AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಮ್ಯಾಜಿಸ್ಟ್ರೇಟ್‌ ಕೋರ್ಟ್‌ನಲ್ಲಿ ವಕೀಲರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ ಯುವತಿ

ಚೆಕ್‌ಬೌನ್ಸ್‌ ಪ್ರಕರಣವನ್ನು ಮುಂದುವರಿಸುವುದಾಗಿ ಹೇಳಿದ ವಕೀಲರ ಮೇಲೆ ಯುವತಿಯೊಬ್ಬಳು ನ್ಯಾಯಾಲಯದ ಆವರಣದಲ್ಲೇ ಚಾಕುವಿನಿಂದ ಹಲ್ಲೆ ನಡೆಸಿ ಪರಾರಿಯಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಮ್ಯಾಜಿಸ್ಟ್ರೇಟ್‌ ಕೋರ್ಟ್‌ನಲ್ಲಿ ವಕೀಲರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ ಯುವತಿ
ಹಲ್ಲೆಗೊಳಗಾದ ವಕೀಲ ಕೃಷ್ಣರೆಡ್ಡಿ ಚಿಕಿತ್ಸೆ ಪಡೆಯುತ್ತಿರುವುದು (ಎಡಚಿತ್ರ) ಮತ್ತು ವಕೀಲ ಕೃಷ್ಣರೆಡ್ಡಿ (ಬಲಚಿತ್ರ)
Rakesh Nayak Manchi
Rakesh Nayak Manchi|

Updated on:Apr 21, 2023 | 6:03 PM

Share

ಬೆಂಗಳೂರು: ಚೆಕ್‌ಬೌನ್ಸ್‌ ಪ್ರಕರಣವನ್ನು (Cheque bounce case) ಮುಂದುವರಿಸುವುದಾಗಿ ಹೇಳಿದ ವಕೀಲರ ಮೇಲೆ ಯುವತಿಯೊಬ್ಬಳು ನ್ಯಾಯಾಲಯದ ಆವರಣದಲ್ಲೇ ಚಾಕುವಿನಿಂದ ಹಲ್ಲೆ (Assault) ನಡೆಸಿ ಪರಾರಿಯಾದ ಘಟನೆ ನಗರದಲ್ಲಿ ನಡೆದಿದೆ. ಪ್ರಕರಣ ಸಂಬಂಧ ಕಾರ್ಪೊರೇಷನ್‌ ಸರ್ಕಲ್‌ ಬಳಿಯಿರುವ ಮ್ಯಾಜಿಸ್ಟ್ರೇಟ್‌ ಕೋರ್ಟ್‌ಗೆ (Bengaluru Magistrate Court) ಹಾಜರಾದ ಕಾಂಚನ ಎಂಬ ಯುವತಿ ವಕೀಲ ಕೃಷ್ಣಾರೆಡ್ಡಿ ಎಂಬವರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾಳೆ. ಘಟನೆ ನಂತರ ಹಲಸೂರು ಗೇಟ್ ಪೊಲೀಸ್ ಠಾಣೆಗೆ ಕೃಷ್ಣಾರೆಡ್ಡಿ ಅವರು ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಹರೀಶ್ ಎಂಬ ವ್ಯಕ್ತಿಯಿಂದ 5 ಲಕ್ಷ ಹಣ ಪಡೆದಿದ್ದ ಕಾಂಚನಾ ವಾಪಸ್ ನೀಡಿರಲಿಲ್ಲ. ಕಳೆದ 3 ವರ್ಷಗಳಿಂದ ಹಣ ವಾಪಸ್ ನೀಡುವುದಾಗಿ ಹೇಳುತ್ತಿದ್ದ ಕಾಂಚನಾ ಚೆಕ್ ಕೂಡ ನೀಡಿದ್ದಳು. ಆದರೆ ಈ ಚೆಕ್​ ಬೌನ್ಸ್ ಆಗಿರುವ ಹಿನ್ನೆಲೆ ದೂರು ಕೂಡ ದಾಖಲಾಗಿತ್ತು. ಈ ಸಂಬಂಧ ಇಂದು ಕೋರ್ಟ್​ಗೆ ಕಾಂಚನಾ ಹಾಜರಾಗಿದ್ದಾಳೆ. ಇತ್ತ ಹರೀಶ್ ಪರ ವಕೀಲರಾಗಿರುವ ಕೃಷ್ಣರೆಡ್ಡಿ ಪ್ರಕರಣವನ್ನು ಮುಂದುವರಿಸುವುದಾಗಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಇದನ್ನೂ ಓದಿ: ತುಮಕೂರು: ದೇವಸ್ಥಾನದ ದಲಿತ ಅರ್ಚಕನ ಮೇಲೆ ಸವರ್ಣೀಯರಿಂದ ಮಾರಣಾಂತಿಕ ಹಲ್ಲೆ

ಪ್ರಕರಣವನ್ನು ಮುಂದುವರಿಸುವುದಾಗಿ ಹೇಳಿದ ಹಿನ್ನೆಲೆ ಕಾಂಚನಾ ಕೋಪಗೊಂಡು ಕೋರ್ಟ್​ ಒಳಗಿಂದ ಹೊರಬಂದಿದ್ದಾಳೆ. ಇತ್ತ ಕಲಾಪ ಮುಗಿಸಿದ ಬಳಿಕ ನ್ಯಾಯಾಲಯದ ಆವರಣಕ್ಕೆ ಬಂದ ಕೃಷ್ಣಾರೆಡ್ಡಿಯನ್ನು ತಡೆದ ಕಾಂಚನಾ, ಮತ್ತೆ ಕೇಸ್‌ ಮುಂದುವರಿಸುತ್ತಿಯಾ ಎಂದು ಹೇಳಿ ಚಾಕುವಿನಿಂದ ಹಲ್ಲೆ ನಡೆಸಿ ಸ್ಥಳದಿಂದ ಪರಾರಿಯಾಗಿದ್ದಾಳೆ. ಘಟನೆಯಲ್ಲಿ ಕೃಷ್ಣರೆಡ್ಡಿ ಮುಖಕ್ಕೆ ಬಾಯಗಳಾಗಿದ್ದು, ಚಿಕಿತ್ಸೆ ಪಡೆದುಕೊಂಡಿದ್ದಾರೆ. ಅಲ್ಲದೆ, ಹಲಸೂರು ಗೇಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಕ್ರೈಂ ನ್ಯೂಸ್​ಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:03 pm, Fri, 21 April 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ