Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಂಡತಿ ಕೆಲಸದ ಬಗ್ಗೆ ಅಸಮಾಧಾನ: ಪತ್ನಿ ಮೇಲೆ ಹಲ್ಲೆ ಮಾಡಿ ಚಿತ್ರೀಕರಿಸಿದ್ದ ಪತಿಯ ಬಂಧನ

ಕೇರಳದ ತಿರುವನಂತಪುರಂನಲ್ಲಿ 27 ವರ್ಷದ ವ್ಯಕ್ತಿಯೊಬ್ಬ ತನ್ನ ಹೆಂಡತಿಗೆ ಥಳಿಸಿರುವ ದೃಶ್ಯವನ್ನು ಚಿತ್ರೀಕರಿಸಿ ಅದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾನೆ.

ಹೆಂಡತಿ ಕೆಲಸದ ಬಗ್ಗೆ ಅಸಮಾಧಾನ: ಪತ್ನಿ ಮೇಲೆ ಹಲ್ಲೆ ಮಾಡಿ ಚಿತ್ರೀಕರಿಸಿದ್ದ ಪತಿಯ ಬಂಧನ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on:Oct 20, 2022 | 9:58 AM

ತಿರುವನಂತಪುರಂ: ಕೇರಳದ ತಿರುವನಂತಪುರಂನಲ್ಲಿ 27 ವರ್ಷದ ವ್ಯಕ್ತಿಯೊಬ್ಬ ತನ್ನ ಪತ್ನಿಯ ಮೇಲೆ ಹಲ್ಲೆ ಮಾಡಿರುವ  ದೃಶ್ಯವನ್ನು ಚಿತ್ರೀಕರಿಸಿ ಅದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾನೆ. ಇದೀಗ ಈ ವಿಡಿಯೋ ವೈರಲ್ ಆಗಿದ್ದು ಆತನನ್ನು ಮಲಯಂಕಿಝು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ದಿಲೀಪ್ ಎಂದು ಗುರುತಿಸಲಾಗಿದ್ದು, ಆತನ ಪತ್ನಿ ನೀಡಿದ ದೂರಿನ ಆಧಾರದ ಮೇಲೆ ಬಂಧಿಸಲಾಗಿದೆ.

ಪತ್ನಿ ತನ್ನ ಇಚ್ಛೆಗೆ ವಿರುದ್ಧವಾಗಿ ಕೆಲಸಕ್ಕೆ ಹೋಗಿದ್ದಾಳೆ ಎಂಬ ಕಾರಣಕ್ಕೆ ದಿಲೀಪ್ ಆಕೆ ದೈಹಿಕ ಹಿಂಸೆ ನೀಡಿದ್ದಾನೆ. ವೀಡಿಯೋದಲ್ಲಿ ದಿಲೀಪ್ ತನ್ನ ಪತ್ನಿಯನ್ನು ಅಮಾನುಷವಾಗಿ ಹೊಡೆದಿರುವುದಾಗಿ ಒಪ್ಪಿಕೊಂಡಿದ್ದಾನೆ. ಸಾಲ ತೀರಿಸಲು ಕೆಲಸಕ್ಕೆ ಹೋಗುತ್ತಿದ್ದೆ ಎಂದು ಆತನ ಪತ್ನಿ ಹೇಳಿದ್ದಾಳೆ. ಪತಿ ಹಿಂಸೆ ತಡೆಯಲಾಗದೇ ಕೊನೆಗೆ ಕೆಲಸ ಬಿಡಲು ಒಪ್ಪಿಕೊಂಡಿದ್ದಾಳೆ ಎಂದು ವರದಿ ಮಾಡಲಾಗಿದೆ.

ವಿಡಿಯೋದಲ್ಲಿ ಅವಳ ಮುಖದಿಂದ ರಕ್ತ ಬರುತ್ತಿರುವುದನ್ನು ಕಾಣಬಹುದು. ವೀಡಿಯೊದ ಕೊನೆಯಲ್ಲಿ, ದಿಲೀಪ್ ತನ್ನ ಹೆಂಡತಿ ಮತ್ತೆ ಕೆಲಸಕ್ಕೆ ಹೋಗುವುದಿಲ್ಲ ಎಂದು ಹೇಳುತ್ತಾನೆ. ಈ ಘಟನೆಯ ನಂತರ ಅವರ ಪತ್ನಿ ಮಲಯಂಕಿಝು ಪೊಲೀಸರಿಗೆ ದೂರು ನೀಡಿದ್ದರು. ಇದರ ಆಧಾರದ ಮೇಲೆ ದಿಲೀಪ್​ನನ್ನು ಬಂಧಿಸಲಾಗಿತ್ತು.

ಇದನ್ನು ಓದಿ:ಅನೈತಿಕ ಸಂಬಂಧ; ಪ್ರಿಯಕರನ ಕೊಂದು ಪತ್ನಿ ಮೇಲೆ ಹಲ್ಲೆ, ಗಂಡ ಜೈಲು ಪಾಲು

ಇದೀಗ ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಆತನ ವಿರುದ್ಧ ಸೆಕ್ಷನ್ 307 (ಕೊಲೆಯ ಯತ್ನ), 498 (ಎ) (ಹೆಣ್ಣಿನ ಪತಿ ಅಥವಾ ಪತಿ ಸಂಬಂಧಿ ಮಹಿಳೆಯನ್ನು ಕ್ರೌರ್ಯಕ್ಕೆ ಒಳಪಡಿಸುವುದು), 323 (ಸ್ವಯಂಪ್ರೇರಿತವಾಗಿ ನೋವುಂಟು ಮಾಡಿದ ಶಿಕ್ಷೆ), 324 (ಸ್ವಯಂಪ್ರೇರಿತವಾಗಿ ಅಪಾಯಕಾರಿ ಆಯುಧಗಳಿಂದ ಗಾಯಗೊಳಿಸುವುದು ಅಥವಾ ಅಂದರೆ) ಮತ್ತು ಭಾರತೀಯ ದಂಡ ಸಂಹಿತೆಯ 294 (B) (ಯಾವುದೇ ಅಶ್ಲೀಲ ಹಾಡು, ಬಲ್ಲಾಡ್ ಅಥವಾ ಪದಗಳನ್ನು ಹಾಡುವುದು, ಪಠಿಸುವುದು ಅಥವಾ ಉಚ್ಚರಿಸುವುದು, ಯಾವುದೇ ಸಾರ್ವಜನಿಕ ಸ್ಥಳದಲ್ಲಿ ಅಥವಾ ಹತ್ತಿರ) ಕಾನೂನಿನ ಅಡಿಯಲ್ಲಿ ಬಂಧಿಸಿಲಾಗಿದೆ.

Published On - 9:57 am, Thu, 20 October 22

ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ