AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಲ್ಕು ಬಾರಿ ಪತಿಯನ್ನು ಬಿಟ್ಟು ಓಡಿಹೋಗಿದ್ದ ಪತ್ನಿ ಇನ್​ಸ್ಟಾಗ್ರಾಮ್ ರೀಲ್ಸ್ ಬಾಯ್​ಫ್ರೆಂಡ್ ಜೊತೆ ಪರಾರಿ

ಪಬ್ಜಿ, ರೀಲ್ಸ್, ಟಿಕ್​ಟಾಕ್​ನಂತಹ ಮೋಜಿನ ವೇದಿಕೆಗಳು ಸಂಸಾರವನ್ನು ಒಡೆಯುತ್ತಿರುವ ಪ್ರಕರಣ ಅಲ್ಲೊಂದು ಇಲ್ಲೊಂದು ನಡೆಯುತ್ತಿದೆ. ಅಂತಹದ್ದೇ ಒಂದು ಘಟನೆ ನೆಲಮಂಗಲ ಉತ್ತರ ತಾಲೂಕಿನಲ್ಲಿ ನಡೆದಿದೆ.

ನಾಲ್ಕು ಬಾರಿ ಪತಿಯನ್ನು ಬಿಟ್ಟು ಓಡಿಹೋಗಿದ್ದ ಪತ್ನಿ ಇನ್​ಸ್ಟಾಗ್ರಾಮ್ ರೀಲ್ಸ್ ಬಾಯ್​ಫ್ರೆಂಡ್ ಜೊತೆ ಪರಾರಿ
ಮನೋಹರ್ ಮತ್ತು ಅರ್ಪಿತಾ (ಎಡಚಿತ್ರ), ಇನ್​ಸ್ಟಾಗ್ರಾಮ್ ರೀಲ್ಸ್ ಮಾಡಿಕೊಂಡಿದ್ದ ದಿನಕರ್ (ಬಲಚಿತ್ರ)
TV9 Web
| Edited By: |

Updated on:Jul 21, 2023 | 6:14 PM

Share

ನೆಲಮಂಗಲ, ಜುಲೈ 21: ಮಹಿಳೆಯೊಬ್ಬಳು ತನ್ನ ಪತಿಯನ್ನೇ ತೊರೆದು ಇನ್​ಸ್ಟಾಗ್ರಾಮ್ (Instagram) ರೀಲ್ಸ್ ಮಾಡಿಕೊಂಡಿದ್ದ ಬಾಯ್​ಫ್ರೆಂಡ್ ಜೊತೆ ಪರಾರಿಯಾದ ಘಟನೆ ನೆಲಮಂಗಲ (Nelamangala) ಉತ್ತರ ತಾಲೂಕಿನ ಸೋಲದೇವನಹಳ್ಳಿ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕರಣ ಸಂಬಂಧ ಮಹಿಳೆಯ ಪತಿ ಠಾಣೆಗೆ ದೂರು ನೀಡಿದ್ದಾರೆ. ಅಷ್ಟಕ್ಕೂ ಈ ಮಹಿಳೆ ಪತಿಯನ್ನು ತೊರೆದು ಮತ್ತೊಬ್ಬರ ಜೊತೆ ಓಡಿಹೋಗಿದ್ದು ಇದೇ ಮೊದಲೇನಲ್ಲ. ಈ ಹಿಂದೆಯೂ ಇಂತಹದ್ದೇ ದುಸ್ಸಾಹಸ ನಡೆಸಿದ್ದಳು ಎಂದು ತಿಳಿದುಬಂದಿದೆ.

ಮಂಡ್ಯ ಮೂಲದ ಅರ್ಪಿತಾ (23) ಮತ್ತು ನೆಲಮಂಗಲ ಉತ್ತರ ತಾಲೂಕಿನ ಸೋಲದೇವನಹಳ್ಳಿ ಮನೋಹರ್​ಗೆ ಏಳು ವರ್ಷಗಳ ಹಿಂದೆ ಮದುವೆಯಾಗಿದೆ. ಇವರ ಸಂಸಾರಕ್ಕೆ ಸಾಕ್ಷಿಯಾಗಿ ಇಬ್ಬರು ಮಕ್ಕಳಿದ್ದಾರೆ. ಆದರೆ, ಅರ್ಪಿತಾ ಮಾತ್ರ ತನ್ನ ಗಂಡನ ಜೊತೆ ಸರಿಯಾಗಿ ಬಾಳ್ವೆ ನಡೆಸದೆ ನಾಲ್ಕು ಬಾರಿ ಇತರರೊಂದಿಗೆ ಓಡಿಹೋಗಿ ವಾಪಸ್ ಪತಿ ಮನೆ ಸೇರಿದ್ದಳು.

ಇದನ್ನೂ ಓದಿ: PUBG Love: ಭಾರತ-ಪಾಕಿಸ್ತಾನ ಪಬ್ಜಿ ಲವ್​ ಸ್ಟೋರಿ, ಭಾರತ ಈಗ ನನ್ನ ದೇಶ ಎಂದ ಪಾಕ್ ಮಹಿಳೆ

ಹೀಗೆ ಇನ್​ಸ್ಟಾಗ್ರಾಮ್​ನಲ್ಲಿ ಕಾಲಕಳೆಯುತ್ತಿದ್ದ ಅರ್ಪಿತಾಳಿಗೆ ರೀಲ್ಸ್​​ ಮಾಡಿಕೊಂಡಿದ್ದ ದಿನಕರ್​ ಎಂಬಾತನ ಸಂರ್ಪಕವಾಗಿದೆ. ಇವರಿಬ್ಬರ ಸ್ನೇಹ ಎರಡು ವರ್ಷಗಳ ಹಿಂದೆಯೇ ಆಗಿತ್ತು. ಹೀಗೆ ಇಬ್ಬರು ರೀಲ್ಸ್​ ಮಾಡಿಕೊಂಡಿದ್ದರು. ತಾನು ಎರಡು ಮಕ್ಕಳ ತಾಯಿ, ಸಂಸಾರಸ್ಥೆ ಎಂಬುದನ್ನೂ ಲೆಕ್ಕಿಸದೆ ಅರ್ಪಿತಾ ದಿನಕರ್​ನನ್ನು ಪ್ರೀತಿಸಲಾರಂಭಿಸಿದ್ದಾಳೆ.

ಅದರಂತೆ, ಜುಲೈ 18 ರಂದು ಸೋಲದೇವನಹಳ್ಳಿಯಿಂದ ಅರ್ಪಿತಾ ದಿನಕರ್​ ಜೊತೆ ಪರಾರಿಯಾಗಿದ್ದಾಳೆ. ಮಾಹಿತಿ ತಿಳಿಯುತ್ತಿದ್ದಂತೆ ಮಹಿಳೆಯ ಪತಿ ಮನೋಹರ್ ಸೋಲದೇವನಹಳ್ಳಿ ಪೊಲೀಸ್​ ಠಾಣೆ ಮೆಟ್ಟಿಲೇರಿದ್ದು, ದೂರು ದಾಖಲಿಸಿದ್ದಾರೆ. ದೂರಿನ ಅನ್ವಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇನ್​ಸ್ಟಾಗ್ರಾಮ್ ರೀಲ್ಸ್, ಪಬ್ಜಿ, ಟಿಕ್​ಟಾಕ್​ನಂತರ ಮೋಜಿನ ವೇದಿಕೆಗಳಲ್ಲಿ ಸಣ್ಣ ಮಕ್ಕಳು, ಯುವಕ ಯುವತಿಯರು ಮಾತ್ರವಲ್ಲದೆ ಹಿರಿಯರೂ ಕಾಲಕಳೆಯುತ್ತಿದ್ದಾರೆ. ಕೆಲವರು ಟೈಮ್ ಪಾಸ್​ಗಾಗಿ ಇದನ್ನು ಬಳಕೆ ಮಾಡುತ್ತಿದ್ದರೆ, ಇನ್ನು ಕೆಲವರು ಬಳಕೆ ಮಾಡುತ್ತಲೇ ತಪ್ಪುದಾರಿ ಹಿಡಿಯುತ್ತಿದ್ದಾರೆ. ಇದರಿಂದ ಸಂಸಾರಗಳು ಒಡೆಯುತ್ತಿವೆ. ಇತ್ತೀಚೆಗೆ ಪಬ್ಜಿ ಆಡುತ್ತಿದ್ದ ಭಾರತದ ಉತ್ತರ ಪ್ರದೇಶ ರಾಜ್ಯದ ಯುವಕನೊಂದಿಗೆ ಪ್ರೇಮಾಂಕುರವಾಗಿ ಪಾಕಿಸ್ತಾನದ ಮಹಿಳೆಯೊಬ್ಬಳು ಪ್ರಿಯತಮನನ್ನು ಅರಸಿಕೊಂಡು ರಾಜ್ಯಕ್ಕೆ ಆಗಮಿಸಿದ್ದಳು.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:39 pm, Fri, 21 July 23

ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ