AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಯಾದ ಮೂರೇ ದಿನಕ್ಕೆ ಪತ್ನಿ ಬಿಟ್ಟು ಪತಿ ಪರಾರಿ, ಮದ್ವೆ ಫೋಟೋ ಬಗ್ಗೆ ಕೇಳಿದ್ರೆ ಭೂಪ ಹೇಳಿದ್ದೇನು ಗೊತ್ತಾ?

ವ್ಯಕ್ತಿಯೊಬ್ಬ ಮದುವೆಯಾಗಿ ಮೂರೇ ದಿನಕ್ಕೆ ಹೆಂಡತಿಯನ್ನು ಪರಾರಿಯಾಗಿದ್ದಾನೆ. ಇನ್ನು ಮದ್ವೆಯಾಗಿರುವ ಫೋಟೋಗಳ ಬಗ್ಗೆ ಕೇಳಿದ್ರೆ ಶಾರ್ಟ್ ಮೂವಿ ಕಥೆ ಹೇಳುತ್ತಿದ್ದಾನೆ.

ಮದುವೆಯಾದ ಮೂರೇ ದಿನಕ್ಕೆ ಪತ್ನಿ ಬಿಟ್ಟು ಪತಿ ಪರಾರಿ, ಮದ್ವೆ ಫೋಟೋ ಬಗ್ಗೆ ಕೇಳಿದ್ರೆ ಭೂಪ ಹೇಳಿದ್ದೇನು ಗೊತ್ತಾ?
ಗಂಡ ಹೆಂಡತಿ
ರಮೇಶ್ ಬಿ. ಜವಳಗೇರಾ
|

Updated on: Mar 17, 2023 | 2:14 PM

Share

ಬೆಂಗಳೂರು: ಪ್ರೀತಿ ಪ್ರೇಮ ಅಂತ ಯುವತಿಯನ್ನು ಬಲೆ ಬೀಸಿಕೊಂಡು ಕೊನೆಗೆ ಮದುವೆಯಾಗಿದ್ದ. ಆದ್ರೆ, ಇದೀಗ ಮದುವೆಯಾಗಿ (Wedding) ಮೂರೇ ದಿನಕ್ಕೆ ಪತಿ ಪರಾರಿಯಾಗಿದ್ದಾನೆ. ಈ ಬಗ್ಗೆ ಪತ್ನಿ ಬೆಂಗಳೂರಿನ ಕೆಆರ್ ಪುರಂ ಪೊಲೀಸ್ ಠಾಣೆಯಲ್ಲಿ (KR Puram Police Station) ದೂರು ದಾಖಲಿಸಿದ್ದಾಳೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಸುರೇಶ್‍ನನ್ನು ವಿಚಾರಣೆ ಮಾಡಿದ್ದಾರೆ. ಈ ವೇಳೆ ಮದುವೆ ಪೋಟೊಗಳ ಬಗ್ಗೆ ಸುರೇಶನಿಗೆ ಕೇಳಿದ್ರೆ, ಆ ಫೋಟೋಗಳು ಶಾರ್ಟ್ ಮೂವಿ ಚಿತ್ರೀಕರಿಸಬೇಕಾದಾಗ ತೆಗೆದ ಫೋಟೋಗಳು. ಧರಣಿ ಜೊತೆ ನಾನು ವಿವಾಹವಾಗಿಲ್ಲ. ಕೇವಲ ಸ್ನೇಹಿತನಾಗಿದ್ದೆ ಅಷ್ಟೇ ಎಂದು ವರಸೆ ಬದಲಾಯಿಸಿದ್ದಾನಂತೆ‌.

ಇದನ್ನೂ ಓದಿ: ಬೈಯಪ್ಪನಹಳ್ಳಿ ರೈಲ್ವೇ ಸ್ಟೇಷನ್​ ಬಳಿ ಡ್ರಮ್​ನಲ್ಲಿ ಮಹಿಳೆ ಶವ ಪತ್ತೆ ಕೇಸ್: ಹಂತಕರ ಸುಳಿವು ನೀಡಿದ ಡ್ರಮ್​ ಮೇಲಿದ್ದ ಸ್ಟಿಕ್ಕರ್

ಫೆಬ್ರವರಿ 13ರಂದು ನಾವಿಬ್ಬರೂ ಮದುವೆಯಾಗಿದ್ದೆವು. ಫೆ. 13ರಿಂದ 17ರವರೆಗೆ ಪತಿ-ಪತ್ನಿ ಇಬ್ಬರೂ ಜೊತೆಗೇ ಇದ್ದೆವು. ಆದರೆ, ಫೆಬ್ರವರಿ 18 ಮನೆಗೆ ಬಂದು ಕರೆದುಕೊಂಡು ಹೋಗುತ್ತೇನೆ ಎಂದು ಹೇಳಿ ಹೋದವನು ನಾಪತ್ತೆಯಾಗಿದ್ದಾನೆ. ವಿವಾಹವಾಗಿ ಮೂರೇ ದಿನಗಳ ಅಂತರದಲ್ಲಿ ಪತಿ ನನ್ನಿಂದ ದೂರವಾಗಿದ್ದಾನೆ ಎಂದು ಧರಣಿ ಕಣ್ಣೀರು ಹಾಕುತ್ತಿದ್ದಾಳೆ.

ಕಳೆದ ಒಂದು ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದ ಧರಣಿ ಮತ್ತು ಸುರೇಶ್ ಫೆಬ್ರವರಿ 13 ರಂದು ಮದುವೆಯಾಗಿದ್ದರು. ಫೆ.13 ರಿಂದ 17 ರವರೆಗೂ ಒಟ್ಟಿಗೆ ಇದ್ದ ಪತಿ, 18ರಂದು ಮನೆಗೆ ಕರೆದುಕೊಂಡು ಹೋಗುತ್ತೇನೆ ಎಂದವನು ನಾಪತ್ತೆಯಾಗಿದ್ದಾನೆ. ಧರಣಿಗೆ 2016 ರಲ್ಲಿ ಮದುವೆಯಾಗಿತ್ತು. ಕೌಟುಂಬಿಕ ಕಾರಣಕ್ಕಾಗಿ ಪತಿಯಿಂದ ದೂರವಾಗಿದ್ದಳು. ಈ ಎಲ್ಲಾ ವಿಚಾರಗಳು ಸುರೇಶ್ ಗೂ ತಿಳಿಸಿದ್ದ ಧರಣಿ ಬಳಿಕ ಆತನನ್ನು ಪ್ರೀತಿಸಿ ಮದುವೆಯಾಗಿದ್ದಳು ಎಂದು ತಿಳಿದುಬಂದಿದೆ. ಸದ್ಯ ಪತಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಧರಣಿ ಪೊಲೀಸರಿಗೆ ದೂರು ನೀಡಿದ್ದು, ತನಿಖೆ ಮುಂದುವರೆದಿದೆ‌.

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು