AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಯುವಕನನ್ನು ಮದುವೆಯಾಗಲು ಖತರ್ನಾಕ್ ಪ್ಲ್ಯಾನ್ ಮಾಡಿದ ಆಂಟಿ

Crime News Kannada: ಭಾರತೀಯ ದಂಡ ಸಂಹಿತೆ  ಸೆಕ್ಷನ್ 420 (ವಂಚನೆ), 120 ಬಿ (ಕ್ರಿಮಿನಲ್ ಪಿತೂರಿ), 504 (ಉದ್ದೇಶಪೂರ್ವಕ ಅವಮಾನ ), 506 (ಕ್ರಿಮಿನಲ್ ಬೆದರಿಕೆ) ದೂರು ದಾಖಲಿಸಿ ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ

Crime News: ಯುವಕನನ್ನು ಮದುವೆಯಾಗಲು ಖತರ್ನಾಕ್ ಪ್ಲ್ಯಾನ್ ಮಾಡಿದ ಆಂಟಿ
ಸಾಂದರ್ಭಿಕ ಚಿತ್ರ
TV9 Web
| Updated By: ಝಾಹಿರ್ ಯೂಸುಫ್|

Updated on:Aug 14, 2021 | 9:09 PM

Share

ಸಾವಿರ ಸುಳ್ಳು ಹೇಳಿ ಒಂದು ಮದುವೆ ಮಾಡು ಎಂಬ ಮಾತಿದೆ. ಆದರೆ ಮದುವೆಯಾಗಲೇಬೆಕೆಂದು ಸುಳ್ಳು ಹೇಳಿದ್ರೆ ಏನಾಗುತ್ತೆ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ. ಹೌದು, ಡೆಹ್ರಾಡೂನ್​ನ ಮಹಿಳೆಯೊಬ್ಬಳು ಯುವಕನನ್ನು ಮದುವೆಯಾಗಲು ತನ್ನ ದಾಖಲೆಗಳನ್ನು ಫೋರ್ಜರಿ ಮಾಡಿ ಇದೀಗ ಸಿಕ್ಕಿ ಬಿದ್ದಿದ್ದಾಳೆ. ಮೂಲತಃ ಉತ್ತರ ಪ್ರದೇಶದವರಾದ ಮಹಿಳೆಯುವ ಮತ್ತೊಂದು ಮದುವೆಯಾಗಲು ಬಯಸಿದ್ದರು. ಇದಕ್ಕಾಗಿ ಸುರಸುಂದರಾಂಗ ಯುವಕನ ಹುಡುಕಾಟದಲ್ಲಿದ್ದಳು. ಇದೇ ವೇಳೆ ಮ್ಯಾಟ್ರಿಮೊನಿಯಲ್ ವೆಬ್​ಸೈಟ್​ನಲ್ಲಿ ಯುವಕನೊಬ್ಬ ಪರಿಚಿತನಾಗುತ್ತಾನೆ. ಆತನೇ ನನಗೆ ಸರಿಯಾದ ಜೋಡಿ ಎಂದು ಆಕೆ ನಿರ್ಧರಿಸಿದ್ದಳು. ಅದರಂತೆ ಯುವಕನಿಗೆ ಮದುವೆ ಪ್ರಸ್ತಾಪ ಮುಂದಿಟ್ಟಿದ್ದಾಳೆ.

ಅತ್ತ 28 ವರ್ಷದ ಯುವಕ ಕೂಡ ಕಂಕಣ ಭಾಗ್ಯವನ್ನು ಎದುರು ನೋಡುತ್ತಿದ್ದ. ಹೀಗಾಗಿ ಓಕೆ ಅಂದಿದ್ದಾರೆ. ಆದರೆ ಇಲ್ಲೇ ಎಡವಟ್ಟಾಗಿರೋದು. ತನ್ನ ಪ್ರೊಫೈಲ್​ನಲ್ಲಿ ಮಹಿಳೆ ತಾನು ಯುವತಿ ಎಂದು ಪರಿಚಯಿಸಿಕೊಂಡಿದ್ದಳು. ಅಲ್ಲದೆ ತನಗೆ ಇನ್ನು ಕೇವಲ 28 ವರ್ಷ ಎಂದು ತಿಳಿಸಿದ್ದಳು. ಇದೇ ಕಾರಣದಿಂದ ಆತ ಕೂಡ ತನಗೆ ಸರಿಯಾದ ಜೋಡಿ ಎಂದು ಒಪ್ಪಿಕೊಂಡಿದ್ದ.

ಆದರೆ ಇನ್ನೇನು ಮದುವೆಗೆ 20 ದಿನಗಳು ಮಾತ್ರ ಉಳಿದಿರುವಾಗ, ಆಕೆಯ ಅಸಲಿಯತ್ತು ಬಹಿರಂಗವಾಗಿದೆ. ಆಕೆಗೆ 28 ಅಲ್ಲ 38 ವರ್ಷ ಎಂಬುದು ತಿಳಿದು ಬಂದಿದೆ. ಯುವಕನನ್ನು ಮದುವೆಯಾಗಲು ಆಂಟಿ ತನ್ನ ದಾಖಲಾತಿಗಳನ್ನು ಫೋರ್ಜರಿ ಮಾಡಿದ್ದಾರೆ. 1983 ರಲ್ಲಿ ಹುಟ್ಟಿದ ದಿನಾಂಕವನ್ನು 1991 ಬದಲಿಸಿಕೊಂಡಿರುವುದು ಗೊತ್ತಾಗಿದೆ.

ಆಂಟಿಯ ಅಸಲಿಯತ್ತು ಗೊತ್ತಾಗುತ್ತಿದ್ದಂತೆ ಯುವಕ ಮದುವೆ ವಿಚಾರದಿಂದ ಹಿಂದೆ ಸರಿದಿದ್ದಾರೆ. ಅತ್ತ ಯುವಕ ಕೈ ತಪ್ಪಿ ಹೋಗುತ್ತಾನೆ ಎಂದರಿತ ಆಂಟಿ ಹಾಗೂ ಆಕೆಯ ಸಹೋದರಿ, ತಂದೆ ಸೇರಿ ಯುವಕನಿಗೆ ಬೆದರಿಯೊಡ್ಡಿದ್ದಾರೆ. ಅಲ್ಲದೆ ಪೊಲೀಸರಿಗೆ ದೂರು ನೀಡಿದರೆ ಕೊಲೆ ಮಾಡುವುದಾಗಿ ಬೆದರಿಸಿದ್ದಾರೆ.

ಇದರಿಂದ ಮತ್ತಷ್ಟು ಹೆದರಿದ ಯುವಕ ಕುಟುಂಬಸ್ಥರ ನೆರವಿನೊಂದಿಗೆ ಪೊಲೀಸರಿಗೆ ದೂರು ದಾಖಲಿಸಿದ್ದಾರೆ. ಇದೀಗ ಭಾರತೀಯ ದಂಡ ಸಂಹಿತೆ  ಸೆಕ್ಷನ್ 420 (ವಂಚನೆ), 120 ಬಿ (ಕ್ರಿಮಿನಲ್ ಪಿತೂರಿ), 504 (ಉದ್ದೇಶಪೂರ್ವಕ ಅವಮಾನ ), 506 (ಕ್ರಿಮಿನಲ್ ಬೆದರಿಕೆ) ದೂರು ದಾಖಲಿಸಿ ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ. ಸಾವಿರ ಸುಳ್ಳು ಹೇಳಿ ಒಂದು ಮದುವೆ ಮಾಡು ಎಂಬ ಮಾತಿನಂತೆ ಸುಳ್ಳು ಹೇಳಿ ಮದುವೆ ಅದರೆ ಏನಾಗುತ್ತೆ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ.

ಇದನ್ನೂ ಓದಿ: Health Tips: ಹಲವು ಅನಾರೋಗ್ಯ ಸಮಸ್ಯೆಗಳಿಗೆ ಪಪ್ಪಾಯಿ ಎಲೆಗಳೇ ಔಷಧಿ

ಇದನ್ನೂ ಓದಿ: ಇವರ ಬ್ಯಾಟಿಂಗ್ ಮುಂದೆ, ಗೇಲ್-ಎಬಿಡಿ-ಸೆಹ್ವಾಗ್ ಏನೂ ಅಲ್ಲ: ವಿಶ್ವದ ಅತೀ ವೇಗದ ಶತಕದ ಸರದಾರ

ಇದನ್ನೂ ಓದಿ: Kl Rahul: ಪೂಜಾರ, ರಹಾನೆ ಕಳಪೆ ಫಾರ್ಮ್​ ಬಗ್ಗೆ ಕೆಎಲ್ ರಾಹುಲ್ ಹೇಳಿದ್ದೇನು?

(Woman Allege Fraud For Forging Document, Married Younger Man)

Published On - 9:05 pm, Sat, 14 August 21

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!