AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಂಡತಿ ಕೆಲಸದ ಬಗ್ಗೆ ಅಸಮಾಧಾನ: ಪತ್ನಿ ಮೇಲೆ ಹಲ್ಲೆ ಮಾಡಿ ಚಿತ್ರೀಕರಿಸಿದ್ದ ಪತಿಯ ಬಂಧನ

ಕೇರಳದ ತಿರುವನಂತಪುರಂನಲ್ಲಿ 27 ವರ್ಷದ ವ್ಯಕ್ತಿಯೊಬ್ಬ ತನ್ನ ಹೆಂಡತಿಗೆ ಥಳಿಸಿರುವ ದೃಶ್ಯವನ್ನು ಚಿತ್ರೀಕರಿಸಿ ಅದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾನೆ.

ಹೆಂಡತಿ ಕೆಲಸದ ಬಗ್ಗೆ ಅಸಮಾಧಾನ: ಪತ್ನಿ ಮೇಲೆ ಹಲ್ಲೆ ಮಾಡಿ ಚಿತ್ರೀಕರಿಸಿದ್ದ ಪತಿಯ ಬಂಧನ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Oct 20, 2022 | 9:58 AM

Share

ತಿರುವನಂತಪುರಂ: ಕೇರಳದ ತಿರುವನಂತಪುರಂನಲ್ಲಿ 27 ವರ್ಷದ ವ್ಯಕ್ತಿಯೊಬ್ಬ ತನ್ನ ಪತ್ನಿಯ ಮೇಲೆ ಹಲ್ಲೆ ಮಾಡಿರುವ  ದೃಶ್ಯವನ್ನು ಚಿತ್ರೀಕರಿಸಿ ಅದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾನೆ. ಇದೀಗ ಈ ವಿಡಿಯೋ ವೈರಲ್ ಆಗಿದ್ದು ಆತನನ್ನು ಮಲಯಂಕಿಝು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ದಿಲೀಪ್ ಎಂದು ಗುರುತಿಸಲಾಗಿದ್ದು, ಆತನ ಪತ್ನಿ ನೀಡಿದ ದೂರಿನ ಆಧಾರದ ಮೇಲೆ ಬಂಧಿಸಲಾಗಿದೆ.

ಪತ್ನಿ ತನ್ನ ಇಚ್ಛೆಗೆ ವಿರುದ್ಧವಾಗಿ ಕೆಲಸಕ್ಕೆ ಹೋಗಿದ್ದಾಳೆ ಎಂಬ ಕಾರಣಕ್ಕೆ ದಿಲೀಪ್ ಆಕೆ ದೈಹಿಕ ಹಿಂಸೆ ನೀಡಿದ್ದಾನೆ. ವೀಡಿಯೋದಲ್ಲಿ ದಿಲೀಪ್ ತನ್ನ ಪತ್ನಿಯನ್ನು ಅಮಾನುಷವಾಗಿ ಹೊಡೆದಿರುವುದಾಗಿ ಒಪ್ಪಿಕೊಂಡಿದ್ದಾನೆ. ಸಾಲ ತೀರಿಸಲು ಕೆಲಸಕ್ಕೆ ಹೋಗುತ್ತಿದ್ದೆ ಎಂದು ಆತನ ಪತ್ನಿ ಹೇಳಿದ್ದಾಳೆ. ಪತಿ ಹಿಂಸೆ ತಡೆಯಲಾಗದೇ ಕೊನೆಗೆ ಕೆಲಸ ಬಿಡಲು ಒಪ್ಪಿಕೊಂಡಿದ್ದಾಳೆ ಎಂದು ವರದಿ ಮಾಡಲಾಗಿದೆ.

ವಿಡಿಯೋದಲ್ಲಿ ಅವಳ ಮುಖದಿಂದ ರಕ್ತ ಬರುತ್ತಿರುವುದನ್ನು ಕಾಣಬಹುದು. ವೀಡಿಯೊದ ಕೊನೆಯಲ್ಲಿ, ದಿಲೀಪ್ ತನ್ನ ಹೆಂಡತಿ ಮತ್ತೆ ಕೆಲಸಕ್ಕೆ ಹೋಗುವುದಿಲ್ಲ ಎಂದು ಹೇಳುತ್ತಾನೆ. ಈ ಘಟನೆಯ ನಂತರ ಅವರ ಪತ್ನಿ ಮಲಯಂಕಿಝು ಪೊಲೀಸರಿಗೆ ದೂರು ನೀಡಿದ್ದರು. ಇದರ ಆಧಾರದ ಮೇಲೆ ದಿಲೀಪ್​ನನ್ನು ಬಂಧಿಸಲಾಗಿತ್ತು.

ಇದನ್ನು ಓದಿ:ಅನೈತಿಕ ಸಂಬಂಧ; ಪ್ರಿಯಕರನ ಕೊಂದು ಪತ್ನಿ ಮೇಲೆ ಹಲ್ಲೆ, ಗಂಡ ಜೈಲು ಪಾಲು

ಇದೀಗ ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಆತನ ವಿರುದ್ಧ ಸೆಕ್ಷನ್ 307 (ಕೊಲೆಯ ಯತ್ನ), 498 (ಎ) (ಹೆಣ್ಣಿನ ಪತಿ ಅಥವಾ ಪತಿ ಸಂಬಂಧಿ ಮಹಿಳೆಯನ್ನು ಕ್ರೌರ್ಯಕ್ಕೆ ಒಳಪಡಿಸುವುದು), 323 (ಸ್ವಯಂಪ್ರೇರಿತವಾಗಿ ನೋವುಂಟು ಮಾಡಿದ ಶಿಕ್ಷೆ), 324 (ಸ್ವಯಂಪ್ರೇರಿತವಾಗಿ ಅಪಾಯಕಾರಿ ಆಯುಧಗಳಿಂದ ಗಾಯಗೊಳಿಸುವುದು ಅಥವಾ ಅಂದರೆ) ಮತ್ತು ಭಾರತೀಯ ದಂಡ ಸಂಹಿತೆಯ 294 (B) (ಯಾವುದೇ ಅಶ್ಲೀಲ ಹಾಡು, ಬಲ್ಲಾಡ್ ಅಥವಾ ಪದಗಳನ್ನು ಹಾಡುವುದು, ಪಠಿಸುವುದು ಅಥವಾ ಉಚ್ಚರಿಸುವುದು, ಯಾವುದೇ ಸಾರ್ವಜನಿಕ ಸ್ಥಳದಲ್ಲಿ ಅಥವಾ ಹತ್ತಿರ) ಕಾನೂನಿನ ಅಡಿಯಲ್ಲಿ ಬಂಧಿಸಿಲಾಗಿದೆ.

Published On - 9:57 am, Thu, 20 October 22

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?