AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Belagavi News: ಅನೈತಿಕ ಸಂಬಂಧಕ್ಕಾಗಿ ಗಂಡನನ್ನೇ ಕೊಂದ ಪತ್ನಿ; ನಾಲ್ವರು ಅರೆಸ್ಟ್

ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನನ್ನ ಸ್ನೇಹಿತರೊಟ್ಟಿಗೆ ಸೇರಿ ಪತ್ನಿಯೇ ಕೊಲೆ ಮಾಡಿದ ಘಟನೆ ಬೆಳಗಾವಿಯಲ್ಲಿ ನಡೆದಿದ್ದು, ಆರೋಪಿಗಳನ್ನ ಎಪಿಎಂಸಿ ಪೊಲೀಸರು ಬಂಧಿಸಿದ್ದಾರೆ.

Belagavi News: ಅನೈತಿಕ ಸಂಬಂಧಕ್ಕಾಗಿ ಗಂಡನನ್ನೇ ಕೊಂದ ಪತ್ನಿ; ನಾಲ್ವರು ಅರೆಸ್ಟ್
ಆರೋಪಿ ಪತ್ನಿ, ಮೃತ ಪತಿ
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on: Jun 23, 2023 | 3:08 PM

Share

ಬೆಳಗಾವಿ: ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನನ್ನ ಸ್ನೇಹಿತರೊಟ್ಟಿಗೆ ಸೇರಿ ಪತ್ನಿಯೇ ಕೊಲೆ ಮಾಡಿದ ಘಟನೆ ಬೆಳಗಾವಿಯಲ್ಲಿ ನಡೆದಿದ್ದು, ಇದೀಗ ನಾಲ್ವರು ಆರೋಪಿಗಳನ್ನ ಎಪಿಎಂಸಿ ಪೊಲೀಸರು ಬಂಧಿಸಿದ್ದಾರೆ. ಹೌದು ಬೆಳಗಾವಿ(Belagavi News)ಯ ಅಂಬೇಡ್ಕರ್ ನಗರದ ನಿವಾಸಿಯಾದ ಮೃತ ರಮೇಶ್ ಕಾಂಬಳೆ (38) ವೃತ್ತಿಯಲ್ಲಿ ಪೇಂಟರ್ ಆಗಿದ್ದು, ದಿಢೀರ್​ ಮಾ.28ರಂದು ಬೆಳಗಾವಿಯಿಂದ ನಾಪತ್ತೆಯಾಗಿದ್ದ. ಈ ಕುರಿತು ಏ.5ರಂದು ಆತನ ಪತ್ನಿ ಸಂಧ್ಯಾ ಪೊಲೀಸ್​​ ಠಾಣೆಗೆ ದೂರು ನೀಡಿದ್ದಳು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದಾಗ ಸತ್ಯಾಂಶ ಬೆಳಕಿಗೆ ಬಂದಿದೆ.

ರಮೇಶ್ ಪತ್ನಿ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಬಾಳು ಬಿರಂಜೆ

ಹೌದು ತನಿಖೆ ಶುರುಮಾಡಿದ ಪೊಲೀಸರಿಗೆ ತನ್ನ ಗಂಡ ಪರಸ್ತ್ರೀಯೊಂದಿಗೆ ಓಡಿ ಹೋಗಿದ್ದಾನೆಂದು ಪತ್ನಿ ಸಂಧ್ಯಾ ಕತೆ ಕಟ್ಟಿದ್ದಳು. ಬಳಿಕ ಈ ಘಟನೆ ಕುರಿತು ಪೊಲೀಸರಿಗೆ ಅನುಮಾನ ಬಂದು, ರಮೇಶ್ ಪತ್ನಿ ಸಂಧ್ಯಾ ಹಾಗೂ ರಮೇಶ್ ಸ್ನೇಹಿತರನ್ನ ವಿಚಾರಣೆ ನಡೆಸಿದ್ದಾರೆ. ಈ ವೇಳೆ ತಾವೇ ಕೊಲೆ ಮಾಡಿರುವುದಾಗಿ ರಮೇಶ್​ ಪತ್ನಿ ಹಾಗೂ ಸ್ನೇಹಿತರು ಬಾಯ್ಬಿಟ್ಟಿದ್ದಾರೆ. ರಮೇಶ್ ಪತ್ನಿ ಸಂಧ್ಯಾ ಹಾಗೂ ಬಾಳು ಬಿರಂಜೆ ನಡುವೆ ಅನೈತಿಕ ಸಂಬಂಧವಿದ್ದು, ಪ್ರಿಯಕರ ಬಾಳು ಜತೆ ಸೇರಿಕೊಂಡು ಪತಿ ರಮೇಶ್​ನನ್ನ ಕೊಲೆ ಮಾಡಿದ್ದೇನೆ ಎಂದು ತಪ್ಪನ್ನು ಒಪ್ಪಿಕೊಂಡಿದ್ದಾಳೆ.

ಇದನ್ನೂ ಓದಿ:ಮದುವೆಯಾಗಿ 5 ವರ್ಷವಾಗಿದ್ದರೂ, ಹಳೆಯ ಪ್ರಿಯತಮನ ಬಿಟ್ಟಿರಲಾರದೆ ಕಿಲಾಡಿ ಪತ್ನಿಯೇ ಗಂಡನನ್ನು ಹತ್ಯೆ ಮಾಡಿದಳಾ?

ಕೊಲೆ ಮಾಡಿ ಶವವನ್ನ ಗೋವಾದ ಚೋರ್ಲಾ ಘಾಟ್​ನಲ್ಲಿ ಎಸೆದಿದ್ದ ಆರೋಪಿಗಳು

ಇನ್ನು ಆರೋಪಿ ಪತ್ನಿ ತನ್ನ ಪ್ರಿಯಕರ ಹಾಗೂ ಆತನ ಸ್ನೇಹಿತರು ಜೊತೆಗೂಡಿ ಕೊಲೆ ಮಾಡಿ, ಗೋವಾದ ಚೋರ್ಲಾ ಘಾಟ್​ನಲ್ಲಿ ಶವ ಎಸೆದಿರುವುದಾಗಿ ಒಪ್ಪಿಕೊಂಡಿದ್ದಾರೆ. ರಮೇಶ್​ಗೆ​ ನಿದ್ರೆ ಮಾತ್ರೆಯನ್ನ ನೀಡಿ, ಬಳಿಕ ಕತ್ತು ಹಿಸುಕಿ ಕೊಲೆಗೈದಿದ್ದಾಗಿ ವಿಚಾರಣೆ ವೇಳೆ ಹೇಳಿದ್ದಾರೆ. ಈ ಕುರಿತು ಬೆಳಗಾವಿಯ ಎಪಿಎಂಸಿ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದು, ರಮೇಶ್ ಮೃತದೇಹ ಪತ್ತೆಗೆ ಮುಂದಾಗಿದ್ದಾರೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್