AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಯಾದ ಮೂರೇ ದಿನಕ್ಕೆ ಪತ್ನಿ ಬಿಟ್ಟು ಪತಿ ಪರಾರಿ, ಮದ್ವೆ ಫೋಟೋ ಬಗ್ಗೆ ಕೇಳಿದ್ರೆ ಭೂಪ ಹೇಳಿದ್ದೇನು ಗೊತ್ತಾ?

ವ್ಯಕ್ತಿಯೊಬ್ಬ ಮದುವೆಯಾಗಿ ಮೂರೇ ದಿನಕ್ಕೆ ಹೆಂಡತಿಯನ್ನು ಪರಾರಿಯಾಗಿದ್ದಾನೆ. ಇನ್ನು ಮದ್ವೆಯಾಗಿರುವ ಫೋಟೋಗಳ ಬಗ್ಗೆ ಕೇಳಿದ್ರೆ ಶಾರ್ಟ್ ಮೂವಿ ಕಥೆ ಹೇಳುತ್ತಿದ್ದಾನೆ.

ಮದುವೆಯಾದ ಮೂರೇ ದಿನಕ್ಕೆ ಪತ್ನಿ ಬಿಟ್ಟು ಪತಿ ಪರಾರಿ, ಮದ್ವೆ ಫೋಟೋ ಬಗ್ಗೆ ಕೇಳಿದ್ರೆ ಭೂಪ ಹೇಳಿದ್ದೇನು ಗೊತ್ತಾ?
ಗಂಡ ಹೆಂಡತಿ
ರಮೇಶ್ ಬಿ. ಜವಳಗೇರಾ
|

Updated on: Mar 17, 2023 | 2:14 PM

Share

ಬೆಂಗಳೂರು: ಪ್ರೀತಿ ಪ್ರೇಮ ಅಂತ ಯುವತಿಯನ್ನು ಬಲೆ ಬೀಸಿಕೊಂಡು ಕೊನೆಗೆ ಮದುವೆಯಾಗಿದ್ದ. ಆದ್ರೆ, ಇದೀಗ ಮದುವೆಯಾಗಿ (Wedding) ಮೂರೇ ದಿನಕ್ಕೆ ಪತಿ ಪರಾರಿಯಾಗಿದ್ದಾನೆ. ಈ ಬಗ್ಗೆ ಪತ್ನಿ ಬೆಂಗಳೂರಿನ ಕೆಆರ್ ಪುರಂ ಪೊಲೀಸ್ ಠಾಣೆಯಲ್ಲಿ (KR Puram Police Station) ದೂರು ದಾಖಲಿಸಿದ್ದಾಳೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಸುರೇಶ್‍ನನ್ನು ವಿಚಾರಣೆ ಮಾಡಿದ್ದಾರೆ. ಈ ವೇಳೆ ಮದುವೆ ಪೋಟೊಗಳ ಬಗ್ಗೆ ಸುರೇಶನಿಗೆ ಕೇಳಿದ್ರೆ, ಆ ಫೋಟೋಗಳು ಶಾರ್ಟ್ ಮೂವಿ ಚಿತ್ರೀಕರಿಸಬೇಕಾದಾಗ ತೆಗೆದ ಫೋಟೋಗಳು. ಧರಣಿ ಜೊತೆ ನಾನು ವಿವಾಹವಾಗಿಲ್ಲ. ಕೇವಲ ಸ್ನೇಹಿತನಾಗಿದ್ದೆ ಅಷ್ಟೇ ಎಂದು ವರಸೆ ಬದಲಾಯಿಸಿದ್ದಾನಂತೆ‌.

ಇದನ್ನೂ ಓದಿ: ಬೈಯಪ್ಪನಹಳ್ಳಿ ರೈಲ್ವೇ ಸ್ಟೇಷನ್​ ಬಳಿ ಡ್ರಮ್​ನಲ್ಲಿ ಮಹಿಳೆ ಶವ ಪತ್ತೆ ಕೇಸ್: ಹಂತಕರ ಸುಳಿವು ನೀಡಿದ ಡ್ರಮ್​ ಮೇಲಿದ್ದ ಸ್ಟಿಕ್ಕರ್

ಫೆಬ್ರವರಿ 13ರಂದು ನಾವಿಬ್ಬರೂ ಮದುವೆಯಾಗಿದ್ದೆವು. ಫೆ. 13ರಿಂದ 17ರವರೆಗೆ ಪತಿ-ಪತ್ನಿ ಇಬ್ಬರೂ ಜೊತೆಗೇ ಇದ್ದೆವು. ಆದರೆ, ಫೆಬ್ರವರಿ 18 ಮನೆಗೆ ಬಂದು ಕರೆದುಕೊಂಡು ಹೋಗುತ್ತೇನೆ ಎಂದು ಹೇಳಿ ಹೋದವನು ನಾಪತ್ತೆಯಾಗಿದ್ದಾನೆ. ವಿವಾಹವಾಗಿ ಮೂರೇ ದಿನಗಳ ಅಂತರದಲ್ಲಿ ಪತಿ ನನ್ನಿಂದ ದೂರವಾಗಿದ್ದಾನೆ ಎಂದು ಧರಣಿ ಕಣ್ಣೀರು ಹಾಕುತ್ತಿದ್ದಾಳೆ.

ಕಳೆದ ಒಂದು ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದ ಧರಣಿ ಮತ್ತು ಸುರೇಶ್ ಫೆಬ್ರವರಿ 13 ರಂದು ಮದುವೆಯಾಗಿದ್ದರು. ಫೆ.13 ರಿಂದ 17 ರವರೆಗೂ ಒಟ್ಟಿಗೆ ಇದ್ದ ಪತಿ, 18ರಂದು ಮನೆಗೆ ಕರೆದುಕೊಂಡು ಹೋಗುತ್ತೇನೆ ಎಂದವನು ನಾಪತ್ತೆಯಾಗಿದ್ದಾನೆ. ಧರಣಿಗೆ 2016 ರಲ್ಲಿ ಮದುವೆಯಾಗಿತ್ತು. ಕೌಟುಂಬಿಕ ಕಾರಣಕ್ಕಾಗಿ ಪತಿಯಿಂದ ದೂರವಾಗಿದ್ದಳು. ಈ ಎಲ್ಲಾ ವಿಚಾರಗಳು ಸುರೇಶ್ ಗೂ ತಿಳಿಸಿದ್ದ ಧರಣಿ ಬಳಿಕ ಆತನನ್ನು ಪ್ರೀತಿಸಿ ಮದುವೆಯಾಗಿದ್ದಳು ಎಂದು ತಿಳಿದುಬಂದಿದೆ. ಸದ್ಯ ಪತಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಧರಣಿ ಪೊಲೀಸರಿಗೆ ದೂರು ನೀಡಿದ್ದು, ತನಿಖೆ ಮುಂದುವರೆದಿದೆ‌.

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್