AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Belagavi News: ಅನೈತಿಕ ಸಂಬಂಧಕ್ಕಾಗಿ ಗಂಡನನ್ನೇ ಕೊಂದ ಪತ್ನಿ; ನಾಲ್ವರು ಅರೆಸ್ಟ್

ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನನ್ನ ಸ್ನೇಹಿತರೊಟ್ಟಿಗೆ ಸೇರಿ ಪತ್ನಿಯೇ ಕೊಲೆ ಮಾಡಿದ ಘಟನೆ ಬೆಳಗಾವಿಯಲ್ಲಿ ನಡೆದಿದ್ದು, ಆರೋಪಿಗಳನ್ನ ಎಪಿಎಂಸಿ ಪೊಲೀಸರು ಬಂಧಿಸಿದ್ದಾರೆ.

Belagavi News: ಅನೈತಿಕ ಸಂಬಂಧಕ್ಕಾಗಿ ಗಂಡನನ್ನೇ ಕೊಂದ ಪತ್ನಿ; ನಾಲ್ವರು ಅರೆಸ್ಟ್
ಆರೋಪಿ ಪತ್ನಿ, ಮೃತ ಪತಿ
ಕಿರಣ್ ಹನುಮಂತ್​ ಮಾದಾರ್
|

Updated on: Jun 23, 2023 | 3:08 PM

Share

ಬೆಳಗಾವಿ: ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನನ್ನ ಸ್ನೇಹಿತರೊಟ್ಟಿಗೆ ಸೇರಿ ಪತ್ನಿಯೇ ಕೊಲೆ ಮಾಡಿದ ಘಟನೆ ಬೆಳಗಾವಿಯಲ್ಲಿ ನಡೆದಿದ್ದು, ಇದೀಗ ನಾಲ್ವರು ಆರೋಪಿಗಳನ್ನ ಎಪಿಎಂಸಿ ಪೊಲೀಸರು ಬಂಧಿಸಿದ್ದಾರೆ. ಹೌದು ಬೆಳಗಾವಿ(Belagavi News)ಯ ಅಂಬೇಡ್ಕರ್ ನಗರದ ನಿವಾಸಿಯಾದ ಮೃತ ರಮೇಶ್ ಕಾಂಬಳೆ (38) ವೃತ್ತಿಯಲ್ಲಿ ಪೇಂಟರ್ ಆಗಿದ್ದು, ದಿಢೀರ್​ ಮಾ.28ರಂದು ಬೆಳಗಾವಿಯಿಂದ ನಾಪತ್ತೆಯಾಗಿದ್ದ. ಈ ಕುರಿತು ಏ.5ರಂದು ಆತನ ಪತ್ನಿ ಸಂಧ್ಯಾ ಪೊಲೀಸ್​​ ಠಾಣೆಗೆ ದೂರು ನೀಡಿದ್ದಳು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದಾಗ ಸತ್ಯಾಂಶ ಬೆಳಕಿಗೆ ಬಂದಿದೆ.

ರಮೇಶ್ ಪತ್ನಿ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಬಾಳು ಬಿರಂಜೆ

ಹೌದು ತನಿಖೆ ಶುರುಮಾಡಿದ ಪೊಲೀಸರಿಗೆ ತನ್ನ ಗಂಡ ಪರಸ್ತ್ರೀಯೊಂದಿಗೆ ಓಡಿ ಹೋಗಿದ್ದಾನೆಂದು ಪತ್ನಿ ಸಂಧ್ಯಾ ಕತೆ ಕಟ್ಟಿದ್ದಳು. ಬಳಿಕ ಈ ಘಟನೆ ಕುರಿತು ಪೊಲೀಸರಿಗೆ ಅನುಮಾನ ಬಂದು, ರಮೇಶ್ ಪತ್ನಿ ಸಂಧ್ಯಾ ಹಾಗೂ ರಮೇಶ್ ಸ್ನೇಹಿತರನ್ನ ವಿಚಾರಣೆ ನಡೆಸಿದ್ದಾರೆ. ಈ ವೇಳೆ ತಾವೇ ಕೊಲೆ ಮಾಡಿರುವುದಾಗಿ ರಮೇಶ್​ ಪತ್ನಿ ಹಾಗೂ ಸ್ನೇಹಿತರು ಬಾಯ್ಬಿಟ್ಟಿದ್ದಾರೆ. ರಮೇಶ್ ಪತ್ನಿ ಸಂಧ್ಯಾ ಹಾಗೂ ಬಾಳು ಬಿರಂಜೆ ನಡುವೆ ಅನೈತಿಕ ಸಂಬಂಧವಿದ್ದು, ಪ್ರಿಯಕರ ಬಾಳು ಜತೆ ಸೇರಿಕೊಂಡು ಪತಿ ರಮೇಶ್​ನನ್ನ ಕೊಲೆ ಮಾಡಿದ್ದೇನೆ ಎಂದು ತಪ್ಪನ್ನು ಒಪ್ಪಿಕೊಂಡಿದ್ದಾಳೆ.

ಇದನ್ನೂ ಓದಿ:ಮದುವೆಯಾಗಿ 5 ವರ್ಷವಾಗಿದ್ದರೂ, ಹಳೆಯ ಪ್ರಿಯತಮನ ಬಿಟ್ಟಿರಲಾರದೆ ಕಿಲಾಡಿ ಪತ್ನಿಯೇ ಗಂಡನನ್ನು ಹತ್ಯೆ ಮಾಡಿದಳಾ?

ಕೊಲೆ ಮಾಡಿ ಶವವನ್ನ ಗೋವಾದ ಚೋರ್ಲಾ ಘಾಟ್​ನಲ್ಲಿ ಎಸೆದಿದ್ದ ಆರೋಪಿಗಳು

ಇನ್ನು ಆರೋಪಿ ಪತ್ನಿ ತನ್ನ ಪ್ರಿಯಕರ ಹಾಗೂ ಆತನ ಸ್ನೇಹಿತರು ಜೊತೆಗೂಡಿ ಕೊಲೆ ಮಾಡಿ, ಗೋವಾದ ಚೋರ್ಲಾ ಘಾಟ್​ನಲ್ಲಿ ಶವ ಎಸೆದಿರುವುದಾಗಿ ಒಪ್ಪಿಕೊಂಡಿದ್ದಾರೆ. ರಮೇಶ್​ಗೆ​ ನಿದ್ರೆ ಮಾತ್ರೆಯನ್ನ ನೀಡಿ, ಬಳಿಕ ಕತ್ತು ಹಿಸುಕಿ ಕೊಲೆಗೈದಿದ್ದಾಗಿ ವಿಚಾರಣೆ ವೇಳೆ ಹೇಳಿದ್ದಾರೆ. ಈ ಕುರಿತು ಬೆಳಗಾವಿಯ ಎಪಿಎಂಸಿ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದು, ರಮೇಶ್ ಮೃತದೇಹ ಪತ್ತೆಗೆ ಮುಂದಾಗಿದ್ದಾರೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?