ಹೆಂಡತಿ ಕೆಲಸದ ಬಗ್ಗೆ ಅಸಮಾಧಾನ: ಪತ್ನಿ ಮೇಲೆ ಹಲ್ಲೆ ಮಾಡಿ ಚಿತ್ರೀಕರಿಸಿದ್ದ ಪತಿಯ ಬಂಧನ

ಕೇರಳದ ತಿರುವನಂತಪುರಂನಲ್ಲಿ 27 ವರ್ಷದ ವ್ಯಕ್ತಿಯೊಬ್ಬ ತನ್ನ ಹೆಂಡತಿಗೆ ಥಳಿಸಿರುವ ದೃಶ್ಯವನ್ನು ಚಿತ್ರೀಕರಿಸಿ ಅದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾನೆ.

ಹೆಂಡತಿ ಕೆಲಸದ ಬಗ್ಗೆ ಅಸಮಾಧಾನ: ಪತ್ನಿ ಮೇಲೆ ಹಲ್ಲೆ ಮಾಡಿ ಚಿತ್ರೀಕರಿಸಿದ್ದ ಪತಿಯ ಬಂಧನ
ಸಾಂದರ್ಭಿಕ ಚಿತ್ರ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on:Oct 20, 2022 | 9:58 AM

ತಿರುವನಂತಪುರಂ: ಕೇರಳದ ತಿರುವನಂತಪುರಂನಲ್ಲಿ 27 ವರ್ಷದ ವ್ಯಕ್ತಿಯೊಬ್ಬ ತನ್ನ ಪತ್ನಿಯ ಮೇಲೆ ಹಲ್ಲೆ ಮಾಡಿರುವ  ದೃಶ್ಯವನ್ನು ಚಿತ್ರೀಕರಿಸಿ ಅದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾನೆ. ಇದೀಗ ಈ ವಿಡಿಯೋ ವೈರಲ್ ಆಗಿದ್ದು ಆತನನ್ನು ಮಲಯಂಕಿಝು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ದಿಲೀಪ್ ಎಂದು ಗುರುತಿಸಲಾಗಿದ್ದು, ಆತನ ಪತ್ನಿ ನೀಡಿದ ದೂರಿನ ಆಧಾರದ ಮೇಲೆ ಬಂಧಿಸಲಾಗಿದೆ.

ಪತ್ನಿ ತನ್ನ ಇಚ್ಛೆಗೆ ವಿರುದ್ಧವಾಗಿ ಕೆಲಸಕ್ಕೆ ಹೋಗಿದ್ದಾಳೆ ಎಂಬ ಕಾರಣಕ್ಕೆ ದಿಲೀಪ್ ಆಕೆ ದೈಹಿಕ ಹಿಂಸೆ ನೀಡಿದ್ದಾನೆ. ವೀಡಿಯೋದಲ್ಲಿ ದಿಲೀಪ್ ತನ್ನ ಪತ್ನಿಯನ್ನು ಅಮಾನುಷವಾಗಿ ಹೊಡೆದಿರುವುದಾಗಿ ಒಪ್ಪಿಕೊಂಡಿದ್ದಾನೆ. ಸಾಲ ತೀರಿಸಲು ಕೆಲಸಕ್ಕೆ ಹೋಗುತ್ತಿದ್ದೆ ಎಂದು ಆತನ ಪತ್ನಿ ಹೇಳಿದ್ದಾಳೆ. ಪತಿ ಹಿಂಸೆ ತಡೆಯಲಾಗದೇ ಕೊನೆಗೆ ಕೆಲಸ ಬಿಡಲು ಒಪ್ಪಿಕೊಂಡಿದ್ದಾಳೆ ಎಂದು ವರದಿ ಮಾಡಲಾಗಿದೆ.

ವಿಡಿಯೋದಲ್ಲಿ ಅವಳ ಮುಖದಿಂದ ರಕ್ತ ಬರುತ್ತಿರುವುದನ್ನು ಕಾಣಬಹುದು. ವೀಡಿಯೊದ ಕೊನೆಯಲ್ಲಿ, ದಿಲೀಪ್ ತನ್ನ ಹೆಂಡತಿ ಮತ್ತೆ ಕೆಲಸಕ್ಕೆ ಹೋಗುವುದಿಲ್ಲ ಎಂದು ಹೇಳುತ್ತಾನೆ. ಈ ಘಟನೆಯ ನಂತರ ಅವರ ಪತ್ನಿ ಮಲಯಂಕಿಝು ಪೊಲೀಸರಿಗೆ ದೂರು ನೀಡಿದ್ದರು. ಇದರ ಆಧಾರದ ಮೇಲೆ ದಿಲೀಪ್​ನನ್ನು ಬಂಧಿಸಲಾಗಿತ್ತು.

ಇದನ್ನು ಓದಿ:ಅನೈತಿಕ ಸಂಬಂಧ; ಪ್ರಿಯಕರನ ಕೊಂದು ಪತ್ನಿ ಮೇಲೆ ಹಲ್ಲೆ, ಗಂಡ ಜೈಲು ಪಾಲು

ಇದೀಗ ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಆತನ ವಿರುದ್ಧ ಸೆಕ್ಷನ್ 307 (ಕೊಲೆಯ ಯತ್ನ), 498 (ಎ) (ಹೆಣ್ಣಿನ ಪತಿ ಅಥವಾ ಪತಿ ಸಂಬಂಧಿ ಮಹಿಳೆಯನ್ನು ಕ್ರೌರ್ಯಕ್ಕೆ ಒಳಪಡಿಸುವುದು), 323 (ಸ್ವಯಂಪ್ರೇರಿತವಾಗಿ ನೋವುಂಟು ಮಾಡಿದ ಶಿಕ್ಷೆ), 324 (ಸ್ವಯಂಪ್ರೇರಿತವಾಗಿ ಅಪಾಯಕಾರಿ ಆಯುಧಗಳಿಂದ ಗಾಯಗೊಳಿಸುವುದು ಅಥವಾ ಅಂದರೆ) ಮತ್ತು ಭಾರತೀಯ ದಂಡ ಸಂಹಿತೆಯ 294 (B) (ಯಾವುದೇ ಅಶ್ಲೀಲ ಹಾಡು, ಬಲ್ಲಾಡ್ ಅಥವಾ ಪದಗಳನ್ನು ಹಾಡುವುದು, ಪಠಿಸುವುದು ಅಥವಾ ಉಚ್ಚರಿಸುವುದು, ಯಾವುದೇ ಸಾರ್ವಜನಿಕ ಸ್ಥಳದಲ್ಲಿ ಅಥವಾ ಹತ್ತಿರ) ಕಾನೂನಿನ ಅಡಿಯಲ್ಲಿ ಬಂಧಿಸಿಲಾಗಿದೆ.

Published On - 9:57 am, Thu, 20 October 22

Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ