Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಯಾದ ಮೂರೇ ದಿನಕ್ಕೆ ಪತ್ನಿ ಬಿಟ್ಟು ಪತಿ ಪರಾರಿ, ಮದ್ವೆ ಫೋಟೋ ಬಗ್ಗೆ ಕೇಳಿದ್ರೆ ಭೂಪ ಹೇಳಿದ್ದೇನು ಗೊತ್ತಾ?

ವ್ಯಕ್ತಿಯೊಬ್ಬ ಮದುವೆಯಾಗಿ ಮೂರೇ ದಿನಕ್ಕೆ ಹೆಂಡತಿಯನ್ನು ಪರಾರಿಯಾಗಿದ್ದಾನೆ. ಇನ್ನು ಮದ್ವೆಯಾಗಿರುವ ಫೋಟೋಗಳ ಬಗ್ಗೆ ಕೇಳಿದ್ರೆ ಶಾರ್ಟ್ ಮೂವಿ ಕಥೆ ಹೇಳುತ್ತಿದ್ದಾನೆ.

ಮದುವೆಯಾದ ಮೂರೇ ದಿನಕ್ಕೆ ಪತ್ನಿ ಬಿಟ್ಟು ಪತಿ ಪರಾರಿ, ಮದ್ವೆ ಫೋಟೋ ಬಗ್ಗೆ ಕೇಳಿದ್ರೆ ಭೂಪ ಹೇಳಿದ್ದೇನು ಗೊತ್ತಾ?
ಗಂಡ ಹೆಂಡತಿ
Follow us
ರಮೇಶ್ ಬಿ. ಜವಳಗೇರಾ
|

Updated on: Mar 17, 2023 | 2:14 PM

ಬೆಂಗಳೂರು: ಪ್ರೀತಿ ಪ್ರೇಮ ಅಂತ ಯುವತಿಯನ್ನು ಬಲೆ ಬೀಸಿಕೊಂಡು ಕೊನೆಗೆ ಮದುವೆಯಾಗಿದ್ದ. ಆದ್ರೆ, ಇದೀಗ ಮದುವೆಯಾಗಿ (Wedding) ಮೂರೇ ದಿನಕ್ಕೆ ಪತಿ ಪರಾರಿಯಾಗಿದ್ದಾನೆ. ಈ ಬಗ್ಗೆ ಪತ್ನಿ ಬೆಂಗಳೂರಿನ ಕೆಆರ್ ಪುರಂ ಪೊಲೀಸ್ ಠಾಣೆಯಲ್ಲಿ (KR Puram Police Station) ದೂರು ದಾಖಲಿಸಿದ್ದಾಳೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಸುರೇಶ್‍ನನ್ನು ವಿಚಾರಣೆ ಮಾಡಿದ್ದಾರೆ. ಈ ವೇಳೆ ಮದುವೆ ಪೋಟೊಗಳ ಬಗ್ಗೆ ಸುರೇಶನಿಗೆ ಕೇಳಿದ್ರೆ, ಆ ಫೋಟೋಗಳು ಶಾರ್ಟ್ ಮೂವಿ ಚಿತ್ರೀಕರಿಸಬೇಕಾದಾಗ ತೆಗೆದ ಫೋಟೋಗಳು. ಧರಣಿ ಜೊತೆ ನಾನು ವಿವಾಹವಾಗಿಲ್ಲ. ಕೇವಲ ಸ್ನೇಹಿತನಾಗಿದ್ದೆ ಅಷ್ಟೇ ಎಂದು ವರಸೆ ಬದಲಾಯಿಸಿದ್ದಾನಂತೆ‌.

ಇದನ್ನೂ ಓದಿ: ಬೈಯಪ್ಪನಹಳ್ಳಿ ರೈಲ್ವೇ ಸ್ಟೇಷನ್​ ಬಳಿ ಡ್ರಮ್​ನಲ್ಲಿ ಮಹಿಳೆ ಶವ ಪತ್ತೆ ಕೇಸ್: ಹಂತಕರ ಸುಳಿವು ನೀಡಿದ ಡ್ರಮ್​ ಮೇಲಿದ್ದ ಸ್ಟಿಕ್ಕರ್

ಫೆಬ್ರವರಿ 13ರಂದು ನಾವಿಬ್ಬರೂ ಮದುವೆಯಾಗಿದ್ದೆವು. ಫೆ. 13ರಿಂದ 17ರವರೆಗೆ ಪತಿ-ಪತ್ನಿ ಇಬ್ಬರೂ ಜೊತೆಗೇ ಇದ್ದೆವು. ಆದರೆ, ಫೆಬ್ರವರಿ 18 ಮನೆಗೆ ಬಂದು ಕರೆದುಕೊಂಡು ಹೋಗುತ್ತೇನೆ ಎಂದು ಹೇಳಿ ಹೋದವನು ನಾಪತ್ತೆಯಾಗಿದ್ದಾನೆ. ವಿವಾಹವಾಗಿ ಮೂರೇ ದಿನಗಳ ಅಂತರದಲ್ಲಿ ಪತಿ ನನ್ನಿಂದ ದೂರವಾಗಿದ್ದಾನೆ ಎಂದು ಧರಣಿ ಕಣ್ಣೀರು ಹಾಕುತ್ತಿದ್ದಾಳೆ.

ಕಳೆದ ಒಂದು ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದ ಧರಣಿ ಮತ್ತು ಸುರೇಶ್ ಫೆಬ್ರವರಿ 13 ರಂದು ಮದುವೆಯಾಗಿದ್ದರು. ಫೆ.13 ರಿಂದ 17 ರವರೆಗೂ ಒಟ್ಟಿಗೆ ಇದ್ದ ಪತಿ, 18ರಂದು ಮನೆಗೆ ಕರೆದುಕೊಂಡು ಹೋಗುತ್ತೇನೆ ಎಂದವನು ನಾಪತ್ತೆಯಾಗಿದ್ದಾನೆ. ಧರಣಿಗೆ 2016 ರಲ್ಲಿ ಮದುವೆಯಾಗಿತ್ತು. ಕೌಟುಂಬಿಕ ಕಾರಣಕ್ಕಾಗಿ ಪತಿಯಿಂದ ದೂರವಾಗಿದ್ದಳು. ಈ ಎಲ್ಲಾ ವಿಚಾರಗಳು ಸುರೇಶ್ ಗೂ ತಿಳಿಸಿದ್ದ ಧರಣಿ ಬಳಿಕ ಆತನನ್ನು ಪ್ರೀತಿಸಿ ಮದುವೆಯಾಗಿದ್ದಳು ಎಂದು ತಿಳಿದುಬಂದಿದೆ. ಸದ್ಯ ಪತಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಧರಣಿ ಪೊಲೀಸರಿಗೆ ದೂರು ನೀಡಿದ್ದು, ತನಿಖೆ ಮುಂದುವರೆದಿದೆ‌.

‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ