತ್ರಿ ಶಶಿಕುಮಾರ್​ಗೆ ಕರೆ ಬಂದಿರುತ್ತೆ. ಆಗ ಆತ ನನಗೆ ಕೆಲಸ ಇದೆ ಎಂದು ಮನೆಯಿಂದ ಎದ್ದು ಹೋಗಿದ್ದ. ಅನುಮಾನಗೊಂಡ ತ್ರಿವೇಣಿ ತನ್ನ ಪತಿಯನ್ನೇ ಹಿಂಬಾಲಿಸುತ್ತಾಳೆ. ಬಳಿಕ ಅನ್ಯ ಯುವತಿಯೊಂದಿಗೆ ನ್ಯೂ ಇಯರ್ ಪಾರ್ಟಿಯಲ್ಲಿ ಭಾಗಿಯಾಗಿರುವುದನ್ನು ನೋಡಿದ್ದಾಳೆ.

ಪತಿ ಶಶಿಕುಮಾರ್ ಅನೈತಿಕ ಸಂಬಂಧದಿಂದ ಬೇಸತ್ತು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ತ್ರಿವೇಣಿ ಕುಟುಂಬಸ್ಥರ ದೂರಿನ ಮೇರೆಗೆ ಕೇಸ್ ದಾಖಲಿಸಿಕೊಂಡಿರುವ ಶ್ರೀರಾಂಪುರ ಪೊಲೀಸರು ಪತಿ ಶಶಿಕುಮಾರ್​ನನ್ನು ಬಂಧಿಸಿದ್ದಾರೆ.

ಪ್ರೀತಿಸಿ ಮದುವೆಯಾದ ಪತ್ನಿಗೆ ವರದಕ್ಷಿಣೆ ಕಿರುಕುಳ.. 3ನೆ ಮಹಡಿಯಿಂದ ನೂಕಿ ಕೊಲೆಗೈದೇಬಿಟ್ಟ ಪಾಪಿ ಪತಿ

ಪಾಕ್ ಶೆಲ್ಲಿಂಗ್​ನಲ್ಲಿ ಗಾಯಗೊಂಡವರಿಗೆ ಸೇನಾ ವೈದ್ಯರಿಂದ ಚಿಕಿತ್ಸೆ
ಪಾಕ್ ಶೆಲ್ಲಿಂಗ್​ನಲ್ಲಿ ಗಾಯಗೊಂಡವರಿಗೆ ಸೇನಾ ವೈದ್ಯರಿಂದ ಚಿಕಿತ್ಸೆ
ಮೈಸೂರು: ಸಫಾರಿ ವೇಳೆ ಕಬಿನಿ ಹಿನ್ನೀರಿನ ಬಳಿ ಕಾಡಾನೆ ಹಿಂಡು ಪ್ರತ್ಯಕ್ಷ
ಮೈಸೂರು: ಸಫಾರಿ ವೇಳೆ ಕಬಿನಿ ಹಿನ್ನೀರಿನ ಬಳಿ ಕಾಡಾನೆ ಹಿಂಡು ಪ್ರತ್ಯಕ್ಷ
Daily Devotional: ಪ್ರಸಾದವನ್ನ ಬಲಗೈಯಲ್ಲೇ ಯಾಕೆ ತೆಗೆದುಕೊಳ್ಳಬೇಕು?
Daily Devotional: ಪ್ರಸಾದವನ್ನ ಬಲಗೈಯಲ್ಲೇ ಯಾಕೆ ತೆಗೆದುಕೊಳ್ಳಬೇಕು?
Daily horoscope: ಸೂರ್ಯ ಭಗವಾನ್ ವೃಷಭ ರಾಶಿಗೆ ಪ್ರವೇಶ
Daily horoscope: ಸೂರ್ಯ ಭಗವಾನ್ ವೃಷಭ ರಾಶಿಗೆ ಪ್ರವೇಶ
ತಂಗಿ ಮದುವೆ ಮಾಡಿಸುತ್ತೇವೆ: ರಾಕೇಶ್ ಪೂಜಾರಿ ಕುಟುಂಬಕ್ಕೆ ಸ್ನೇಹಿತರ ಬೆಂಬಲ
ತಂಗಿ ಮದುವೆ ಮಾಡಿಸುತ್ತೇವೆ: ರಾಕೇಶ್ ಪೂಜಾರಿ ಕುಟುಂಬಕ್ಕೆ ಸ್ನೇಹಿತರ ಬೆಂಬಲ
ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ